Homeಮುಖಪುಟಷ. ಶೆಟ್ಟರ್ ಒಂದು ನೆನಪು

ಷ. ಶೆಟ್ಟರ್ ಒಂದು ನೆನಪು

- Advertisement -
- Advertisement -

ಪ್ರೊಫೆಸರ್ ಷಡಕ್ಷರ ಶೆಟ್ಟರ್(1935-2020) ಅವರಿಗೆ ನನ್ನನ್ನು ಪರಿಚಯಿಸಿದ್ದು ಅಭಿನವದ ರವಿಕುಮಾರ್. 2015ರ ಬೇಸಗೆಯಲ್ಲಿ NIAS ನಲ್ಲಿ ಅವರನ್ನು ಕಂಡು ‘ಹಳಗನ್ನಡ: ಲಿಪಿ, ಲಿಪಿಕಾರ, ಲಿಪಿ ವ್ಯವಸಾಯ’(2012) ಕೃತಿಗೆ ಹಸ್ತಾಕ್ಷರ ಪಡೆದಿದ್ದೆ. ಮುಂದೊಂದು ದಿನ ಅವರೊಂದಿಗೆ ಕೆಲಸ ಮಾಡುವ ಅವಕಾಶ ಒದಗಿಬರುವುದೆಂಬ ಕಲ್ಪನೆ ಕೂಡ ಇರಲಿಲ್ಲ. ನಾನು 2017ರಲ್ಲಿ ಆಕ್ಸ್‍ಫರ್ಡ್ ಯೂನಿವರ್ಸಿಟಿ ಪ್ರೆಸ್‍ನ ಸಂಪಾದಕ ಹುದ್ದೆ ತೊರೆದು ಮೈಸೂರಿಗೆ ಬಂದುಬಿಟ್ಟೆ. ಆಗ 2017ರ ನವೆಂಬರ್‍ನಲ್ಲಿ ಮತ್ತೆ ರವಿಕುಮಾರರಿಂದಾಗಿ ಶೆಟ್ಟರ್ ಅವರ ಸಂಪರ್ಕಕ್ಕೆ ಬಂದ ನಾನು, 2018ರ ಜನವರಿಯಿಂದ ಅವರ ವಚನಾನುವಾದ ಯೋಜನೆಯಲ್ಲಿ ಕೆಲಸ ಮಾಡಲು ಅರಂಭಿಸಿದೆ. ಬೆಂಗಳೂರಿನಲ್ಲಿ ಅವರ ಕಚೇರಿಯಲ್ಲೇ ಉಳಿದುಕೊಂಡಿದ್ದರಿಂದಾಗಿ ಅವರೊಂದಿಗೆ ಹತ್ತಿರದಿಂದ ಒಡನಾಡುವ ಅವಕಾಶ ಒದಗಿಬಂತು. ಆಗಲೇ ಅವರ ‘ಪ್ರಾಕೃತ ಜಗದ್ವಲಯ:ಪ್ರಾಕೃತ-ಕನ್ನಡ-ಸಂಸ್ಕೃತ ಭಾಷೆಗಳ ಅನುಸಂಧಾನ’ (2018) ಕೃತಿಗೆ ಹಿನ್ನುಡಿ ಬರೆದದ್ದು. ಕೆ.ವಿ. ತಿರುಮಲೇಶ್ ಮುನ್ನುಡಿ ಬರೆದಿದ್ದರು.

