Homeಮುಖಪುಟಷ. ಶೆಟ್ಟರ್ ಒಂದು ನೆನಪು

ಷ. ಶೆಟ್ಟರ್ ಒಂದು ನೆನಪು

- Advertisement -
- Advertisement -

ಪ್ರೊಫೆಸರ್ ಷಡಕ್ಷರ ಶೆಟ್ಟರ್(1935-2020) ಅವರಿಗೆ ನನ್ನನ್ನು ಪರಿಚಯಿಸಿದ್ದು ಅಭಿನವದ ರವಿಕುಮಾರ್. 2015ರ ಬೇಸಗೆಯಲ್ಲಿ NIAS ನಲ್ಲಿ ಅವರನ್ನು ಕಂಡು ‘ಹಳಗನ್ನಡ: ಲಿಪಿ, ಲಿಪಿಕಾರ, ಲಿಪಿ ವ್ಯವಸಾಯ’(2012) ಕೃತಿಗೆ ಹಸ್ತಾಕ್ಷರ ಪಡೆದಿದ್ದೆ. ಮುಂದೊಂದು ದಿನ ಅವರೊಂದಿಗೆ ಕೆಲಸ ಮಾಡುವ ಅವಕಾಶ ಒದಗಿಬರುವುದೆಂಬ ಕಲ್ಪನೆ ಕೂಡ ಇರಲಿಲ್ಲ. ನಾನು 2017ರಲ್ಲಿ ಆಕ್ಸ್‍ಫರ್ಡ್ ಯೂನಿವರ್ಸಿಟಿ ಪ್ರೆಸ್‍ನ ಸಂಪಾದಕ ಹುದ್ದೆ ತೊರೆದು ಮೈಸೂರಿಗೆ ಬಂದುಬಿಟ್ಟೆ. ಆಗ 2017ರ ನವೆಂಬರ್‍ನಲ್ಲಿ ಮತ್ತೆ ರವಿಕುಮಾರರಿಂದಾಗಿ ಶೆಟ್ಟರ್ ಅವರ ಸಂಪರ್ಕಕ್ಕೆ ಬಂದ ನಾನು, 2018ರ ಜನವರಿಯಿಂದ ಅವರ ವಚನಾನುವಾದ ಯೋಜನೆಯಲ್ಲಿ ಕೆಲಸ ಮಾಡಲು ಅರಂಭಿಸಿದೆ. ಬೆಂಗಳೂರಿನಲ್ಲಿ ಅವರ ಕಚೇರಿಯಲ್ಲೇ ಉಳಿದುಕೊಂಡಿದ್ದರಿಂದಾಗಿ ಅವರೊಂದಿಗೆ ಹತ್ತಿರದಿಂದ ಒಡನಾಡುವ ಅವಕಾಶ ಒದಗಿಬಂತು. ಆಗಲೇ ಅವರ ‘ಪ್ರಾಕೃತ ಜಗದ್ವಲಯ:ಪ್ರಾಕೃತ-ಕನ್ನಡ-ಸಂಸ್ಕೃತ ಭಾಷೆಗಳ ಅನುಸಂಧಾನ’ (2018) ಕೃತಿಗೆ ಹಿನ್ನುಡಿ ಬರೆದದ್ದು. ಕೆ.ವಿ. ತಿರುಮಲೇಶ್ ಮುನ್ನುಡಿ ಬರೆದಿದ್ದರು.

