Homeಕರ್ನಾಟಕಗ್ರಾಪಂ ಚುನಾವಣೆಯನ್ನೂ ಗೆಲ್ಲದ ವ್ಯಕ್ತಿ ಬಿ.ಎಲ್.ಸಂತೋಷ್: ಕಾಂಗ್ರೆಸ್ ಸವಾಲು

ಗ್ರಾಪಂ ಚುನಾವಣೆಯನ್ನೂ ಗೆಲ್ಲದ ವ್ಯಕ್ತಿ ಬಿ.ಎಲ್.ಸಂತೋಷ್: ಕಾಂಗ್ರೆಸ್ ಸವಾಲು

- Advertisement -
- Advertisement -

ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಬಿಕ್ಕಟ್ಟಿನಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್ ಅವರ ಪಾತ್ರವಿದೆ ಎಂಬ ಆರೋಪಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಕರ್ನಾಟಕ ಕಾಂಗ್ರೆಸ್, “ಚುನಾವಣೆಯಲ್ಲಿ ಸ್ಪರ್ಧಿಸಲು ಸಂತೋಷ್ ಅವರಿಗೆ ಭಯವೇಕೆ?” ಎಂದು ಪ್ರಶ್ನಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್‌, “ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟು ಬಿಜೆಪಿಯಲ್ಲಿನ ಲಿಂಗಾಯತ ಮತ್ತು ಹಿಂದುಳಿದ ನಾಯಕತ್ವವನ್ನು ಮುಗಿಸಿದ ಬಿ.ಎಲ್‌.ಸಂತೋಷ್ ಅವರಿಗೆ ಚುನಾವಣೆ ಎದುರಿಸಲು ಭಯವೇಕೆ? ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಸ್ಪರ್ಧಿಸಲಾಗದ ವ್ಯಕ್ತಿಗೆ ಕಾಂಗ್ರೆಸ್ ಬಗ್ಗೆ ಮಾತನಾಡಲು ಯೋಗ್ಯತೆ ಇಲ್ಲ. ತಾಕತ್ತಿದ್ದರೆ ಚುನಾವಣೆಗೆ ಸ್ಪರ್ಧಿಸಿ ಜನಬೆಂಬಲ ಪಡೆದು ಬರಲಿ” ಎಂದು ಸವಾಲು ಹಾಕಿದೆ.

“ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಹಿಂದುತ್ವದ ಮುಖಂಡರಾದ ಪ್ರಮೋದ್ ಮುತಾಲಿಕ್, ಸತ್ಯಜಿತ್ ಸೂರತ್ಕಲ್ ಅವರುಗಳ ಭದ್ರತೆಯನ್ನು ಬಿಜೆಪಿ ಸರ್ಕಾರ ವಾಪಸ್ ಪಡೆದಿದೆ. ಹೆಣ ರಾಜಕೀಯಕ್ಕೆ ಹೆಸರುವಾಸಿಯಾದ ಕರ್ನಾಟಕ ಬಿಜೆಪಿ ಇನ್ಯಾರ ಶವಕ್ಕಾಗಿ ಕಾದು ಕುಳಿತಿದೆ? ಭದ್ರತೆ ವಾಪಸ್ ಪಡೆದಿರುವುದರ ಹಿಂದೆ ಯಾವ ಷಡ್ಯಂತ್ರ ಅಡಗಿದೆ” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಬಿಜೆಪಿ ಟಿಕೆಟ್‌ ಕೈತಪ್ಪಿದ ಬಳಿಕ ಅನೇಕರು ಬಂಡಾಯವೆದ್ದು ಬೇರೆ ಪಕ್ಷಗಳು ಸೇರಿದ್ದಾರೆ. ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ ಅವರಂತೂ ನೇರವಾಗಿ ಬಿ.ಎಲ್.ಸಂತೋಷ್ ಅವರ ಮೇಲೆ ಆರೋಪಗಳನ್ನು ಮಾಡಿದ್ದಾರೆ.

“ಪಕ್ಷದಲ್ಲಿ ಹಿರಿತನವನ್ನು ಕಡೆಗಣಿಸಲಾಯಿತು. ಇದೆಲ್ಲದರ ಹಿಂದೆ ಬಿ.ಎಲ್.ಸಂತೋಷ್‌ ಇದ್ದಾರೆ” ಎಂದು ಶೆಟ್ಟರ್‌ ದೂರಿದ್ದಾರೆ.

