Homeಮುಖಪುಟಗುಂಪು ಹಲ್ಲೆ ಸರಣಿ ಮುಂದುವರಿಕೆ - ‘ಲವ್‌ ಜಿಹಾದ್‌’ ಆರೋಪದಲ್ಲಿ ಅಪ್ರಾಪ್ತ ಹಿಂದೂ ಬಾಲಕನಿಗೆ ಥಳಿತ

ಗುಂಪು ಹಲ್ಲೆ ಸರಣಿ ಮುಂದುವರಿಕೆ – ‘ಲವ್‌ ಜಿಹಾದ್‌’ ಆರೋಪದಲ್ಲಿ ಅಪ್ರಾಪ್ತ ಹಿಂದೂ ಬಾಲಕನಿಗೆ ಥಳಿತ

- Advertisement -
- Advertisement -

ದೇಶದಲ್ಲಿ ಗುಂಪು ಹಲ್ಲೆಗಳ ಸರಣಿ ಮುಂದುವರೆದಿದೆ. ಮಧ್ಯಪ್ರದೇಶದ ದೇವಾಸ್‌‌ನಲ್ಲಿ 16 ವರ್ಷ ಹಿಂದೂ ಬಾಲಕನನ್ನು ಮುಸ್ಲಿಂ ಎಂದು ಭಾವಿಸಿ ಗುಂಪೊಂದು ಅಮಾನುಷವಾಗಿ ಹಲ್ಲೆ ನಡೆಸಿದೆ. ಪೊಲೀಸರು ಬಾಲಕನನ್ನು ಹಲ್ಲೆ ನಡೆಸದಂತೆ ತಡೆಯುತ್ತಿದ್ದರೂ ದುಷ್ಕರ್ಮಿಗಳು ಅದನ್ನೂ ಮೀರಿ ಹಲ್ಲೆ ನಡೆಸಿದ್ದಾರೆ.

ಅಪ್ರಾಪ್ತ ವಯಸ್ಸಿನ ಬಾಲಕ ತನ್ನ ಗೆಳತಿಯೊಂದಿಗೆ ಉತ್ತರ ಪ್ರದೇಶದಿಂದ ಹೊರಟಿದ್ದರು. ಆದರೆ ಮಧ್ಯಪ್ರದೇಶದಲ್ಲಿ ದುಷ್ಕರ್ಮಿಗಳು, ಲವ್‌ ಜಿಹಾದ್‌ ಆರೋಪ ಹೊರೆಸಿ ಬಾಲಕನ ಮೇಲೆ ಪೊಲೀಸರ ಸಮ್ಮುಖದಲ್ಲೇ ಕ್ರೂರವಾಗಿ ಥಳಿಸಿದ್ದಾರೆ. ಘಟನೆಯ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ದೇವಾಸ್ ಜಿಲ್ಲಾ ಕೇಂದ್ರದಿಂದ ಸುಮಾರು 17 ಕಿಮೀ ದೂರದಲ್ಲಿರುವ ದೇವಾಸ್-ಭೋಪಾಲ್ ರಸ್ತೆಯಲ್ಲಿನ ಬೌಂರಸಾ ಟೋಲ್‌‌ನಲ್ಲಿ ನಾಲ್ಕು ದಿನಗಳ ಹಿಂದೆ ಈ ಘಟನೆ ನಡೆದಿದೆ.

ಇದನ್ನೂ ಓದಿ: 5 ಕೆಜಿ ಗೋಧಿ ಕದ್ದ ಆರೋಪ: ಉತ್ತರಪ್ರದೇಶದ 9 ವರ್ಷದ ಬಾಲಕನನ್ನು ಮರಕ್ಕೆ ಕಟ್ಟಿ ಥಳಿತ

“12 ವರ್ಷದ ಹಿಂದೂ ಹುಡುಗಿಯನ್ನು ತನ್ನೊಂದಿಗೆ ಕರೆದುಕೊಂಡು ಹೋಗುತ್ತಿದ್ದ 16 ವರ್ಷದ ಹಿಂದೂ ಬಾಲಕನನ್ನು ಆರೋಪಿಗಳು ಮುಸ್ಲಿಂ ಎಂದು ಭಾವಿಸಿದ್ದರು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಆದ್ದರಿಂದ ಅವರು ಬಾಲಕನನ್ನು ಥಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಇದುವರೆಗೂ ಯಾರನ್ನೂ ಬಂಧಿಸಲಾಗಿಲ್ಲ. ಹುಡುಗಿ ಮತ್ತು ಹುಡುಗ ಇಬ್ಬರೂ ಉತ್ತರ ಪ್ರದೇಶದ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ” ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

