Homeಮುಖಪುಟಷ. ಶೆಟ್ಟರ್ ಒಂದು ನೆನಪು

ಷ. ಶೆಟ್ಟರ್ ಒಂದು ನೆನಪು

- Advertisement -
- Advertisement -

ಪ್ರೊಫೆಸರ್ ಷಡಕ್ಷರ ಶೆಟ್ಟರ್(1935-2020) ಅವರಿಗೆ ನನ್ನನ್ನು ಪರಿಚಯಿಸಿದ್ದು ಅಭಿನವದ ರವಿಕುಮಾರ್. 2015ರ ಬೇಸಗೆಯಲ್ಲಿ NIAS ನಲ್ಲಿ ಅವರನ್ನು ಕಂಡು ‘ಹಳಗನ್ನಡ: ಲಿಪಿ, ಲಿಪಿಕಾರ, ಲಿಪಿ ವ್ಯವಸಾಯ’(2012) ಕೃತಿಗೆ ಹಸ್ತಾಕ್ಷರ ಪಡೆದಿದ್ದೆ. ಮುಂದೊಂದು ದಿನ ಅವರೊಂದಿಗೆ ಕೆಲಸ ಮಾಡುವ ಅವಕಾಶ ಒದಗಿಬರುವುದೆಂಬ ಕಲ್ಪನೆ ಕೂಡ ಇರಲಿಲ್ಲ. ನಾನು 2017ರಲ್ಲಿ ಆಕ್ಸ್‍ಫರ್ಡ್ ಯೂನಿವರ್ಸಿಟಿ ಪ್ರೆಸ್‍ನ ಸಂಪಾದಕ ಹುದ್ದೆ ತೊರೆದು ಮೈಸೂರಿಗೆ ಬಂದುಬಿಟ್ಟೆ. ಆಗ 2017ರ ನವೆಂಬರ್‍ನಲ್ಲಿ ಮತ್ತೆ ರವಿಕುಮಾರರಿಂದಾಗಿ ಶೆಟ್ಟರ್ ಅವರ ಸಂಪರ್ಕಕ್ಕೆ ಬಂದ ನಾನು, 2018ರ ಜನವರಿಯಿಂದ ಅವರ ವಚನಾನುವಾದ ಯೋಜನೆಯಲ್ಲಿ ಕೆಲಸ ಮಾಡಲು ಅರಂಭಿಸಿದೆ. ಬೆಂಗಳೂರಿನಲ್ಲಿ ಅವರ ಕಚೇರಿಯಲ್ಲೇ ಉಳಿದುಕೊಂಡಿದ್ದರಿಂದಾಗಿ ಅವರೊಂದಿಗೆ ಹತ್ತಿರದಿಂದ ಒಡನಾಡುವ ಅವಕಾಶ ಒದಗಿಬಂತು. ಆಗಲೇ ಅವರ ‘ಪ್ರಾಕೃತ ಜಗದ್ವಲಯ:ಪ್ರಾಕೃತ-ಕನ್ನಡ-ಸಂಸ್ಕೃತ ಭಾಷೆಗಳ ಅನುಸಂಧಾನ’ (2018) ಕೃತಿಗೆ ಹಿನ್ನುಡಿ ಬರೆದದ್ದು. ಕೆ.ವಿ. ತಿರುಮಲೇಶ್ ಮುನ್ನುಡಿ ಬರೆದಿದ್ದರು.

