Homeಮುಖಪುಟಷ. ಶೆಟ್ಟರ್ ಒಂದು ನೆನಪು

ಷ. ಶೆಟ್ಟರ್ ಒಂದು ನೆನಪು

- Advertisement -
- Advertisement -

ಪ್ರೊಫೆಸರ್ ಷಡಕ್ಷರ ಶೆಟ್ಟರ್(1935-2020) ಅವರಿಗೆ ನನ್ನನ್ನು ಪರಿಚಯಿಸಿದ್ದು ಅಭಿನವದ ರವಿಕುಮಾರ್. 2015ರ ಬೇಸಗೆಯಲ್ಲಿ NIAS ನಲ್ಲಿ ಅವರನ್ನು ಕಂಡು ‘ಹಳಗನ್ನಡ: ಲಿಪಿ, ಲಿಪಿಕಾರ, ಲಿಪಿ ವ್ಯವಸಾಯ’(2012) ಕೃತಿಗೆ ಹಸ್ತಾಕ್ಷರ ಪಡೆದಿದ್ದೆ. ಮುಂದೊಂದು ದಿನ ಅವರೊಂದಿಗೆ ಕೆಲಸ ಮಾಡುವ ಅವಕಾಶ ಒದಗಿಬರುವುದೆಂಬ ಕಲ್ಪನೆ ಕೂಡ ಇರಲಿಲ್ಲ. ನಾನು 2017ರಲ್ಲಿ ಆಕ್ಸ್‍ಫರ್ಡ್ ಯೂನಿವರ್ಸಿಟಿ ಪ್ರೆಸ್‍ನ ಸಂಪಾದಕ ಹುದ್ದೆ ತೊರೆದು ಮೈಸೂರಿಗೆ ಬಂದುಬಿಟ್ಟೆ. ಆಗ 2017ರ ನವೆಂಬರ್‍ನಲ್ಲಿ ಮತ್ತೆ ರವಿಕುಮಾರರಿಂದಾಗಿ ಶೆಟ್ಟರ್ ಅವರ ಸಂಪರ್ಕಕ್ಕೆ ಬಂದ ನಾನು, 2018ರ ಜನವರಿಯಿಂದ ಅವರ ವಚನಾನುವಾದ ಯೋಜನೆಯಲ್ಲಿ ಕೆಲಸ ಮಾಡಲು ಅರಂಭಿಸಿದೆ. ಬೆಂಗಳೂರಿನಲ್ಲಿ ಅವರ ಕಚೇರಿಯಲ್ಲೇ ಉಳಿದುಕೊಂಡಿದ್ದರಿಂದಾಗಿ ಅವರೊಂದಿಗೆ ಹತ್ತಿರದಿಂದ ಒಡನಾಡುವ ಅವಕಾಶ ಒದಗಿಬಂತು. ಆಗಲೇ ಅವರ ‘ಪ್ರಾಕೃತ ಜಗದ್ವಲಯ:ಪ್ರಾಕೃತ-ಕನ್ನಡ-ಸಂಸ್ಕೃತ ಭಾಷೆಗಳ ಅನುಸಂಧಾನ’ (2018) ಕೃತಿಗೆ ಹಿನ್ನುಡಿ ಬರೆದದ್ದು. ಕೆ.ವಿ. ತಿರುಮಲೇಶ್ ಮುನ್ನುಡಿ ಬರೆದಿದ್ದರು.