ಅವರ ಆಫೀಸನ್ನು ನೋಡಿಕೊಳ್ಳುತ್ತಿದ್ದೆನಾದ್ದರಿಂದ ಅವರು ಬರೆದಿದ್ದೆಲ್ಲವನ್ನೂ ಓದುವ, ಅವರೊಂದಿಗೆ ಚರ್ಚಿಸುವ ಸುಯೋಗ ನನ್ನದಾಗಿತ್ತು. ಎಂಬತ್ತು ದಾಟಿದ್ದರೂ ಅವರಷ್ಟು ತದೇಕಚಿತ್ತರಾಗಿ ದಿನಕ್ಕೆ ಕಡಿಮೆಯೆಂದರೂ ಹತ್ತು ಹನ್ನೆರಡು ಗಂಟೆ ಕೆಲಸ ಮಾಡುವ ವ್ಯಕ್ತಿಯನ್ನು ನಾನು ಇದುವರೆಗೂ ಕಂಡಿಲ್ಲ. ಕೇಂಬ್ರಿಜ್‍ನಂತಹ ವಿಶ್ವದ ಪ್ರತಿಷ್ಠಿತ ಯೂನಿವರ್ಸಿಟಿಯಲ್ಲಿ ಶಿಕ್ಷಣ ಪಡೆದಿದ್ದರಿಂದಾಗಿಯೋ ಏನೋ ಸಂಶೋಧನಾ ಶಿಸ್ತು, ಶ್ರದ್ಧೆಗಳೇ ಮೈವೆತ್ತಂತಿದ್ದ ಅವರು ಬರವಣಿಗೆಯಷ್ಟೇ ಮಾತಿನಲ್ಲೂ ಶಿಸ್ತು ತೋರಿಸುತ್ತಿದ್ದರು. ಒಂದು ಸಲ ಬರೆದಿದ್ದನ್ನು ಹತ್ತು, ಹದಿನೈದು ಸಲ ಮತ್ತೆ ಮತ್ತೆ ಓದಿ ತಿದ್ದುವಷ್ಟು ಸಂಯಮ ಅವರಲ್ಲಿತ್ತು. ಕನ್ನಡದಲ್ಲಿ ಎಲ್ಲರನ್ನು ತಲುಪುವಂತಹ ಚರಿತ್ರೆ ಬರವಣಿಗೆಯ ಮಾದರಿಯೊಂದನ್ನು ರೂಪಿಸುವ ನಿಟ್ಟಿನಲ್ಲಿ ಅವರ ಪರಿಶ್ರಮ ಬಹಳ ಕಾಲ ಉಳಿಯಲಿದೆ. ಅಂತಹ ಪರಿಶ್ರಮದ ಫಲವಾಗಿಯೇ ಅವರ ಸಂಶೋಧನಾ ಕೃತಿಗಳು ಕೂಡ ಹಲವು ಮರುಮುದ್ರಣಗಳನ್ನು ಕಾಣಲು ಸಾಧ್ಯವಾಗಿದೆ. ಕೇವಲ ಬರೆಹದಲ್ಲಿ ಮಾತ್ರವಲ್ಲ, ಅಗಾಧ ಜ್ಞಾನದಿಂದಾಗಿ ಗಂಟಾನುಗಟ್ಟಲೇ ನಿರರ್ಗಳವಾಗಿ ಮಾತನಾಡುವ ಭಾಷಣ ಕಲೆಯನ್ನು ಕೂಡ ಅವರು ರೂಢಿಸಿಕೊಂಡಿದ್ದರು.

