Homeಕರ್ನಾಟಕಬೆಂಗಳೂರು ವಿ.ವಿ ಕ್ಯಾಂಪಸ್‌ನೊಳಗೆ ದೇವಸ್ಥಾನ ನಿರ್ಮಾಣದ ವಿರುದ್ಧ ಭಾರಿ ಪ್ರತಿಭಟನೆ

ಬೆಂಗಳೂರು ವಿ.ವಿ ಕ್ಯಾಂಪಸ್‌ನೊಳಗೆ ದೇವಸ್ಥಾನ ನಿರ್ಮಾಣದ ವಿರುದ್ಧ ಭಾರಿ ಪ್ರತಿಭಟನೆ

ಪ್ರತಿಭಟಿಸಿದ ವಿದ್ಯಾರ್ಥಿ ಮತ್ತು ಅಧ್ಯಾಪಕರುಗಳನ್ನು ಕಿಡಿಗೇಡಿ ಎಂದ ಬಿಬಿಎಂಪಿ ಆಯುಕ್ತರನ್ನು ಅಮಾನತು ಮಾಡಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ

- Advertisement -
- Advertisement -

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಕ್ರಮವಾಗಿ ನಿರ್ಮಿಸುತ್ತಿರುವ ದೇವಸ್ಥಾನವನ್ನು ನಿಲ್ಲಿಸಬೇಕು ಮತ್ತು ವಿದ್ಯಾರ್ಥಿಗಳು ಹಾಗೂ ಅದ್ಯಾಪಕರುಗಳನ್ನು ‘ಕಿಡಿಗೇಡಿಗಳು’ ಎಂದು ಕರೆದ ಬಿಬಿಎಂಪಿ ಆಯುಕ್ತರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಗುರುವಾರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಕ್ರಮವಾಗಿ ನಿರ್ಮಿಸುತ್ತಿರುವ ದೇವಸ್ಥಾನ ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಅಲ್ಲಿನ ಪ್ರಾಧ್ಯಾಪಕರುಗಳು ಬುಧವಾರ ಪ್ರತಿಭಟನೆ ನಡೆಸಿದ್ದರು. ಈ ನಡುವೆ, ಪ್ರತಿಭಟನೆ ನಡೆಸಿದ ಅಧ್ಯಾಪಕರುಗಳು ಮತ್ತು ವಿದ್ಯಾರ್ಥಿಗಳನ್ನು ಬಿಬಿಎಂಪಿ ಆಯುಕ್ತರು ‘ಕಿಡಿಗೇಡಿಗಳು’ ಎಂದು ಕರೆದಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಹೀಗಾಗಿ ಅಕ್ರಮ ದೇವಸ್ಥಾನ ನಿರ್ಮಾಣವನ್ನು ನಿಲ್ಲಿಸಬೇಕು ಮತ್ತು ವಿದ್ಯಾರ್ಥಿಗಳು ಮತ್ತು ಅದ್ಯಾಪಕರುಗಳನ್ನು ಕಿಡಿಗೇಡಿಗಳು ಎಂದು ಕರೆದ ಬಿಬಿಎಂಪಿ ಆಯುಕ್ತರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಇಂದು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತ ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮನೋಜ್ ಅವರು, “ವಿಶ್ವ ವಿದ್ಯಾಲಯ ಕ್ಯಾಂಪಸ್ಸಿನೊಳಗೆ ಅಕ್ರಮವಾಗಿ ನಿರ್ಮಿಸುತ್ತಿರುವ ದೇವಸ್ಥಾನದ ವಿರುದ್ಧ ನಡೆಸಿದ ಪ್ರತಿಭಟನೆಯ ಬಗ್ಗೆ ಹೇಳುತ್ತಾ ಪ್ರತಿಭಟನೆ ನಡೆಸಿದವರು ‘ಕಿಡಿಗೇಡಿಗಳು’ ಎಂದು ಬಿಬಿಎಂಪಿ ಆಯುಕ್ತರು ಉಲ್ಲೇಖಿಸಿದ್ದಾರೆ. ಆದರೆ ನಿನ್ನೆ ಪ್ರತಿಭಟನೆ ನಡೆಸಿದ್ದು ವಿದ್ಯಾರ್ಥಿಗಳು ಮತ್ತು ಅಧ್ಯಾಪಕರುಗಳು”

