Homeಮುಖಪುಟಷ. ಶೆಟ್ಟರ್ ಒಂದು ನೆನಪು

ಷ. ಶೆಟ್ಟರ್ ಒಂದು ನೆನಪು

- Advertisement -
- Advertisement -

ಪ್ರೊಫೆಸರ್ ಷಡಕ್ಷರ ಶೆಟ್ಟರ್(1935-2020) ಅವರಿಗೆ ನನ್ನನ್ನು ಪರಿಚಯಿಸಿದ್ದು ಅಭಿನವದ ರವಿಕುಮಾರ್. 2015ರ ಬೇಸಗೆಯಲ್ಲಿ NIAS ನಲ್ಲಿ ಅವರನ್ನು ಕಂಡು ‘ಹಳಗನ್ನಡ: ಲಿಪಿ, ಲಿಪಿಕಾರ, ಲಿಪಿ ವ್ಯವಸಾಯ’(2012) ಕೃತಿಗೆ ಹಸ್ತಾಕ್ಷರ ಪಡೆದಿದ್ದೆ. ಮುಂದೊಂದು ದಿನ ಅವರೊಂದಿಗೆ ಕೆಲಸ ಮಾಡುವ ಅವಕಾಶ ಒದಗಿಬರುವುದೆಂಬ ಕಲ್ಪನೆ ಕೂಡ ಇರಲಿಲ್ಲ. ನಾನು 2017ರಲ್ಲಿ ಆಕ್ಸ್‍ಫರ್ಡ್ ಯೂನಿವರ್ಸಿಟಿ ಪ್ರೆಸ್‍ನ ಸಂಪಾದಕ ಹುದ್ದೆ ತೊರೆದು ಮೈಸೂರಿಗೆ ಬಂದುಬಿಟ್ಟೆ. ಆಗ 2017ರ ನವೆಂಬರ್‍ನಲ್ಲಿ ಮತ್ತೆ ರವಿಕುಮಾರರಿಂದಾಗಿ ಶೆಟ್ಟರ್ ಅವರ ಸಂಪರ್ಕಕ್ಕೆ ಬಂದ ನಾನು, 2018ರ ಜನವರಿಯಿಂದ ಅವರ ವಚನಾನುವಾದ ಯೋಜನೆಯಲ್ಲಿ ಕೆಲಸ ಮಾಡಲು ಅರಂಭಿಸಿದೆ. ಬೆಂಗಳೂರಿನಲ್ಲಿ ಅವರ ಕಚೇರಿಯಲ್ಲೇ ಉಳಿದುಕೊಂಡಿದ್ದರಿಂದಾಗಿ ಅವರೊಂದಿಗೆ ಹತ್ತಿರದಿಂದ ಒಡನಾಡುವ ಅವಕಾಶ ಒದಗಿಬಂತು. ಆಗಲೇ ಅವರ ‘ಪ್ರಾಕೃತ ಜಗದ್ವಲಯ:ಪ್ರಾಕೃತ-ಕನ್ನಡ-ಸಂಸ್ಕೃತ ಭಾಷೆಗಳ ಅನುಸಂಧಾನ’ (2018) ಕೃತಿಗೆ ಹಿನ್ನುಡಿ ಬರೆದದ್ದು. ಕೆ.ವಿ. ತಿರುಮಲೇಶ್ ಮುನ್ನುಡಿ ಬರೆದಿದ್ದರು.

