Homeಮುಖಪುಟಷ. ಶೆಟ್ಟರ್ ಒಂದು ನೆನಪು

ಷ. ಶೆಟ್ಟರ್ ಒಂದು ನೆನಪು

- Advertisement -
- Advertisement -

ಪ್ರೊಫೆಸರ್ ಷಡಕ್ಷರ ಶೆಟ್ಟರ್(1935-2020) ಅವರಿಗೆ ನನ್ನನ್ನು ಪರಿಚಯಿಸಿದ್ದು ಅಭಿನವದ ರವಿಕುಮಾರ್. 2015ರ ಬೇಸಗೆಯಲ್ಲಿ NIAS ನಲ್ಲಿ ಅವರನ್ನು ಕಂಡು ‘ಹಳಗನ್ನಡ: ಲಿಪಿ, ಲಿಪಿಕಾರ, ಲಿಪಿ ವ್ಯವಸಾಯ’(2012) ಕೃತಿಗೆ ಹಸ್ತಾಕ್ಷರ ಪಡೆದಿದ್ದೆ. ಮುಂದೊಂದು ದಿನ ಅವರೊಂದಿಗೆ ಕೆಲಸ ಮಾಡುವ ಅವಕಾಶ ಒದಗಿಬರುವುದೆಂಬ ಕಲ್ಪನೆ ಕೂಡ ಇರಲಿಲ್ಲ. ನಾನು 2017ರಲ್ಲಿ ಆಕ್ಸ್‍ಫರ್ಡ್ ಯೂನಿವರ್ಸಿಟಿ ಪ್ರೆಸ್‍ನ ಸಂಪಾದಕ ಹುದ್ದೆ ತೊರೆದು ಮೈಸೂರಿಗೆ ಬಂದುಬಿಟ್ಟೆ. ಆಗ 2017ರ ನವೆಂಬರ್‍ನಲ್ಲಿ ಮತ್ತೆ ರವಿಕುಮಾರರಿಂದಾಗಿ ಶೆಟ್ಟರ್ ಅವರ ಸಂಪರ್ಕಕ್ಕೆ ಬಂದ ನಾನು, 2018ರ ಜನವರಿಯಿಂದ ಅವರ ವಚನಾನುವಾದ ಯೋಜನೆಯಲ್ಲಿ ಕೆಲಸ ಮಾಡಲು ಅರಂಭಿಸಿದೆ. ಬೆಂಗಳೂರಿನಲ್ಲಿ ಅವರ ಕಚೇರಿಯಲ್ಲೇ ಉಳಿದುಕೊಂಡಿದ್ದರಿಂದಾಗಿ ಅವರೊಂದಿಗೆ ಹತ್ತಿರದಿಂದ ಒಡನಾಡುವ ಅವಕಾಶ ಒದಗಿಬಂತು. ಆಗಲೇ ಅವರ ‘ಪ್ರಾಕೃತ ಜಗದ್ವಲಯ:ಪ್ರಾಕೃತ-ಕನ್ನಡ-ಸಂಸ್ಕೃತ ಭಾಷೆಗಳ ಅನುಸಂಧಾನ’ (2018) ಕೃತಿಗೆ ಹಿನ್ನುಡಿ ಬರೆದದ್ದು. ಕೆ.ವಿ. ತಿರುಮಲೇಶ್ ಮುನ್ನುಡಿ ಬರೆದಿದ್ದರು.