ಅವರ ಆಫೀಸನ್ನು ನೋಡಿಕೊಳ್ಳುತ್ತಿದ್ದೆನಾದ್ದರಿಂದ ಅವರು ಬರೆದಿದ್ದೆಲ್ಲವನ್ನೂ ಓದುವ, ಅವರೊಂದಿಗೆ ಚರ್ಚಿಸುವ ಸುಯೋಗ ನನ್ನದಾಗಿತ್ತು. ಎಂಬತ್ತು ದಾಟಿದ್ದರೂ ಅವರಷ್ಟು ತದೇಕಚಿತ್ತರಾಗಿ ದಿನಕ್ಕೆ ಕಡಿಮೆಯೆಂದರೂ ಹತ್ತು ಹನ್ನೆರಡು ಗಂಟೆ ಕೆಲಸ ಮಾಡುವ ವ್ಯಕ್ತಿಯನ್ನು ನಾನು ಇದುವರೆಗೂ ಕಂಡಿಲ್ಲ. ಕೇಂಬ್ರಿಜ್‍ನಂತಹ ವಿಶ್ವದ ಪ್ರತಿಷ್ಠಿತ ಯೂನಿವರ್ಸಿಟಿಯಲ್ಲಿ ಶಿಕ್ಷಣ ಪಡೆದಿದ್ದರಿಂದಾಗಿಯೋ ಏನೋ ಸಂಶೋಧನಾ ಶಿಸ್ತು, ಶ್ರದ್ಧೆಗಳೇ ಮೈವೆತ್ತಂತಿದ್ದ ಅವರು ಬರವಣಿಗೆಯಷ್ಟೇ ಮಾತಿನಲ್ಲೂ ಶಿಸ್ತು ತೋರಿಸುತ್ತಿದ್ದರು. ಒಂದು ಸಲ ಬರೆದಿದ್ದನ್ನು ಹತ್ತು, ಹದಿನೈದು ಸಲ ಮತ್ತೆ ಮತ್ತೆ ಓದಿ ತಿದ್ದುವಷ್ಟು ಸಂಯಮ ಅವರಲ್ಲಿತ್ತು. ಕನ್ನಡದಲ್ಲಿ ಎಲ್ಲರನ್ನು ತಲುಪುವಂತಹ ಚರಿತ್ರೆ ಬರವಣಿಗೆಯ ಮಾದರಿಯೊಂದನ್ನು ರೂಪಿಸುವ ನಿಟ್ಟಿನಲ್ಲಿ ಅವರ ಪರಿಶ್ರಮ ಬಹಳ ಕಾಲ ಉಳಿಯಲಿದೆ. ಅಂತಹ ಪರಿಶ್ರಮದ ಫಲವಾಗಿಯೇ ಅವರ ಸಂಶೋಧನಾ ಕೃತಿಗಳು ಕೂಡ ಹಲವು ಮರುಮುದ್ರಣಗಳನ್ನು ಕಾಣಲು ಸಾಧ್ಯವಾಗಿದೆ. ಕೇವಲ ಬರೆಹದಲ್ಲಿ ಮಾತ್ರವಲ್ಲ, ಅಗಾಧ ಜ್ಞಾನದಿಂದಾಗಿ ಗಂಟಾನುಗಟ್ಟಲೇ ನಿರರ್ಗಳವಾಗಿ ಮಾತನಾಡುವ ಭಾಷಣ ಕಲೆಯನ್ನು ಕೂಡ ಅವರು ರೂಢಿಸಿಕೊಂಡಿದ್ದರು.