ಅವರ ಆಫೀಸನ್ನು ನೋಡಿಕೊಳ್ಳುತ್ತಿದ್ದೆನಾದ್ದರಿಂದ ಅವರು ಬರೆದಿದ್ದೆಲ್ಲವನ್ನೂ ಓದುವ, ಅವರೊಂದಿಗೆ ಚರ್ಚಿಸುವ ಸುಯೋಗ ನನ್ನದಾಗಿತ್ತು. ಎಂಬತ್ತು ದಾಟಿದ್ದರೂ ಅವರಷ್ಟು ತದೇಕಚಿತ್ತರಾಗಿ ದಿನಕ್ಕೆ ಕಡಿಮೆಯೆಂದರೂ ಹತ್ತು ಹನ್ನೆರಡು ಗಂಟೆ ಕೆಲಸ ಮಾಡುವ ವ್ಯಕ್ತಿಯನ್ನು ನಾನು ಇದುವರೆಗೂ ಕಂಡಿಲ್ಲ. ಕೇಂಬ್ರಿಜ್‍ನಂತಹ ವಿಶ್ವದ ಪ್ರತಿಷ್ಠಿತ ಯೂನಿವರ್ಸಿಟಿಯಲ್ಲಿ ಶಿಕ್ಷಣ ಪಡೆದಿದ್ದರಿಂದಾಗಿಯೋ ಏನೋ ಸಂಶೋಧನಾ ಶಿಸ್ತು, ಶ್ರದ್ಧೆಗಳೇ ಮೈವೆತ್ತಂತಿದ್ದ ಅವರು ಬರವಣಿಗೆಯಷ್ಟೇ ಮಾತಿನಲ್ಲೂ ಶಿಸ್ತು ತೋರಿಸುತ್ತಿದ್ದರು. ಒಂದು ಸಲ ಬರೆದಿದ್ದನ್ನು ಹತ್ತು, ಹದಿನೈದು ಸಲ ಮತ್ತೆ ಮತ್ತೆ ಓದಿ ತಿದ್ದುವಷ್ಟು ಸಂಯಮ ಅವರಲ್ಲಿತ್ತು. ಕನ್ನಡದಲ್ಲಿ ಎಲ್ಲರನ್ನು ತಲುಪುವಂತಹ ಚರಿತ್ರೆ ಬರವಣಿಗೆಯ ಮಾದರಿಯೊಂದನ್ನು ರೂಪಿಸುವ ನಿಟ್ಟಿನಲ್ಲಿ ಅವರ ಪರಿಶ್ರಮ ಬಹಳ ಕಾಲ ಉಳಿಯಲಿದೆ. ಅಂತಹ ಪರಿಶ್ರಮದ ಫಲವಾಗಿಯೇ ಅವರ ಸಂಶೋಧನಾ ಕೃತಿಗಳು ಕೂಡ ಹಲವು ಮರುಮುದ್ರಣಗಳನ್ನು ಕಾಣಲು ಸಾಧ್ಯವಾಗಿದೆ. ಕೇವಲ ಬರೆಹದಲ್ಲಿ ಮಾತ್ರವಲ್ಲ, ಅಗಾಧ ಜ್ಞಾನದಿಂದಾಗಿ ಗಂಟಾನುಗಟ್ಟಲೇ ನಿರರ್ಗಳವಾಗಿ ಮಾತನಾಡುವ ಭಾಷಣ ಕಲೆಯನ್ನು ಕೂಡ ಅವರು ರೂಢಿಸಿಕೊಂಡಿದ್ದರು.

