Homeಕರ್ನಾಟಕಮುಸ್ಲಿಂ ವೇ‍ಷ ಧರಿಸಿ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡ ಸಾರ್ವಜನಿಕರು!

ಮುಸ್ಲಿಂ ವೇ‍ಷ ಧರಿಸಿ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡ ಸಾರ್ವಜನಿಕರು!

- Advertisement -
- Advertisement -

ಬೆಂಗಳೂರಿನಂತಹ ಮಹಾನಗರದಲ್ಲಿ ಕೋಟ್ಯಾಂತರ ಜನ ವಿವಿಧ ಕೆಲಸ ಮಾಡಿ ತಮ್ಮ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಮೂರು ಹೊತ್ತಿನ ತಮ್ಮ ಹೊಟ್ಟೆ ತುಂಬಿಕೊಳ್ಳಲು ಶ್ರಮ ಹಾಕಿ ದುಡಿಯುತ್ತಿದ್ದಾರೆ. ಇನ್ನು ವಿ‍ಶೇಷ ಚೇತನರೂ ಕೂಡ ಯಾವುದಾದರೊಂದು ಗೂಡಂಗಡಿಯನ್ನು ಹಾಕಿಕೊಂಡು, ಸಣ್ಣ ಪುಟ್ಟ ವ್ಯಾಪಾರ ಮಾಡಿಯೋ ಮತ್ತಾವುದೋ ರೀತಿಯಲ್ಲಿ ದುಡಿದು ತಮ್ಮ ಬದುಕು ಸಾಗಿಸುತ್ತಿದ್ದಾರೆ.

ಇನ್ನು ಕೆಲವು ವಯೋವೃದ್ದರು ದುಡಿಯಲು ಸಾದ್ಯವಾಗದೆ, ತಮ್ಮ ಮನೆಗಳಲ್ಲೂ ಸರಿಯಾದ ಹಾರೈಕೆ ಸಿಗದವರು ದೇವಸ್ಥಾನದ ಹತ್ತಿರವೊ, ಸಿಗ್ನಲ್ ಗಳಲ್ಲಿಯೋ ಬಿಕ್ಷಾಟನೆ ಮಾಡಿ ಹೊಟ್ಟೆ ತುಂಬಿಸಿಕೊಳ್ಳುತ್ತಾರೆ. ನಾವು ಇದನ್ನೆಲ್ಲಾ ಯಾಕೆ ಹೇಳ್ತಿದ್ದೀವಿ ಅನ್ಕೊಂಡ್ರಾ? ಅದಕ್ಕೆ ಕಾರಣ ಇದೆ.

ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ಒಂದು ವೀಡಿಯೋ ಸಾಕಷ್ಟು ಹರಿದಾಡುತ್ತಿದೆ. ಅದೇನೆಂದರೆ ವ್ಯಕ್ತಿಯೊಬ್ಬ ಮುಸ್ಲಿಂ ವೇಷ ಧರಿಸಿ ಭಿಕ್ಷಾಟನೆ ಮಾಡುತ್ತಿದ್ದಾರೆ.. ಈ ವಿಡಿಯೋದಲ್ಲಿ ಕಾಣುತ್ತಿರುವ ವ್ಯಕ್ತಿಯು ತಾನೊಬ್ಬ ಮುಸ್ಲಿಂ ಅಂಗವಿಕಲ ವ್ಯಕ್ತಿ, ಒಂದು ಕೈ ಒಂದು ಕಾಲು ಇಲ್ಲ ಎಂದು ಹೇಳಿಕೊಂಡು ಬೆಂಗಳೂರಿನ ಸೌತ್ ಎಂಡ್ ಸರ್ಕಲ್ ಸಿಗ್ನಲ್‌ನಲ್ಲಿ ಭಿಕ್ಷೆ ಬೇಡುತ್ತಿದ್ದ. ಕೆಲವರು ಆತನಿಂದ ಮುಸ್ಲಿಂ ಸಮುದಾಯದ ಮೇಲೆ ತುಚ್ಛವಾಗಿ ಮಾತನಾಡಿರುತ್ತಾರೆ. ಆ ಅಂಗವಿಕಲ ವ್ಯಕ್ತಿಯ ಬಗ್ಗೆ ಅನುಮಾನಗೊಂಡ ಕೆಲವು ಸಾರ್ವಜನಿಕರು ಆತನನ್ನು ಪ್ರಶ್ನೆ ಮಾಡಲು ಮುಂದಾಗುತ್ತಾರೆ.. ಆಗ ಆತ ಅಂಗವಿಕಲನೇ ಅಲ್ಲಾ ಎಂದು ಗೊತ್ತಾಗುತ್ತದೆ.. ಆತನಿಗೆ ಕೈಯಿದ್ದರೂ ಇಲ್ಲದ ರೀತಿ ನಟಿಸುತ್ತಿರುವುದನ್ನು ತರಾಟೆಗೆ ತೆಗೆದುಕೊಂಡು ವಿಡಿಯೋ ಮಾಡಿದ್ದಾರೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಆ ವಿಡಿಯೋ ವೈರಲ್ ಆದ ನಂತರ ಮತ್ತೊಬ್ಬ ಮುಸ್ಲಿಂ ವ್ಯಕ್ತಿಯು ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಯನ್ನು ನಿನ್ನ ಹೆಸರೇನು ಎಂದು ಪ್ರಶ್ನೆ ಮಾಡಿದ್ದಾರೆ. ಆದರೆ ಆತ ಸರಿಯಾಗಿ ಪ್ರತಿಕ್ರಿಯಿಸದ ಕಾರಣ ಜೋರು ದ್ವನಿಯಲ್ಲಿ ಕೇಳಿದಾಗ,  ಅಂಗವಿಕಲನಂತೆ ನಟಿಸುತ್ತಿದ್ದ ವ್ಯಕ್ತಿಯು ತಾನು ರಾಜಸ್ಥಾನ ದಿಂದ ಬಂದಿದ್ದು ನನ್ನ ಹೆಸರು ಬಿರ್ಸು, ನಾನು ಮುಸ್ಲಿಂ ಅಲ್ಲಾ ಎಂದು ಒಪ್ಪಿಕೊಂಡಿದ್ದಾನೆ. ಆತನನ್ನು ಪ್ರಶ್ನಿಸುವ ಆ ವಿಡಿಯೋ ಸಹ ಎಲ್ಲಡೆ ವೈರಲ್ ಆಗತ್ತಿದೆ.

ಹೀಗೆ ಮುಸ್ಲಿಂ ಟೋಪಿ ಹಾಕಿಕೊಂಡು ಅಂಗವಿಕಲ ಎಂಬ ವೇಷ ಧರಿಸಿ ಭಿಕ್ಷೆ ಬೇಡುತ್ತಿರುವುದು ಸಾರ್ವಜನಿಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಇಲ್ಲಿ ಹಿಂದೂ, ಮುಸ್ಲಿಂ ಎಲ್ಲರೂ ಭಾವೈಕ್ಯತೆಯಿಂದ ಸಹೋದರರಂತೆ ಜೀವಿಸುತ್ತಿದ್ದೇವೆ. ನೀವು ಯಾಕೆ ಈ ರೀತಿ ಮುಸ್ಲಿಂ ವೇಷ ಧರಿಸಿ ಅವರ ಮೇಲೆ ಕೆಟ್ಟ ಅಭಿಪ್ರಾಯ ಬರುವಂತೆ ಮಾಡುತ್ತಿದ್ದೀರಿ ಇದು ಸರಿಯಲ್ಲಾ ಎಂದು  ಕೆಲವು ವ್ಯಕ್ತಿಗಳು ತರಾಟೆಗೆ ತೆಗೆದುಕೊಂಡಿದ್ದಾರೆ.

ಮುಸ್ಲಿಂ ಸಮುದಾಯದ ಬಗ್ಗೆ ಈಗಾಗಲೇ ಸಾಕಷ್ಟು ತಪ್ಪು ಅಭಿಪ್ರಾಯಗಳು ಬರುವಂತಹ ಕಾರ್ಯಕ್ರಮಗಳನ್ನು ಕೆಲ ಬಲಪಂಥೀಯ ಟಿವಿ ಚಾನೆಲ್ ಗಳು ಕೊರೋನಾ ಸಮಯದಲ್ಲಿ ಮಾಡಿದ್ದವು. ಈಗ ಈ ರೀತಿಯ ಘಟನೆಗಳು ಮುಸ್ಲಿಂ ಸಮುದಾಯದಲ್ಲಿ ಮತ್ತಷ್ಟು ಬೇಸರಕ್ಕೆ ಕಾರಣವಾಗಿದೆ.


ಇದನ್ನು ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...