ಅವರ ಆಫೀಸನ್ನು ನೋಡಿಕೊಳ್ಳುತ್ತಿದ್ದೆನಾದ್ದರಿಂದ ಅವರು ಬರೆದಿದ್ದೆಲ್ಲವನ್ನೂ ಓದುವ, ಅವರೊಂದಿಗೆ ಚರ್ಚಿಸುವ ಸುಯೋಗ ನನ್ನದಾಗಿತ್ತು. ಎಂಬತ್ತು ದಾಟಿದ್ದರೂ ಅವರಷ್ಟು ತದೇಕಚಿತ್ತರಾಗಿ ದಿನಕ್ಕೆ ಕಡಿಮೆಯೆಂದರೂ ಹತ್ತು ಹನ್ನೆರಡು ಗಂಟೆ ಕೆಲಸ ಮಾಡುವ ವ್ಯಕ್ತಿಯನ್ನು ನಾನು ಇದುವರೆಗೂ ಕಂಡಿಲ್ಲ. ಕೇಂಬ್ರಿಜ್‍ನಂತಹ ವಿಶ್ವದ ಪ್ರತಿಷ್ಠಿತ ಯೂನಿವರ್ಸಿಟಿಯಲ್ಲಿ ಶಿಕ್ಷಣ ಪಡೆದಿದ್ದರಿಂದಾಗಿಯೋ ಏನೋ ಸಂಶೋಧನಾ ಶಿಸ್ತು, ಶ್ರದ್ಧೆಗಳೇ ಮೈವೆತ್ತಂತಿದ್ದ ಅವರು ಬರವಣಿಗೆಯಷ್ಟೇ ಮಾತಿನಲ್ಲೂ ಶಿಸ್ತು ತೋರಿಸುತ್ತಿದ್ದರು. ಒಂದು ಸಲ ಬರೆದಿದ್ದನ್ನು ಹತ್ತು, ಹದಿನೈದು ಸಲ ಮತ್ತೆ ಮತ್ತೆ ಓದಿ ತಿದ್ದುವಷ್ಟು ಸಂಯಮ ಅವರಲ್ಲಿತ್ತು. ಕನ್ನಡದಲ್ಲಿ ಎಲ್ಲರನ್ನು ತಲುಪುವಂತಹ ಚರಿತ್ರೆ ಬರವಣಿಗೆಯ ಮಾದರಿಯೊಂದನ್ನು ರೂಪಿಸುವ ನಿಟ್ಟಿನಲ್ಲಿ ಅವರ ಪರಿಶ್ರಮ ಬಹಳ ಕಾಲ ಉಳಿಯಲಿದೆ. ಅಂತಹ ಪರಿಶ್ರಮದ ಫಲವಾಗಿಯೇ ಅವರ ಸಂಶೋಧನಾ ಕೃತಿಗಳು ಕೂಡ ಹಲವು ಮರುಮುದ್ರಣಗಳನ್ನು ಕಾಣಲು ಸಾಧ್ಯವಾಗಿದೆ. ಕೇವಲ ಬರೆಹದಲ್ಲಿ ಮಾತ್ರವಲ್ಲ, ಅಗಾಧ ಜ್ಞಾನದಿಂದಾಗಿ ಗಂಟಾನುಗಟ್ಟಲೇ ನಿರರ್ಗಳವಾಗಿ ಮಾತನಾಡುವ ಭಾಷಣ ಕಲೆಯನ್ನು ಕೂಡ ಅವರು ರೂಢಿಸಿಕೊಂಡಿದ್ದರು.

