Homeಕರ್ನಾಟಕಬಗರ್ ಹುಕುಂ ರೈತರಿಗೆ ಭೂಮಿ ಮಂಜೂರಾತಿಗೆ ಆಗ್ರಹಿಸಿ ಮಾ.11ರಂದು ಭೂಮಿ ಮತ್ತು ವಸತಿ ವಂಚಿತರ ಹೋರಾಟ...

ಬಗರ್ ಹುಕುಂ ರೈತರಿಗೆ ಭೂಮಿ ಮಂಜೂರಾತಿಗೆ ಆಗ್ರಹಿಸಿ ಮಾ.11ರಂದು ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯಿಂದ ಬೃಹತ್ ಪ್ರತಿಭಟನೆ  

- Advertisement -
- Advertisement -

ಬಗರ್ ಹುಕುಂ ರೈತರಿಗೆ ಭೂಮಂಜೂರಾತಿಗೆ ಆಗ್ರಹಿಸಿ ಇದೇ ಮಾ.11ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕುಮಾರ್ ಸಮತಳ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,  ಈ ರಾಜ್ಯದ ಅತ್ಯಂತ ಕಟ್ಟ ಕಡೆಯ ಕೆಳ ಸಮುದಾಯಗಳು ಅತೀ ಹೆಚ್ಚು ಭೂ ಹಿಡುವಳಿಯಿಂದ ವಂಚಿತರಾಗಿದ್ದಾರೆಂಬುದು ಹಗಲಿನ ಸೂರ್ಯನಷ್ಟೇ ಸತ್ಯ. 70ರ ದಶಕದಲ್ಲಿ ಜಾರಿಯಾಗಿದ್ದ “ಉಳುವವನೇ ಭೂ ಒಡೆಯ” ಅಂದಿನ ದೇವರಾಜ ಅರಸು ಸರ್ಕಾರದ ಕ್ರಾಂತಿಕಾರಿ ಘೋಷಣೆಯಿಂದ ಒಂದಷ್ಟು ಹಿಂದುಳಿದ ಸಮುದಾಯಗಳಿಗೆ, ಕಟ್ಟ ಕಡೆಯ ಅಸ್ಪೃಶ್ಯ ಸಮುದಾಯಗಳಿಗೆ ಭೂಮಿಯ ಒಡೆತನ ದೊರೆತದ್ದು ಈಗ ಇತಿಹಾಸ ಎಂದು ಅವರು ಹೇಳಿದ್ದಾರೆ.

ಸರ್ಕಾರದ ಒಡೆತನದಲ್ಲಿದ್ದ ಲಕ್ಷಾಂತರ ಎಕರೆ ಭೂಮಿಯನ್ನು ಸಕ್ರಮಗೊಳಿಸುವ ಬಗರ್ ಹುಕುಂ ಸಕ್ರಮ ಸಮಿತಿಗಳ ರಚನೆಯೂ ಭೂರಹಿತರರ ಪಾಲಿಗೆ ಜೀವಾಳವಾಗಿದ್ದೂ ಇದೆ. ಫಾರಂ.ನಂ.50, 53, ಹಾಗೂ ಇತ್ತೀಚೆಗೆ ಫಾರಂನಂ 57 ರ ಅರ್ಜಿಗಳನ್ನು ಸ್ವೀಕರಿಸಿ ಕೆಲ ನಿಬಂಧನೆಗಳ ಮೂಲಕ ಭೂಮಿಯನ್ನು ಮಂಜೂರಾತಿ ನೀಡುತ್ತಿರುವುದು ನಿಯಮ. ಇತ್ತೀಚೆಗೆ ಕಂದಾಯ ಮಂತ್ರಿ ಕೃಷ್ಣ ಭೈರೇಗೌಡರ ನೇತೃತ್ವದಲ್ಲಿ ಲಕ್ಷಾಂತರ ಸಂಖ್ಯೆ ಅರ್ಜಿಗಳನ್ನು ಪರಿಶೀಲಿಸಿ ಭೂಮಿ ಮಂಜೂರಾತಿ ಪ್ರಕ್ರಿಯೆ ನಡೆಯುತ್ತಿರುವುದು ಸಂತೋಷದ ವಿಷಯ. ಇದಕ್ಕಾಗಿ ಸರ್ಕಾರವನ್ನು ವಿಶೇಷವಾಗಿ ಕಂದಾಯ ಮಂತ್ರಿಗಳನ್ನು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಅಭಿನಂದಿಸುತ್ತದೆ ಎಂದು ಹೇಳಿಕೆಯು ತಿಳಿಸಿದೆ.

