Homeಕರ್ನಾಟಕಮುಸ್ಲಿಂ ವೇ‍ಷ ಧರಿಸಿ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡ ಸಾರ್ವಜನಿಕರು!

ಮುಸ್ಲಿಂ ವೇ‍ಷ ಧರಿಸಿ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡ ಸಾರ್ವಜನಿಕರು!

- Advertisement -
- Advertisement -

ಬೆಂಗಳೂರಿನಂತಹ ಮಹಾನಗರದಲ್ಲಿ ಕೋಟ್ಯಾಂತರ ಜನ ವಿವಿಧ ಕೆಲಸ ಮಾಡಿ ತಮ್ಮ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಮೂರು ಹೊತ್ತಿನ ತಮ್ಮ ಹೊಟ್ಟೆ ತುಂಬಿಕೊಳ್ಳಲು ಶ್ರಮ ಹಾಕಿ ದುಡಿಯುತ್ತಿದ್ದಾರೆ. ಇನ್ನು ವಿ‍ಶೇಷ ಚೇತನರೂ ಕೂಡ ಯಾವುದಾದರೊಂದು ಗೂಡಂಗಡಿಯನ್ನು ಹಾಕಿಕೊಂಡು, ಸಣ್ಣ ಪುಟ್ಟ ವ್ಯಾಪಾರ ಮಾಡಿಯೋ ಮತ್ತಾವುದೋ ರೀತಿಯಲ್ಲಿ ದುಡಿದು ತಮ್ಮ ಬದುಕು ಸಾಗಿಸುತ್ತಿದ್ದಾರೆ.

ಇನ್ನು ಕೆಲವು ವಯೋವೃದ್ದರು ದುಡಿಯಲು ಸಾದ್ಯವಾಗದೆ, ತಮ್ಮ ಮನೆಗಳಲ್ಲೂ ಸರಿಯಾದ ಹಾರೈಕೆ ಸಿಗದವರು ದೇವಸ್ಥಾನದ ಹತ್ತಿರವೊ, ಸಿಗ್ನಲ್ ಗಳಲ್ಲಿಯೋ ಬಿಕ್ಷಾಟನೆ ಮಾಡಿ ಹೊಟ್ಟೆ ತುಂಬಿಸಿಕೊಳ್ಳುತ್ತಾರೆ. ನಾವು ಇದನ್ನೆಲ್ಲಾ ಯಾಕೆ ಹೇಳ್ತಿದ್ದೀವಿ ಅನ್ಕೊಂಡ್ರಾ? ಅದಕ್ಕೆ ಕಾರಣ ಇದೆ.

ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ಒಂದು ವೀಡಿಯೋ ಸಾಕಷ್ಟು ಹರಿದಾಡುತ್ತಿದೆ. ಅದೇನೆಂದರೆ ವ್ಯಕ್ತಿಯೊಬ್ಬ ಮುಸ್ಲಿಂ ವೇಷ ಧರಿಸಿ ಭಿಕ್ಷಾಟನೆ ಮಾಡುತ್ತಿದ್ದಾರೆ.. ಈ ವಿಡಿಯೋದಲ್ಲಿ ಕಾಣುತ್ತಿರುವ ವ್ಯಕ್ತಿಯು ತಾನೊಬ್ಬ ಮುಸ್ಲಿಂ ಅಂಗವಿಕಲ ವ್ಯಕ್ತಿ, ಒಂದು ಕೈ ಒಂದು ಕಾಲು ಇಲ್ಲ ಎಂದು ಹೇಳಿಕೊಂಡು ಬೆಂಗಳೂರಿನ ಸೌತ್ ಎಂಡ್ ಸರ್ಕಲ್ ಸಿಗ್ನಲ್‌ನಲ್ಲಿ ಭಿಕ್ಷೆ ಬೇಡುತ್ತಿದ್ದ. ಕೆಲವರು ಆತನಿಂದ ಮುಸ್ಲಿಂ ಸಮುದಾಯದ ಮೇಲೆ ತುಚ್ಛವಾಗಿ ಮಾತನಾಡಿರುತ್ತಾರೆ. ಆ ಅಂಗವಿಕಲ ವ್ಯಕ್ತಿಯ ಬಗ್ಗೆ ಅನುಮಾನಗೊಂಡ ಕೆಲವು ಸಾರ್ವಜನಿಕರು ಆತನನ್ನು ಪ್ರಶ್ನೆ ಮಾಡಲು ಮುಂದಾಗುತ್ತಾರೆ.. ಆಗ ಆತ ಅಂಗವಿಕಲನೇ ಅಲ್ಲಾ ಎಂದು ಗೊತ್ತಾಗುತ್ತದೆ.. ಆತನಿಗೆ ಕೈಯಿದ್ದರೂ ಇಲ್ಲದ ರೀತಿ ನಟಿಸುತ್ತಿರುವುದನ್ನು ತರಾಟೆಗೆ ತೆಗೆದುಕೊಂಡು ವಿಡಿಯೋ ಮಾಡಿದ್ದಾರೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಆ ವಿಡಿಯೋ ವೈರಲ್ ಆದ ನಂತರ ಮತ್ತೊಬ್ಬ ಮುಸ್ಲಿಂ ವ್ಯಕ್ತಿಯು ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಯನ್ನು ನಿನ್ನ ಹೆಸರೇನು ಎಂದು ಪ್ರಶ್ನೆ ಮಾಡಿದ್ದಾರೆ. ಆದರೆ ಆತ ಸರಿಯಾಗಿ ಪ್ರತಿಕ್ರಿಯಿಸದ ಕಾರಣ ಜೋರು ದ್ವನಿಯಲ್ಲಿ ಕೇಳಿದಾಗ,  ಅಂಗವಿಕಲನಂತೆ ನಟಿಸುತ್ತಿದ್ದ ವ್ಯಕ್ತಿಯು ತಾನು ರಾಜಸ್ಥಾನ ದಿಂದ ಬಂದಿದ್ದು ನನ್ನ ಹೆಸರು ಬಿರ್ಸು, ನಾನು ಮುಸ್ಲಿಂ ಅಲ್ಲಾ ಎಂದು ಒಪ್ಪಿಕೊಂಡಿದ್ದಾನೆ. ಆತನನ್ನು ಪ್ರಶ್ನಿಸುವ ಆ ವಿಡಿಯೋ ಸಹ ಎಲ್ಲಡೆ ವೈರಲ್ ಆಗತ್ತಿದೆ.

ಹೀಗೆ ಮುಸ್ಲಿಂ ಟೋಪಿ ಹಾಕಿಕೊಂಡು ಅಂಗವಿಕಲ ಎಂಬ ವೇಷ ಧರಿಸಿ ಭಿಕ್ಷೆ ಬೇಡುತ್ತಿರುವುದು ಸಾರ್ವಜನಿಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಇಲ್ಲಿ ಹಿಂದೂ, ಮುಸ್ಲಿಂ ಎಲ್ಲರೂ ಭಾವೈಕ್ಯತೆಯಿಂದ ಸಹೋದರರಂತೆ ಜೀವಿಸುತ್ತಿದ್ದೇವೆ. ನೀವು ಯಾಕೆ ಈ ರೀತಿ ಮುಸ್ಲಿಂ ವೇಷ ಧರಿಸಿ ಅವರ ಮೇಲೆ ಕೆಟ್ಟ ಅಭಿಪ್ರಾಯ ಬರುವಂತೆ ಮಾಡುತ್ತಿದ್ದೀರಿ ಇದು ಸರಿಯಲ್ಲಾ ಎಂದು  ಕೆಲವು ವ್ಯಕ್ತಿಗಳು ತರಾಟೆಗೆ ತೆಗೆದುಕೊಂಡಿದ್ದಾರೆ.

ಮುಸ್ಲಿಂ ಸಮುದಾಯದ ಬಗ್ಗೆ ಈಗಾಗಲೇ ಸಾಕಷ್ಟು ತಪ್ಪು ಅಭಿಪ್ರಾಯಗಳು ಬರುವಂತಹ ಕಾರ್ಯಕ್ರಮಗಳನ್ನು ಕೆಲ ಬಲಪಂಥೀಯ ಟಿವಿ ಚಾನೆಲ್ ಗಳು ಕೊರೋನಾ ಸಮಯದಲ್ಲಿ ಮಾಡಿದ್ದವು. ಈಗ ಈ ರೀತಿಯ ಘಟನೆಗಳು ಮುಸ್ಲಿಂ ಸಮುದಾಯದಲ್ಲಿ ಮತ್ತಷ್ಟು ಬೇಸರಕ್ಕೆ ಕಾರಣವಾಗಿದೆ.


ಇದನ್ನು ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...