Homeಕರ್ನಾಟಕಬಗರ್ ಹುಕುಂ ರೈತರಿಗೆ ಭೂಮಿ ಮಂಜೂರಾತಿಗೆ ಆಗ್ರಹಿಸಿ ಮಾ.11ರಂದು ಭೂಮಿ ಮತ್ತು ವಸತಿ ವಂಚಿತರ ಹೋರಾಟ...

ಬಗರ್ ಹುಕುಂ ರೈತರಿಗೆ ಭೂಮಿ ಮಂಜೂರಾತಿಗೆ ಆಗ್ರಹಿಸಿ ಮಾ.11ರಂದು ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯಿಂದ ಬೃಹತ್ ಪ್ರತಿಭಟನೆ  

- Advertisement -
- Advertisement -

ಬಗರ್ ಹುಕುಂ ರೈತರಿಗೆ ಭೂಮಂಜೂರಾತಿಗೆ ಆಗ್ರಹಿಸಿ ಇದೇ ಮಾ.11ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕುಮಾರ್ ಸಮತಳ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,  ಈ ರಾಜ್ಯದ ಅತ್ಯಂತ ಕಟ್ಟ ಕಡೆಯ ಕೆಳ ಸಮುದಾಯಗಳು ಅತೀ ಹೆಚ್ಚು ಭೂ ಹಿಡುವಳಿಯಿಂದ ವಂಚಿತರಾಗಿದ್ದಾರೆಂಬುದು ಹಗಲಿನ ಸೂರ್ಯನಷ್ಟೇ ಸತ್ಯ. 70ರ ದಶಕದಲ್ಲಿ ಜಾರಿಯಾಗಿದ್ದ “ಉಳುವವನೇ ಭೂ ಒಡೆಯ” ಅಂದಿನ ದೇವರಾಜ ಅರಸು ಸರ್ಕಾರದ ಕ್ರಾಂತಿಕಾರಿ ಘೋಷಣೆಯಿಂದ ಒಂದಷ್ಟು ಹಿಂದುಳಿದ ಸಮುದಾಯಗಳಿಗೆ, ಕಟ್ಟ ಕಡೆಯ ಅಸ್ಪೃಶ್ಯ ಸಮುದಾಯಗಳಿಗೆ ಭೂಮಿಯ ಒಡೆತನ ದೊರೆತದ್ದು ಈಗ ಇತಿಹಾಸ ಎಂದು ಅವರು ಹೇಳಿದ್ದಾರೆ.

ಸರ್ಕಾರದ ಒಡೆತನದಲ್ಲಿದ್ದ ಲಕ್ಷಾಂತರ ಎಕರೆ ಭೂಮಿಯನ್ನು ಸಕ್ರಮಗೊಳಿಸುವ ಬಗರ್ ಹುಕುಂ ಸಕ್ರಮ ಸಮಿತಿಗಳ ರಚನೆಯೂ ಭೂರಹಿತರರ ಪಾಲಿಗೆ ಜೀವಾಳವಾಗಿದ್ದೂ ಇದೆ. ಫಾರಂ.ನಂ.50, 53, ಹಾಗೂ ಇತ್ತೀಚೆಗೆ ಫಾರಂನಂ 57 ರ ಅರ್ಜಿಗಳನ್ನು ಸ್ವೀಕರಿಸಿ ಕೆಲ ನಿಬಂಧನೆಗಳ ಮೂಲಕ ಭೂಮಿಯನ್ನು ಮಂಜೂರಾತಿ ನೀಡುತ್ತಿರುವುದು ನಿಯಮ. ಇತ್ತೀಚೆಗೆ ಕಂದಾಯ ಮಂತ್ರಿ ಕೃಷ್ಣ ಭೈರೇಗೌಡರ ನೇತೃತ್ವದಲ್ಲಿ ಲಕ್ಷಾಂತರ ಸಂಖ್ಯೆ ಅರ್ಜಿಗಳನ್ನು ಪರಿಶೀಲಿಸಿ ಭೂಮಿ ಮಂಜೂರಾತಿ ಪ್ರಕ್ರಿಯೆ ನಡೆಯುತ್ತಿರುವುದು ಸಂತೋಷದ ವಿಷಯ. ಇದಕ್ಕಾಗಿ ಸರ್ಕಾರವನ್ನು ವಿಶೇಷವಾಗಿ ಕಂದಾಯ ಮಂತ್ರಿಗಳನ್ನು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಅಭಿನಂದಿಸುತ್ತದೆ ಎಂದು ಹೇಳಿಕೆಯು ತಿಳಿಸಿದೆ.

