Homeಮುಖಪುಟಷ. ಶೆಟ್ಟರ್ ಒಂದು ನೆನಪು

ಷ. ಶೆಟ್ಟರ್ ಒಂದು ನೆನಪು

- Advertisement -
- Advertisement -

ಪ್ರೊಫೆಸರ್ ಷಡಕ್ಷರ ಶೆಟ್ಟರ್(1935-2020) ಅವರಿಗೆ ನನ್ನನ್ನು ಪರಿಚಯಿಸಿದ್ದು ಅಭಿನವದ ರವಿಕುಮಾರ್. 2015ರ ಬೇಸಗೆಯಲ್ಲಿ NIAS ನಲ್ಲಿ ಅವರನ್ನು ಕಂಡು ‘ಹಳಗನ್ನಡ: ಲಿಪಿ, ಲಿಪಿಕಾರ, ಲಿಪಿ ವ್ಯವಸಾಯ’(2012) ಕೃತಿಗೆ ಹಸ್ತಾಕ್ಷರ ಪಡೆದಿದ್ದೆ. ಮುಂದೊಂದು ದಿನ ಅವರೊಂದಿಗೆ ಕೆಲಸ ಮಾಡುವ ಅವಕಾಶ ಒದಗಿಬರುವುದೆಂಬ ಕಲ್ಪನೆ ಕೂಡ ಇರಲಿಲ್ಲ. ನಾನು 2017ರಲ್ಲಿ ಆಕ್ಸ್‍ಫರ್ಡ್ ಯೂನಿವರ್ಸಿಟಿ ಪ್ರೆಸ್‍ನ ಸಂಪಾದಕ ಹುದ್ದೆ ತೊರೆದು ಮೈಸೂರಿಗೆ ಬಂದುಬಿಟ್ಟೆ. ಆಗ 2017ರ ನವೆಂಬರ್‍ನಲ್ಲಿ ಮತ್ತೆ ರವಿಕುಮಾರರಿಂದಾಗಿ ಶೆಟ್ಟರ್ ಅವರ ಸಂಪರ್ಕಕ್ಕೆ ಬಂದ ನಾನು, 2018ರ ಜನವರಿಯಿಂದ ಅವರ ವಚನಾನುವಾದ ಯೋಜನೆಯಲ್ಲಿ ಕೆಲಸ ಮಾಡಲು ಅರಂಭಿಸಿದೆ. ಬೆಂಗಳೂರಿನಲ್ಲಿ ಅವರ ಕಚೇರಿಯಲ್ಲೇ ಉಳಿದುಕೊಂಡಿದ್ದರಿಂದಾಗಿ ಅವರೊಂದಿಗೆ ಹತ್ತಿರದಿಂದ ಒಡನಾಡುವ ಅವಕಾಶ ಒದಗಿಬಂತು. ಆಗಲೇ ಅವರ ‘ಪ್ರಾಕೃತ ಜಗದ್ವಲಯ:ಪ್ರಾಕೃತ-ಕನ್ನಡ-ಸಂಸ್ಕೃತ ಭಾಷೆಗಳ ಅನುಸಂಧಾನ’ (2018) ಕೃತಿಗೆ ಹಿನ್ನುಡಿ ಬರೆದದ್ದು. ಕೆ.ವಿ. ತಿರುಮಲೇಶ್ ಮುನ್ನುಡಿ ಬರೆದಿದ್ದರು.