ಐದು ದಶಕಗಳಿಗೂ ಮೀರಿದ ವೃತ್ತಿಜೀವನದಲ್ಲಿ ಅವರು ದಶಕಕ್ಕೊಮ್ಮೆಯೆಂಬಂತೆ ಕಲಾಚರಿತ್ರೆ, ಪ್ರಾಕ್ತನ ಶಾಸ್ತ್ರ, ಧರ್ಮಗಳ ಚರಿತ್ರೆ, ಕ್ಲಾಸಿಕಲ್ ಭಾಷೆಗಳ ಚರಿತ್ರೆಗಳಲ್ಲಿ ತಮ್ಮ ಸಂಶೋಧನಾ ಕ್ಷೇತ್ರ ಹಾಗೂ ವಿಧಾನಗಳನ್ನು ಬದಲಾಯಿಸಿಕೊಳ್ಳುತ್ತ ಬಂದಿದ್ದು ಗಮನಾರ್ಹ. ಇಷ್ಟು ದೊಡ್ಡ ಹರಹನ್ನು ಹೊಂದಿದ ಚರಿತ್ರೆಕಾರ ಕನ್ನಡದಲ್ಲಿ ಇದುವರೆಗೂ ಬಂದಿಲ್ಲವೆನ್ನುವುದು ಅತಿಶಯೋಕ್ತಿಯೇನಲ್ಲ. ಇಂಗ್ಲಿಷ್‍ನಲ್ಲಿ ಸಂಶೋಧನೆ ಹಾಗೂ ಬರೆಹ ಮಾಡಿ ದೇಶವಿದೇಶಗಳಲ್ಲಿ ಸಾಕಷ್ಟು ಮನ್ನಣೆ ಗಳಿಸಿದ್ದರೂ, ತಮ್ಮ ಕೊನೆಯ ಒಂದು ದಶಕವನ್ನು ಕನ್ನಡದಲ್ಲಿ ಬರೆಯುವುದಕ್ಕೆಂದೇ ಮೀಸಲಾಗಿರಿಸಿದ್ದು ಚಾರಿತ್ರಿಕ ಸಂಗತಿ. ಅವರು ಕನ್ನಡದಲ್ಲಿ ಬರೆಯುವವರೆಗೂ ಕನ್ನಡಿಗರನೇಕರಿಗೆ ಅವರ ಪರಿಚಯವೇ ಇಲ್ಲದಿದ್ದದ್ದು ಸೋಜಿಗದ ಸಂಗತಿ.

ನನ್ನ ಸೀಮಿತ ಓದಿನ ಮಟ್ಟಿಗೆ ಅವರು ಕನ್ನಡದಲ್ಲಿ ರಚಿಸಿದ ಕೃತಿಗಳಲ್ಲಿ ‘ಹಳಗನ್ನಡ’ ಕೃತಿ ಕನ್ನಡದಲ್ಲಿ ಯಾವುದೇ ಕ್ಷೇತ್ರ ಅಥವಾ ಪ್ರಕಾರದಲ್ಲಿ ಬಂದಿರುವ ಕೃತಿಗಳಲ್ಲೇ ಸಾರ್ವಕಾಲಿಕ ಶ್ರೇಷ್ಠ ಕೃತಿಗಳಲ್ಲಿ ಒಂದಾಗಿ ನಿಲ್ಲುತ್ತದೆ. ಹಾಗೆಯೇ, ಕನ್ನಡ ಸಾಹಿತ್ಯ ಚರಿತ್ರೆ ಕಟ್ಟುವುದಕ್ಕೆ ಬಹುದೊಡ್ಡ ಮಾದರಿಯಾಗಿ ಕೂಡ. ಶೆಟ್ಟರ್ ಇಂದು ಕನ್ನಡಕ್ಕೆ ಮುಖ್ಯರಾಗುವುದು ವಿದ್ವತ್ತಿಗೆ ಮಾತ್ರವಲ್ಲ, ತಮ್ಮ ಕೃತಿಗಳಲ್ಲಿ ಎತ್ತಿ ಹಿಡಿದ ಸೆಕ್ಯುಲರ್ ಮನೋಧರ್ಮಕ್ಕೂ ಕೂಡ. ಶಾಸನಗಳ ಅಧ್ಯಯನದ ಮೂಲಕ ಶಾಸನದಷ್ಟೇ ಅಚ್ಚಳಿಯದೆ ಉಳಿಯಲಿರುವ ಇಂತಹ ಅಪ್ರತಿಮ ಚರಿತ್ರೆಕಾರನಿಗೆ ಕೊನೆಗೂ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಕಕ್ಷತೆಯ ಗೌರವ ನೀಡದಿರುವುದು ಅವಮಾನದ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...