Homeಮುಖಪುಟವಿವಾದಿತ ಯತಿ ನರಸಿಂಗಾನಂದ ಅರ್ಚಕನಾಗಿರುವ ದೇವಾಲಯದಲ್ಲಿ ವ್ಯಕ್ತಿಗೆ ಚೂರಿ ಇರಿತ

ವಿವಾದಿತ ಯತಿ ನರಸಿಂಗಾನಂದ ಅರ್ಚಕನಾಗಿರುವ ದೇವಾಲಯದಲ್ಲಿ ವ್ಯಕ್ತಿಗೆ ಚೂರಿ ಇರಿತ

- Advertisement -
- Advertisement -

ಉತ್ತರ ಪ್ರದೇಶದ ಗಾಜಿಯಾಬಾದ್‌ನ ದಾಸ್ನಾ ದೇವಿ ದೇವಸ್ಥಾನದ ಆವರಣದಲ್ಲಿ ನಿದ್ರಿಸುತ್ತಿದ್ದ 52 ವರ್ಷದ ವ್ಯಕ್ತಿಯ ಮೇಲೆ ಪೇಪರ್‌ ಕಟ್ಟರ್‌ ಚಾಕುವಿನಿಂದ ಹಲವು ಬಾರಿ ಚುಚ್ಚಲಾಗಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ.

ಘಟನೆಯು ಆಗಸ್ಟ್ 9 ಮತ್ತು 10 ರ ಮಧ್ಯರಾತ್ರಿ ನಡೆದ್ದಿದ್ದು, ಘಟನೆ ನಡೆಯುವ ಸಮಯದಲ್ಲಿ, ದೇವಸ್ಥಾನದ ಮುಖ್ಯ ಮಹಂತ್‌‌‌ ಆಗಿರುವ, ಸದಾ ದ್ವೇಷ ಭಾಷಣಗಳಿಂದಲೇ ಸುದ್ದಿಯಲ್ಲಿರುವ ವಿವಾದಿತ ಅರ್ಚಕ ನರಸಿಂಹಾನಂದ್ ಅವರು, ದೇವಸ್ಥಾನದ ಆವರಣದಲ್ಲಿರುವ ಕೊಠಡಿಯಲ್ಲಿದ್ದರು ಎಂದು ದಿಕ್ವಿಂಟ್‌ ವರದಿ ಮಾಡಿದೆ.

ಇದನ್ನೂ ಓದಿ: ವಿವಾದಿತ ಯತಿ ನರಸಿಂಗಾನಂದ್ ವಿರುದ್ದ FIR ದಾಖಲಿಸಲು ಮಹಿಳಾ ಆಯೋಗ ಒತ್ತಾಯ

ಸಂತ್ರಸ್ತ ವ್ಯಕ್ತಿಯನ್ನು ಸ್ವಾಮಿ ನರೇಶಾನಂದ್, ಬಿಹಾರದ ಸಮಸ್ತಿಪುರ ಜಿಲ್ಲೆಯ ನಿವಾಸಿ ಎಂದು ಗುರುತಿಸಲಾಗಿದೆ. ಅವರು ಆಗಸ್ಟ್ 7 ರಂದು ಸಮಾರಂಭವೊಂದರಲ್ಲಿ ಭಾಗವಹಿಸಲು ಗಾಜಿಯಾಬಾದ್‌ಗೆ ಬಂದಿದ್ದರು.

ದೇವಸ್ಥಾನದಲ್ಲಿನ ಸಿಸಿಟಿವಿ ಕ್ಯಾಮೆರಾಗಳು

ದಾಳಿಯ ನಂತರ, ನರೇಶಾನಂದ್ ಅವರನ್ನು ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಪ್ರಸ್ತುತ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆಯ ಬಗ್ಗೆ ಯಾವುದೆ ದೂರು ದಾಖಲಾಗದಿದ್ದರೂ ಗಾಜಿಯಾಬಾದ್ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ.

ದೇವಾಲಯದ ಒಳಗೆ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಇದನ್ನೂ ಓದಿ: ಜೈ ಶ್ರೀರಾಮ್ ಹೇಳುವಂತೆ ಪತ್ರಕರ್ತನಿಗೆ ಬೆದರಿಕೆ: ನಿಮ್ಮ ಒತ್ತಡಕ್ಕೆ ಜಗ್ಗಲಾರೆ ಎಂದ ಅನ್ಮೋಲ್ ಪ್ರೀತಮ್

“ದೇವಸ್ಥಾನದಲ್ಲಿ ಅಳವಡಿಸಲಾಗಿರುವ ಸಿಸಿಟಿವಿಗಳು ಕೆಲಸ ಮಾಡುತ್ತಿಲ್ಲ. ನಾವು ಸ್ಥಳೀಯವಾಗಿ ಇರುವ ಇತರ ಸಿಸಿಟಿವಿ ಕ್ಯಾಮೆರಾಗಳ ತುಣುಕನ್ನು ಸ್ಕ್ಯಾನ್ ಮಾಡಲು ಪ್ರಯತ್ನಿಸುತ್ತಿದ್ದೇವೆ. ನಮಗೆ ಬಂದ ದೂರಿನ ಆಧಾರದ ಮೇಲೆ ನಾವು ಎಫ್ಐಆರ್ ದಾಖಲಿಸುತ್ತೇವೆ” ಎಂದು ಗಾಜಿಯಾಬಾದ್ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಇರಾಜ್ ರಾಜ ಹೇಳಿದ್ದಾರೆ.

