Homeಕರ್ನಾಟಕಮುಸ್ಲಿಂ ವೇ‍ಷ ಧರಿಸಿ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡ ಸಾರ್ವಜನಿಕರು!

ಮುಸ್ಲಿಂ ವೇ‍ಷ ಧರಿಸಿ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡ ಸಾರ್ವಜನಿಕರು!

- Advertisement -
- Advertisement -

ಬೆಂಗಳೂರಿನಂತಹ ಮಹಾನಗರದಲ್ಲಿ ಕೋಟ್ಯಾಂತರ ಜನ ವಿವಿಧ ಕೆಲಸ ಮಾಡಿ ತಮ್ಮ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಮೂರು ಹೊತ್ತಿನ ತಮ್ಮ ಹೊಟ್ಟೆ ತುಂಬಿಕೊಳ್ಳಲು ಶ್ರಮ ಹಾಕಿ ದುಡಿಯುತ್ತಿದ್ದಾರೆ. ಇನ್ನು ವಿ‍ಶೇಷ ಚೇತನರೂ ಕೂಡ ಯಾವುದಾದರೊಂದು ಗೂಡಂಗಡಿಯನ್ನು ಹಾಕಿಕೊಂಡು, ಸಣ್ಣ ಪುಟ್ಟ ವ್ಯಾಪಾರ ಮಾಡಿಯೋ ಮತ್ತಾವುದೋ ರೀತಿಯಲ್ಲಿ ದುಡಿದು ತಮ್ಮ ಬದುಕು ಸಾಗಿಸುತ್ತಿದ್ದಾರೆ.

ಇನ್ನು ಕೆಲವು ವಯೋವೃದ್ದರು ದುಡಿಯಲು ಸಾದ್ಯವಾಗದೆ, ತಮ್ಮ ಮನೆಗಳಲ್ಲೂ ಸರಿಯಾದ ಹಾರೈಕೆ ಸಿಗದವರು ದೇವಸ್ಥಾನದ ಹತ್ತಿರವೊ, ಸಿಗ್ನಲ್ ಗಳಲ್ಲಿಯೋ ಬಿಕ್ಷಾಟನೆ ಮಾಡಿ ಹೊಟ್ಟೆ ತುಂಬಿಸಿಕೊಳ್ಳುತ್ತಾರೆ. ನಾವು ಇದನ್ನೆಲ್ಲಾ ಯಾಕೆ ಹೇಳ್ತಿದ್ದೀವಿ ಅನ್ಕೊಂಡ್ರಾ? ಅದಕ್ಕೆ ಕಾರಣ ಇದೆ.

ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ಒಂದು ವೀಡಿಯೋ ಸಾಕಷ್ಟು ಹರಿದಾಡುತ್ತಿದೆ. ಅದೇನೆಂದರೆ ವ್ಯಕ್ತಿಯೊಬ್ಬ ಮುಸ್ಲಿಂ ವೇಷ ಧರಿಸಿ ಭಿಕ್ಷಾಟನೆ ಮಾಡುತ್ತಿದ್ದಾರೆ.. ಈ ವಿಡಿಯೋದಲ್ಲಿ ಕಾಣುತ್ತಿರುವ ವ್ಯಕ್ತಿಯು ತಾನೊಬ್ಬ ಮುಸ್ಲಿಂ ಅಂಗವಿಕಲ ವ್ಯಕ್ತಿ, ಒಂದು ಕೈ ಒಂದು ಕಾಲು ಇಲ್ಲ ಎಂದು ಹೇಳಿಕೊಂಡು ಬೆಂಗಳೂರಿನ ಸೌತ್ ಎಂಡ್ ಸರ್ಕಲ್ ಸಿಗ್ನಲ್‌ನಲ್ಲಿ ಭಿಕ್ಷೆ ಬೇಡುತ್ತಿದ್ದ. ಕೆಲವರು ಆತನಿಂದ ಮುಸ್ಲಿಂ ಸಮುದಾಯದ ಮೇಲೆ ತುಚ್ಛವಾಗಿ ಮಾತನಾಡಿರುತ್ತಾರೆ. ಆ ಅಂಗವಿಕಲ ವ್ಯಕ್ತಿಯ ಬಗ್ಗೆ ಅನುಮಾನಗೊಂಡ ಕೆಲವು ಸಾರ್ವಜನಿಕರು ಆತನನ್ನು ಪ್ರಶ್ನೆ ಮಾಡಲು ಮುಂದಾಗುತ್ತಾರೆ.. ಆಗ ಆತ ಅಂಗವಿಕಲನೇ ಅಲ್ಲಾ ಎಂದು ಗೊತ್ತಾಗುತ್ತದೆ.. ಆತನಿಗೆ ಕೈಯಿದ್ದರೂ ಇಲ್ಲದ ರೀತಿ ನಟಿಸುತ್ತಿರುವುದನ್ನು ತರಾಟೆಗೆ ತೆಗೆದುಕೊಂಡು ವಿಡಿಯೋ ಮಾಡಿದ್ದಾರೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಆ ವಿಡಿಯೋ ವೈರಲ್ ಆದ ನಂತರ ಮತ್ತೊಬ್ಬ ಮುಸ್ಲಿಂ ವ್ಯಕ್ತಿಯು ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಯನ್ನು ನಿನ್ನ ಹೆಸರೇನು ಎಂದು ಪ್ರಶ್ನೆ ಮಾಡಿದ್ದಾರೆ. ಆದರೆ ಆತ ಸರಿಯಾಗಿ ಪ್ರತಿಕ್ರಿಯಿಸದ ಕಾರಣ ಜೋರು ದ್ವನಿಯಲ್ಲಿ ಕೇಳಿದಾಗ,  ಅಂಗವಿಕಲನಂತೆ ನಟಿಸುತ್ತಿದ್ದ ವ್ಯಕ್ತಿಯು ತಾನು ರಾಜಸ್ಥಾನ ದಿಂದ ಬಂದಿದ್ದು ನನ್ನ ಹೆಸರು ಬಿರ್ಸು, ನಾನು ಮುಸ್ಲಿಂ ಅಲ್ಲಾ ಎಂದು ಒಪ್ಪಿಕೊಂಡಿದ್ದಾನೆ. ಆತನನ್ನು ಪ್ರಶ್ನಿಸುವ ಆ ವಿಡಿಯೋ ಸಹ ಎಲ್ಲಡೆ ವೈರಲ್ ಆಗತ್ತಿದೆ.

ಹೀಗೆ ಮುಸ್ಲಿಂ ಟೋಪಿ ಹಾಕಿಕೊಂಡು ಅಂಗವಿಕಲ ಎಂಬ ವೇಷ ಧರಿಸಿ ಭಿಕ್ಷೆ ಬೇಡುತ್ತಿರುವುದು ಸಾರ್ವಜನಿಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಇಲ್ಲಿ ಹಿಂದೂ, ಮುಸ್ಲಿಂ ಎಲ್ಲರೂ ಭಾವೈಕ್ಯತೆಯಿಂದ ಸಹೋದರರಂತೆ ಜೀವಿಸುತ್ತಿದ್ದೇವೆ. ನೀವು ಯಾಕೆ ಈ ರೀತಿ ಮುಸ್ಲಿಂ ವೇಷ ಧರಿಸಿ ಅವರ ಮೇಲೆ ಕೆಟ್ಟ ಅಭಿಪ್ರಾಯ ಬರುವಂತೆ ಮಾಡುತ್ತಿದ್ದೀರಿ ಇದು ಸರಿಯಲ್ಲಾ ಎಂದು  ಕೆಲವು ವ್ಯಕ್ತಿಗಳು ತರಾಟೆಗೆ ತೆಗೆದುಕೊಂಡಿದ್ದಾರೆ.

ಮುಸ್ಲಿಂ ಸಮುದಾಯದ ಬಗ್ಗೆ ಈಗಾಗಲೇ ಸಾಕಷ್ಟು ತಪ್ಪು ಅಭಿಪ್ರಾಯಗಳು ಬರುವಂತಹ ಕಾರ್ಯಕ್ರಮಗಳನ್ನು ಕೆಲ ಬಲಪಂಥೀಯ ಟಿವಿ ಚಾನೆಲ್ ಗಳು ಕೊರೋನಾ ಸಮಯದಲ್ಲಿ ಮಾಡಿದ್ದವು. ಈಗ ಈ ರೀತಿಯ ಘಟನೆಗಳು ಮುಸ್ಲಿಂ ಸಮುದಾಯದಲ್ಲಿ ಮತ್ತಷ್ಟು ಬೇಸರಕ್ಕೆ ಕಾರಣವಾಗಿದೆ.


ಇದನ್ನು ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...