Homeಮುಖಪುಟಗುಂಪು ಹಲ್ಲೆ ಸರಣಿ ಮುಂದುವರಿಕೆ - ‘ಲವ್‌ ಜಿಹಾದ್‌’ ಆರೋಪದಲ್ಲಿ ಅಪ್ರಾಪ್ತ ಹಿಂದೂ ಬಾಲಕನಿಗೆ ಥಳಿತ

ಗುಂಪು ಹಲ್ಲೆ ಸರಣಿ ಮುಂದುವರಿಕೆ – ‘ಲವ್‌ ಜಿಹಾದ್‌’ ಆರೋಪದಲ್ಲಿ ಅಪ್ರಾಪ್ತ ಹಿಂದೂ ಬಾಲಕನಿಗೆ ಥಳಿತ

- Advertisement -
- Advertisement -

ದೇಶದಲ್ಲಿ ಗುಂಪು ಹಲ್ಲೆಗಳ ಸರಣಿ ಮುಂದುವರೆದಿದೆ. ಮಧ್ಯಪ್ರದೇಶದ ದೇವಾಸ್‌‌ನಲ್ಲಿ 16 ವರ್ಷ ಹಿಂದೂ ಬಾಲಕನನ್ನು ಮುಸ್ಲಿಂ ಎಂದು ಭಾವಿಸಿ ಗುಂಪೊಂದು ಅಮಾನುಷವಾಗಿ ಹಲ್ಲೆ ನಡೆಸಿದೆ. ಪೊಲೀಸರು ಬಾಲಕನನ್ನು ಹಲ್ಲೆ ನಡೆಸದಂತೆ ತಡೆಯುತ್ತಿದ್ದರೂ ದುಷ್ಕರ್ಮಿಗಳು ಅದನ್ನೂ ಮೀರಿ ಹಲ್ಲೆ ನಡೆಸಿದ್ದಾರೆ.

ಅಪ್ರಾಪ್ತ ವಯಸ್ಸಿನ ಬಾಲಕ ತನ್ನ ಗೆಳತಿಯೊಂದಿಗೆ ಉತ್ತರ ಪ್ರದೇಶದಿಂದ ಹೊರಟಿದ್ದರು. ಆದರೆ ಮಧ್ಯಪ್ರದೇಶದಲ್ಲಿ ದುಷ್ಕರ್ಮಿಗಳು, ಲವ್‌ ಜಿಹಾದ್‌ ಆರೋಪ ಹೊರೆಸಿ ಬಾಲಕನ ಮೇಲೆ ಪೊಲೀಸರ ಸಮ್ಮುಖದಲ್ಲೇ ಕ್ರೂರವಾಗಿ ಥಳಿಸಿದ್ದಾರೆ. ಘಟನೆಯ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ದೇವಾಸ್ ಜಿಲ್ಲಾ ಕೇಂದ್ರದಿಂದ ಸುಮಾರು 17 ಕಿಮೀ ದೂರದಲ್ಲಿರುವ ದೇವಾಸ್-ಭೋಪಾಲ್ ರಸ್ತೆಯಲ್ಲಿನ ಬೌಂರಸಾ ಟೋಲ್‌‌ನಲ್ಲಿ ನಾಲ್ಕು ದಿನಗಳ ಹಿಂದೆ ಈ ಘಟನೆ ನಡೆದಿದೆ.

ಇದನ್ನೂ ಓದಿ: 5 ಕೆಜಿ ಗೋಧಿ ಕದ್ದ ಆರೋಪ: ಉತ್ತರಪ್ರದೇಶದ 9 ವರ್ಷದ ಬಾಲಕನನ್ನು ಮರಕ್ಕೆ ಕಟ್ಟಿ ಥಳಿತ

“12 ವರ್ಷದ ಹಿಂದೂ ಹುಡುಗಿಯನ್ನು ತನ್ನೊಂದಿಗೆ ಕರೆದುಕೊಂಡು ಹೋಗುತ್ತಿದ್ದ 16 ವರ್ಷದ ಹಿಂದೂ ಬಾಲಕನನ್ನು ಆರೋಪಿಗಳು ಮುಸ್ಲಿಂ ಎಂದು ಭಾವಿಸಿದ್ದರು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಆದ್ದರಿಂದ ಅವರು ಬಾಲಕನನ್ನು ಥಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಇದುವರೆಗೂ ಯಾರನ್ನೂ ಬಂಧಿಸಲಾಗಿಲ್ಲ. ಹುಡುಗಿ ಮತ್ತು ಹುಡುಗ ಇಬ್ಬರೂ ಉತ್ತರ ಪ್ರದೇಶದ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ” ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

