Homeಮುಖಪುಟಷ. ಶೆಟ್ಟರ್ ಒಂದು ನೆನಪು

ಷ. ಶೆಟ್ಟರ್ ಒಂದು ನೆನಪು

- Advertisement -
- Advertisement -

ಪ್ರೊಫೆಸರ್ ಷಡಕ್ಷರ ಶೆಟ್ಟರ್(1935-2020) ಅವರಿಗೆ ನನ್ನನ್ನು ಪರಿಚಯಿಸಿದ್ದು ಅಭಿನವದ ರವಿಕುಮಾರ್. 2015ರ ಬೇಸಗೆಯಲ್ಲಿ NIAS ನಲ್ಲಿ ಅವರನ್ನು ಕಂಡು ‘ಹಳಗನ್ನಡ: ಲಿಪಿ, ಲಿಪಿಕಾರ, ಲಿಪಿ ವ್ಯವಸಾಯ’(2012) ಕೃತಿಗೆ ಹಸ್ತಾಕ್ಷರ ಪಡೆದಿದ್ದೆ. ಮುಂದೊಂದು ದಿನ ಅವರೊಂದಿಗೆ ಕೆಲಸ ಮಾಡುವ ಅವಕಾಶ ಒದಗಿಬರುವುದೆಂಬ ಕಲ್ಪನೆ ಕೂಡ ಇರಲಿಲ್ಲ. ನಾನು 2017ರಲ್ಲಿ ಆಕ್ಸ್‍ಫರ್ಡ್ ಯೂನಿವರ್ಸಿಟಿ ಪ್ರೆಸ್‍ನ ಸಂಪಾದಕ ಹುದ್ದೆ ತೊರೆದು ಮೈಸೂರಿಗೆ ಬಂದುಬಿಟ್ಟೆ. ಆಗ 2017ರ ನವೆಂಬರ್‍ನಲ್ಲಿ ಮತ್ತೆ ರವಿಕುಮಾರರಿಂದಾಗಿ ಶೆಟ್ಟರ್ ಅವರ ಸಂಪರ್ಕಕ್ಕೆ ಬಂದ ನಾನು, 2018ರ ಜನವರಿಯಿಂದ ಅವರ ವಚನಾನುವಾದ ಯೋಜನೆಯಲ್ಲಿ ಕೆಲಸ ಮಾಡಲು ಅರಂಭಿಸಿದೆ. ಬೆಂಗಳೂರಿನಲ್ಲಿ ಅವರ ಕಚೇರಿಯಲ್ಲೇ ಉಳಿದುಕೊಂಡಿದ್ದರಿಂದಾಗಿ ಅವರೊಂದಿಗೆ ಹತ್ತಿರದಿಂದ ಒಡನಾಡುವ ಅವಕಾಶ ಒದಗಿಬಂತು. ಆಗಲೇ ಅವರ ‘ಪ್ರಾಕೃತ ಜಗದ್ವಲಯ:ಪ್ರಾಕೃತ-ಕನ್ನಡ-ಸಂಸ್ಕೃತ ಭಾಷೆಗಳ ಅನುಸಂಧಾನ’ (2018) ಕೃತಿಗೆ ಹಿನ್ನುಡಿ ಬರೆದದ್ದು. ಕೆ.ವಿ. ತಿರುಮಲೇಶ್ ಮುನ್ನುಡಿ ಬರೆದಿದ್ದರು.