“ಸರ್ಕಾರಿ ನೌಕರರಾದ ಅಧ್ಯಾಪಕರುಗಳನ್ನು ಬಿಬಿಎಂಪಿ ಆಯುಕ್ತರು ಹೇಗೆ ‘ಕಿಡಿಗೇಡಿಗಳು’ ಎಂದು ಉಲ್ಲೇಖಿಸುತ್ತಾರೆ?. ಈ ರೀತಿಯ ವಾಕ್ಯವನ್ನು ಯಾರು ಬಳಸಿದ್ದಾರೆಯೊ ಅವರನ್ನೆಲ್ಲಾ ಅಮಾನತು ಮಾಡಬೇಕು ಮತ್ತು ಅಕ್ರಮ ದೇವಸ್ಥಾನ ನಿರ್ಮಣವನ್ನು ನಿಲ್ಲಿಸಬೇಕು ಎಂದು ನಾವು ಹೋರಾಟ ಮಾಡುತ್ತಿದ್ದೇವೆ” ಎಂದು ಮನೋಜ್‌ ನಾನುಗೌರಿ.ಕಾಂಗೆ ಹೇಳಿದ್ದಾರೆ.

ಇದನ್ನೂ  ಓದಿ: ಬೆಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್ ಒಳಗಡೆ ಅನಧೀಕೃತ ದೇವಸ್ಥಾನ ನಿರ್ಮಾಣ; ವಿದ್ಯಾರ್ಥಿಗಳಿಂದ ಪ್ರತಿಭಟನೆ

ಘಟನೆ ಏನು? 

ರಸ್ತೆಯೊಂದರ ವಿಸ್ತರಣೆ ನಡೆಯುತ್ತಿರುವುದರಿಂದ ಅಲ್ಲಿದ್ದ ಗಣೇಶ ದೇವಸ್ಥಾನ ತೆರವು ಮಾಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ಅಲ್ಲಿದ್ದ ದೇವಸ್ಥಾನವನ್ನು ಸ್ಥಳಾಂತರ ಮಾಡಬೇಕು ಎಂದು ಸ್ಥಳೀಯರು ಬೇಡಿಕೆ ಇಟ್ಟಿದ್ದರು. ಅವರಿಗೆ ಬಿಬಿಎಂಪಿ ಕೂಡಾ ಅನುಮತಿ ನೀಡಿತ್ತು ಎಂದು ತಿಳಿದು ಬಂದಿದೆ. ಹೀಗಾಗಿ ಅಲ್ಲಿರುವ ದೇವಸ್ಥಾನವನ್ನು ವಿಶ್ವವಿದ್ಯಾಲಯದ ಆಡಳಿತ ಕಚೇರಿ ಇರುವ ಬಳಿಯಲ್ಲಿ ಉಪ ಕುಲಪತಿಯ ಅನುಮತಿಯಿಲ್ಲದೆ ಅಕ್ರಮವಾಗಿ ನಿರ್ಮಾಣ ಮಾಡಲಾಗುತ್ತಿದೆ. ಹೀಗಾಗಿ ವಿದ್ಯಾರ್ಥಿಗಳು ಅದರ ನಿರ್ಮಾಣಕ್ಕೆ ವಿರೋಧ ಮಾಡಿದ್ದರು.