“ಹಲ್ಲೆ ಮಾಡಿದವರು ಇದು ಲವ್ ಜಿಹಾದ್ ಪ್ರಕರಣ ಎಂದು ಭಾವಿಸಿದ್ದಾರೆ. ಇಬ್ಬರೂ ಹಿಂದೂ ಸಮುದಾಯದವರು ಎಂದು ನಾವು ಅವರಿಗೆ ನಿರಂತರವಾಗಿ ಹೇಳುತ್ತಿದ್ದೆವು. ಆದರೆ ಅವರು ನಮ್ಮ ಮಾತನ್ನು ಕೇಳಲಿಲ್ಲ, ಬಾಲಕನಿಗೆ ಹಲ್ಲೆ ನಡೆಸುತ್ತಲೇ ಇದ್ದರು. ಈ ಘಟನೆ ನಾಲ್ಕು ದಿನಗಳ ಹಿಂದೆ ನಡೆದಿದ್ದು, ನಾವು ಆತನನ್ನು ರಕ್ಷಿಸದಿದ್ದರೆ, ಆತ ಸಾವಿಗೀಡಾಗುತ್ತಿದ್ದ” ಎಂದು ಹೆಸರು ಹೇಳಲು ಇಚ್ಚಿಸದ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ಜನತಾಕಾ ರಿಪೋರ್ಟರ್‌ ವರದಿ ಮಾಡಿದೆ.

ಇದನ್ನೂ ಓದಿ: ತೆಲಂಗಾಣ: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿದ ನಕಲಿ ಸಾಧು; ಸಾರ್ವಜನಿಕರಿಂದ ಥಳಿತ!

ಉತ್ತರ ಪ್ರದೇಶದ ಬಲಿಯಾದಿಂದ ತಪ್ಪಿಸಿಕೊಂಡು ಬಂದಿದ್ದ ಈ ಅಪ್ರಾಪ್ತ ಹುಡುಗ ಮತ್ತು ಹುಡುಗಿಯ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಸೊಂಕಾಚ್ ಉಪ-ವಿಭಾಗೀಯ ಪೊಲೀಸ್ ಪ್ರಶಾಂತ್ ಸಿಂಗ್ ಸೆಂಗಾರ್ ಹೇಳಿದ್ದಾರೆ. ಇಬ್ಬರನ್ನು ಪೋಲಿಸ್ ಕಸ್ಟಡಿಗೆ ತೆಗೆದುಕೊಳ್ಳಲು ಸ್ಥಳೀಯ ಪೋಲಿಸರಿಗೆ ಕೇಳಲಾಗಿದ್ದರಿಂದ, ಪೊಲೀಸ್ ತಂಡವು ಬೌಂರಸಾ ಟೋಲ್‌ ಗೇಟ್‌ನಲ್ಲಿ ಬಸ್‌ಗಳನ್ನು ನಿಲ್ಲಿಸಿ ಪರಿಶೀಲನೆ ನಡೆಸಿಸುತ್ತಿದ್ದರು.

ಉತ್ತರ ಪ್ರದೇಶದಿಂದ ಅಹಮದಾಬಾದ್‌‌ಗೆ ಹೋಗುವ ಬಸ್ ತಪಾಸಣೆಯ ವೇಳೆ ಈ ಇಬ್ಬರು ಅಪ್ರಾಪ್ತರು ಪತ್ತೆಯಾಗಿದ್ದಾರೆ ಎಂದು ಸೆಂಗಾರ್ ಹೇಳಿದ್ದಾರೆ. ಬಾಲಕನನ್ನು ಬಸ್ಸಿನಿಂದ ಇಳಿಸುತ್ತಿದ್ದಂತೆ, ಕಾರಿನಲ್ಲಿದ್ದ ಗುಂಪೊಂದು ಪೊಲೀಸರ ಸಮ್ಮುಖದಲ್ಲೆ ಬಾಲಕನ ಮೇಲೆ ಹಲ್ಲೆ ನಡೆಸಲು ಪ್ರಾರಂಭಿಸಿದೆ. ಗುಂಪಿನಿಂದ ಬಾಲಕನನ್ನು ರಕ್ಷಿಸಿದ ಪೊಲೀಸ್ ತಂಡವು ಪೊಲೀಸ್ ಠಾಣೆಗೆ ಕಳುಹಿಸಿದೆ ಎಂದು ಅವರು ಹೇಳಿದ್ದಾರೆ. ಅದೇ ಸಮಯದಲ್ಲಿ, ಹುಡುಗಿಯನ್ನು ಮಹಿಳಾ ಪೊಲೀಸ್ ಠಾಣೆಗೆ ಕಳುಹಿಸಲಾಗಿದೆ.

ಬಾಲಕನು ಆರೋಪಿಯಿಂದ ಹಲ್ಲೆ ಮಾಡಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ ಎಂದು ಸೆಂಗಾರ್ ಹೇಳಿದ್ದಾರೆ. ವೈರಲ್ ಆದ ವಿಡಿಯೋ ಆಧಾರದ ಮೇಲೆ, ಬೌಂರಸಾ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 353, 147, 323 ಮತ್ತು 294 ರ ಅಡಿಯಲ್ಲಿ ನಾಲ್ವರು ಆರೋಪಿಗಳ ಸಹಿತ 15 ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದುವರೆಗೂ ಯಾವುದೇ ಆರೋಪಿಯನ್ನು ಬಂಧಿಸಲಾಗಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಸಮಯದಲ್ಲಿ ಅಯೋಧ್ಯೆ ಕಾರ್ಯಕ್ರಮ ಬೇಕೆ?; ಬಂಗಾಳಿ ವಿದ್ಯಾರ್ಥಿಗೆ ಥಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...