Homeಕರ್ನಾಟಕಬಗರ್ ಹುಕುಂ ರೈತರಿಗೆ ಭೂಮಿ ಮಂಜೂರಾತಿಗೆ ಆಗ್ರಹಿಸಿ ಮಾ.11ರಂದು ಭೂಮಿ ಮತ್ತು ವಸತಿ ವಂಚಿತರ ಹೋರಾಟ...

ಬಗರ್ ಹುಕುಂ ರೈತರಿಗೆ ಭೂಮಿ ಮಂಜೂರಾತಿಗೆ ಆಗ್ರಹಿಸಿ ಮಾ.11ರಂದು ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯಿಂದ ಬೃಹತ್ ಪ್ರತಿಭಟನೆ  

- Advertisement -
- Advertisement -

ಬಗರ್ ಹುಕುಂ ರೈತರಿಗೆ ಭೂಮಂಜೂರಾತಿಗೆ ಆಗ್ರಹಿಸಿ ಇದೇ ಮಾ.11ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕುಮಾರ್ ಸಮತಳ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,  ಈ ರಾಜ್ಯದ ಅತ್ಯಂತ ಕಟ್ಟ ಕಡೆಯ ಕೆಳ ಸಮುದಾಯಗಳು ಅತೀ ಹೆಚ್ಚು ಭೂ ಹಿಡುವಳಿಯಿಂದ ವಂಚಿತರಾಗಿದ್ದಾರೆಂಬುದು ಹಗಲಿನ ಸೂರ್ಯನಷ್ಟೇ ಸತ್ಯ. 70ರ ದಶಕದಲ್ಲಿ ಜಾರಿಯಾಗಿದ್ದ “ಉಳುವವನೇ ಭೂ ಒಡೆಯ” ಅಂದಿನ ದೇವರಾಜ ಅರಸು ಸರ್ಕಾರದ ಕ್ರಾಂತಿಕಾರಿ ಘೋಷಣೆಯಿಂದ ಒಂದಷ್ಟು ಹಿಂದುಳಿದ ಸಮುದಾಯಗಳಿಗೆ, ಕಟ್ಟ ಕಡೆಯ ಅಸ್ಪೃಶ್ಯ ಸಮುದಾಯಗಳಿಗೆ ಭೂಮಿಯ ಒಡೆತನ ದೊರೆತದ್ದು ಈಗ ಇತಿಹಾಸ ಎಂದು ಅವರು ಹೇಳಿದ್ದಾರೆ.

ಸರ್ಕಾರದ ಒಡೆತನದಲ್ಲಿದ್ದ ಲಕ್ಷಾಂತರ ಎಕರೆ ಭೂಮಿಯನ್ನು ಸಕ್ರಮಗೊಳಿಸುವ ಬಗರ್ ಹುಕುಂ ಸಕ್ರಮ ಸಮಿತಿಗಳ ರಚನೆಯೂ ಭೂರಹಿತರರ ಪಾಲಿಗೆ ಜೀವಾಳವಾಗಿದ್ದೂ ಇದೆ. ಫಾರಂ.ನಂ.50, 53, ಹಾಗೂ ಇತ್ತೀಚೆಗೆ ಫಾರಂನಂ 57 ರ ಅರ್ಜಿಗಳನ್ನು ಸ್ವೀಕರಿಸಿ ಕೆಲ ನಿಬಂಧನೆಗಳ ಮೂಲಕ ಭೂಮಿಯನ್ನು ಮಂಜೂರಾತಿ ನೀಡುತ್ತಿರುವುದು ನಿಯಮ. ಇತ್ತೀಚೆಗೆ ಕಂದಾಯ ಮಂತ್ರಿ ಕೃಷ್ಣ ಭೈರೇಗೌಡರ ನೇತೃತ್ವದಲ್ಲಿ ಲಕ್ಷಾಂತರ ಸಂಖ್ಯೆ ಅರ್ಜಿಗಳನ್ನು ಪರಿಶೀಲಿಸಿ ಭೂಮಿ ಮಂಜೂರಾತಿ ಪ್ರಕ್ರಿಯೆ ನಡೆಯುತ್ತಿರುವುದು ಸಂತೋಷದ ವಿಷಯ. ಇದಕ್ಕಾಗಿ ಸರ್ಕಾರವನ್ನು ವಿಶೇಷವಾಗಿ ಕಂದಾಯ ಮಂತ್ರಿಗಳನ್ನು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಅಭಿನಂದಿಸುತ್ತದೆ ಎಂದು ಹೇಳಿಕೆಯು ತಿಳಿಸಿದೆ.