ಐದು ದಶಕಗಳಿಗೂ ಮೀರಿದ ವೃತ್ತಿಜೀವನದಲ್ಲಿ ಅವರು ದಶಕಕ್ಕೊಮ್ಮೆಯೆಂಬಂತೆ ಕಲಾಚರಿತ್ರೆ, ಪ್ರಾಕ್ತನ ಶಾಸ್ತ್ರ, ಧರ್ಮಗಳ ಚರಿತ್ರೆ, ಕ್ಲಾಸಿಕಲ್ ಭಾಷೆಗಳ ಚರಿತ್ರೆಗಳಲ್ಲಿ ತಮ್ಮ ಸಂಶೋಧನಾ ಕ್ಷೇತ್ರ ಹಾಗೂ ವಿಧಾನಗಳನ್ನು ಬದಲಾಯಿಸಿಕೊಳ್ಳುತ್ತ ಬಂದಿದ್ದು ಗಮನಾರ್ಹ. ಇಷ್ಟು ದೊಡ್ಡ ಹರಹನ್ನು ಹೊಂದಿದ ಚರಿತ್ರೆಕಾರ ಕನ್ನಡದಲ್ಲಿ ಇದುವರೆಗೂ ಬಂದಿಲ್ಲವೆನ್ನುವುದು ಅತಿಶಯೋಕ್ತಿಯೇನಲ್ಲ. ಇಂಗ್ಲಿಷ್‍ನಲ್ಲಿ ಸಂಶೋಧನೆ ಹಾಗೂ ಬರೆಹ ಮಾಡಿ ದೇಶವಿದೇಶಗಳಲ್ಲಿ ಸಾಕಷ್ಟು ಮನ್ನಣೆ ಗಳಿಸಿದ್ದರೂ, ತಮ್ಮ ಕೊನೆಯ ಒಂದು ದಶಕವನ್ನು ಕನ್ನಡದಲ್ಲಿ ಬರೆಯುವುದಕ್ಕೆಂದೇ ಮೀಸಲಾಗಿರಿಸಿದ್ದು ಚಾರಿತ್ರಿಕ ಸಂಗತಿ. ಅವರು ಕನ್ನಡದಲ್ಲಿ ಬರೆಯುವವರೆಗೂ ಕನ್ನಡಿಗರನೇಕರಿಗೆ ಅವರ ಪರಿಚಯವೇ ಇಲ್ಲದಿದ್ದದ್ದು ಸೋಜಿಗದ ಸಂಗತಿ.

ನನ್ನ ಸೀಮಿತ ಓದಿನ ಮಟ್ಟಿಗೆ ಅವರು ಕನ್ನಡದಲ್ಲಿ ರಚಿಸಿದ ಕೃತಿಗಳಲ್ಲಿ ‘ಹಳಗನ್ನಡ’ ಕೃತಿ ಕನ್ನಡದಲ್ಲಿ ಯಾವುದೇ ಕ್ಷೇತ್ರ ಅಥವಾ ಪ್ರಕಾರದಲ್ಲಿ ಬಂದಿರುವ ಕೃತಿಗಳಲ್ಲೇ ಸಾರ್ವಕಾಲಿಕ ಶ್ರೇಷ್ಠ ಕೃತಿಗಳಲ್ಲಿ ಒಂದಾಗಿ ನಿಲ್ಲುತ್ತದೆ. ಹಾಗೆಯೇ, ಕನ್ನಡ ಸಾಹಿತ್ಯ ಚರಿತ್ರೆ ಕಟ್ಟುವುದಕ್ಕೆ ಬಹುದೊಡ್ಡ ಮಾದರಿಯಾಗಿ ಕೂಡ. ಶೆಟ್ಟರ್ ಇಂದು ಕನ್ನಡಕ್ಕೆ ಮುಖ್ಯರಾಗುವುದು ವಿದ್ವತ್ತಿಗೆ ಮಾತ್ರವಲ್ಲ, ತಮ್ಮ ಕೃತಿಗಳಲ್ಲಿ ಎತ್ತಿ ಹಿಡಿದ ಸೆಕ್ಯುಲರ್ ಮನೋಧರ್ಮಕ್ಕೂ ಕೂಡ. ಶಾಸನಗಳ ಅಧ್ಯಯನದ ಮೂಲಕ ಶಾಸನದಷ್ಟೇ ಅಚ್ಚಳಿಯದೆ ಉಳಿಯಲಿರುವ ಇಂತಹ ಅಪ್ರತಿಮ ಚರಿತ್ರೆಕಾರನಿಗೆ ಕೊನೆಗೂ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಕಕ್ಷತೆಯ ಗೌರವ ನೀಡದಿರುವುದು ಅವಮಾನದ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...