ಭೂಮಿ ಮಂಜುರಾತಿಯ ಈ ಸಂದರ್ಭದಲ್ಲಿ ಸರ್ಕಾರ ಲಕ್ಷಾಂತರ ಸಂಖ್ಯೆಯ ಅರ್ಜಿಗಳನ್ನು ತಿರಸ್ಕರಿಸುವ ಮೂಲಕ ಲಕ್ಷಾಂತರ ಸಂಖ್ಯೆಯ ಬಡ ಕುಟುಂಬಗಳಿಗೆ ಅದರಲ್ಲೂ ಬಹುತೇಕ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳು, ಹಿಂದುಳಿದ, ಅಲೆಮಾರಿ ಸಮುದಾಯಗಳೇ ಸಾಗುವಳಿ ಮಾಡುತ್ತಾ ಅರ್ಜಿ ಸಲ್ಲಿಸರುವ ಭೂರಹಿತ ಕುಟುಂಬಗಳಿಗೆ ಭೂಮಿಯ ಹಕ್ಕಿನಿಂದ ವಂಚಿಸುವುದೇ ಆಗಿದೆ. ಸಂವಿಧಾನ ಪರ, ಬಾಬಾ ಸಾಹೇಬ್ ಅಂಬೇಡ್ಕರ್‍ವಾದಿ, ಸಮಾಜವಾದಿ ಹೆಸರಿನಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಸಾಮಾಜಿಕ ನ್ಯಾಯವನ್ನು ಎಲ್ಲಿ ಪಾಲಿಸುತ್ತದೆ? ಎಂಬ ಪ್ರಶ್ನೆ ಕಾಡುತ್ತಿದೆ ಎಂದು ಸಮತಳ್ ಹೇಳಿಕೆಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಕಾನೂನಿನ ಹೆಸರಿನಲ್ಲಿ ಭೂಮಂಜೂರಾತಿ ನೀಡದೇ ಅರ್ಜಿಗಳನ್ನು ಮಾನ್ಯ ಮಾಡುತ್ತಿಲ್ಲ. ಇದಕ್ಕೆ ಹಲವಾರು ರೀತಿಯ ಕಾರಣಗಳನ್ನು ನೀಡುತ್ತಿದ್ದು, ಕೃಷಿ ಯೋಗ್ಯವಲ್ಲದ ಭೂಮಿ, ಅರಣ್ಯ, ಖರಾಬ್, ಅ ಖರಾಬ್, ಬ ಖರಾಬ್, ರಾಳಗುಡ್ಡ, ಪಾರಂಪೋಕು, ಜೌಗು ಪ್ರದೇಶ, ಅರಳು ಪ್ರದೇಶ, ಸವಳು ಭೂಮಿ, ಉಸುಕು ಭೂಮಿ, ಹುಲ್ಲುಬನ್ನಿ, ಕಾವಲು, ಪೈಸಾರಿ, ಮಫತ್ ಭೂಮಿ, ಖಾರೀಜ್ ಖಾತಾ, ಇನಾಂ, ಲ್ಯಾಂಡ್ ಬ್ಯಾಂಕ್, ಗ್ರಾಮಠಾಣಾ, ಸೇಂಧಿವನ, ಸಿ ಅಂಡ್ ಡಿ, ಕಿರು ಅರಣ್ಯದ ಹೆಸರಿನಲ್ಲಿರುವ ಭೂಮಿಗಳು, ಮಲೆನಾಡಿನಲ್ಲಿ ಕರೆಯಲ್ಪಡುವ ಸೊಪ್ಪಿನ ಬೆಟ್ಟ (ಊರುಗುಪ್ಪೆ), ನೆಡುತೋಪು, ಬಾಣೆ, ದೇವರಕಾಡು ಹೆಸರಿನಲ್ಲಿರುವ ಭೂಮಿಗಳಾಗಿವೆ. ಇದೇ ಭೂಮಿಗಳಲ್ಲಿ ಭೂರಹಿತ ಜನರು ಕಷ್ಟಪಟ್ಟು ಹಸನುಗೊಳಿಸಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಹಲವು ವಿಧದ ಭೂಮಿಗಳು ಸರ್ಕಾರದ ದೃಷ್ಟಿಯಲ್ಲಿ ಯೋಗ್ಯವಲ್ಲದ ಭೂಮಿಗಳಾಗಿರಬಹುದು ಆದರೆ ಈ ಭೂಮಿಗಳಲ್ಲೇ ಲಕ್ಷಾಂತರ ಬಡ ಜನರು ದುಡಿಯುತ್ತಾ ಸ್ವಾಭಿಮಾನಿ ಬದುಕು ಕಟ್ಟಿಕೊಂಡಿದ್ದಾರೆ. ‘ಅರ್ಜಿಗಳ ತಿರಸ್ಕಾರ’ ಎಂಬುದು ಜನರ ನಿದ್ದೆ ಕೆಡಿಸಿದೆಯಲ್ಲದೆ ಜನರ ಬದುಕುವ ಹಕ್ಕನ್ನೇ ತಿರಸ್ಕರಿಸಿದಂತಾಗಿದೆ. ಇದೇ ತುಂಡು ಭೂಮಿ ಅವರ ಕುಟುಂಬಗಳಿಗೆ ಜೀವನಾಧಾರವಾಗಿದೆ. ದಶಕಗಳ ಕಾಲದಿಂದಲೂ ಬದುಕಿಗೆ ಆಸರೆಯಾಗಿದ್ದ ಭೂಮಿಗಳನ್ನೇ ನಂಬಿ ಅರ್ಜಿ ಸಲ್ಲಿಸಿ ಭೂಮಿಯ ಹಕ್ಕಿಗಾಗಿ ಕಾಯುತ್ತಿದ್ದವರಿಗೆ ನಿರಾಶೆಯ ಸಿಡಿಲು ಬಡಿದಂತಾಗಿದೆ. ಈ ಭೂಮಿಯನ್ನು ಉಳಿಸಿಕೊಳ್ಳುವುದಕ್ಕಾಗಿ ಜೀವನದುದ್ದಕ್ಕೂ ಅದೆಷ್ಟೋ ಹೋರಾಟಗಳನ್ನು ಮಾಡುತ್ತಾ ಜೀವ ಸವೆಸಿದ್ದಾರೆ ಎಂದು ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ.

