Homeಕರ್ನಾಟಕರೈತ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಸಂಯುಕ್ತ ಹೋರಾಟ ಸಂಘಟನೆಯಿಂದ ಬೃಹತ್ ರ್‍ಯಾಲಿ

ರೈತ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಸಂಯುಕ್ತ ಹೋರಾಟ ಸಂಘಟನೆಯಿಂದ ಬೃಹತ್ ರ್‍ಯಾಲಿ

- Advertisement -
- Advertisement -

ರಾಜ್ಯ ಸರ್ಕಾರದಿಂದ ಕೆಲ ದಿನಗಳಲ್ಲಿ ಬಜೆಟ್ ಮಂಡನೆಯಾಗಲಿದೆ. ಈ ಹಿನ್ನೆಲೆಯಲ್ಲಿ ಸಂಯುಕ್ತ ಹೋರಾಟ-ಕರ್ನಾಟಕ ವಿವಿಧ ಬೇಡಿಕೆಯನ್ನು ಸರ್ಕಾರದ ಮುಂದಿಡುತ್ತಿದ್ದು, ರೈತ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಬೃಹತ್‌ ರ್‍ಯಾಲಿ ಹಮ್ಮಿಕೊಳ್ಳುತ್ತಿದೆ.

ಸಂಯುಕ್ತ ಹೋರಾಟ-ಕರ್ನಾಟಕ ವತಿಯಿಂದ ಫೆಬ್ರವರಿ 16, 2023ರಂದು ಬೃಹತ್‌ ರ್‍ಯಾಲಿ ನಡೆಯಲಿದ್ದು, ಈ ಬಗ್ಗೆ ಸಂಘಟನೆಯ ಸಂಯೋಜಕರಾದ ಬಡಗಲಪುರ ನಾಗೇಂದ್ರ, ಜಿ.ಸಿ. ಬಯ್ಯಾರೆಡ್ಡಿ, ಮಾವಳ್ಳಿ ಶಂಕರ್, ಕೆ.ಎ. ಭಟ್, ನೂರ್ ಶ್ರೀಧರ್, ದೇವಿ ಮತ್ತಿತರು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

ರಾಜ್ಯ ಸರ್ಕಾರದ ಎದುರು ವಿವಿಧ ಬೇಡಿಕೆಗಳನ್ನಿಟ್ಟಿರುವ ಸಂಘಟಕರು, ರಾಜ್ಯ ಸರ್ಕಾರದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗಳು, ಎಪಿಎಂಸಿ ಕಾಯ್ದೆ ತಿದ್ದುಪಡಿಗಳು, ಜಾನುವಾರು ಹತ್ಯೆ ಕಾಯ್ದೆ ತಿದ್ದುಪಡಿಗಳು, ಭೂಸ್ವಾಧೀನ ಕಾಯ್ದೆ ತಿದ್ದುಪಡಿಗಳು ರದ್ದಾಗಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: 32ನೇ ದಿನಕ್ಕೆ ಕಾಲಿಟ್ಟ ಪಿಟಿಸಿಎಲ್ ಹೋರಾಟ; ಎಸ್ಆರ್ ಹಿರೇಮಠ ಬೆಂಬಲ

ಬಡವರಿಗೆ ಬಗರ್ ಹುಕ್ಕುಂ ಮತ್ತಿತರ ಸರ್ಕಾರಿ ಭೂಮಿಗಳ ಹಂಚಿಕೆ, ಎಪಿಎಂಸಿಗಳನ್ನು ಬಲಪಡಿಸುವ ನೀತಿ, ರೈತರ ಒಪ್ಪಿಗೆ ಇಲ್ಲದೇ ಭೂಸ್ವಾಧೀನ ಮಾಡುವುದಿಲ್ಲ ಎನ್ನುವ ಭೂಸ್ವಾಧೀನ ಕಾಯ್ದೆ- 2013ರ ಕಾಯ್ದೆಯ ಜಾರಿ, ರೈತರ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಖಾತ್ರಿಗೊಳಿಸುವ ಕಾನೂನು, ಸಾಲ ಮನ್ನಾದಂತಹ ಅಂಶಗಳನ್ನು ಒಳಗೊಂಡ ಋಣ ಮುಕ್ತ ಕಾಯ್ದೆ ಜಾರಿಯಾಗಬೇಕು. ವಿದ್ಯುತ್ ಖಾಸಗೀಕರಣ ನಿಲ್ಲಬೇಕು, ವೃದ್ಧ ರೈತರು, ಕೂಲಿಕಾರರಿಗೆ ಪಿಂಚಣಿ, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಜಾರಿಯಾಗಬೇಕು. ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಮಾಡಿ, ನಾಲ್ಕು ಸಂಹಿತೆಗಳನ್ನು ರಚಿಸುವ ಪ್ರಯತ್ನ ಕೈಬಿಡಬೇಕು, ಅಸಂಘಟಿತ ಕಾರ್ಮಿಕರಿಗೆ ಕನಿಷ್ಠ ವೇತನ ಸಿಗಬೇಕು ಎಂದು ಆಗ್ರಹಿಸಿದ್ದಾರೆ.

