Homeಮುಖಪುಟದೆಹಲಿ ಪೊಲೀಸರ ಕೈಗೆ ಲೋಹದ ಲಾಠಿ?: ಇದು ಯಾವುದರ ಸೂಚಕ?

ದೆಹಲಿ ಪೊಲೀಸರ ಕೈಗೆ ಲೋಹದ ಲಾಠಿ?: ಇದು ಯಾವುದರ ಸೂಚಕ?

- Advertisement -
- Advertisement -

ಲಾಠಿ ಹಿಡಿದ ದೆಹಲಿ ಪೊಲೀಸರೇ ಭಯಂಕರ. ಇನ್ನು ಈ ಚಿತ್ರದಲ್ಲಿರುವ ಆಯುಧವನ್ನು ಅವರ ಕೈಗೆ ಕೊಟ್ಟರೆ? ದೆಹಲಿ ಪೊಲೀಸ್ ಇಲಾಖೆ ಜನವಿಮುಖವಾಗುತ್ತಿರುವ ಲಕ್ಷಣವಿದು ಎಂಬ ಟೀಕೆಗಳು ವ್ಯಕ್ತವಾಗುತ್ತಿವೆ. ಇದೇ ಫೋಟೊವನ್ನು ಇಂಡಿಯಾ ಟುಡೇ ಸಹ ದೆಹಲಿ ಪೊಲೀಸರೆಂದು ವರದಿ ಮಾಡಿದೆ.

ಕತ್ತಿ ಹಿಡಿಯುವ ಗೂಂಡಾಗಳು ಎದುರಾದಾಗ ತಮ್ಮನ್ನು ರಕ್ಷಿಸಿಕೊಳ್ಳಲು ದೆಹಲಿ ಪೊಲೀಸರ ಕೈಗೆ ಹೊಸ ಅಸ್ತ್ರವೊಂದು ಬರಲಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಪೊಲೀಸ್ ಮೂಲಗಳು ಹಂಚಿಕೊಂಡ ಫೋಟೋವೊಂದರಲ್ಲಿ, ಪೊಲೀಸರ ಗುಂಪೊಂದು ರಾಷ್ಟ್ರ ರಾಜಧಾನಿಯಲ್ಲಿ ರಸ್ತೆಯ ಪಕ್ಕದಲ್ಲಿ ನಿಂತಿದ್ದು, ಅವರ ಮುಂಗೈ-ಮಣಿಕಟ್ಟಿನಿಂದ ಮೊಣಕೈಗೆ ಹೊದಿಸುವ ಲೋಹದ ಕೈಗವಸುಗಳಿವೆ.

ದೊಡ್ಡ ರಕ್ಷಣಾತ್ಮಕ ಹೊದಿಕೆ ಅಥವಾ ‘ಗಾರ್ಡ್’ ಹೊಂದಿರುವ ಲೋಹದ ಲಾಠಿಯನ್ನೂ ಅವರು ಹಿಡಿದಿದ್ದಾರೆ. ಎದುರಾಳಿಯ ಮೇಲೆ ಸ್ವಿಂಗ್ ಮಾಡುವಾಗ ಎರಡೂ ಮಣಿಕಟ್ಟುಗಳನ್ನು ರಕ್ಷಿಸಲು ಅನುಮತಿಸುವಷ್ಟು ದೊಡ್ಡದಾದ ಹಿಡಿಕೆಯೂ ಇದೆ.

ಈ ಆಯುಧಗಳ ವಿವರಗಳ ಬಗ್ಗೆ ದೆಹಲಿ ಪೊಲೀಸರಿಂದ ಇದುವರೆಗೆ ಯಾವುದೇ ಅಧಿಕೃತ ದೃಢೀಕರಣವಿಲ್ಲ.

ಕಳೆದ ವಾರ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನಾ ಸಂದರ್ಭದಲ್ಲಿ ಗುಂಪೊಂದು ದಾಳಿ ಮಾಡಿದಾಗ, ಪೊಲೀಸ್ ಅಧಿಕಾರಿ ಪ್ರದೀಪ್ ಪಾಲಿವಾಲ್ ಖಡ್ಗ ಹಿಡಿದ ವ್ಯಕ್ತಿಯೊಬ್ಬನನ್ನು ಹಿಡಿಯಲು ಹೋದಾಗ ಗಾಯಗೊಂಡಿದ್ದರು.

ಕೆಂಪುಕೋಟೆ ಹಿಂಸಾಚಾರದ ಸಂದರ್ಭದಲ್ಲಿಯೂ ಕತ್ತಿಗಳು ಕಾಣಿಸಿಕೊಂಡಿದ್ದವು. ಆ ಘರ್ಷಣೆಯಲ್ಲಿ ದೆಹಲಿಯ ಮತ್ತೊಬ್ಬ ಪೊಲೀಸ್ ಗಾಯಗೊಂಡಿದ್ದರು.

ಪೊಲೀಸರ ರಕ್ಷಣೆಗೆ ಇಲಾಖೆ ಕ್ರಮ ವಹಿಸುವುದು ಸ್ವಾಗತಾರ್ಹ. ಆದರೆ ತನ್ನ ವಿಶ್ವಾಸಾರ್ಹತೆ ಕುಂದುತ್ತಿದೆಯೇಕೆ ಎಂಬ ಬಗ್ಗೆಯೂ ದೆಹಲಿ ಪೊಲೀಸ್ ಇಲಾಖೆ ಗಹನವಾದ ಚಿಂತನೆ ಮಾಡಿದರೆ, ಇಂತಹ ಚಿತ್ರ-ವಿಚಿತ್ರ ಭಯಂಕರ ಆಯುಧಗಳ ಅಗತ್ಯ ಬೀಳಲಾರದೇನೋ? ಎಂಬ ಮಾತುಗಳು ಕೇಳಿಬರುತ್ತಿವೆ.


ಇದನ್ನೂ ಓದಿ: ರಾಕೇಶ್ ಟಿಕಾಯತ್ (2013-21)ರನ್ನು ಅರ್ಥ ಮಾಡಿಕೊಳ್ಳುವುದು ಹೇಗೆ? ‘ಹರ್ ಹರ್ ಮಹಾದೇವ್, ಅಲ್ಲಾಹು ಅಕ್ಬರ್’…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...