Homeಕರ್ನಾಟಕಗ್ರಾಪಂ ಚುನಾವಣೆಯನ್ನೂ ಗೆಲ್ಲದ ವ್ಯಕ್ತಿ ಬಿ.ಎಲ್.ಸಂತೋಷ್: ಕಾಂಗ್ರೆಸ್ ಸವಾಲು

ಗ್ರಾಪಂ ಚುನಾವಣೆಯನ್ನೂ ಗೆಲ್ಲದ ವ್ಯಕ್ತಿ ಬಿ.ಎಲ್.ಸಂತೋಷ್: ಕಾಂಗ್ರೆಸ್ ಸವಾಲು

- Advertisement -
- Advertisement -

ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಬಿಕ್ಕಟ್ಟಿನಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್ ಅವರ ಪಾತ್ರವಿದೆ ಎಂಬ ಆರೋಪಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಕರ್ನಾಟಕ ಕಾಂಗ್ರೆಸ್, “ಚುನಾವಣೆಯಲ್ಲಿ ಸ್ಪರ್ಧಿಸಲು ಸಂತೋಷ್ ಅವರಿಗೆ ಭಯವೇಕೆ?” ಎಂದು ಪ್ರಶ್ನಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್‌, “ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟು ಬಿಜೆಪಿಯಲ್ಲಿನ ಲಿಂಗಾಯತ ಮತ್ತು ಹಿಂದುಳಿದ ನಾಯಕತ್ವವನ್ನು ಮುಗಿಸಿದ ಬಿ.ಎಲ್‌.ಸಂತೋಷ್ ಅವರಿಗೆ ಚುನಾವಣೆ ಎದುರಿಸಲು ಭಯವೇಕೆ? ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಸ್ಪರ್ಧಿಸಲಾಗದ ವ್ಯಕ್ತಿಗೆ ಕಾಂಗ್ರೆಸ್ ಬಗ್ಗೆ ಮಾತನಾಡಲು ಯೋಗ್ಯತೆ ಇಲ್ಲ. ತಾಕತ್ತಿದ್ದರೆ ಚುನಾವಣೆಗೆ ಸ್ಪರ್ಧಿಸಿ ಜನಬೆಂಬಲ ಪಡೆದು ಬರಲಿ” ಎಂದು ಸವಾಲು ಹಾಕಿದೆ.

“ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಹಿಂದುತ್ವದ ಮುಖಂಡರಾದ ಪ್ರಮೋದ್ ಮುತಾಲಿಕ್, ಸತ್ಯಜಿತ್ ಸೂರತ್ಕಲ್ ಅವರುಗಳ ಭದ್ರತೆಯನ್ನು ಬಿಜೆಪಿ ಸರ್ಕಾರ ವಾಪಸ್ ಪಡೆದಿದೆ. ಹೆಣ ರಾಜಕೀಯಕ್ಕೆ ಹೆಸರುವಾಸಿಯಾದ ಕರ್ನಾಟಕ ಬಿಜೆಪಿ ಇನ್ಯಾರ ಶವಕ್ಕಾಗಿ ಕಾದು ಕುಳಿತಿದೆ? ಭದ್ರತೆ ವಾಪಸ್ ಪಡೆದಿರುವುದರ ಹಿಂದೆ ಯಾವ ಷಡ್ಯಂತ್ರ ಅಡಗಿದೆ” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಬಿಜೆಪಿ ಟಿಕೆಟ್‌ ಕೈತಪ್ಪಿದ ಬಳಿಕ ಅನೇಕರು ಬಂಡಾಯವೆದ್ದು ಬೇರೆ ಪಕ್ಷಗಳು ಸೇರಿದ್ದಾರೆ. ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ ಅವರಂತೂ ನೇರವಾಗಿ ಬಿ.ಎಲ್.ಸಂತೋಷ್ ಅವರ ಮೇಲೆ ಆರೋಪಗಳನ್ನು ಮಾಡಿದ್ದಾರೆ.

“ಪಕ್ಷದಲ್ಲಿ ಹಿರಿತನವನ್ನು ಕಡೆಗಣಿಸಲಾಯಿತು. ಇದೆಲ್ಲದರ ಹಿಂದೆ ಬಿ.ಎಲ್.ಸಂತೋಷ್‌ ಇದ್ದಾರೆ” ಎಂದು ಶೆಟ್ಟರ್‌ ದೂರಿದ್ದಾರೆ.