ನಿರುದ್ಯೋಗ, ಶಿಕ್ಷಣದ ವ್ಯಾಪಾರೀಕರಣ, ಭ್ರಷ್ಟಾಚಾರ, ಕೋಮುವಾದೀಕರಣ ನಿಲ್ಲಬೇಕು. ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಬೇಕು. ಶೋಷಿತರಿಗೆ ಮೀಸಲಾತಿಯನ್ನು ಖಾತ್ರಿಗೊಳಿಸಬೇಕು, ಒಳ ಮಿಸಲಾತಿಯನ್ನು ಅಸ್ತ್ರವಾಗಿಸಿಕೊಂಡು ಶೋಷಿತರನ್ನು ಒಡೆದು ಆಳುವ ತಂತ್ರವಾಗಿ ಬಳಸುವ ಬದಲಿಗೆ ಎಲ್ಲರನ್ನು ವಿಶ್ವಾಸಕ್ಕೆ ತಗೆದುಕೊಂಡು ಪರಿಹಾರ ನೀಡಬೇಕು. ಬಸವಣ್ಣ, ಕುವೆಂಪುರಂತಹ ಕನಸಿನ ‘ಕರ್ನಾಟಕ’ವನ್ನು ಉಳಿಸಿಕೊಳ್ಳಲು ‘ಕೋಮುವಾದಿ ದ್ವೇಷ ರಾಜಕಾರಣ’ ನಿಲ್ಲಬೇಕು ಎಂದಿದ್ದಾರೆ.

ಇತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫೆಬ್ರವರಿ 16, 2023 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯದ ರೈತರು, ದಲಿತರು, ಕಾರ್ಮಿಕರು, ವಿದ್ಯಾರ್ಥಿ, ಯುವಜನರು, ಮಹಿಳೆಯರು, ಬುದ್ಧಿಜೀವಿಗಳು, ಸಾಮಾಜಿಕ ಕಾರ್ಯಕರ್ತರ ಬೃಹತ್ ರ್‍ಯಾಲಿ ಹಮ್ಮಿಕೊಳ್ಳಲಾಗಿದೆ. ಈ ರ್‍ಯಾಲಿಯಲ್ಲಿ ರಾಜ್ಯದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಯುಕ್ತ ಹೋರಾಟ-ಕರ್ನಾಟಕ ವಿನಂತಿಸಿಕೊಂಡಿದೆ.

ಫೆಬ್ರವರಿ 16, 2023 ರಂದು ನಡೆಯಲಿರುವ ರ್‍ಯಾಲಿಯಲ್ಲಿ ಸಂಯುಕ್ತ ಹೋರಾಟ-ಕರ್ನಾಟಕ ಸಂಘಟನೆ ಜೊತೆಗೆ ಇತರೆ ಕೆಲವು ಜನ ಚಳವಳಿಗಳು ಸಹ ಭಾಗವಹಿಸಲಿವೆ. ರಾಜ್ಯದ ಸಮಸ್ತ ದುಡಿಯುವ ಜನರ ಹಕ್ಕುಗಳನ್ನು ರಕ್ಷಿಸುವ ಮತ್ತು ರಾಜ್ಯದಲ್ಲಿ ಕೋಮು ಸಾಮರಸ್ಯವನ್ನು ಬಲಪಡಿಸಬೇಕು ಎನ್ನುವ ಎಲ್ಲಾ ಪ್ರಗತಿಪರ, ಜಾತ್ಯತೀತ ಸಂಘಟನೆಗಳು ಸಹ ಈ ರ್‍ಯಾಲಿಯಲ್ಲಿ ಭಾಗವಹಿಸಬೇಕೆಂದು ಕೋರಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...