‘‘2000-ಯುಜಿಸಿ ಕಾಯ್ದೆ ಪ್ರಕಾರ, ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಸಂಸ್ಥೆ ಮತ್ತು ಕಟ್ಟಡಗಳಿಗೆ ಅವಕಾಶವಿಲ್ಲ. ಈ ನಿಯಮ ಇದ್ದರು ಕೂಡಾ ಅತಿಕ್ರಮಣ ಮಾಡಿ ದೇವಸ್ಥಾನವನ್ನು ಕಟ್ಟುತ್ತಿದ್ದಾರೆ. ಎರಡು ತಿಂಗಳ ಹಿಂದೆಯೆ ವಿದ್ಯಾರ್ಥಿಗಳು ಸೇರಿ ಪ್ರತಿಭಟನೆ ನಡೆಸಿದ್ದೆವು. ಆ ವೇಳೆ ಉಪ ಕುಲಪತಿ ಅದರ ಕಾಮಗಾರಿಯನ್ನು ನಿಲ್ಲಿಸಿದ್ದರು. ಆದರೆ ಇಂದು ಏಕಾಏಕಿ ತೀರ್ಮಾನಗಳನ್ನು ತೆಗೆದುಕೊಂಡು, ಪೊಲೀಸ್ ಮತ್ತು ಬಿಬಿಎಂಪಿ ಅಧಿಕಾರಿಗಳ ರಕ್ಷಣೆಯೊಂದಿಗೆ ಕಟ್ಟಡವನ್ನು ಕಟ್ಟುತ್ತಿದ್ದಾರೆ” ಎಂದು ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮನೋಜ್ ಆಝಾದ್ ನಾನುಗೌರಿ.ಕಾಂಗೆ ಹೇಳಿದ್ದಾರೆ.

“ಬಿಬಿಎಂಪಿಯಿಂದ ನಮಗೆ ಆದೇಶ ಬಂದಿದೆ, ಹಾಗಾಗಿ ನಾವು ರಕ್ಷಣೆ ಕೊಡುತ್ತಿದ್ದೇವೆ ಎಂದು ಪೊಲೀಸರು ಹೇಳುತ್ತಿದ್ದಾರೆ. ವಿದ್ಯಾರ್ಥಿಗಳು ಇಲ್ಲಿ ಹೋರಾಟ ಮಾಡುವ ಹಾಗಿಲ್ಲ ಎಂದು ತಿಳಿಸಿದ್ದಾರೆ. ಆದರೆ ಅವರಿಗೆ ವಿದ್ಯಾಲಯದ ಆವರಣದಲ್ಲಿ ದೇವಸ್ಥಾನ ಕಟ್ಟಲು ಅನುಮತಿ ಕೊಟ್ಟವರು ಯಾರು? ಹೇಗೆ ಕೊಟ್ಟಿದ್ದಾರೆ?. ಒಂದು ವೇಳೆ ಇದು ಸರಿಯಾಗಿ ಇತ್ಯರ್ಥವಾಗಿಲ್ಲ ಎಂದರೆ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟ ನಡೆಯುತ್ತದೆ” ಎಂದು ಮನೋಜ್ ಎಚ್ಚರಿಸಿದ್ದಾರೆ.

ಇದನ್ನೂ  ಓದಿ: ಬೆಂಗಳೂರು ಮುಳುಗುತ್ತಿರುವಾಗ ‘ಬೆಣ್ಣೆ ದೋಸೆ ಮಾರಿದ’ ಬಿಜೆಪಿ ಸಂಸದ ತೇಜಸ್ವಿ ಸೂರ್ಯ!

ವಿವಿಯ ಹಳೆಯ ಉಪ ಕುಲಪತಿ ವೇಣುಗೋಪಾಲ್ ಅವರು ಈ ಹಿಂದೆಯೆ ದೇವಸ್ಥಾನ ನಿರ್ಮಿಸಲು ಅನುಮತಿ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಆದರೆ ಅಧಿಕಾರಿಗಳು ಯಾವುದೆ ದಾಖಲಾತಿಯನ್ನು ತೋರಿಸುತ್ತಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷ ಚಂದ್ರು ಪೆರಿಯಾರ್‌ ಅವರು, “ಈ ಗಣೇಶ ದೇವಸ್ಥಾನದ ಬಗ್ಗೆ ನಾವು ಹಿಂದೆಯೆ ಆರ್‌ಟಿಐ ಹಾಕಿ ಪ್ರಶ್ನಿಸಿದ್ದೆವು. ಅದರಂತೆ ಈ ದೇವಸ್ಥಾನವನ್ನು ವಿಶ್ವವಿದ್ಯಾಲಯ ಕಟ್ಟಿದ್ದಲ್ಲ. ಅದಕ್ಕೆ ಯಾವ ಅನುದಾನವನ್ನೂ ವಿವಿ ಕೊಡಲ್ಲ. ಅದನ್ನು ಸ್ಥಳೀಯರು ಪ್ರಾರಂಭಿಸಿದ್ದರು. ಕಳೆದ ಹತ್ತಿಪ್ಪತ್ತು ವರ್ಷಗಳಿಂದಲೂ ಅಲ್ಲಿ ಸಂಗ್ರಹವಾಗುವ  ಹಣವನ್ನು ದೇವಸ್ಥಾನದ ಟ್ರಸ್ಟ್‌ನವರೇ ಬಳಕೆ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

