Homeಮುಖಪುಟ’ತೆಗೆದುಕೊಳ್ಳಿ ನಿಮ್ಮ ಸ್ವಾತಂತ್ರ್ಯ’ ಎಂದು ದೆಹಲಿಯ ಜಾಮಿಯಾ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿ

’ತೆಗೆದುಕೊಳ್ಳಿ ನಿಮ್ಮ ಸ್ವಾತಂತ್ರ್ಯ’ ಎಂದು ದೆಹಲಿಯ ಜಾಮಿಯಾ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿ

- Advertisement -
- Advertisement -

ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಬಳಿ ಸಿಎಎ ವಿರುದ್ಧ ಪ್ರತಿಭಟಿಸುತ್ತಿದ್ದ ಜನರ ಮೇಲೆ ಇಂದು ಮಧ್ಯಾಹ್ನ ಅಪರಿಚಿತ ವ್ಯಕ್ತಿ ಗುಂಡು ಹಾರಿಸಿದ್ದು, ಈ ಪ್ರದೇಶದಲ್ಲಿ ಗೊಂದಲ ಮತ್ತು ಭೀತಿ ಉಂಟಾಗಿದೆ. ಗುಂಡಿನ ದಾಳಿಗೆ ಒಬ್ಬ ವ್ಯಕ್ತಿ ಗಾಯಗೊಂಡಿದ್ದಾನೆ.

ದೆಹಲಿಯ ಜಾಮಿಯಾ ಬಳಿ ಕಪ್ಪು ಜಾಕೆಟ್ ಮತ್ತು ಬಿಳಿ ಪ್ಯಾಂಟ್ ಧರಿಸಿದ ದುಷ್ಕರ್ಮಿಯೊಬ್ಬನು ಪ್ರತಿಭಟನಾಕಾರರ ಮೇಲೆ “ಯೆ ಲೋ ಆಜಾದಿ (ತೆಗೆದುಕೊಳ್ಳಿ ನಿಮ್ಮ ಸ್ವಾತಂತ್ರ್ಯ) ಎಂದು ಕೂಗಿ ಗುಂಡು ಹಾರಿಸಿದರುವ ಘಟನೆ ಜರುಗಿದೆ.

ಜಾಮಿಯಾ ಸಮನ್ವಯ ಸಮಿತಿ (ಜೆಸಿಸಿ) ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ವಿರುದ್ಧ ಜಾಮಿಯಾ ಪ್ರದೇಶದಿಂದ ರಾಜ್ ಘಾಟ್‌ಗೆ ಮೆರವಣಿಗೆ ಆಯೋಜಿಸಿದ ದಿನ ಇದು ಸಂಭವಿಸಿದೆ.

ದೆಹಲಿಯ ಜಾಮಿಯಾ ಬಳಿ ಸಿಎಎ, ಎನ್.ಆರ್‌.ಸಿ ವಿರೋಧಿ ಹೋರಾಟಗಾರರ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿ.. ವಿಡಿಯೋ ನೋಡಿ

Posted by Naanu Gauri on Thursday, January 30, 2020

ಆ ದುಷ್ಕರ್ಮಿ ವ್ಯಕ್ತಿಯನ್ನು ಬಲಪ್ರಯೋಗದ ಮೂಲಕ ಪೊಲೀಸರು ಬಂಧಿಸಿದ್ದಾರೆ. ಗಾಯಾಳುವನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪ್ರದೇಶದ ಸಮೀಪವಿರುವ ಎಲ್ಲಾ ರಸ್ತೆಗಳಲ್ಲಿ ಸಂಚಾರವನ್ನು ತಿರುಗಿಸಲಾಗಿದೆ.