ಅವರ ಆಫೀಸನ್ನು ನೋಡಿಕೊಳ್ಳುತ್ತಿದ್ದೆನಾದ್ದರಿಂದ ಅವರು ಬರೆದಿದ್ದೆಲ್ಲವನ್ನೂ ಓದುವ, ಅವರೊಂದಿಗೆ ಚರ್ಚಿಸುವ ಸುಯೋಗ ನನ್ನದಾಗಿತ್ತು. ಎಂಬತ್ತು ದಾಟಿದ್ದರೂ ಅವರಷ್ಟು ತದೇಕಚಿತ್ತರಾಗಿ ದಿನಕ್ಕೆ ಕಡಿಮೆಯೆಂದರೂ ಹತ್ತು ಹನ್ನೆರಡು ಗಂಟೆ ಕೆಲಸ ಮಾಡುವ ವ್ಯಕ್ತಿಯನ್ನು ನಾನು ಇದುವರೆಗೂ ಕಂಡಿಲ್ಲ. ಕೇಂಬ್ರಿಜ್‍ನಂತಹ ವಿಶ್ವದ ಪ್ರತಿಷ್ಠಿತ ಯೂನಿವರ್ಸಿಟಿಯಲ್ಲಿ ಶಿಕ್ಷಣ ಪಡೆದಿದ್ದರಿಂದಾಗಿಯೋ ಏನೋ ಸಂಶೋಧನಾ ಶಿಸ್ತು, ಶ್ರದ್ಧೆಗಳೇ ಮೈವೆತ್ತಂತಿದ್ದ ಅವರು ಬರವಣಿಗೆಯಷ್ಟೇ ಮಾತಿನಲ್ಲೂ ಶಿಸ್ತು ತೋರಿಸುತ್ತಿದ್ದರು. ಒಂದು ಸಲ ಬರೆದಿದ್ದನ್ನು ಹತ್ತು, ಹದಿನೈದು ಸಲ ಮತ್ತೆ ಮತ್ತೆ ಓದಿ ತಿದ್ದುವಷ್ಟು ಸಂಯಮ ಅವರಲ್ಲಿತ್ತು. ಕನ್ನಡದಲ್ಲಿ ಎಲ್ಲರನ್ನು ತಲುಪುವಂತಹ ಚರಿತ್ರೆ ಬರವಣಿಗೆಯ ಮಾದರಿಯೊಂದನ್ನು ರೂಪಿಸುವ ನಿಟ್ಟಿನಲ್ಲಿ ಅವರ ಪರಿಶ್ರಮ ಬಹಳ ಕಾಲ ಉಳಿಯಲಿದೆ. ಅಂತಹ ಪರಿಶ್ರಮದ ಫಲವಾಗಿಯೇ ಅವರ ಸಂಶೋಧನಾ ಕೃತಿಗಳು ಕೂಡ ಹಲವು ಮರುಮುದ್ರಣಗಳನ್ನು ಕಾಣಲು ಸಾಧ್ಯವಾಗಿದೆ. ಕೇವಲ ಬರೆಹದಲ್ಲಿ ಮಾತ್ರವಲ್ಲ, ಅಗಾಧ ಜ್ಞಾನದಿಂದಾಗಿ ಗಂಟಾನುಗಟ್ಟಲೇ ನಿರರ್ಗಳವಾಗಿ ಮಾತನಾಡುವ ಭಾಷಣ ಕಲೆಯನ್ನು ಕೂಡ ಅವರು ರೂಢಿಸಿಕೊಂಡಿದ್ದರು.

