Homeಮುಖಪುಟ’ತೆಗೆದುಕೊಳ್ಳಿ ನಿಮ್ಮ ಸ್ವಾತಂತ್ರ್ಯ’ ಎಂದು ದೆಹಲಿಯ ಜಾಮಿಯಾ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿ

’ತೆಗೆದುಕೊಳ್ಳಿ ನಿಮ್ಮ ಸ್ವಾತಂತ್ರ್ಯ’ ಎಂದು ದೆಹಲಿಯ ಜಾಮಿಯಾ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿ

- Advertisement -
- Advertisement -

ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಬಳಿ ಸಿಎಎ ವಿರುದ್ಧ ಪ್ರತಿಭಟಿಸುತ್ತಿದ್ದ ಜನರ ಮೇಲೆ ಇಂದು ಮಧ್ಯಾಹ್ನ ಅಪರಿಚಿತ ವ್ಯಕ್ತಿ ಗುಂಡು ಹಾರಿಸಿದ್ದು, ಈ ಪ್ರದೇಶದಲ್ಲಿ ಗೊಂದಲ ಮತ್ತು ಭೀತಿ ಉಂಟಾಗಿದೆ. ಗುಂಡಿನ ದಾಳಿಗೆ ಒಬ್ಬ ವ್ಯಕ್ತಿ ಗಾಯಗೊಂಡಿದ್ದಾನೆ.

ದೆಹಲಿಯ ಜಾಮಿಯಾ ಬಳಿ ಕಪ್ಪು ಜಾಕೆಟ್ ಮತ್ತು ಬಿಳಿ ಪ್ಯಾಂಟ್ ಧರಿಸಿದ ದುಷ್ಕರ್ಮಿಯೊಬ್ಬನು ಪ್ರತಿಭಟನಾಕಾರರ ಮೇಲೆ “ಯೆ ಲೋ ಆಜಾದಿ (ತೆಗೆದುಕೊಳ್ಳಿ ನಿಮ್ಮ ಸ್ವಾತಂತ್ರ್ಯ) ಎಂದು ಕೂಗಿ ಗುಂಡು ಹಾರಿಸಿದರುವ ಘಟನೆ ಜರುಗಿದೆ.

ಜಾಮಿಯಾ ಸಮನ್ವಯ ಸಮಿತಿ (ಜೆಸಿಸಿ) ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ವಿರುದ್ಧ ಜಾಮಿಯಾ ಪ್ರದೇಶದಿಂದ ರಾಜ್ ಘಾಟ್‌ಗೆ ಮೆರವಣಿಗೆ ಆಯೋಜಿಸಿದ ದಿನ ಇದು ಸಂಭವಿಸಿದೆ.

ದೆಹಲಿಯ ಜಾಮಿಯಾ ಬಳಿ ಸಿಎಎ, ಎನ್.ಆರ್‌.ಸಿ ವಿರೋಧಿ ಹೋರಾಟಗಾರರ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿ.. ವಿಡಿಯೋ ನೋಡಿ

Posted by Naanu Gauri on Thursday, January 30, 2020

ಆ ದುಷ್ಕರ್ಮಿ ವ್ಯಕ್ತಿಯನ್ನು ಬಲಪ್ರಯೋಗದ ಮೂಲಕ ಪೊಲೀಸರು ಬಂಧಿಸಿದ್ದಾರೆ. ಗಾಯಾಳುವನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪ್ರದೇಶದ ಸಮೀಪವಿರುವ ಎಲ್ಲಾ ರಸ್ತೆಗಳಲ್ಲಿ ಸಂಚಾರವನ್ನು ತಿರುಗಿಸಲಾಗಿದೆ.