“ವಿಶ್ವವಿದ್ಯಾಲಯದೊಂದಿಗೆ ಸಾಮರಸ್ಯವನ್ನು ಸಾಧಿಸಿ ಕಟ್ಟಡವನ್ನು ಕಟ್ಟಿ ಎಂದು ಸರ್ಕಾರದ ಆದೇಶದಲ್ಲಿದೆ. ಆದರೆ ವಿಶ್ವವಿದ್ಯಾಲಯದ ಒಳಗಡೆ ಪ್ರವೇಶ ಮಾಡಬೇಕೆಂದರೆ ಈಗಿನ ಉಪ ಕುಲಪತಿಗಳ ಅನುಮತಿ ಪಡೆಯುವುದು ಬೇಡವೆ? ಈ ಹಿಂದಿನ ಉಪ ಕುಲಪತಿ ವೇಣುಗೋಪಾಲ್ ಅವರ ನಂತರ ಬಂದ ಉಪಕುಲಪತಿಗಳು ಈ ಕಾಮಗಾರಿಗೆ ತಡೆ ಒಡ್ಡಿದ್ದರು. ಆದರೂ ಈ ಹಿಂದಿನ ಉಪ ಕುಲಪತಿ ಆದೇಶ ನೀಡಿದ್ದಾರೆ ಎಂದು ಹೇಳಿ ಏಕಾಏಕಿ ಮುನ್ನುಗ್ಗುತ್ತಾರೆ ಎಂದರೆ ವಿಶ್ವವಿದ್ಯಾಲಯದ ಸಿಂಡಿಕೇಟ್‌ ಯಾಕೆ? ಉಪ ಕುಲಪತಿ ಯಾಕೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ  ಓದಿ: ಬೆಂಗಳೂರು ಮಳೆ: ವಿದ್ಯುತ್‌ ಸ್ಪರ್ಶದಿಂದ ಯುವತಿ ಸಾವು; ಕಾಂಗ್ರೆಸ್ ಕಾರಣ ಎಂದ ಬೊಮ್ಮಯಿ

ಬೆಂಗಳೂರು ವಿಶ್ವವಿದ್ಯಾಲಯದ ಒಳಗೆಯಿದೆ 15 ಕ್ಕೂ ಹೆಚ್ಚು ದೇವಸ್ಥಾನಗಳು

ಬೆಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಸುಮಾರು 15 ದೇವಸ್ಥಾನಗಳು ಇವೆ ಎಂದು ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ. “ಇಂದು ಹಿಂದೂಗಳು ಬಂದು ದೇವಸ್ಥಾನ ಕಟ್ಟುತ್ತೇವೆ ಅನ್ನುತ್ತಾರೆ. ನಾಳೆ ದಿನ ಚರ್ಚು ಮತ್ತು ಮಸೀದಿ ಕಟ್ಟುತ್ತೇವೆ ಎಂದು ಎನ್ನುತ್ತಾರೆ. ಹೀಗೆ ಆದರೆ ಇದು ವಿಶ್ವವಿದ್ಯಾಲಯ ಆಗಿ ಉಳಿಯುತ್ತದೆಯೆ” ಎಂದು ಅವರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...