ಅವರ ಆಫೀಸನ್ನು ನೋಡಿಕೊಳ್ಳುತ್ತಿದ್ದೆನಾದ್ದರಿಂದ ಅವರು ಬರೆದಿದ್ದೆಲ್ಲವನ್ನೂ ಓದುವ, ಅವರೊಂದಿಗೆ ಚರ್ಚಿಸುವ ಸುಯೋಗ ನನ್ನದಾಗಿತ್ತು. ಎಂಬತ್ತು ದಾಟಿದ್ದರೂ ಅವರಷ್ಟು ತದೇಕಚಿತ್ತರಾಗಿ ದಿನಕ್ಕೆ ಕಡಿಮೆಯೆಂದರೂ ಹತ್ತು ಹನ್ನೆರಡು ಗಂಟೆ ಕೆಲಸ ಮಾಡುವ ವ್ಯಕ್ತಿಯನ್ನು ನಾನು ಇದುವರೆಗೂ ಕಂಡಿಲ್ಲ. ಕೇಂಬ್ರಿಜ್‍ನಂತಹ ವಿಶ್ವದ ಪ್ರತಿಷ್ಠಿತ ಯೂನಿವರ್ಸಿಟಿಯಲ್ಲಿ ಶಿಕ್ಷಣ ಪಡೆದಿದ್ದರಿಂದಾಗಿಯೋ ಏನೋ ಸಂಶೋಧನಾ ಶಿಸ್ತು, ಶ್ರದ್ಧೆಗಳೇ ಮೈವೆತ್ತಂತಿದ್ದ ಅವರು ಬರವಣಿಗೆಯಷ್ಟೇ ಮಾತಿನಲ್ಲೂ ಶಿಸ್ತು ತೋರಿಸುತ್ತಿದ್ದರು. ಒಂದು ಸಲ ಬರೆದಿದ್ದನ್ನು ಹತ್ತು, ಹದಿನೈದು ಸಲ ಮತ್ತೆ ಮತ್ತೆ ಓದಿ ತಿದ್ದುವಷ್ಟು ಸಂಯಮ ಅವರಲ್ಲಿತ್ತು. ಕನ್ನಡದಲ್ಲಿ ಎಲ್ಲರನ್ನು ತಲುಪುವಂತಹ ಚರಿತ್ರೆ ಬರವಣಿಗೆಯ ಮಾದರಿಯೊಂದನ್ನು ರೂಪಿಸುವ ನಿಟ್ಟಿನಲ್ಲಿ ಅವರ ಪರಿಶ್ರಮ ಬಹಳ ಕಾಲ ಉಳಿಯಲಿದೆ. ಅಂತಹ ಪರಿಶ್ರಮದ ಫಲವಾಗಿಯೇ ಅವರ ಸಂಶೋಧನಾ ಕೃತಿಗಳು ಕೂಡ ಹಲವು ಮರುಮುದ್ರಣಗಳನ್ನು ಕಾಣಲು ಸಾಧ್ಯವಾಗಿದೆ. ಕೇವಲ ಬರೆಹದಲ್ಲಿ ಮಾತ್ರವಲ್ಲ, ಅಗಾಧ ಜ್ಞಾನದಿಂದಾಗಿ ಗಂಟಾನುಗಟ್ಟಲೇ ನಿರರ್ಗಳವಾಗಿ ಮಾತನಾಡುವ ಭಾಷಣ ಕಲೆಯನ್ನು ಕೂಡ ಅವರು ರೂಢಿಸಿಕೊಂಡಿದ್ದರು.