ಭೂಮಿ ಮಂಜುರಾತಿಯ ಈ ಸಂದರ್ಭದಲ್ಲಿ ಸರ್ಕಾರ ಲಕ್ಷಾಂತರ ಸಂಖ್ಯೆಯ ಅರ್ಜಿಗಳನ್ನು ತಿರಸ್ಕರಿಸುವ ಮೂಲಕ ಲಕ್ಷಾಂತರ ಸಂಖ್ಯೆಯ ಬಡ ಕುಟುಂಬಗಳಿಗೆ ಅದರಲ್ಲೂ ಬಹುತೇಕ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳು, ಹಿಂದುಳಿದ, ಅಲೆಮಾರಿ ಸಮುದಾಯಗಳೇ ಸಾಗುವಳಿ ಮಾಡುತ್ತಾ ಅರ್ಜಿ ಸಲ್ಲಿಸರುವ ಭೂರಹಿತ ಕುಟುಂಬಗಳಿಗೆ ಭೂಮಿಯ ಹಕ್ಕಿನಿಂದ ವಂಚಿಸುವುದೇ ಆಗಿದೆ. ಸಂವಿಧಾನ ಪರ, ಬಾಬಾ ಸಾಹೇಬ್ ಅಂಬೇಡ್ಕರ್‍ವಾದಿ, ಸಮಾಜವಾದಿ ಹೆಸರಿನಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಸಾಮಾಜಿಕ ನ್ಯಾಯವನ್ನು ಎಲ್ಲಿ ಪಾಲಿಸುತ್ತದೆ? ಎಂಬ ಪ್ರಶ್ನೆ ಕಾಡುತ್ತಿದೆ ಎಂದು ಸಮತಳ್ ಹೇಳಿಕೆಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಕಾನೂನಿನ ಹೆಸರಿನಲ್ಲಿ ಭೂಮಂಜೂರಾತಿ ನೀಡದೇ ಅರ್ಜಿಗಳನ್ನು ಮಾನ್ಯ ಮಾಡುತ್ತಿಲ್ಲ. ಇದಕ್ಕೆ ಹಲವಾರು ರೀತಿಯ ಕಾರಣಗಳನ್ನು ನೀಡುತ್ತಿದ್ದು, ಕೃಷಿ ಯೋಗ್ಯವಲ್ಲದ ಭೂಮಿ, ಅರಣ್ಯ, ಖರಾಬ್, ಅ ಖರಾಬ್, ಬ ಖರಾಬ್, ರಾಳಗುಡ್ಡ, ಪಾರಂಪೋಕು, ಜೌಗು ಪ್ರದೇಶ, ಅರಳು ಪ್ರದೇಶ, ಸವಳು ಭೂಮಿ, ಉಸುಕು ಭೂಮಿ, ಹುಲ್ಲುಬನ್ನಿ, ಕಾವಲು, ಪೈಸಾರಿ, ಮಫತ್ ಭೂಮಿ, ಖಾರೀಜ್ ಖಾತಾ, ಇನಾಂ, ಲ್ಯಾಂಡ್ ಬ್ಯಾಂಕ್, ಗ್ರಾಮಠಾಣಾ, ಸೇಂಧಿವನ, ಸಿ ಅಂಡ್ ಡಿ, ಕಿರು ಅರಣ್ಯದ ಹೆಸರಿನಲ್ಲಿರುವ ಭೂಮಿಗಳು, ಮಲೆನಾಡಿನಲ್ಲಿ ಕರೆಯಲ್ಪಡುವ ಸೊಪ್ಪಿನ ಬೆಟ್ಟ (ಊರುಗುಪ್ಪೆ), ನೆಡುತೋಪು, ಬಾಣೆ, ದೇವರಕಾಡು ಹೆಸರಿನಲ್ಲಿರುವ ಭೂಮಿಗಳಾಗಿವೆ. ಇದೇ ಭೂಮಿಗಳಲ್ಲಿ ಭೂರಹಿತ ಜನರು ಕಷ್ಟಪಟ್ಟು ಹಸನುಗೊಳಿಸಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಹಲವು ವಿಧದ ಭೂಮಿಗಳು ಸರ್ಕಾರದ ದೃಷ್ಟಿಯಲ್ಲಿ ಯೋಗ್ಯವಲ್ಲದ ಭೂಮಿಗಳಾಗಿರಬಹುದು ಆದರೆ ಈ ಭೂಮಿಗಳಲ್ಲೇ ಲಕ್ಷಾಂತರ ಬಡ ಜನರು ದುಡಿಯುತ್ತಾ ಸ್ವಾಭಿಮಾನಿ ಬದುಕು ಕಟ್ಟಿಕೊಂಡಿದ್ದಾರೆ. ‘ಅರ್ಜಿಗಳ ತಿರಸ್ಕಾರ’ ಎಂಬುದು ಜನರ ನಿದ್ದೆ ಕೆಡಿಸಿದೆಯಲ್ಲದೆ ಜನರ ಬದುಕುವ ಹಕ್ಕನ್ನೇ ತಿರಸ್ಕರಿಸಿದಂತಾಗಿದೆ. ಇದೇ ತುಂಡು ಭೂಮಿ ಅವರ ಕುಟುಂಬಗಳಿಗೆ ಜೀವನಾಧಾರವಾಗಿದೆ. ದಶಕಗಳ ಕಾಲದಿಂದಲೂ ಬದುಕಿಗೆ ಆಸರೆಯಾಗಿದ್ದ ಭೂಮಿಗಳನ್ನೇ ನಂಬಿ ಅರ್ಜಿ ಸಲ್ಲಿಸಿ ಭೂಮಿಯ ಹಕ್ಕಿಗಾಗಿ ಕಾಯುತ್ತಿದ್ದವರಿಗೆ ನಿರಾಶೆಯ ಸಿಡಿಲು ಬಡಿದಂತಾಗಿದೆ. ಈ ಭೂಮಿಯನ್ನು ಉಳಿಸಿಕೊಳ್ಳುವುದಕ್ಕಾಗಿ ಜೀವನದುದ್ದಕ್ಕೂ ಅದೆಷ್ಟೋ ಹೋರಾಟಗಳನ್ನು ಮಾಡುತ್ತಾ ಜೀವ ಸವೆಸಿದ್ದಾರೆ ಎಂದು ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ.

