Homeಮುಖಪುಟ’ತೆಗೆದುಕೊಳ್ಳಿ ನಿಮ್ಮ ಸ್ವಾತಂತ್ರ್ಯ’ ಎಂದು ದೆಹಲಿಯ ಜಾಮಿಯಾ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿ

’ತೆಗೆದುಕೊಳ್ಳಿ ನಿಮ್ಮ ಸ್ವಾತಂತ್ರ್ಯ’ ಎಂದು ದೆಹಲಿಯ ಜಾಮಿಯಾ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿ

- Advertisement -
- Advertisement -

ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಬಳಿ ಸಿಎಎ ವಿರುದ್ಧ ಪ್ರತಿಭಟಿಸುತ್ತಿದ್ದ ಜನರ ಮೇಲೆ ಇಂದು ಮಧ್ಯಾಹ್ನ ಅಪರಿಚಿತ ವ್ಯಕ್ತಿ ಗುಂಡು ಹಾರಿಸಿದ್ದು, ಈ ಪ್ರದೇಶದಲ್ಲಿ ಗೊಂದಲ ಮತ್ತು ಭೀತಿ ಉಂಟಾಗಿದೆ. ಗುಂಡಿನ ದಾಳಿಗೆ ಒಬ್ಬ ವ್ಯಕ್ತಿ ಗಾಯಗೊಂಡಿದ್ದಾನೆ.

ದೆಹಲಿಯ ಜಾಮಿಯಾ ಬಳಿ ಕಪ್ಪು ಜಾಕೆಟ್ ಮತ್ತು ಬಿಳಿ ಪ್ಯಾಂಟ್ ಧರಿಸಿದ ದುಷ್ಕರ್ಮಿಯೊಬ್ಬನು ಪ್ರತಿಭಟನಾಕಾರರ ಮೇಲೆ “ಯೆ ಲೋ ಆಜಾದಿ (ತೆಗೆದುಕೊಳ್ಳಿ ನಿಮ್ಮ ಸ್ವಾತಂತ್ರ್ಯ) ಎಂದು ಕೂಗಿ ಗುಂಡು ಹಾರಿಸಿದರುವ ಘಟನೆ ಜರುಗಿದೆ.

ಜಾಮಿಯಾ ಸಮನ್ವಯ ಸಮಿತಿ (ಜೆಸಿಸಿ) ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ವಿರುದ್ಧ ಜಾಮಿಯಾ ಪ್ರದೇಶದಿಂದ ರಾಜ್ ಘಾಟ್‌ಗೆ ಮೆರವಣಿಗೆ ಆಯೋಜಿಸಿದ ದಿನ ಇದು ಸಂಭವಿಸಿದೆ.

ದೆಹಲಿಯ ಜಾಮಿಯಾ ಬಳಿ ಸಿಎಎ, ಎನ್.ಆರ್‌.ಸಿ ವಿರೋಧಿ ಹೋರಾಟಗಾರರ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿ.. ವಿಡಿಯೋ ನೋಡಿ

Posted by Naanu Gauri on Thursday, January 30, 2020

ಆ ದುಷ್ಕರ್ಮಿ ವ್ಯಕ್ತಿಯನ್ನು ಬಲಪ್ರಯೋಗದ ಮೂಲಕ ಪೊಲೀಸರು ಬಂಧಿಸಿದ್ದಾರೆ. ಗಾಯಾಳುವನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪ್ರದೇಶದ ಸಮೀಪವಿರುವ ಎಲ್ಲಾ ರಸ್ತೆಗಳಲ್ಲಿ ಸಂಚಾರವನ್ನು ತಿರುಗಿಸಲಾಗಿದೆ.

