Homeಕರ್ನಾಟಕಮುಸ್ಲಿಂ ವೇ‍ಷ ಧರಿಸಿ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡ ಸಾರ್ವಜನಿಕರು!

ಮುಸ್ಲಿಂ ವೇ‍ಷ ಧರಿಸಿ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡ ಸಾರ್ವಜನಿಕರು!

- Advertisement -
- Advertisement -

ಬೆಂಗಳೂರಿನಂತಹ ಮಹಾನಗರದಲ್ಲಿ ಕೋಟ್ಯಾಂತರ ಜನ ವಿವಿಧ ಕೆಲಸ ಮಾಡಿ ತಮ್ಮ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಮೂರು ಹೊತ್ತಿನ ತಮ್ಮ ಹೊಟ್ಟೆ ತುಂಬಿಕೊಳ್ಳಲು ಶ್ರಮ ಹಾಕಿ ದುಡಿಯುತ್ತಿದ್ದಾರೆ. ಇನ್ನು ವಿ‍ಶೇಷ ಚೇತನರೂ ಕೂಡ ಯಾವುದಾದರೊಂದು ಗೂಡಂಗಡಿಯನ್ನು ಹಾಕಿಕೊಂಡು, ಸಣ್ಣ ಪುಟ್ಟ ವ್ಯಾಪಾರ ಮಾಡಿಯೋ ಮತ್ತಾವುದೋ ರೀತಿಯಲ್ಲಿ ದುಡಿದು ತಮ್ಮ ಬದುಕು ಸಾಗಿಸುತ್ತಿದ್ದಾರೆ.

ಇನ್ನು ಕೆಲವು ವಯೋವೃದ್ದರು ದುಡಿಯಲು ಸಾದ್ಯವಾಗದೆ, ತಮ್ಮ ಮನೆಗಳಲ್ಲೂ ಸರಿಯಾದ ಹಾರೈಕೆ ಸಿಗದವರು ದೇವಸ್ಥಾನದ ಹತ್ತಿರವೊ, ಸಿಗ್ನಲ್ ಗಳಲ್ಲಿಯೋ ಬಿಕ್ಷಾಟನೆ ಮಾಡಿ ಹೊಟ್ಟೆ ತುಂಬಿಸಿಕೊಳ್ಳುತ್ತಾರೆ. ನಾವು ಇದನ್ನೆಲ್ಲಾ ಯಾಕೆ ಹೇಳ್ತಿದ್ದೀವಿ ಅನ್ಕೊಂಡ್ರಾ? ಅದಕ್ಕೆ ಕಾರಣ ಇದೆ.

ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ಒಂದು ವೀಡಿಯೋ ಸಾಕಷ್ಟು ಹರಿದಾಡುತ್ತಿದೆ. ಅದೇನೆಂದರೆ ವ್ಯಕ್ತಿಯೊಬ್ಬ ಮುಸ್ಲಿಂ ವೇಷ ಧರಿಸಿ ಭಿಕ್ಷಾಟನೆ ಮಾಡುತ್ತಿದ್ದಾರೆ.. ಈ ವಿಡಿಯೋದಲ್ಲಿ ಕಾಣುತ್ತಿರುವ ವ್ಯಕ್ತಿಯು ತಾನೊಬ್ಬ ಮುಸ್ಲಿಂ ಅಂಗವಿಕಲ ವ್ಯಕ್ತಿ, ಒಂದು ಕೈ ಒಂದು ಕಾಲು ಇಲ್ಲ ಎಂದು ಹೇಳಿಕೊಂಡು ಬೆಂಗಳೂರಿನ ಸೌತ್ ಎಂಡ್ ಸರ್ಕಲ್ ಸಿಗ್ನಲ್‌ನಲ್ಲಿ ಭಿಕ್ಷೆ ಬೇಡುತ್ತಿದ್ದ. ಕೆಲವರು ಆತನಿಂದ ಮುಸ್ಲಿಂ ಸಮುದಾಯದ ಮೇಲೆ ತುಚ್ಛವಾಗಿ ಮಾತನಾಡಿರುತ್ತಾರೆ. ಆ ಅಂಗವಿಕಲ ವ್ಯಕ್ತಿಯ ಬಗ್ಗೆ ಅನುಮಾನಗೊಂಡ ಕೆಲವು ಸಾರ್ವಜನಿಕರು ಆತನನ್ನು ಪ್ರಶ್ನೆ ಮಾಡಲು ಮುಂದಾಗುತ್ತಾರೆ.. ಆಗ ಆತ ಅಂಗವಿಕಲನೇ ಅಲ್ಲಾ ಎಂದು ಗೊತ್ತಾಗುತ್ತದೆ.. ಆತನಿಗೆ ಕೈಯಿದ್ದರೂ ಇಲ್ಲದ ರೀತಿ ನಟಿಸುತ್ತಿರುವುದನ್ನು ತರಾಟೆಗೆ ತೆಗೆದುಕೊಂಡು ವಿಡಿಯೋ ಮಾಡಿದ್ದಾರೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಆ ವಿಡಿಯೋ ವೈರಲ್ ಆದ ನಂತರ ಮತ್ತೊಬ್ಬ ಮುಸ್ಲಿಂ ವ್ಯಕ್ತಿಯು ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಯನ್ನು ನಿನ್ನ ಹೆಸರೇನು ಎಂದು ಪ್ರಶ್ನೆ ಮಾಡಿದ್ದಾರೆ. ಆದರೆ ಆತ ಸರಿಯಾಗಿ ಪ್ರತಿಕ್ರಿಯಿಸದ ಕಾರಣ ಜೋರು ದ್ವನಿಯಲ್ಲಿ ಕೇಳಿದಾಗ,  ಅಂಗವಿಕಲನಂತೆ ನಟಿಸುತ್ತಿದ್ದ ವ್ಯಕ್ತಿಯು ತಾನು ರಾಜಸ್ಥಾನ ದಿಂದ ಬಂದಿದ್ದು ನನ್ನ ಹೆಸರು ಬಿರ್ಸು, ನಾನು ಮುಸ್ಲಿಂ ಅಲ್ಲಾ ಎಂದು ಒಪ್ಪಿಕೊಂಡಿದ್ದಾನೆ. ಆತನನ್ನು ಪ್ರಶ್ನಿಸುವ ಆ ವಿಡಿಯೋ ಸಹ ಎಲ್ಲಡೆ ವೈರಲ್ ಆಗತ್ತಿದೆ.

ಹೀಗೆ ಮುಸ್ಲಿಂ ಟೋಪಿ ಹಾಕಿಕೊಂಡು ಅಂಗವಿಕಲ ಎಂಬ ವೇಷ ಧರಿಸಿ ಭಿಕ್ಷೆ ಬೇಡುತ್ತಿರುವುದು ಸಾರ್ವಜನಿಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಇಲ್ಲಿ ಹಿಂದೂ, ಮುಸ್ಲಿಂ ಎಲ್ಲರೂ ಭಾವೈಕ್ಯತೆಯಿಂದ ಸಹೋದರರಂತೆ ಜೀವಿಸುತ್ತಿದ್ದೇವೆ. ನೀವು ಯಾಕೆ ಈ ರೀತಿ ಮುಸ್ಲಿಂ ವೇಷ ಧರಿಸಿ ಅವರ ಮೇಲೆ ಕೆಟ್ಟ ಅಭಿಪ್ರಾಯ ಬರುವಂತೆ ಮಾಡುತ್ತಿದ್ದೀರಿ ಇದು ಸರಿಯಲ್ಲಾ ಎಂದು  ಕೆಲವು ವ್ಯಕ್ತಿಗಳು ತರಾಟೆಗೆ ತೆಗೆದುಕೊಂಡಿದ್ದಾರೆ.

ಮುಸ್ಲಿಂ ಸಮುದಾಯದ ಬಗ್ಗೆ ಈಗಾಗಲೇ ಸಾಕಷ್ಟು ತಪ್ಪು ಅಭಿಪ್ರಾಯಗಳು ಬರುವಂತಹ ಕಾರ್ಯಕ್ರಮಗಳನ್ನು ಕೆಲ ಬಲಪಂಥೀಯ ಟಿವಿ ಚಾನೆಲ್ ಗಳು ಕೊರೋನಾ ಸಮಯದಲ್ಲಿ ಮಾಡಿದ್ದವು. ಈಗ ಈ ರೀತಿಯ ಘಟನೆಗಳು ಮುಸ್ಲಿಂ ಸಮುದಾಯದಲ್ಲಿ ಮತ್ತಷ್ಟು ಬೇಸರಕ್ಕೆ ಕಾರಣವಾಗಿದೆ.


ಇದನ್ನು ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....