ಬಗರ್ ಹುಕುಂ ಅರ್ಜಿಗಳನ್ನು ತಿರಸ್ಕರಿಸುವ ಮೂಲಕ ಸ್ವಾಭೀಮಾನದ ಬದುಕಿಗೆ ಸರಕಾರವು ಭಂಗ ತರುತ್ತಿದೆ. ಅಷ್ಟೇ ಅಲ್ಲದೆ ಬಡವರಿಗೊಂದು, ಶ್ರೀಮಂತರು ಮತ್ತು ಕಂಪನಿಗಳಿಗೊಂದು ಕಾನೂನು ಮಾಡುವ ಮೂಲಕ ಬಡವರಿಗೆ ಭೂಮಿ ಮಂಜೂರಾತಿ ನೀತಿಯನ್ನು ಗಾಳಿಗೆ ತೂರುತ್ತಿದೆ. ಈ ನೀತಿಯನ್ನು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ತೀರ್ವವಾಗಿ ವಿರೋಧಿಸುತ್ತದೆ ಮತ್ತು ಬಗರ್ ಹುಕುಂ ಸಾಗುವಳಿದಾರರ ಅರ್ಜಿಗಳನ್ನು ಯಾವುದೇ ನೆಪದಲ್ಲಿ ತಿರಸ್ಕರಿಸಬಾರದೆಂದು “ ಅರ್ಜಿ ಸಲ್ಲಿಸಿ ಸಾಗುವಳಿ ಮಾಡುತ್ತಿರುವ ಭೂಹೀನರೆಲ್ಲರಿಗೂ ಒಂದು ಬಾರಿ ಅವಕಾಶ” ನೀಡುವ ಮೂಲಕ ಭೂಮಿಯ ಹಕ್ಕುನ್ನು ನೀಡಬೇಕೆಂಬ ಒತ್ತಾಯವನ್ನು ಸರ್ಕಾರಕ್ಕೆ ಮಾಡುತ್ತಾ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ನೇತೃತ್ವದಲ್ಲಿ ಬೆಂಗಳೂರಿನ ಪ್ರಿಡಂ ಪಾರ್ಕ್‍ನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಮಾರ್ಚ್ 11 ರಂದು ಬೆಳಿಗ್ಗ 10 ಗಂಟೆಗೆ ಆರಂಭವಾಗಲಿರುವ ಪ್ರತಿಭಟನಾ ಧರಣಿಗೆ ರಾಜ್ಯದ ಎಲ್ಲಾ ಬಗರ್ ಹುಕುಂ ಸಾಗುವಳಿದಾರರು ಆಗಮಿಸಬೇಕೆಂದು ಈ ಮೂಲಕ ಮನವಿ ಮಾಡಿಕೊಳ್ಳುತ್ತದೆ ಎಂದು ಅವರು ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.

‘ಪಾಕಿಸ್ತಾನಿ’ ಎಂದು ಕರೆಯುವುದು ಧಾರ್ಮಿಕ ಭಾವನೆಗಳಿಗೆ ನೋಯಿಸುವ ಅಪರಾಧವಲ್ಲ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...