ತೆರೆಮರೆಯಲ್ಲಿ ರಾಜಕಾರಣ ಮಾಡುತ್ತಿದ್ದ ಬಿ.ಎಲ್.ಸಂತೋಷ್ ಹೆಸರು ಈಗ ರಾಜ್ಯ ರಾಜಕಾರಣದಲ್ಲಿ ಚರ್ಚೆಯಲ್ಲಿದೆ. “ಸಿಕ್ಕಪಟ್ಟೆ ಲೀಡರ್ ಗಳಾಗಿದ್ದಾರೆ, ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ” ಎಂದು ಸಂತೋಷ್ ಹೇಳಿಕೆ ನೀಡಿದ್ದಾರೆ.

ತಮ್ಮ ಕುರಿತು ಎದ್ದಿರುವ ಸುದ್ದಿಗಳಿಗೆ ಮಾಧ್ಯಮಗಳಿಗೆ ಸ್ಪಷ್ಟೀಕರಣ ಕೊಡಲು ನಿರಾಕರಿಸಿದ ಬಿ.ಎಲ್. ಸಂತೋಷ್, ““ಮಾಧ್ಯಮದವರು ನನ್ನನ್ನು 100 ಬಾರಿ ಮಾತಾಡಿಸಲು ಯತ್ನಿಸಿದ್ದಾರೆ. ನಾನು ಮಾತಾಡಿಲ್ಲ. ನಮ್ಮಲ್ಲಿ ಮಾತಾಡಲು ಪ್ರತಾಪ್ ಸಿಂಹ ಥರದವರು ಇದ್ದಾರೆ. ಅವರೆ ಮಾತಾಡಲಿ. ನಾನು ಮಾತನಾಡಿ ಯಾರಿಗೆ ಯಾಕೆ ಪ್ರತಿ ಸ್ಪರ್ಧಿಯಾಗಲಿ?” ಎಂದು ಕೇಳಿದ್ದಾರೆ.

ಸತ್ಯಪಾಲ್‌ಗೆ ಸಿಬಿಐ ನೋಟಿಸ್‌; ಕಾಂಗ್ರೆಸ್ ಪ್ರತಿಕ್ರಿಯೆ

ಪುಲ್ವಾಮ ದುರಂತದ ಕುರಿತು ಇತ್ತೀಚೆಗೆ ಮಾತನಾಡಿದ್ದ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರಿಗೆ ಸಿಬಿಐ ನೋಟಿಸ್ ಕಳುಹಿಸಿರುವ ಕುರಿತು ರಾಜ್ಯ ಕಾಂಗ್ರೆಸ್ ಪ್ರತಿಕ್ರಿಯಿಸಿದೆ.

“ಬಿಜೆಪಿ ಆಡಳಿತದಲ್ಲಿ ಸಿಬಿಐ ಅಂದರೆ ಸತ್ಯ ಹೇಳುವವರ ಬಾಯಿ ಮುಚ್ಚಿಸುವ ಸಂಸ್ಥೆ ಎಂದಾಗಿದೆ. ಪುಲ್ವಾಮದಲ್ಲಿ 40 ಯೋಧರ ಸರ್ಕಾರಿ ಕೊಲೆಯ ನಗ್ನಸತ್ಯವನ್ನು ಹೇಳಿದ ಸತ್ಯಪಾಲ್ ಮಲಿಕ್ ಅವರ ವಿರುದ್ಧ ಸತ್ಯ ನುಡಿದ ಎರಡೇ ದಿನದಲ್ಲಿ ಕಾರ್ಯಾಚರಣೆಗೆ ಇಳಿದಿದೆ ಸಿಬಿಐ. ಪುಲ್ವಾಮ ದಾಳಿಯ ತನಿಖೆ ಮಾತ್ರ ಇನ್ನೂ ಮುಗಿದಿಲ್ಲ, ಸತ್ಯ ಹೊರಬರಲೇ ಇಲ್ಲ” ಎಂದು ಟೀಕಿಸಿದೆ.

ಇದನ್ನೂ ಓದಿರಿ: ಸಚಿವ ನಿರಾಣಿ ಫ್ಯಾಕ್ಟರಿ ಮೇಲೆ ಚುನಾವಣಾ ಆಯೋಗ ರೈಡ್‌; ಬೆಳ್ಳಿ ದೀಪಗಳು ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ್ಯ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...