ಐದು ದಶಕಗಳಿಗೂ ಮೀರಿದ ವೃತ್ತಿಜೀವನದಲ್ಲಿ ಅವರು ದಶಕಕ್ಕೊಮ್ಮೆಯೆಂಬಂತೆ ಕಲಾಚರಿತ್ರೆ, ಪ್ರಾಕ್ತನ ಶಾಸ್ತ್ರ, ಧರ್ಮಗಳ ಚರಿತ್ರೆ, ಕ್ಲಾಸಿಕಲ್ ಭಾಷೆಗಳ ಚರಿತ್ರೆಗಳಲ್ಲಿ ತಮ್ಮ ಸಂಶೋಧನಾ ಕ್ಷೇತ್ರ ಹಾಗೂ ವಿಧಾನಗಳನ್ನು ಬದಲಾಯಿಸಿಕೊಳ್ಳುತ್ತ ಬಂದಿದ್ದು ಗಮನಾರ್ಹ. ಇಷ್ಟು ದೊಡ್ಡ ಹರಹನ್ನು ಹೊಂದಿದ ಚರಿತ್ರೆಕಾರ ಕನ್ನಡದಲ್ಲಿ ಇದುವರೆಗೂ ಬಂದಿಲ್ಲವೆನ್ನುವುದು ಅತಿಶಯೋಕ್ತಿಯೇನಲ್ಲ. ಇಂಗ್ಲಿಷ್‍ನಲ್ಲಿ ಸಂಶೋಧನೆ ಹಾಗೂ ಬರೆಹ ಮಾಡಿ ದೇಶವಿದೇಶಗಳಲ್ಲಿ ಸಾಕಷ್ಟು ಮನ್ನಣೆ ಗಳಿಸಿದ್ದರೂ, ತಮ್ಮ ಕೊನೆಯ ಒಂದು ದಶಕವನ್ನು ಕನ್ನಡದಲ್ಲಿ ಬರೆಯುವುದಕ್ಕೆಂದೇ ಮೀಸಲಾಗಿರಿಸಿದ್ದು ಚಾರಿತ್ರಿಕ ಸಂಗತಿ. ಅವರು ಕನ್ನಡದಲ್ಲಿ ಬರೆಯುವವರೆಗೂ ಕನ್ನಡಿಗರನೇಕರಿಗೆ ಅವರ ಪರಿಚಯವೇ ಇಲ್ಲದಿದ್ದದ್ದು ಸೋಜಿಗದ ಸಂಗತಿ.

ನನ್ನ ಸೀಮಿತ ಓದಿನ ಮಟ್ಟಿಗೆ ಅವರು ಕನ್ನಡದಲ್ಲಿ ರಚಿಸಿದ ಕೃತಿಗಳಲ್ಲಿ ‘ಹಳಗನ್ನಡ’ ಕೃತಿ ಕನ್ನಡದಲ್ಲಿ ಯಾವುದೇ ಕ್ಷೇತ್ರ ಅಥವಾ ಪ್ರಕಾರದಲ್ಲಿ ಬಂದಿರುವ ಕೃತಿಗಳಲ್ಲೇ ಸಾರ್ವಕಾಲಿಕ ಶ್ರೇಷ್ಠ ಕೃತಿಗಳಲ್ಲಿ ಒಂದಾಗಿ ನಿಲ್ಲುತ್ತದೆ. ಹಾಗೆಯೇ, ಕನ್ನಡ ಸಾಹಿತ್ಯ ಚರಿತ್ರೆ ಕಟ್ಟುವುದಕ್ಕೆ ಬಹುದೊಡ್ಡ ಮಾದರಿಯಾಗಿ ಕೂಡ. ಶೆಟ್ಟರ್ ಇಂದು ಕನ್ನಡಕ್ಕೆ ಮುಖ್ಯರಾಗುವುದು ವಿದ್ವತ್ತಿಗೆ ಮಾತ್ರವಲ್ಲ, ತಮ್ಮ ಕೃತಿಗಳಲ್ಲಿ ಎತ್ತಿ ಹಿಡಿದ ಸೆಕ್ಯುಲರ್ ಮನೋಧರ್ಮಕ್ಕೂ ಕೂಡ. ಶಾಸನಗಳ ಅಧ್ಯಯನದ ಮೂಲಕ ಶಾಸನದಷ್ಟೇ ಅಚ್ಚಳಿಯದೆ ಉಳಿಯಲಿರುವ ಇಂತಹ ಅಪ್ರತಿಮ ಚರಿತ್ರೆಕಾರನಿಗೆ ಕೊನೆಗೂ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಕಕ್ಷತೆಯ ಗೌರವ ನೀಡದಿರುವುದು ಅವಮಾನದ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...