ಭೂಮಿ ಮಂಜುರಾತಿಯ ಈ ಸಂದರ್ಭದಲ್ಲಿ ಸರ್ಕಾರ ಲಕ್ಷಾಂತರ ಸಂಖ್ಯೆಯ ಅರ್ಜಿಗಳನ್ನು ತಿರಸ್ಕರಿಸುವ ಮೂಲಕ ಲಕ್ಷಾಂತರ ಸಂಖ್ಯೆಯ ಬಡ ಕುಟುಂಬಗಳಿಗೆ ಅದರಲ್ಲೂ ಬಹುತೇಕ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳು, ಹಿಂದುಳಿದ, ಅಲೆಮಾರಿ ಸಮುದಾಯಗಳೇ ಸಾಗುವಳಿ ಮಾಡುತ್ತಾ ಅರ್ಜಿ ಸಲ್ಲಿಸರುವ ಭೂರಹಿತ ಕುಟುಂಬಗಳಿಗೆ ಭೂಮಿಯ ಹಕ್ಕಿನಿಂದ ವಂಚಿಸುವುದೇ ಆಗಿದೆ. ಸಂವಿಧಾನ ಪರ, ಬಾಬಾ ಸಾಹೇಬ್ ಅಂಬೇಡ್ಕರ್‍ವಾದಿ, ಸಮಾಜವಾದಿ ಹೆಸರಿನಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಸಾಮಾಜಿಕ ನ್ಯಾಯವನ್ನು ಎಲ್ಲಿ ಪಾಲಿಸುತ್ತದೆ? ಎಂಬ ಪ್ರಶ್ನೆ ಕಾಡುತ್ತಿದೆ ಎಂದು ಸಮತಳ್ ಹೇಳಿಕೆಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಕಾನೂನಿನ ಹೆಸರಿನಲ್ಲಿ ಭೂಮಂಜೂರಾತಿ ನೀಡದೇ ಅರ್ಜಿಗಳನ್ನು ಮಾನ್ಯ ಮಾಡುತ್ತಿಲ್ಲ. ಇದಕ್ಕೆ ಹಲವಾರು ರೀತಿಯ ಕಾರಣಗಳನ್ನು ನೀಡುತ್ತಿದ್ದು, ಕೃಷಿ ಯೋಗ್ಯವಲ್ಲದ ಭೂಮಿ, ಅರಣ್ಯ, ಖರಾಬ್, ಅ ಖರಾಬ್, ಬ ಖರಾಬ್, ರಾಳಗುಡ್ಡ, ಪಾರಂಪೋಕು, ಜೌಗು ಪ್ರದೇಶ, ಅರಳು ಪ್ರದೇಶ, ಸವಳು ಭೂಮಿ, ಉಸುಕು ಭೂಮಿ, ಹುಲ್ಲುಬನ್ನಿ, ಕಾವಲು, ಪೈಸಾರಿ, ಮಫತ್ ಭೂಮಿ, ಖಾರೀಜ್ ಖಾತಾ, ಇನಾಂ, ಲ್ಯಾಂಡ್ ಬ್ಯಾಂಕ್, ಗ್ರಾಮಠಾಣಾ, ಸೇಂಧಿವನ, ಸಿ ಅಂಡ್ ಡಿ, ಕಿರು ಅರಣ್ಯದ ಹೆಸರಿನಲ್ಲಿರುವ ಭೂಮಿಗಳು, ಮಲೆನಾಡಿನಲ್ಲಿ ಕರೆಯಲ್ಪಡುವ ಸೊಪ್ಪಿನ ಬೆಟ್ಟ (ಊರುಗುಪ್ಪೆ), ನೆಡುತೋಪು, ಬಾಣೆ, ದೇವರಕಾಡು ಹೆಸರಿನಲ್ಲಿರುವ ಭೂಮಿಗಳಾಗಿವೆ. ಇದೇ ಭೂಮಿಗಳಲ್ಲಿ ಭೂರಹಿತ ಜನರು ಕಷ್ಟಪಟ್ಟು ಹಸನುಗೊಳಿಸಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಹಲವು ವಿಧದ ಭೂಮಿಗಳು ಸರ್ಕಾರದ ದೃಷ್ಟಿಯಲ್ಲಿ ಯೋಗ್ಯವಲ್ಲದ ಭೂಮಿಗಳಾಗಿರಬಹುದು ಆದರೆ ಈ ಭೂಮಿಗಳಲ್ಲೇ ಲಕ್ಷಾಂತರ ಬಡ ಜನರು ದುಡಿಯುತ್ತಾ ಸ್ವಾಭಿಮಾನಿ ಬದುಕು ಕಟ್ಟಿಕೊಂಡಿದ್ದಾರೆ. ‘ಅರ್ಜಿಗಳ ತಿರಸ್ಕಾರ’ ಎಂಬುದು ಜನರ ನಿದ್ದೆ ಕೆಡಿಸಿದೆಯಲ್ಲದೆ ಜನರ ಬದುಕುವ ಹಕ್ಕನ್ನೇ ತಿರಸ್ಕರಿಸಿದಂತಾಗಿದೆ. ಇದೇ ತುಂಡು ಭೂಮಿ ಅವರ ಕುಟುಂಬಗಳಿಗೆ ಜೀವನಾಧಾರವಾಗಿದೆ. ದಶಕಗಳ ಕಾಲದಿಂದಲೂ ಬದುಕಿಗೆ ಆಸರೆಯಾಗಿದ್ದ ಭೂಮಿಗಳನ್ನೇ ನಂಬಿ ಅರ್ಜಿ ಸಲ್ಲಿಸಿ ಭೂಮಿಯ ಹಕ್ಕಿಗಾಗಿ ಕಾಯುತ್ತಿದ್ದವರಿಗೆ ನಿರಾಶೆಯ ಸಿಡಿಲು ಬಡಿದಂತಾಗಿದೆ. ಈ ಭೂಮಿಯನ್ನು ಉಳಿಸಿಕೊಳ್ಳುವುದಕ್ಕಾಗಿ ಜೀವನದುದ್ದಕ್ಕೂ ಅದೆಷ್ಟೋ ಹೋರಾಟಗಳನ್ನು ಮಾಡುತ್ತಾ ಜೀವ ಸವೆಸಿದ್ದಾರೆ ಎಂದು ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ.