“ಹಲ್ಲೆ ಮಾಡಿದವರು ಇದು ಲವ್ ಜಿಹಾದ್ ಪ್ರಕರಣ ಎಂದು ಭಾವಿಸಿದ್ದಾರೆ. ಇಬ್ಬರೂ ಹಿಂದೂ ಸಮುದಾಯದವರು ಎಂದು ನಾವು ಅವರಿಗೆ ನಿರಂತರವಾಗಿ ಹೇಳುತ್ತಿದ್ದೆವು. ಆದರೆ ಅವರು ನಮ್ಮ ಮಾತನ್ನು ಕೇಳಲಿಲ್ಲ, ಬಾಲಕನಿಗೆ ಹಲ್ಲೆ ನಡೆಸುತ್ತಲೇ ಇದ್ದರು. ಈ ಘಟನೆ ನಾಲ್ಕು ದಿನಗಳ ಹಿಂದೆ ನಡೆದಿದ್ದು, ನಾವು ಆತನನ್ನು ರಕ್ಷಿಸದಿದ್ದರೆ, ಆತ ಸಾವಿಗೀಡಾಗುತ್ತಿದ್ದ” ಎಂದು ಹೆಸರು ಹೇಳಲು ಇಚ್ಚಿಸದ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ಜನತಾಕಾ ರಿಪೋರ್ಟರ್‌ ವರದಿ ಮಾಡಿದೆ.

ಇದನ್ನೂ ಓದಿ: ತೆಲಂಗಾಣ: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿದ ನಕಲಿ ಸಾಧು; ಸಾರ್ವಜನಿಕರಿಂದ ಥಳಿತ!

ಉತ್ತರ ಪ್ರದೇಶದ ಬಲಿಯಾದಿಂದ ತಪ್ಪಿಸಿಕೊಂಡು ಬಂದಿದ್ದ ಈ ಅಪ್ರಾಪ್ತ ಹುಡುಗ ಮತ್ತು ಹುಡುಗಿಯ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಸೊಂಕಾಚ್ ಉಪ-ವಿಭಾಗೀಯ ಪೊಲೀಸ್ ಪ್ರಶಾಂತ್ ಸಿಂಗ್ ಸೆಂಗಾರ್ ಹೇಳಿದ್ದಾರೆ. ಇಬ್ಬರನ್ನು ಪೋಲಿಸ್ ಕಸ್ಟಡಿಗೆ ತೆಗೆದುಕೊಳ್ಳಲು ಸ್ಥಳೀಯ ಪೋಲಿಸರಿಗೆ ಕೇಳಲಾಗಿದ್ದರಿಂದ, ಪೊಲೀಸ್ ತಂಡವು ಬೌಂರಸಾ ಟೋಲ್‌ ಗೇಟ್‌ನಲ್ಲಿ ಬಸ್‌ಗಳನ್ನು ನಿಲ್ಲಿಸಿ ಪರಿಶೀಲನೆ ನಡೆಸಿಸುತ್ತಿದ್ದರು.

ಉತ್ತರ ಪ್ರದೇಶದಿಂದ ಅಹಮದಾಬಾದ್‌‌ಗೆ ಹೋಗುವ ಬಸ್ ತಪಾಸಣೆಯ ವೇಳೆ ಈ ಇಬ್ಬರು ಅಪ್ರಾಪ್ತರು ಪತ್ತೆಯಾಗಿದ್ದಾರೆ ಎಂದು ಸೆಂಗಾರ್ ಹೇಳಿದ್ದಾರೆ. ಬಾಲಕನನ್ನು ಬಸ್ಸಿನಿಂದ ಇಳಿಸುತ್ತಿದ್ದಂತೆ, ಕಾರಿನಲ್ಲಿದ್ದ ಗುಂಪೊಂದು ಪೊಲೀಸರ ಸಮ್ಮುಖದಲ್ಲೆ ಬಾಲಕನ ಮೇಲೆ ಹಲ್ಲೆ ನಡೆಸಲು ಪ್ರಾರಂಭಿಸಿದೆ. ಗುಂಪಿನಿಂದ ಬಾಲಕನನ್ನು ರಕ್ಷಿಸಿದ ಪೊಲೀಸ್ ತಂಡವು ಪೊಲೀಸ್ ಠಾಣೆಗೆ ಕಳುಹಿಸಿದೆ ಎಂದು ಅವರು ಹೇಳಿದ್ದಾರೆ. ಅದೇ ಸಮಯದಲ್ಲಿ, ಹುಡುಗಿಯನ್ನು ಮಹಿಳಾ ಪೊಲೀಸ್ ಠಾಣೆಗೆ ಕಳುಹಿಸಲಾಗಿದೆ.

ಬಾಲಕನು ಆರೋಪಿಯಿಂದ ಹಲ್ಲೆ ಮಾಡಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ ಎಂದು ಸೆಂಗಾರ್ ಹೇಳಿದ್ದಾರೆ. ವೈರಲ್ ಆದ ವಿಡಿಯೋ ಆಧಾರದ ಮೇಲೆ, ಬೌಂರಸಾ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 353, 147, 323 ಮತ್ತು 294 ರ ಅಡಿಯಲ್ಲಿ ನಾಲ್ವರು ಆರೋಪಿಗಳ ಸಹಿತ 15 ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದುವರೆಗೂ ಯಾವುದೇ ಆರೋಪಿಯನ್ನು ಬಂಧಿಸಲಾಗಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಸಮಯದಲ್ಲಿ ಅಯೋಧ್ಯೆ ಕಾರ್ಯಕ್ರಮ ಬೇಕೆ?; ಬಂಗಾಳಿ ವಿದ್ಯಾರ್ಥಿಗೆ ಥಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...