ಐದು ದಶಕಗಳಿಗೂ ಮೀರಿದ ವೃತ್ತಿಜೀವನದಲ್ಲಿ ಅವರು ದಶಕಕ್ಕೊಮ್ಮೆಯೆಂಬಂತೆ ಕಲಾಚರಿತ್ರೆ, ಪ್ರಾಕ್ತನ ಶಾಸ್ತ್ರ, ಧರ್ಮಗಳ ಚರಿತ್ರೆ, ಕ್ಲಾಸಿಕಲ್ ಭಾಷೆಗಳ ಚರಿತ್ರೆಗಳಲ್ಲಿ ತಮ್ಮ ಸಂಶೋಧನಾ ಕ್ಷೇತ್ರ ಹಾಗೂ ವಿಧಾನಗಳನ್ನು ಬದಲಾಯಿಸಿಕೊಳ್ಳುತ್ತ ಬಂದಿದ್ದು ಗಮನಾರ್ಹ. ಇಷ್ಟು ದೊಡ್ಡ ಹರಹನ್ನು ಹೊಂದಿದ ಚರಿತ್ರೆಕಾರ ಕನ್ನಡದಲ್ಲಿ ಇದುವರೆಗೂ ಬಂದಿಲ್ಲವೆನ್ನುವುದು ಅತಿಶಯೋಕ್ತಿಯೇನಲ್ಲ. ಇಂಗ್ಲಿಷ್‍ನಲ್ಲಿ ಸಂಶೋಧನೆ ಹಾಗೂ ಬರೆಹ ಮಾಡಿ ದೇಶವಿದೇಶಗಳಲ್ಲಿ ಸಾಕಷ್ಟು ಮನ್ನಣೆ ಗಳಿಸಿದ್ದರೂ, ತಮ್ಮ ಕೊನೆಯ ಒಂದು ದಶಕವನ್ನು ಕನ್ನಡದಲ್ಲಿ ಬರೆಯುವುದಕ್ಕೆಂದೇ ಮೀಸಲಾಗಿರಿಸಿದ್ದು ಚಾರಿತ್ರಿಕ ಸಂಗತಿ. ಅವರು ಕನ್ನಡದಲ್ಲಿ ಬರೆಯುವವರೆಗೂ ಕನ್ನಡಿಗರನೇಕರಿಗೆ ಅವರ ಪರಿಚಯವೇ ಇಲ್ಲದಿದ್ದದ್ದು ಸೋಜಿಗದ ಸಂಗತಿ.

ನನ್ನ ಸೀಮಿತ ಓದಿನ ಮಟ್ಟಿಗೆ ಅವರು ಕನ್ನಡದಲ್ಲಿ ರಚಿಸಿದ ಕೃತಿಗಳಲ್ಲಿ ‘ಹಳಗನ್ನಡ’ ಕೃತಿ ಕನ್ನಡದಲ್ಲಿ ಯಾವುದೇ ಕ್ಷೇತ್ರ ಅಥವಾ ಪ್ರಕಾರದಲ್ಲಿ ಬಂದಿರುವ ಕೃತಿಗಳಲ್ಲೇ ಸಾರ್ವಕಾಲಿಕ ಶ್ರೇಷ್ಠ ಕೃತಿಗಳಲ್ಲಿ ಒಂದಾಗಿ ನಿಲ್ಲುತ್ತದೆ. ಹಾಗೆಯೇ, ಕನ್ನಡ ಸಾಹಿತ್ಯ ಚರಿತ್ರೆ ಕಟ್ಟುವುದಕ್ಕೆ ಬಹುದೊಡ್ಡ ಮಾದರಿಯಾಗಿ ಕೂಡ. ಶೆಟ್ಟರ್ ಇಂದು ಕನ್ನಡಕ್ಕೆ ಮುಖ್ಯರಾಗುವುದು ವಿದ್ವತ್ತಿಗೆ ಮಾತ್ರವಲ್ಲ, ತಮ್ಮ ಕೃತಿಗಳಲ್ಲಿ ಎತ್ತಿ ಹಿಡಿದ ಸೆಕ್ಯುಲರ್ ಮನೋಧರ್ಮಕ್ಕೂ ಕೂಡ. ಶಾಸನಗಳ ಅಧ್ಯಯನದ ಮೂಲಕ ಶಾಸನದಷ್ಟೇ ಅಚ್ಚಳಿಯದೆ ಉಳಿಯಲಿರುವ ಇಂತಹ ಅಪ್ರತಿಮ ಚರಿತ್ರೆಕಾರನಿಗೆ ಕೊನೆಗೂ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಕಕ್ಷತೆಯ ಗೌರವ ನೀಡದಿರುವುದು ಅವಮಾನದ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...