ತೆರೆಮರೆಯಲ್ಲಿ ರಾಜಕಾರಣ ಮಾಡುತ್ತಿದ್ದ ಬಿ.ಎಲ್.ಸಂತೋಷ್ ಹೆಸರು ಈಗ ರಾಜ್ಯ ರಾಜಕಾರಣದಲ್ಲಿ ಚರ್ಚೆಯಲ್ಲಿದೆ. “ಸಿಕ್ಕಪಟ್ಟೆ ಲೀಡರ್ ಗಳಾಗಿದ್ದಾರೆ, ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ” ಎಂದು ಸಂತೋಷ್ ಹೇಳಿಕೆ ನೀಡಿದ್ದಾರೆ.

ತಮ್ಮ ಕುರಿತು ಎದ್ದಿರುವ ಸುದ್ದಿಗಳಿಗೆ ಮಾಧ್ಯಮಗಳಿಗೆ ಸ್ಪಷ್ಟೀಕರಣ ಕೊಡಲು ನಿರಾಕರಿಸಿದ ಬಿ.ಎಲ್. ಸಂತೋಷ್, ““ಮಾಧ್ಯಮದವರು ನನ್ನನ್ನು 100 ಬಾರಿ ಮಾತಾಡಿಸಲು ಯತ್ನಿಸಿದ್ದಾರೆ. ನಾನು ಮಾತಾಡಿಲ್ಲ. ನಮ್ಮಲ್ಲಿ ಮಾತಾಡಲು ಪ್ರತಾಪ್ ಸಿಂಹ ಥರದವರು ಇದ್ದಾರೆ. ಅವರೆ ಮಾತಾಡಲಿ. ನಾನು ಮಾತನಾಡಿ ಯಾರಿಗೆ ಯಾಕೆ ಪ್ರತಿ ಸ್ಪರ್ಧಿಯಾಗಲಿ?” ಎಂದು ಕೇಳಿದ್ದಾರೆ.

ಸತ್ಯಪಾಲ್‌ಗೆ ಸಿಬಿಐ ನೋಟಿಸ್‌; ಕಾಂಗ್ರೆಸ್ ಪ್ರತಿಕ್ರಿಯೆ

ಪುಲ್ವಾಮ ದುರಂತದ ಕುರಿತು ಇತ್ತೀಚೆಗೆ ಮಾತನಾಡಿದ್ದ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರಿಗೆ ಸಿಬಿಐ ನೋಟಿಸ್ ಕಳುಹಿಸಿರುವ ಕುರಿತು ರಾಜ್ಯ ಕಾಂಗ್ರೆಸ್ ಪ್ರತಿಕ್ರಿಯಿಸಿದೆ.

“ಬಿಜೆಪಿ ಆಡಳಿತದಲ್ಲಿ ಸಿಬಿಐ ಅಂದರೆ ಸತ್ಯ ಹೇಳುವವರ ಬಾಯಿ ಮುಚ್ಚಿಸುವ ಸಂಸ್ಥೆ ಎಂದಾಗಿದೆ. ಪುಲ್ವಾಮದಲ್ಲಿ 40 ಯೋಧರ ಸರ್ಕಾರಿ ಕೊಲೆಯ ನಗ್ನಸತ್ಯವನ್ನು ಹೇಳಿದ ಸತ್ಯಪಾಲ್ ಮಲಿಕ್ ಅವರ ವಿರುದ್ಧ ಸತ್ಯ ನುಡಿದ ಎರಡೇ ದಿನದಲ್ಲಿ ಕಾರ್ಯಾಚರಣೆಗೆ ಇಳಿದಿದೆ ಸಿಬಿಐ. ಪುಲ್ವಾಮ ದಾಳಿಯ ತನಿಖೆ ಮಾತ್ರ ಇನ್ನೂ ಮುಗಿದಿಲ್ಲ, ಸತ್ಯ ಹೊರಬರಲೇ ಇಲ್ಲ” ಎಂದು ಟೀಕಿಸಿದೆ.

ಇದನ್ನೂ ಓದಿರಿ: ಸಚಿವ ನಿರಾಣಿ ಫ್ಯಾಕ್ಟರಿ ಮೇಲೆ ಚುನಾವಣಾ ಆಯೋಗ ರೈಡ್‌; ಬೆಳ್ಳಿ ದೀಪಗಳು ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...