ಅವರ ಆಫೀಸನ್ನು ನೋಡಿಕೊಳ್ಳುತ್ತಿದ್ದೆನಾದ್ದರಿಂದ ಅವರು ಬರೆದಿದ್ದೆಲ್ಲವನ್ನೂ ಓದುವ, ಅವರೊಂದಿಗೆ ಚರ್ಚಿಸುವ ಸುಯೋಗ ನನ್ನದಾಗಿತ್ತು. ಎಂಬತ್ತು ದಾಟಿದ್ದರೂ ಅವರಷ್ಟು ತದೇಕಚಿತ್ತರಾಗಿ ದಿನಕ್ಕೆ ಕಡಿಮೆಯೆಂದರೂ ಹತ್ತು ಹನ್ನೆರಡು ಗಂಟೆ ಕೆಲಸ ಮಾಡುವ ವ್ಯಕ್ತಿಯನ್ನು ನಾನು ಇದುವರೆಗೂ ಕಂಡಿಲ್ಲ. ಕೇಂಬ್ರಿಜ್‍ನಂತಹ ವಿಶ್ವದ ಪ್ರತಿಷ್ಠಿತ ಯೂನಿವರ್ಸಿಟಿಯಲ್ಲಿ ಶಿಕ್ಷಣ ಪಡೆದಿದ್ದರಿಂದಾಗಿಯೋ ಏನೋ ಸಂಶೋಧನಾ ಶಿಸ್ತು, ಶ್ರದ್ಧೆಗಳೇ ಮೈವೆತ್ತಂತಿದ್ದ ಅವರು ಬರವಣಿಗೆಯಷ್ಟೇ ಮಾತಿನಲ್ಲೂ ಶಿಸ್ತು ತೋರಿಸುತ್ತಿದ್ದರು. ಒಂದು ಸಲ ಬರೆದಿದ್ದನ್ನು ಹತ್ತು, ಹದಿನೈದು ಸಲ ಮತ್ತೆ ಮತ್ತೆ ಓದಿ ತಿದ್ದುವಷ್ಟು ಸಂಯಮ ಅವರಲ್ಲಿತ್ತು. ಕನ್ನಡದಲ್ಲಿ ಎಲ್ಲರನ್ನು ತಲುಪುವಂತಹ ಚರಿತ್ರೆ ಬರವಣಿಗೆಯ ಮಾದರಿಯೊಂದನ್ನು ರೂಪಿಸುವ ನಿಟ್ಟಿನಲ್ಲಿ ಅವರ ಪರಿಶ್ರಮ ಬಹಳ ಕಾಲ ಉಳಿಯಲಿದೆ. ಅಂತಹ ಪರಿಶ್ರಮದ ಫಲವಾಗಿಯೇ ಅವರ ಸಂಶೋಧನಾ ಕೃತಿಗಳು ಕೂಡ ಹಲವು ಮರುಮುದ್ರಣಗಳನ್ನು ಕಾಣಲು ಸಾಧ್ಯವಾಗಿದೆ. ಕೇವಲ ಬರೆಹದಲ್ಲಿ ಮಾತ್ರವಲ್ಲ, ಅಗಾಧ ಜ್ಞಾನದಿಂದಾಗಿ ಗಂಟಾನುಗಟ್ಟಲೇ ನಿರರ್ಗಳವಾಗಿ ಮಾತನಾಡುವ ಭಾಷಣ ಕಲೆಯನ್ನು ಕೂಡ ಅವರು ರೂಢಿಸಿಕೊಂಡಿದ್ದರು.

