Homeಕರ್ನಾಟಕಮುಸ್ಲಿಂ ವೇ‍ಷ ಧರಿಸಿ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡ ಸಾರ್ವಜನಿಕರು!

ಮುಸ್ಲಿಂ ವೇ‍ಷ ಧರಿಸಿ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡ ಸಾರ್ವಜನಿಕರು!

- Advertisement -
- Advertisement -

ಬೆಂಗಳೂರಿನಂತಹ ಮಹಾನಗರದಲ್ಲಿ ಕೋಟ್ಯಾಂತರ ಜನ ವಿವಿಧ ಕೆಲಸ ಮಾಡಿ ತಮ್ಮ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಮೂರು ಹೊತ್ತಿನ ತಮ್ಮ ಹೊಟ್ಟೆ ತುಂಬಿಕೊಳ್ಳಲು ಶ್ರಮ ಹಾಕಿ ದುಡಿಯುತ್ತಿದ್ದಾರೆ. ಇನ್ನು ವಿ‍ಶೇಷ ಚೇತನರೂ ಕೂಡ ಯಾವುದಾದರೊಂದು ಗೂಡಂಗಡಿಯನ್ನು ಹಾಕಿಕೊಂಡು, ಸಣ್ಣ ಪುಟ್ಟ ವ್ಯಾಪಾರ ಮಾಡಿಯೋ ಮತ್ತಾವುದೋ ರೀತಿಯಲ್ಲಿ ದುಡಿದು ತಮ್ಮ ಬದುಕು ಸಾಗಿಸುತ್ತಿದ್ದಾರೆ.

ಇನ್ನು ಕೆಲವು ವಯೋವೃದ್ದರು ದುಡಿಯಲು ಸಾದ್ಯವಾಗದೆ, ತಮ್ಮ ಮನೆಗಳಲ್ಲೂ ಸರಿಯಾದ ಹಾರೈಕೆ ಸಿಗದವರು ದೇವಸ್ಥಾನದ ಹತ್ತಿರವೊ, ಸಿಗ್ನಲ್ ಗಳಲ್ಲಿಯೋ ಬಿಕ್ಷಾಟನೆ ಮಾಡಿ ಹೊಟ್ಟೆ ತುಂಬಿಸಿಕೊಳ್ಳುತ್ತಾರೆ. ನಾವು ಇದನ್ನೆಲ್ಲಾ ಯಾಕೆ ಹೇಳ್ತಿದ್ದೀವಿ ಅನ್ಕೊಂಡ್ರಾ? ಅದಕ್ಕೆ ಕಾರಣ ಇದೆ.

ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ಒಂದು ವೀಡಿಯೋ ಸಾಕಷ್ಟು ಹರಿದಾಡುತ್ತಿದೆ. ಅದೇನೆಂದರೆ ವ್ಯಕ್ತಿಯೊಬ್ಬ ಮುಸ್ಲಿಂ ವೇಷ ಧರಿಸಿ ಭಿಕ್ಷಾಟನೆ ಮಾಡುತ್ತಿದ್ದಾರೆ.. ಈ ವಿಡಿಯೋದಲ್ಲಿ ಕಾಣುತ್ತಿರುವ ವ್ಯಕ್ತಿಯು ತಾನೊಬ್ಬ ಮುಸ್ಲಿಂ ಅಂಗವಿಕಲ ವ್ಯಕ್ತಿ, ಒಂದು ಕೈ ಒಂದು ಕಾಲು ಇಲ್ಲ ಎಂದು ಹೇಳಿಕೊಂಡು ಬೆಂಗಳೂರಿನ ಸೌತ್ ಎಂಡ್ ಸರ್ಕಲ್ ಸಿಗ್ನಲ್‌ನಲ್ಲಿ ಭಿಕ್ಷೆ ಬೇಡುತ್ತಿದ್ದ. ಕೆಲವರು ಆತನಿಂದ ಮುಸ್ಲಿಂ ಸಮುದಾಯದ ಮೇಲೆ ತುಚ್ಛವಾಗಿ ಮಾತನಾಡಿರುತ್ತಾರೆ. ಆ ಅಂಗವಿಕಲ ವ್ಯಕ್ತಿಯ ಬಗ್ಗೆ ಅನುಮಾನಗೊಂಡ ಕೆಲವು ಸಾರ್ವಜನಿಕರು ಆತನನ್ನು ಪ್ರಶ್ನೆ ಮಾಡಲು ಮುಂದಾಗುತ್ತಾರೆ.. ಆಗ ಆತ ಅಂಗವಿಕಲನೇ ಅಲ್ಲಾ ಎಂದು ಗೊತ್ತಾಗುತ್ತದೆ.. ಆತನಿಗೆ ಕೈಯಿದ್ದರೂ ಇಲ್ಲದ ರೀತಿ ನಟಿಸುತ್ತಿರುವುದನ್ನು ತರಾಟೆಗೆ ತೆಗೆದುಕೊಂಡು ವಿಡಿಯೋ ಮಾಡಿದ್ದಾರೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಆ ವಿಡಿಯೋ ವೈರಲ್ ಆದ ನಂತರ ಮತ್ತೊಬ್ಬ ಮುಸ್ಲಿಂ ವ್ಯಕ್ತಿಯು ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಯನ್ನು ನಿನ್ನ ಹೆಸರೇನು ಎಂದು ಪ್ರಶ್ನೆ ಮಾಡಿದ್ದಾರೆ. ಆದರೆ ಆತ ಸರಿಯಾಗಿ ಪ್ರತಿಕ್ರಿಯಿಸದ ಕಾರಣ ಜೋರು ದ್ವನಿಯಲ್ಲಿ ಕೇಳಿದಾಗ,  ಅಂಗವಿಕಲನಂತೆ ನಟಿಸುತ್ತಿದ್ದ ವ್ಯಕ್ತಿಯು ತಾನು ರಾಜಸ್ಥಾನ ದಿಂದ ಬಂದಿದ್ದು ನನ್ನ ಹೆಸರು ಬಿರ್ಸು, ನಾನು ಮುಸ್ಲಿಂ ಅಲ್ಲಾ ಎಂದು ಒಪ್ಪಿಕೊಂಡಿದ್ದಾನೆ. ಆತನನ್ನು ಪ್ರಶ್ನಿಸುವ ಆ ವಿಡಿಯೋ ಸಹ ಎಲ್ಲಡೆ ವೈರಲ್ ಆಗತ್ತಿದೆ.

ಹೀಗೆ ಮುಸ್ಲಿಂ ಟೋಪಿ ಹಾಕಿಕೊಂಡು ಅಂಗವಿಕಲ ಎಂಬ ವೇಷ ಧರಿಸಿ ಭಿಕ್ಷೆ ಬೇಡುತ್ತಿರುವುದು ಸಾರ್ವಜನಿಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಇಲ್ಲಿ ಹಿಂದೂ, ಮುಸ್ಲಿಂ ಎಲ್ಲರೂ ಭಾವೈಕ್ಯತೆಯಿಂದ ಸಹೋದರರಂತೆ ಜೀವಿಸುತ್ತಿದ್ದೇವೆ. ನೀವು ಯಾಕೆ ಈ ರೀತಿ ಮುಸ್ಲಿಂ ವೇಷ ಧರಿಸಿ ಅವರ ಮೇಲೆ ಕೆಟ್ಟ ಅಭಿಪ್ರಾಯ ಬರುವಂತೆ ಮಾಡುತ್ತಿದ್ದೀರಿ ಇದು ಸರಿಯಲ್ಲಾ ಎಂದು  ಕೆಲವು ವ್ಯಕ್ತಿಗಳು ತರಾಟೆಗೆ ತೆಗೆದುಕೊಂಡಿದ್ದಾರೆ.

ಮುಸ್ಲಿಂ ಸಮುದಾಯದ ಬಗ್ಗೆ ಈಗಾಗಲೇ ಸಾಕಷ್ಟು ತಪ್ಪು ಅಭಿಪ್ರಾಯಗಳು ಬರುವಂತಹ ಕಾರ್ಯಕ್ರಮಗಳನ್ನು ಕೆಲ ಬಲಪಂಥೀಯ ಟಿವಿ ಚಾನೆಲ್ ಗಳು ಕೊರೋನಾ ಸಮಯದಲ್ಲಿ ಮಾಡಿದ್ದವು. ಈಗ ಈ ರೀತಿಯ ಘಟನೆಗಳು ಮುಸ್ಲಿಂ ಸಮುದಾಯದಲ್ಲಿ ಮತ್ತಷ್ಟು ಬೇಸರಕ್ಕೆ ಕಾರಣವಾಗಿದೆ.


ಇದನ್ನು ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...