ನಮ್ಮಲ್ಲಿ ಯಾರೂ ಗುರುತಿಸದ ಈ ಹೊರಗಿನವನು ಮೆರವಣಿಗೆಯ ಶಾಂತಿಯನ್ನು ಭಂಗಗೊಳಿಸಲು ಪ್ರಯತ್ನಿಸಿದಾಗ ನಾವು ಬ್ಯಾರಿಕೇಡ್‌ಗಳ ಬಳಿ ನಿಂತಿದ್ದೆವು. ಕೈಯಲ್ಲಿ ರಿವಾಲ್ವರ್‌ನೊಂದಿಗೆ ಆತ ನಮ್ಮ ಮುಂದೆ ಸಾಗುತ್ತಿದ್ದನು. ನಾವೆಲ್ಲರೂ ಅವನನ್ನು ತಡೆಯಲು ಮತ್ತು ಅವನನ್ನು ಶಾಂತಗೊಳಿಸಲು ಪ್ರಯತ್ನಿಸಿದೆವು. ಪೊಲೀಸರು ಅಲ್ಲಿ ನಿಂತಿದ್ದರು. ಆ ವ್ಯಕ್ತಿಯನ್ನು ತಡೆಯಲು ನಾವು ಪೊಲೀಸರನ್ನು ಕೇಳಿದೆವು. ಆದರೆ ಅವರು ಸುಮ್ಮನೆ ಅಲ್ಲಿಯೇ ನಿಂತಿದ್ದರು. ನಾವು ಅವನ ಕೈಯಿಂದ ರಿವಾಲ್ವರ್ ತೆಗೆದುಕೊಳ್ಳಲು ಪ್ರಯತ್ನಿಸಿದಾಗ, ಅವನು ಗುಂಡು ಹಾರಿಸಿಬಿಟ್ಟ” ಎಂದು ಭಯಾನಕ ಘಟನೆಗೆ ಸಾಕ್ಷಿಯಾದ ಜಾಮಿಯಾ ವಿದ್ಯಾರ್ಥಿನಿ ಆಮ್ನಾ ಆಸಿಫ್ ಎನ್‌ಟಿವಿಗೆ ತಿಳಿಸಿದ್ದಾರೆ. ಮತ್ತು ಅವನು ಖಂಡಿತವಾಗಿಯೂ ನಮ್ಮಲ್ಲಿ ಒಬ್ಬನಲ್ಲ, ಅವನು ಹೊರಗಿನವನು” ಎಂದು ಅವರು ಹೇಳಿದ್ದಾರೆ.

ಈ ಕುರಿತು “ಏನಾಗುತ್ತಿದೆ? ದೆಹಲಿ ಪೊಲೀಸರು ಹಿಂಸಾಚಾರವನ್ನು ಬಹಿರಂಗವಾಗಿ ಆಹ್ವಾನಿಸುತ್ತಿದ್ದಾರೆಯೇ?
ದೆಹಲಿ ಚುನಾವಣೆಯಲ್ಲಿ ಗೆಲ್ಲುವ ಗಲಭೆಯ ತಂತ್ರದ ಭಾಗವಾಗಿರಬೇಡಿ. ಜೆಪಿಯನ್ನು ನೆನಪಿಡಿ: ಯಾವುದೇ ದಾಳಿ ಮಾಡಿದರೂ ನಮ್ಮ ಕೈಗಳು ಮೇಲೇರುವುದಿಲ್ಲ!” ಎಂದು ಸ್ವರಾಜ್‌ ಇಂಡಿಯಾದ ಯೋಗೇಂದ್ರ ಯಾದವ್‌ ಟ್ವೀಟ್‌ ಮಾಡಿದ್ದಾರೆ.

ಕಳೆದ ತಿಂಗಳು ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಪೌರತ್ವ ಕಾನೂನನ್ನು ವಿರೋಧಿಸಿ ಹಿಂಸಾಚಾರ ನಡೆದಿತ್ತು; ವಿದ್ಯಾರ್ಥಿಗಳ ಮೇಲೆ ಪೊಲೀಸರು ಮಿತಿಮೀರಿದ ಬಲವನ್ನು ಬಳಸಿದ್ದರು. ಈ ತಿಂಗಳ ಆರಂಭದಲ್ಲಿ, ಮುಖವಾಡದ ಗೂಂಡಾಗಳು ಜೆಎನ್‌ಯುನಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲೆ ಹಲ್ಲೆ ನಡೆಸಿ ರಾಷ್ಟ್ರವ್ಯಾಪಿ ಆಕ್ರೋಶ ಮತ್ತು ಪ್ರತಿಭಟನೆಗೆ ಕಾರಣವಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...