ಐದು ದಶಕಗಳಿಗೂ ಮೀರಿದ ವೃತ್ತಿಜೀವನದಲ್ಲಿ ಅವರು ದಶಕಕ್ಕೊಮ್ಮೆಯೆಂಬಂತೆ ಕಲಾಚರಿತ್ರೆ, ಪ್ರಾಕ್ತನ ಶಾಸ್ತ್ರ, ಧರ್ಮಗಳ ಚರಿತ್ರೆ, ಕ್ಲಾಸಿಕಲ್ ಭಾಷೆಗಳ ಚರಿತ್ರೆಗಳಲ್ಲಿ ತಮ್ಮ ಸಂಶೋಧನಾ ಕ್ಷೇತ್ರ ಹಾಗೂ ವಿಧಾನಗಳನ್ನು ಬದಲಾಯಿಸಿಕೊಳ್ಳುತ್ತ ಬಂದಿದ್ದು ಗಮನಾರ್ಹ. ಇಷ್ಟು ದೊಡ್ಡ ಹರಹನ್ನು ಹೊಂದಿದ ಚರಿತ್ರೆಕಾರ ಕನ್ನಡದಲ್ಲಿ ಇದುವರೆಗೂ ಬಂದಿಲ್ಲವೆನ್ನುವುದು ಅತಿಶಯೋಕ್ತಿಯೇನಲ್ಲ. ಇಂಗ್ಲಿಷ್‍ನಲ್ಲಿ ಸಂಶೋಧನೆ ಹಾಗೂ ಬರೆಹ ಮಾಡಿ ದೇಶವಿದೇಶಗಳಲ್ಲಿ ಸಾಕಷ್ಟು ಮನ್ನಣೆ ಗಳಿಸಿದ್ದರೂ, ತಮ್ಮ ಕೊನೆಯ ಒಂದು ದಶಕವನ್ನು ಕನ್ನಡದಲ್ಲಿ ಬರೆಯುವುದಕ್ಕೆಂದೇ ಮೀಸಲಾಗಿರಿಸಿದ್ದು ಚಾರಿತ್ರಿಕ ಸಂಗತಿ. ಅವರು ಕನ್ನಡದಲ್ಲಿ ಬರೆಯುವವರೆಗೂ ಕನ್ನಡಿಗರನೇಕರಿಗೆ ಅವರ ಪರಿಚಯವೇ ಇಲ್ಲದಿದ್ದದ್ದು ಸೋಜಿಗದ ಸಂಗತಿ.

ನನ್ನ ಸೀಮಿತ ಓದಿನ ಮಟ್ಟಿಗೆ ಅವರು ಕನ್ನಡದಲ್ಲಿ ರಚಿಸಿದ ಕೃತಿಗಳಲ್ಲಿ ‘ಹಳಗನ್ನಡ’ ಕೃತಿ ಕನ್ನಡದಲ್ಲಿ ಯಾವುದೇ ಕ್ಷೇತ್ರ ಅಥವಾ ಪ್ರಕಾರದಲ್ಲಿ ಬಂದಿರುವ ಕೃತಿಗಳಲ್ಲೇ ಸಾರ್ವಕಾಲಿಕ ಶ್ರೇಷ್ಠ ಕೃತಿಗಳಲ್ಲಿ ಒಂದಾಗಿ ನಿಲ್ಲುತ್ತದೆ. ಹಾಗೆಯೇ, ಕನ್ನಡ ಸಾಹಿತ್ಯ ಚರಿತ್ರೆ ಕಟ್ಟುವುದಕ್ಕೆ ಬಹುದೊಡ್ಡ ಮಾದರಿಯಾಗಿ ಕೂಡ. ಶೆಟ್ಟರ್ ಇಂದು ಕನ್ನಡಕ್ಕೆ ಮುಖ್ಯರಾಗುವುದು ವಿದ್ವತ್ತಿಗೆ ಮಾತ್ರವಲ್ಲ, ತಮ್ಮ ಕೃತಿಗಳಲ್ಲಿ ಎತ್ತಿ ಹಿಡಿದ ಸೆಕ್ಯುಲರ್ ಮನೋಧರ್ಮಕ್ಕೂ ಕೂಡ. ಶಾಸನಗಳ ಅಧ್ಯಯನದ ಮೂಲಕ ಶಾಸನದಷ್ಟೇ ಅಚ್ಚಳಿಯದೆ ಉಳಿಯಲಿರುವ ಇಂತಹ ಅಪ್ರತಿಮ ಚರಿತ್ರೆಕಾರನಿಗೆ ಕೊನೆಗೂ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಕಕ್ಷತೆಯ ಗೌರವ ನೀಡದಿರುವುದು ಅವಮಾನದ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...