ಅವರ ಆಫೀಸನ್ನು ನೋಡಿಕೊಳ್ಳುತ್ತಿದ್ದೆನಾದ್ದರಿಂದ ಅವರು ಬರೆದಿದ್ದೆಲ್ಲವನ್ನೂ ಓದುವ, ಅವರೊಂದಿಗೆ ಚರ್ಚಿಸುವ ಸುಯೋಗ ನನ್ನದಾಗಿತ್ತು. ಎಂಬತ್ತು ದಾಟಿದ್ದರೂ ಅವರಷ್ಟು ತದೇಕಚಿತ್ತರಾಗಿ ದಿನಕ್ಕೆ ಕಡಿಮೆಯೆಂದರೂ ಹತ್ತು ಹನ್ನೆರಡು ಗಂಟೆ ಕೆಲಸ ಮಾಡುವ ವ್ಯಕ್ತಿಯನ್ನು ನಾನು ಇದುವರೆಗೂ ಕಂಡಿಲ್ಲ. ಕೇಂಬ್ರಿಜ್‍ನಂತಹ ವಿಶ್ವದ ಪ್ರತಿಷ್ಠಿತ ಯೂನಿವರ್ಸಿಟಿಯಲ್ಲಿ ಶಿಕ್ಷಣ ಪಡೆದಿದ್ದರಿಂದಾಗಿಯೋ ಏನೋ ಸಂಶೋಧನಾ ಶಿಸ್ತು, ಶ್ರದ್ಧೆಗಳೇ ಮೈವೆತ್ತಂತಿದ್ದ ಅವರು ಬರವಣಿಗೆಯಷ್ಟೇ ಮಾತಿನಲ್ಲೂ ಶಿಸ್ತು ತೋರಿಸುತ್ತಿದ್ದರು. ಒಂದು ಸಲ ಬರೆದಿದ್ದನ್ನು ಹತ್ತು, ಹದಿನೈದು ಸಲ ಮತ್ತೆ ಮತ್ತೆ ಓದಿ ತಿದ್ದುವಷ್ಟು ಸಂಯಮ ಅವರಲ್ಲಿತ್ತು. ಕನ್ನಡದಲ್ಲಿ ಎಲ್ಲರನ್ನು ತಲುಪುವಂತಹ ಚರಿತ್ರೆ ಬರವಣಿಗೆಯ ಮಾದರಿಯೊಂದನ್ನು ರೂಪಿಸುವ ನಿಟ್ಟಿನಲ್ಲಿ ಅವರ ಪರಿಶ್ರಮ ಬಹಳ ಕಾಲ ಉಳಿಯಲಿದೆ. ಅಂತಹ ಪರಿಶ್ರಮದ ಫಲವಾಗಿಯೇ ಅವರ ಸಂಶೋಧನಾ ಕೃತಿಗಳು ಕೂಡ ಹಲವು ಮರುಮುದ್ರಣಗಳನ್ನು ಕಾಣಲು ಸಾಧ್ಯವಾಗಿದೆ. ಕೇವಲ ಬರೆಹದಲ್ಲಿ ಮಾತ್ರವಲ್ಲ, ಅಗಾಧ ಜ್ಞಾನದಿಂದಾಗಿ ಗಂಟಾನುಗಟ್ಟಲೇ ನಿರರ್ಗಳವಾಗಿ ಮಾತನಾಡುವ ಭಾಷಣ ಕಲೆಯನ್ನು ಕೂಡ ಅವರು ರೂಢಿಸಿಕೊಂಡಿದ್ದರು.