ನಮ್ಮಲ್ಲಿ ಯಾರೂ ಗುರುತಿಸದ ಈ ಹೊರಗಿನವನು ಮೆರವಣಿಗೆಯ ಶಾಂತಿಯನ್ನು ಭಂಗಗೊಳಿಸಲು ಪ್ರಯತ್ನಿಸಿದಾಗ ನಾವು ಬ್ಯಾರಿಕೇಡ್‌ಗಳ ಬಳಿ ನಿಂತಿದ್ದೆವು. ಕೈಯಲ್ಲಿ ರಿವಾಲ್ವರ್‌ನೊಂದಿಗೆ ಆತ ನಮ್ಮ ಮುಂದೆ ಸಾಗುತ್ತಿದ್ದನು. ನಾವೆಲ್ಲರೂ ಅವನನ್ನು ತಡೆಯಲು ಮತ್ತು ಅವನನ್ನು ಶಾಂತಗೊಳಿಸಲು ಪ್ರಯತ್ನಿಸಿದೆವು. ಪೊಲೀಸರು ಅಲ್ಲಿ ನಿಂತಿದ್ದರು. ಆ ವ್ಯಕ್ತಿಯನ್ನು ತಡೆಯಲು ನಾವು ಪೊಲೀಸರನ್ನು ಕೇಳಿದೆವು. ಆದರೆ ಅವರು ಸುಮ್ಮನೆ ಅಲ್ಲಿಯೇ ನಿಂತಿದ್ದರು. ನಾವು ಅವನ ಕೈಯಿಂದ ರಿವಾಲ್ವರ್ ತೆಗೆದುಕೊಳ್ಳಲು ಪ್ರಯತ್ನಿಸಿದಾಗ, ಅವನು ಗುಂಡು ಹಾರಿಸಿಬಿಟ್ಟ” ಎಂದು ಭಯಾನಕ ಘಟನೆಗೆ ಸಾಕ್ಷಿಯಾದ ಜಾಮಿಯಾ ವಿದ್ಯಾರ್ಥಿನಿ ಆಮ್ನಾ ಆಸಿಫ್ ಎನ್‌ಟಿವಿಗೆ ತಿಳಿಸಿದ್ದಾರೆ. ಮತ್ತು ಅವನು ಖಂಡಿತವಾಗಿಯೂ ನಮ್ಮಲ್ಲಿ ಒಬ್ಬನಲ್ಲ, ಅವನು ಹೊರಗಿನವನು” ಎಂದು ಅವರು ಹೇಳಿದ್ದಾರೆ.

ಈ ಕುರಿತು “ಏನಾಗುತ್ತಿದೆ? ದೆಹಲಿ ಪೊಲೀಸರು ಹಿಂಸಾಚಾರವನ್ನು ಬಹಿರಂಗವಾಗಿ ಆಹ್ವಾನಿಸುತ್ತಿದ್ದಾರೆಯೇ?
ದೆಹಲಿ ಚುನಾವಣೆಯಲ್ಲಿ ಗೆಲ್ಲುವ ಗಲಭೆಯ ತಂತ್ರದ ಭಾಗವಾಗಿರಬೇಡಿ. ಜೆಪಿಯನ್ನು ನೆನಪಿಡಿ: ಯಾವುದೇ ದಾಳಿ ಮಾಡಿದರೂ ನಮ್ಮ ಕೈಗಳು ಮೇಲೇರುವುದಿಲ್ಲ!” ಎಂದು ಸ್ವರಾಜ್‌ ಇಂಡಿಯಾದ ಯೋಗೇಂದ್ರ ಯಾದವ್‌ ಟ್ವೀಟ್‌ ಮಾಡಿದ್ದಾರೆ.

ಕಳೆದ ತಿಂಗಳು ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಪೌರತ್ವ ಕಾನೂನನ್ನು ವಿರೋಧಿಸಿ ಹಿಂಸಾಚಾರ ನಡೆದಿತ್ತು; ವಿದ್ಯಾರ್ಥಿಗಳ ಮೇಲೆ ಪೊಲೀಸರು ಮಿತಿಮೀರಿದ ಬಲವನ್ನು ಬಳಸಿದ್ದರು. ಈ ತಿಂಗಳ ಆರಂಭದಲ್ಲಿ, ಮುಖವಾಡದ ಗೂಂಡಾಗಳು ಜೆಎನ್‌ಯುನಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲೆ ಹಲ್ಲೆ ನಡೆಸಿ ರಾಷ್ಟ್ರವ್ಯಾಪಿ ಆಕ್ರೋಶ ಮತ್ತು ಪ್ರತಿಭಟನೆಗೆ ಕಾರಣವಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...