ಬಗರ್ ಹುಕುಂ ಅರ್ಜಿಗಳನ್ನು ತಿರಸ್ಕರಿಸುವ ಮೂಲಕ ಸ್ವಾಭೀಮಾನದ ಬದುಕಿಗೆ ಸರಕಾರವು ಭಂಗ ತರುತ್ತಿದೆ. ಅಷ್ಟೇ ಅಲ್ಲದೆ ಬಡವರಿಗೊಂದು, ಶ್ರೀಮಂತರು ಮತ್ತು ಕಂಪನಿಗಳಿಗೊಂದು ಕಾನೂನು ಮಾಡುವ ಮೂಲಕ ಬಡವರಿಗೆ ಭೂಮಿ ಮಂಜೂರಾತಿ ನೀತಿಯನ್ನು ಗಾಳಿಗೆ ತೂರುತ್ತಿದೆ. ಈ ನೀತಿಯನ್ನು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ತೀರ್ವವಾಗಿ ವಿರೋಧಿಸುತ್ತದೆ ಮತ್ತು ಬಗರ್ ಹುಕುಂ ಸಾಗುವಳಿದಾರರ ಅರ್ಜಿಗಳನ್ನು ಯಾವುದೇ ನೆಪದಲ್ಲಿ ತಿರಸ್ಕರಿಸಬಾರದೆಂದು “ ಅರ್ಜಿ ಸಲ್ಲಿಸಿ ಸಾಗುವಳಿ ಮಾಡುತ್ತಿರುವ ಭೂಹೀನರೆಲ್ಲರಿಗೂ ಒಂದು ಬಾರಿ ಅವಕಾಶ” ನೀಡುವ ಮೂಲಕ ಭೂಮಿಯ ಹಕ್ಕುನ್ನು ನೀಡಬೇಕೆಂಬ ಒತ್ತಾಯವನ್ನು ಸರ್ಕಾರಕ್ಕೆ ಮಾಡುತ್ತಾ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ನೇತೃತ್ವದಲ್ಲಿ ಬೆಂಗಳೂರಿನ ಪ್ರಿಡಂ ಪಾರ್ಕ್‍ನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಮಾರ್ಚ್ 11 ರಂದು ಬೆಳಿಗ್ಗ 10 ಗಂಟೆಗೆ ಆರಂಭವಾಗಲಿರುವ ಪ್ರತಿಭಟನಾ ಧರಣಿಗೆ ರಾಜ್ಯದ ಎಲ್ಲಾ ಬಗರ್ ಹುಕುಂ ಸಾಗುವಳಿದಾರರು ಆಗಮಿಸಬೇಕೆಂದು ಈ ಮೂಲಕ ಮನವಿ ಮಾಡಿಕೊಳ್ಳುತ್ತದೆ ಎಂದು ಅವರು ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.

‘ಪಾಕಿಸ್ತಾನಿ’ ಎಂದು ಕರೆಯುವುದು ಧಾರ್ಮಿಕ ಭಾವನೆಗಳಿಗೆ ನೋಯಿಸುವ ಅಪರಾಧವಲ್ಲ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...