ಐದು ದಶಕಗಳಿಗೂ ಮೀರಿದ ವೃತ್ತಿಜೀವನದಲ್ಲಿ ಅವರು ದಶಕಕ್ಕೊಮ್ಮೆಯೆಂಬಂತೆ ಕಲಾಚರಿತ್ರೆ, ಪ್ರಾಕ್ತನ ಶಾಸ್ತ್ರ, ಧರ್ಮಗಳ ಚರಿತ್ರೆ, ಕ್ಲಾಸಿಕಲ್ ಭಾಷೆಗಳ ಚರಿತ್ರೆಗಳಲ್ಲಿ ತಮ್ಮ ಸಂಶೋಧನಾ ಕ್ಷೇತ್ರ ಹಾಗೂ ವಿಧಾನಗಳನ್ನು ಬದಲಾಯಿಸಿಕೊಳ್ಳುತ್ತ ಬಂದಿದ್ದು ಗಮನಾರ್ಹ. ಇಷ್ಟು ದೊಡ್ಡ ಹರಹನ್ನು ಹೊಂದಿದ ಚರಿತ್ರೆಕಾರ ಕನ್ನಡದಲ್ಲಿ ಇದುವರೆಗೂ ಬಂದಿಲ್ಲವೆನ್ನುವುದು ಅತಿಶಯೋಕ್ತಿಯೇನಲ್ಲ. ಇಂಗ್ಲಿಷ್‍ನಲ್ಲಿ ಸಂಶೋಧನೆ ಹಾಗೂ ಬರೆಹ ಮಾಡಿ ದೇಶವಿದೇಶಗಳಲ್ಲಿ ಸಾಕಷ್ಟು ಮನ್ನಣೆ ಗಳಿಸಿದ್ದರೂ, ತಮ್ಮ ಕೊನೆಯ ಒಂದು ದಶಕವನ್ನು ಕನ್ನಡದಲ್ಲಿ ಬರೆಯುವುದಕ್ಕೆಂದೇ ಮೀಸಲಾಗಿರಿಸಿದ್ದು ಚಾರಿತ್ರಿಕ ಸಂಗತಿ. ಅವರು ಕನ್ನಡದಲ್ಲಿ ಬರೆಯುವವರೆಗೂ ಕನ್ನಡಿಗರನೇಕರಿಗೆ ಅವರ ಪರಿಚಯವೇ ಇಲ್ಲದಿದ್ದದ್ದು ಸೋಜಿಗದ ಸಂಗತಿ.

ನನ್ನ ಸೀಮಿತ ಓದಿನ ಮಟ್ಟಿಗೆ ಅವರು ಕನ್ನಡದಲ್ಲಿ ರಚಿಸಿದ ಕೃತಿಗಳಲ್ಲಿ ‘ಹಳಗನ್ನಡ’ ಕೃತಿ ಕನ್ನಡದಲ್ಲಿ ಯಾವುದೇ ಕ್ಷೇತ್ರ ಅಥವಾ ಪ್ರಕಾರದಲ್ಲಿ ಬಂದಿರುವ ಕೃತಿಗಳಲ್ಲೇ ಸಾರ್ವಕಾಲಿಕ ಶ್ರೇಷ್ಠ ಕೃತಿಗಳಲ್ಲಿ ಒಂದಾಗಿ ನಿಲ್ಲುತ್ತದೆ. ಹಾಗೆಯೇ, ಕನ್ನಡ ಸಾಹಿತ್ಯ ಚರಿತ್ರೆ ಕಟ್ಟುವುದಕ್ಕೆ ಬಹುದೊಡ್ಡ ಮಾದರಿಯಾಗಿ ಕೂಡ. ಶೆಟ್ಟರ್ ಇಂದು ಕನ್ನಡಕ್ಕೆ ಮುಖ್ಯರಾಗುವುದು ವಿದ್ವತ್ತಿಗೆ ಮಾತ್ರವಲ್ಲ, ತಮ್ಮ ಕೃತಿಗಳಲ್ಲಿ ಎತ್ತಿ ಹಿಡಿದ ಸೆಕ್ಯುಲರ್ ಮನೋಧರ್ಮಕ್ಕೂ ಕೂಡ. ಶಾಸನಗಳ ಅಧ್ಯಯನದ ಮೂಲಕ ಶಾಸನದಷ್ಟೇ ಅಚ್ಚಳಿಯದೆ ಉಳಿಯಲಿರುವ ಇಂತಹ ಅಪ್ರತಿಮ ಚರಿತ್ರೆಕಾರನಿಗೆ ಕೊನೆಗೂ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಕಕ್ಷತೆಯ ಗೌರವ ನೀಡದಿರುವುದು ಅವಮಾನದ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...