Homeಮುಖಪುಟವಿವಾದಿತ ಯತಿ ನರಸಿಂಗಾನಂದ ಅರ್ಚಕನಾಗಿರುವ ದೇವಾಲಯದಲ್ಲಿ ವ್ಯಕ್ತಿಗೆ ಚೂರಿ ಇರಿತ

ವಿವಾದಿತ ಯತಿ ನರಸಿಂಗಾನಂದ ಅರ್ಚಕನಾಗಿರುವ ದೇವಾಲಯದಲ್ಲಿ ವ್ಯಕ್ತಿಗೆ ಚೂರಿ ಇರಿತ

- Advertisement -
- Advertisement -

ಉತ್ತರ ಪ್ರದೇಶದ ಗಾಜಿಯಾಬಾದ್‌ನ ದಾಸ್ನಾ ದೇವಿ ದೇವಸ್ಥಾನದ ಆವರಣದಲ್ಲಿ ನಿದ್ರಿಸುತ್ತಿದ್ದ 52 ವರ್ಷದ ವ್ಯಕ್ತಿಯ ಮೇಲೆ ಪೇಪರ್‌ ಕಟ್ಟರ್‌ ಚಾಕುವಿನಿಂದ ಹಲವು ಬಾರಿ ಚುಚ್ಚಲಾಗಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ.

ಘಟನೆಯು ಆಗಸ್ಟ್ 9 ಮತ್ತು 10 ರ ಮಧ್ಯರಾತ್ರಿ ನಡೆದ್ದಿದ್ದು, ಘಟನೆ ನಡೆಯುವ ಸಮಯದಲ್ಲಿ, ದೇವಸ್ಥಾನದ ಮುಖ್ಯ ಮಹಂತ್‌‌‌ ಆಗಿರುವ, ಸದಾ ದ್ವೇಷ ಭಾಷಣಗಳಿಂದಲೇ ಸುದ್ದಿಯಲ್ಲಿರುವ ವಿವಾದಿತ ಅರ್ಚಕ ನರಸಿಂಹಾನಂದ್ ಅವರು, ದೇವಸ್ಥಾನದ ಆವರಣದಲ್ಲಿರುವ ಕೊಠಡಿಯಲ್ಲಿದ್ದರು ಎಂದು ದಿಕ್ವಿಂಟ್‌ ವರದಿ ಮಾಡಿದೆ.

ಇದನ್ನೂ ಓದಿ: ವಿವಾದಿತ ಯತಿ ನರಸಿಂಗಾನಂದ್ ವಿರುದ್ದ FIR ದಾಖಲಿಸಲು ಮಹಿಳಾ ಆಯೋಗ ಒತ್ತಾಯ

ಸಂತ್ರಸ್ತ ವ್ಯಕ್ತಿಯನ್ನು ಸ್ವಾಮಿ ನರೇಶಾನಂದ್, ಬಿಹಾರದ ಸಮಸ್ತಿಪುರ ಜಿಲ್ಲೆಯ ನಿವಾಸಿ ಎಂದು ಗುರುತಿಸಲಾಗಿದೆ. ಅವರು ಆಗಸ್ಟ್ 7 ರಂದು ಸಮಾರಂಭವೊಂದರಲ್ಲಿ ಭಾಗವಹಿಸಲು ಗಾಜಿಯಾಬಾದ್‌ಗೆ ಬಂದಿದ್ದರು.

ದೇವಸ್ಥಾನದಲ್ಲಿನ ಸಿಸಿಟಿವಿ ಕ್ಯಾಮೆರಾಗಳು

ದಾಳಿಯ ನಂತರ, ನರೇಶಾನಂದ್ ಅವರನ್ನು ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಪ್ರಸ್ತುತ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆಯ ಬಗ್ಗೆ ಯಾವುದೆ ದೂರು ದಾಖಲಾಗದಿದ್ದರೂ ಗಾಜಿಯಾಬಾದ್ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ.

ದೇವಾಲಯದ ಒಳಗೆ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಇದನ್ನೂ ಓದಿ: ಜೈ ಶ್ರೀರಾಮ್ ಹೇಳುವಂತೆ ಪತ್ರಕರ್ತನಿಗೆ ಬೆದರಿಕೆ: ನಿಮ್ಮ ಒತ್ತಡಕ್ಕೆ ಜಗ್ಗಲಾರೆ ಎಂದ ಅನ್ಮೋಲ್ ಪ್ರೀತಮ್

“ದೇವಸ್ಥಾನದಲ್ಲಿ ಅಳವಡಿಸಲಾಗಿರುವ ಸಿಸಿಟಿವಿಗಳು ಕೆಲಸ ಮಾಡುತ್ತಿಲ್ಲ. ನಾವು ಸ್ಥಳೀಯವಾಗಿ ಇರುವ ಇತರ ಸಿಸಿಟಿವಿ ಕ್ಯಾಮೆರಾಗಳ ತುಣುಕನ್ನು ಸ್ಕ್ಯಾನ್ ಮಾಡಲು ಪ್ರಯತ್ನಿಸುತ್ತಿದ್ದೇವೆ. ನಮಗೆ ಬಂದ ದೂರಿನ ಆಧಾರದ ಮೇಲೆ ನಾವು ಎಫ್ಐಆರ್ ದಾಖಲಿಸುತ್ತೇವೆ” ಎಂದು ಗಾಜಿಯಾಬಾದ್ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಇರಾಜ್ ರಾಜ ಹೇಳಿದ್ದಾರೆ.