ಬಗರ್ ಹುಕುಂ ಅರ್ಜಿಗಳನ್ನು ತಿರಸ್ಕರಿಸುವ ಮೂಲಕ ಸ್ವಾಭೀಮಾನದ ಬದುಕಿಗೆ ಸರಕಾರವು ಭಂಗ ತರುತ್ತಿದೆ. ಅಷ್ಟೇ ಅಲ್ಲದೆ ಬಡವರಿಗೊಂದು, ಶ್ರೀಮಂತರು ಮತ್ತು ಕಂಪನಿಗಳಿಗೊಂದು ಕಾನೂನು ಮಾಡುವ ಮೂಲಕ ಬಡವರಿಗೆ ಭೂಮಿ ಮಂಜೂರಾತಿ ನೀತಿಯನ್ನು ಗಾಳಿಗೆ ತೂರುತ್ತಿದೆ. ಈ ನೀತಿಯನ್ನು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ತೀರ್ವವಾಗಿ ವಿರೋಧಿಸುತ್ತದೆ ಮತ್ತು ಬಗರ್ ಹುಕುಂ ಸಾಗುವಳಿದಾರರ ಅರ್ಜಿಗಳನ್ನು ಯಾವುದೇ ನೆಪದಲ್ಲಿ ತಿರಸ್ಕರಿಸಬಾರದೆಂದು “ ಅರ್ಜಿ ಸಲ್ಲಿಸಿ ಸಾಗುವಳಿ ಮಾಡುತ್ತಿರುವ ಭೂಹೀನರೆಲ್ಲರಿಗೂ ಒಂದು ಬಾರಿ ಅವಕಾಶ” ನೀಡುವ ಮೂಲಕ ಭೂಮಿಯ ಹಕ್ಕುನ್ನು ನೀಡಬೇಕೆಂಬ ಒತ್ತಾಯವನ್ನು ಸರ್ಕಾರಕ್ಕೆ ಮಾಡುತ್ತಾ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ನೇತೃತ್ವದಲ್ಲಿ ಬೆಂಗಳೂರಿನ ಪ್ರಿಡಂ ಪಾರ್ಕ್‍ನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಮಾರ್ಚ್ 11 ರಂದು ಬೆಳಿಗ್ಗ 10 ಗಂಟೆಗೆ ಆರಂಭವಾಗಲಿರುವ ಪ್ರತಿಭಟನಾ ಧರಣಿಗೆ ರಾಜ್ಯದ ಎಲ್ಲಾ ಬಗರ್ ಹುಕುಂ ಸಾಗುವಳಿದಾರರು ಆಗಮಿಸಬೇಕೆಂದು ಈ ಮೂಲಕ ಮನವಿ ಮಾಡಿಕೊಳ್ಳುತ್ತದೆ ಎಂದು ಅವರು ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.

‘ಪಾಕಿಸ್ತಾನಿ’ ಎಂದು ಕರೆಯುವುದು ಧಾರ್ಮಿಕ ಭಾವನೆಗಳಿಗೆ ನೋಯಿಸುವ ಅಪರಾಧವಲ್ಲ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...