ನಮ್ಮಲ್ಲಿ ಯಾರೂ ಗುರುತಿಸದ ಈ ಹೊರಗಿನವನು ಮೆರವಣಿಗೆಯ ಶಾಂತಿಯನ್ನು ಭಂಗಗೊಳಿಸಲು ಪ್ರಯತ್ನಿಸಿದಾಗ ನಾವು ಬ್ಯಾರಿಕೇಡ್‌ಗಳ ಬಳಿ ನಿಂತಿದ್ದೆವು. ಕೈಯಲ್ಲಿ ರಿವಾಲ್ವರ್‌ನೊಂದಿಗೆ ಆತ ನಮ್ಮ ಮುಂದೆ ಸಾಗುತ್ತಿದ್ದನು. ನಾವೆಲ್ಲರೂ ಅವನನ್ನು ತಡೆಯಲು ಮತ್ತು ಅವನನ್ನು ಶಾಂತಗೊಳಿಸಲು ಪ್ರಯತ್ನಿಸಿದೆವು. ಪೊಲೀಸರು ಅಲ್ಲಿ ನಿಂತಿದ್ದರು. ಆ ವ್ಯಕ್ತಿಯನ್ನು ತಡೆಯಲು ನಾವು ಪೊಲೀಸರನ್ನು ಕೇಳಿದೆವು. ಆದರೆ ಅವರು ಸುಮ್ಮನೆ ಅಲ್ಲಿಯೇ ನಿಂತಿದ್ದರು. ನಾವು ಅವನ ಕೈಯಿಂದ ರಿವಾಲ್ವರ್ ತೆಗೆದುಕೊಳ್ಳಲು ಪ್ರಯತ್ನಿಸಿದಾಗ, ಅವನು ಗುಂಡು ಹಾರಿಸಿಬಿಟ್ಟ” ಎಂದು ಭಯಾನಕ ಘಟನೆಗೆ ಸಾಕ್ಷಿಯಾದ ಜಾಮಿಯಾ ವಿದ್ಯಾರ್ಥಿನಿ ಆಮ್ನಾ ಆಸಿಫ್ ಎನ್‌ಟಿವಿಗೆ ತಿಳಿಸಿದ್ದಾರೆ. ಮತ್ತು ಅವನು ಖಂಡಿತವಾಗಿಯೂ ನಮ್ಮಲ್ಲಿ ಒಬ್ಬನಲ್ಲ, ಅವನು ಹೊರಗಿನವನು” ಎಂದು ಅವರು ಹೇಳಿದ್ದಾರೆ.

ಈ ಕುರಿತು “ಏನಾಗುತ್ತಿದೆ? ದೆಹಲಿ ಪೊಲೀಸರು ಹಿಂಸಾಚಾರವನ್ನು ಬಹಿರಂಗವಾಗಿ ಆಹ್ವಾನಿಸುತ್ತಿದ್ದಾರೆಯೇ?
ದೆಹಲಿ ಚುನಾವಣೆಯಲ್ಲಿ ಗೆಲ್ಲುವ ಗಲಭೆಯ ತಂತ್ರದ ಭಾಗವಾಗಿರಬೇಡಿ. ಜೆಪಿಯನ್ನು ನೆನಪಿಡಿ: ಯಾವುದೇ ದಾಳಿ ಮಾಡಿದರೂ ನಮ್ಮ ಕೈಗಳು ಮೇಲೇರುವುದಿಲ್ಲ!” ಎಂದು ಸ್ವರಾಜ್‌ ಇಂಡಿಯಾದ ಯೋಗೇಂದ್ರ ಯಾದವ್‌ ಟ್ವೀಟ್‌ ಮಾಡಿದ್ದಾರೆ.

ಕಳೆದ ತಿಂಗಳು ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಪೌರತ್ವ ಕಾನೂನನ್ನು ವಿರೋಧಿಸಿ ಹಿಂಸಾಚಾರ ನಡೆದಿತ್ತು; ವಿದ್ಯಾರ್ಥಿಗಳ ಮೇಲೆ ಪೊಲೀಸರು ಮಿತಿಮೀರಿದ ಬಲವನ್ನು ಬಳಸಿದ್ದರು. ಈ ತಿಂಗಳ ಆರಂಭದಲ್ಲಿ, ಮುಖವಾಡದ ಗೂಂಡಾಗಳು ಜೆಎನ್‌ಯುನಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲೆ ಹಲ್ಲೆ ನಡೆಸಿ ರಾಷ್ಟ್ರವ್ಯಾಪಿ ಆಕ್ರೋಶ ಮತ್ತು ಪ್ರತಿಭಟನೆಗೆ ಕಾರಣವಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...