ವಿವಾದದ ಕೇಂದ್ರ ದಾಸ್ನಾ ದೇವಿ ದೇವಸ್ಥಾನ!

ವಿವಾದಿತ ಯತಿ ನರಸಿಂಹಾನಂದ ಅವರ ವೈಯಕ್ತಿಕ ಭದ್ರತೆಗಾಗಿ ನಾಲ್ಕು ಪೊಲೀಸ್ ಗನ್ನರ್‌ಗಳನ್ನು ಹೊರತುಪಡಿಸಿ, ಸ್ಥಳೀಯ ಪೊಲೀಸ್ ಸಿಬ್ಬಂದಿ ಮತ್ತು ಪ್ರಾಂತೀಯ ಸಶಸ್ತ್ರ ಕಾನ್‌ಸ್ಟಾಬ್ಯುಲರಿ (ಪಿಎಸಿ) ಯನ್ನು ಮುಖ್ಯ ದ್ವಾರದಲ್ಲಿ ಮತ್ತು ದೇವಸ್ಥಾನದ ಆವರಣದಲ್ಲಿ ನಿಯೋಜಿಸಲಾಗಿದೆ. ಆದ್ದರಿಂದ ದಾಳಿಕೋರ ಮುಖ್ಯ ದ್ವಾರದ ಮೂಲಕ ದಾಟಿ ಹೋಗುವುದು ಅಸಂಭವವಾಗಿದೆ ಎಂದು ಪೊಲೀಸರು ಹೇಳಿದ್ದಾರೆ ಎಂದು ಕ್ವಿಂಟ್‌ ವರದಿ ಮಾಡಿದೆ.

ಇದನ್ನೂ ಓದಿ: ‘ಧರ್ಮಯುದ್ಧ ಮಾಡಲು ನನಗೆ ಆಯುಧ ಹಿಡಿದಿರುವವರು ಬೇಕಿದೆ’: ಬಹಿರಂಗ ಭಯೋತ್ಪಾದನೆಗೆ ಕರೆ ನೀಡಿದ ಯತಿ ನರಸಿಂಗಾನಂದ?

“ದೇವಾಲಯದ ಆವರಣದ ಸುತ್ತಲೂ ಒಂದು ಗೋಡೆಯಿದೆ. ಆದರೆ ಕೆಲವು ಕಡೆ ಅದರ ಎತ್ತರ ಕಡಿಮೆಯಾಗಿದೆ. ಬಹುಶಃ ದಾಳಿಕೋರ ದಾಳಿಯ ನಂತರ ಅಂತಹ ಒಂದು ಸ್ಥಳದಲ್ಲಿ ಗೋಡೆಯನ್ನು ಹಾರಿ ತಪ್ಪಿಸಿಕೊಂಡಿರಬಹುದು” ಎಂದು ಇರಾಜ್ ರಾಜಾ ಹೇಳಿದ್ದಾರೆ.

ಇತ್ತೀಚೆಗೆ ದಾಸ್ನಾ ದೇವಿ ದೇವಸ್ಥಾನವು ವಿವಾದದ ಕೇಂದ್ರವಾಗಿತ್ತು. ಮಾರ್ಚ್ 11 ರಂದು, ನರಸಿಂಗಾನಂದ್ ಅವರ ಶಿಷ್ಯರಲ್ಲಿ ಒಬ್ಬರಾದ ಶೃಂಗಿ ಯಾದವ್ ಎಂಬ ವ್ಯಕ್ತಿ, ನೀರು ಕುಡಿಯಲು ದೇವಸ್ಥಾನ ಪ್ರವೇಶಿಸಿದ್ದ 14 ವರ್ಷದ ಮುಸ್ಲಿಂ ಬಾಲಕನಿಗೆ ಕ್ರೂರವಾಗಿ ಥಳಿಸಿರುವುದು ವಿಡಿಯೋದಲ್ಲಿ ದಾಖಲಾಗಿತ್ತು. ಇದರ ವಿರುದ್ದ ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

ದೇವಾಲಯದ ಆವರಣದ ಹೊರಗೆ ಒಂದು ಬೋರ್ಡ್ ಇದ್ದು, ಅದರಲ್ಲಿ, “ಈ ದೇವಸ್ಥಾನವು ಹಿಂದೂಗಳಿಗೆ ಪವಿತ್ರ ಸ್ಥಳವಾಗಿದೆ. ಮುಸ್ಲಿಮರ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ” ಎಂದು ಬರೆಯಲಾಗಿದೆ.

ಇದನ್ನೂ ಓದಿ: ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: ನನ್ನ ಅನುಯಾಯಿ ಸೂಕ್ತ ಉತ್ತರ ನೀಡಿದ್ದಾನೆ ಎಂದ ಸ್ವಾಮೀಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...