ಐದು ದಶಕಗಳಿಗೂ ಮೀರಿದ ವೃತ್ತಿಜೀವನದಲ್ಲಿ ಅವರು ದಶಕಕ್ಕೊಮ್ಮೆಯೆಂಬಂತೆ ಕಲಾಚರಿತ್ರೆ, ಪ್ರಾಕ್ತನ ಶಾಸ್ತ್ರ, ಧರ್ಮಗಳ ಚರಿತ್ರೆ, ಕ್ಲಾಸಿಕಲ್ ಭಾಷೆಗಳ ಚರಿತ್ರೆಗಳಲ್ಲಿ ತಮ್ಮ ಸಂಶೋಧನಾ ಕ್ಷೇತ್ರ ಹಾಗೂ ವಿಧಾನಗಳನ್ನು ಬದಲಾಯಿಸಿಕೊಳ್ಳುತ್ತ ಬಂದಿದ್ದು ಗಮನಾರ್ಹ. ಇಷ್ಟು ದೊಡ್ಡ ಹರಹನ್ನು ಹೊಂದಿದ ಚರಿತ್ರೆಕಾರ ಕನ್ನಡದಲ್ಲಿ ಇದುವರೆಗೂ ಬಂದಿಲ್ಲವೆನ್ನುವುದು ಅತಿಶಯೋಕ್ತಿಯೇನಲ್ಲ. ಇಂಗ್ಲಿಷ್‍ನಲ್ಲಿ ಸಂಶೋಧನೆ ಹಾಗೂ ಬರೆಹ ಮಾಡಿ ದೇಶವಿದೇಶಗಳಲ್ಲಿ ಸಾಕಷ್ಟು ಮನ್ನಣೆ ಗಳಿಸಿದ್ದರೂ, ತಮ್ಮ ಕೊನೆಯ ಒಂದು ದಶಕವನ್ನು ಕನ್ನಡದಲ್ಲಿ ಬರೆಯುವುದಕ್ಕೆಂದೇ ಮೀಸಲಾಗಿರಿಸಿದ್ದು ಚಾರಿತ್ರಿಕ ಸಂಗತಿ. ಅವರು ಕನ್ನಡದಲ್ಲಿ ಬರೆಯುವವರೆಗೂ ಕನ್ನಡಿಗರನೇಕರಿಗೆ ಅವರ ಪರಿಚಯವೇ ಇಲ್ಲದಿದ್ದದ್ದು ಸೋಜಿಗದ ಸಂಗತಿ.

ನನ್ನ ಸೀಮಿತ ಓದಿನ ಮಟ್ಟಿಗೆ ಅವರು ಕನ್ನಡದಲ್ಲಿ ರಚಿಸಿದ ಕೃತಿಗಳಲ್ಲಿ ‘ಹಳಗನ್ನಡ’ ಕೃತಿ ಕನ್ನಡದಲ್ಲಿ ಯಾವುದೇ ಕ್ಷೇತ್ರ ಅಥವಾ ಪ್ರಕಾರದಲ್ಲಿ ಬಂದಿರುವ ಕೃತಿಗಳಲ್ಲೇ ಸಾರ್ವಕಾಲಿಕ ಶ್ರೇಷ್ಠ ಕೃತಿಗಳಲ್ಲಿ ಒಂದಾಗಿ ನಿಲ್ಲುತ್ತದೆ. ಹಾಗೆಯೇ, ಕನ್ನಡ ಸಾಹಿತ್ಯ ಚರಿತ್ರೆ ಕಟ್ಟುವುದಕ್ಕೆ ಬಹುದೊಡ್ಡ ಮಾದರಿಯಾಗಿ ಕೂಡ. ಶೆಟ್ಟರ್ ಇಂದು ಕನ್ನಡಕ್ಕೆ ಮುಖ್ಯರಾಗುವುದು ವಿದ್ವತ್ತಿಗೆ ಮಾತ್ರವಲ್ಲ, ತಮ್ಮ ಕೃತಿಗಳಲ್ಲಿ ಎತ್ತಿ ಹಿಡಿದ ಸೆಕ್ಯುಲರ್ ಮನೋಧರ್ಮಕ್ಕೂ ಕೂಡ. ಶಾಸನಗಳ ಅಧ್ಯಯನದ ಮೂಲಕ ಶಾಸನದಷ್ಟೇ ಅಚ್ಚಳಿಯದೆ ಉಳಿಯಲಿರುವ ಇಂತಹ ಅಪ್ರತಿಮ ಚರಿತ್ರೆಕಾರನಿಗೆ ಕೊನೆಗೂ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಕಕ್ಷತೆಯ ಗೌರವ ನೀಡದಿರುವುದು ಅವಮಾನದ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....