ವಿವಾದದ ಕೇಂದ್ರ ದಾಸ್ನಾ ದೇವಿ ದೇವಸ್ಥಾನ!

ವಿವಾದಿತ ಯತಿ ನರಸಿಂಹಾನಂದ ಅವರ ವೈಯಕ್ತಿಕ ಭದ್ರತೆಗಾಗಿ ನಾಲ್ಕು ಪೊಲೀಸ್ ಗನ್ನರ್‌ಗಳನ್ನು ಹೊರತುಪಡಿಸಿ, ಸ್ಥಳೀಯ ಪೊಲೀಸ್ ಸಿಬ್ಬಂದಿ ಮತ್ತು ಪ್ರಾಂತೀಯ ಸಶಸ್ತ್ರ ಕಾನ್‌ಸ್ಟಾಬ್ಯುಲರಿ (ಪಿಎಸಿ) ಯನ್ನು ಮುಖ್ಯ ದ್ವಾರದಲ್ಲಿ ಮತ್ತು ದೇವಸ್ಥಾನದ ಆವರಣದಲ್ಲಿ ನಿಯೋಜಿಸಲಾಗಿದೆ. ಆದ್ದರಿಂದ ದಾಳಿಕೋರ ಮುಖ್ಯ ದ್ವಾರದ ಮೂಲಕ ದಾಟಿ ಹೋಗುವುದು ಅಸಂಭವವಾಗಿದೆ ಎಂದು ಪೊಲೀಸರು ಹೇಳಿದ್ದಾರೆ ಎಂದು ಕ್ವಿಂಟ್‌ ವರದಿ ಮಾಡಿದೆ.

ಇದನ್ನೂ ಓದಿ: ‘ಧರ್ಮಯುದ್ಧ ಮಾಡಲು ನನಗೆ ಆಯುಧ ಹಿಡಿದಿರುವವರು ಬೇಕಿದೆ’: ಬಹಿರಂಗ ಭಯೋತ್ಪಾದನೆಗೆ ಕರೆ ನೀಡಿದ ಯತಿ ನರಸಿಂಗಾನಂದ?

“ದೇವಾಲಯದ ಆವರಣದ ಸುತ್ತಲೂ ಒಂದು ಗೋಡೆಯಿದೆ. ಆದರೆ ಕೆಲವು ಕಡೆ ಅದರ ಎತ್ತರ ಕಡಿಮೆಯಾಗಿದೆ. ಬಹುಶಃ ದಾಳಿಕೋರ ದಾಳಿಯ ನಂತರ ಅಂತಹ ಒಂದು ಸ್ಥಳದಲ್ಲಿ ಗೋಡೆಯನ್ನು ಹಾರಿ ತಪ್ಪಿಸಿಕೊಂಡಿರಬಹುದು” ಎಂದು ಇರಾಜ್ ರಾಜಾ ಹೇಳಿದ್ದಾರೆ.

ಇತ್ತೀಚೆಗೆ ದಾಸ್ನಾ ದೇವಿ ದೇವಸ್ಥಾನವು ವಿವಾದದ ಕೇಂದ್ರವಾಗಿತ್ತು. ಮಾರ್ಚ್ 11 ರಂದು, ನರಸಿಂಗಾನಂದ್ ಅವರ ಶಿಷ್ಯರಲ್ಲಿ ಒಬ್ಬರಾದ ಶೃಂಗಿ ಯಾದವ್ ಎಂಬ ವ್ಯಕ್ತಿ, ನೀರು ಕುಡಿಯಲು ದೇವಸ್ಥಾನ ಪ್ರವೇಶಿಸಿದ್ದ 14 ವರ್ಷದ ಮುಸ್ಲಿಂ ಬಾಲಕನಿಗೆ ಕ್ರೂರವಾಗಿ ಥಳಿಸಿರುವುದು ವಿಡಿಯೋದಲ್ಲಿ ದಾಖಲಾಗಿತ್ತು. ಇದರ ವಿರುದ್ದ ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

ದೇವಾಲಯದ ಆವರಣದ ಹೊರಗೆ ಒಂದು ಬೋರ್ಡ್ ಇದ್ದು, ಅದರಲ್ಲಿ, “ಈ ದೇವಸ್ಥಾನವು ಹಿಂದೂಗಳಿಗೆ ಪವಿತ್ರ ಸ್ಥಳವಾಗಿದೆ. ಮುಸ್ಲಿಮರ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ” ಎಂದು ಬರೆಯಲಾಗಿದೆ.

ಇದನ್ನೂ ಓದಿ: ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: ನನ್ನ ಅನುಯಾಯಿ ಸೂಕ್ತ ಉತ್ತರ ನೀಡಿದ್ದಾನೆ ಎಂದ ಸ್ವಾಮೀಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...