ಐದು ದಶಕಗಳಿಗೂ ಮೀರಿದ ವೃತ್ತಿಜೀವನದಲ್ಲಿ ಅವರು ದಶಕಕ್ಕೊಮ್ಮೆಯೆಂಬಂತೆ ಕಲಾಚರಿತ್ರೆ, ಪ್ರಾಕ್ತನ ಶಾಸ್ತ್ರ, ಧರ್ಮಗಳ ಚರಿತ್ರೆ, ಕ್ಲಾಸಿಕಲ್ ಭಾಷೆಗಳ ಚರಿತ್ರೆಗಳಲ್ಲಿ ತಮ್ಮ ಸಂಶೋಧನಾ ಕ್ಷೇತ್ರ ಹಾಗೂ ವಿಧಾನಗಳನ್ನು ಬದಲಾಯಿಸಿಕೊಳ್ಳುತ್ತ ಬಂದಿದ್ದು ಗಮನಾರ್ಹ. ಇಷ್ಟು ದೊಡ್ಡ ಹರಹನ್ನು ಹೊಂದಿದ ಚರಿತ್ರೆಕಾರ ಕನ್ನಡದಲ್ಲಿ ಇದುವರೆಗೂ ಬಂದಿಲ್ಲವೆನ್ನುವುದು ಅತಿಶಯೋಕ್ತಿಯೇನಲ್ಲ. ಇಂಗ್ಲಿಷ್‍ನಲ್ಲಿ ಸಂಶೋಧನೆ ಹಾಗೂ ಬರೆಹ ಮಾಡಿ ದೇಶವಿದೇಶಗಳಲ್ಲಿ ಸಾಕಷ್ಟು ಮನ್ನಣೆ ಗಳಿಸಿದ್ದರೂ, ತಮ್ಮ ಕೊನೆಯ ಒಂದು ದಶಕವನ್ನು ಕನ್ನಡದಲ್ಲಿ ಬರೆಯುವುದಕ್ಕೆಂದೇ ಮೀಸಲಾಗಿರಿಸಿದ್ದು ಚಾರಿತ್ರಿಕ ಸಂಗತಿ. ಅವರು ಕನ್ನಡದಲ್ಲಿ ಬರೆಯುವವರೆಗೂ ಕನ್ನಡಿಗರನೇಕರಿಗೆ ಅವರ ಪರಿಚಯವೇ ಇಲ್ಲದಿದ್ದದ್ದು ಸೋಜಿಗದ ಸಂಗತಿ.

ನನ್ನ ಸೀಮಿತ ಓದಿನ ಮಟ್ಟಿಗೆ ಅವರು ಕನ್ನಡದಲ್ಲಿ ರಚಿಸಿದ ಕೃತಿಗಳಲ್ಲಿ ‘ಹಳಗನ್ನಡ’ ಕೃತಿ ಕನ್ನಡದಲ್ಲಿ ಯಾವುದೇ ಕ್ಷೇತ್ರ ಅಥವಾ ಪ್ರಕಾರದಲ್ಲಿ ಬಂದಿರುವ ಕೃತಿಗಳಲ್ಲೇ ಸಾರ್ವಕಾಲಿಕ ಶ್ರೇಷ್ಠ ಕೃತಿಗಳಲ್ಲಿ ಒಂದಾಗಿ ನಿಲ್ಲುತ್ತದೆ. ಹಾಗೆಯೇ, ಕನ್ನಡ ಸಾಹಿತ್ಯ ಚರಿತ್ರೆ ಕಟ್ಟುವುದಕ್ಕೆ ಬಹುದೊಡ್ಡ ಮಾದರಿಯಾಗಿ ಕೂಡ. ಶೆಟ್ಟರ್ ಇಂದು ಕನ್ನಡಕ್ಕೆ ಮುಖ್ಯರಾಗುವುದು ವಿದ್ವತ್ತಿಗೆ ಮಾತ್ರವಲ್ಲ, ತಮ್ಮ ಕೃತಿಗಳಲ್ಲಿ ಎತ್ತಿ ಹಿಡಿದ ಸೆಕ್ಯುಲರ್ ಮನೋಧರ್ಮಕ್ಕೂ ಕೂಡ. ಶಾಸನಗಳ ಅಧ್ಯಯನದ ಮೂಲಕ ಶಾಸನದಷ್ಟೇ ಅಚ್ಚಳಿಯದೆ ಉಳಿಯಲಿರುವ ಇಂತಹ ಅಪ್ರತಿಮ ಚರಿತ್ರೆಕಾರನಿಗೆ ಕೊನೆಗೂ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಕಕ್ಷತೆಯ ಗೌರವ ನೀಡದಿರುವುದು ಅವಮಾನದ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...