Homeಮುಖಪುಟಪಾಕಿಸ್ತಾನಕ್ಕೆ ಹಾರಿ ಬಿದ್ದ ಭಾರತದ ಕ್ಷಿಪಣಿ: ವಿಷಾಧ ವ್ಯಕ್ತಪಡಿಸಿದ ಕೇಂದ್ರ ಸರ್ಕಾರ

ಪಾಕಿಸ್ತಾನಕ್ಕೆ ಹಾರಿ ಬಿದ್ದ ಭಾರತದ ಕ್ಷಿಪಣಿ: ವಿಷಾಧ ವ್ಯಕ್ತಪಡಿಸಿದ ಕೇಂದ್ರ ಸರ್ಕಾರ

- Advertisement -
- Advertisement -

ಸಿರಿಸಾದಿಂದ ಆಕಸ್ಮಿಕವಾಗಿ ಹಾರಿದ ನಿರಾಯುಧ ಸೂಪರ್‌ಸಾನಿಕ್ ಕ್ಷಿಪಣಿಯೊಂದು ಬುಧವಾರ ಸಂಜೆ ಪಾಕಿಸ್ತಾನದ 124 ಕಿ.ಮೀ ದೂರದ ಭೂಪ್ರದೇಶಕ್ಕೆ ಬಿದ್ದಿದೆ ಎಂದು ಭಾರತೀಯ ರಕ್ಷಣಾ ಸಚಿವಾಲಯ ಶುಕ್ರವಾರ ತಿಳಿಸಿದೆ. ರಕ್ಷಣಾ ಸಚಿವಾಲಯವು ಆಗಿರುವ ತಪ್ಪಿಗೆ ವಿಷಾದ ವ್ಯಕ್ತಪಡಿಸಿದ್ದು, ಇದು ತಾಂತ್ರಿಕ ದೋಷ ಎಂದು ವಿವರಿಸಿದೆ.

2022ರ ಮಾರ್ಚ್ 9ರಂದು ದಿನನಿತ್ಯದ ನಿರ್ವಹಣೆಯ ವೇಳೆ ತಾಂತ್ರಿಕ ದೋಷದಿಂದಾಗಿ ಕ್ಷಿಪಣಿಯು ಆಕಸ್ಮಿಕವಾಗಿ ಉಡಾವಣೆಯಾಗಿದೆ. ಸರಕಾರವು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ ಎಂದು ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಅಪಘಾತದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂಬುದು ಸಮಾಧಾನದ ವಿಷಯವಾಗಿದೆ ಎಂದು ಅದು ತಿಳಿಸಿದೆ.

ಇದಕ್ಕೂ ಮುನ್ನ ಶುಕ್ರವಾರದಂದು, ಪಾಕಿಸ್ತಾನದ ಆಡಳಿತದಿಂದ ಭಾರತದ ಉಸ್ತುವಾರಿಗಳನ್ನು ಕರೆಸಿ, ಭಾರತದ ವಾಯುಪ್ರದೇಶದ ಅಪ್ರಚೋದಿತ ಉಲ್ಲಂಘನೆಯ ಬಗ್ಗೆ ತಮ್ಮ ಪ್ರತಿಭಟನೆಯನ್ನು ತಿಳಿಸಿದ್ದಾರೆ. ಪಾಕಿಸ್ತಾನದ ವಿದೇಶಾಂಗ ಕಚೇರಿಯು ಹೊಸದಿಲ್ಲಿಗೆ ‘ಅಹಿತಕರ ಪರಿಣಾಮಗಳ’ ಎಚ್ಚರಿಕೆಯನ್ನು ಬಿಡುಗಡೆ ಮಾಡಿದ್ದು, ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಕರೆ ನೀಡಿದೆ.

ಇದನ್ನೂ ಓದಿ:  ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ಗುರುವಾರದಂದು ಪಾಕಿಸ್ತಾನವು ಕ್ಷಿಪಣಿಯನ್ನು ಉಲ್ಲೇಖಿಸಿ, “ಅದು 40,000 ಅಡಿ ಎತ್ತರದಲ್ಲಿ ಹಾರುತ್ತಿತ್ತು” ಎಂದು ಹೇಳಿಕೊಂಡಿದೆ. ಕ್ಷಿಪಣಿಯು ಭಾರತ ಮತ್ತು ಪಾಕಿಸ್ತಾನಿ ವಾಯುಪ್ರದೇಶದ ಪ್ರಯಾಣಿಕರ ವಿಮಾನಗಳಿಗೆ ಮತ್ತು ಭೂಪ್ರದೇಶದ ನಾಗರಿಕ ಆಸ್ತಿಗಳಿಗೆ ಅಪಾಯವನ್ನುಂಟುಮಾಡುತ್ತದೆ ಎಂದು ಅದು ತಿಳಿಸಿದೆ.

ಪಾಕಿಸ್ತಾನಿ ಸಶಸ್ತ್ರ ಪಡೆಗಳ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ (ಐಎಸ್‌ಪಿಆರ್) ಮಹಾನಿರ್ದೇಶಕ ಮೇಜರ್ ಜನರಲ್ ಬಾಬರ್ ಇಫ್ತಿಕರ್ ಅವರು, “ಭಾರತೀಯ ವಾಯು ಪ್ರದೇಶದೊಳಗಿನಿಂದ ಅತಿ ವೇಗದ ಹಾರುವ ವಸ್ತುವನ್ನು ಪಾಕಿಸ್ತಾನಿ ವಾಯುಪಡೆಯ ವಾಯು ರಕ್ಷಣಾ ಕಾರ್ಯಾಚರಣೆ ಕೇಂದ್ರವು ಗುರುತಿಸಿದೆ. ಇದು ಹಠಾತ್ತನೆ ಪಾಕಿಸ್ತಾನಿ ಪ್ರದೇಶದ ಕಡೆಗೆ ಚಲಿಸಿ, ಪಾಕಿಸ್ತಾನದ ವಾಯುಪ್ರದೇಶವನ್ನು ಉಲ್ಲಂಘಿಸಿದೆ. ಕೊನೆಗೆ ಮಿಯಾ ಚನ್ನು ಬಳಿ ಬಿದ್ದಿದೆ” ಎಂದು ಎಂದು ಹೇಳಿದ್ದಾರೆ.

ಯಾವುದೇ ಮಾನವ ಸಾವುನೋವುಗಳು ಅಥವಾ ಗಾಯಗಳು ಸಂಭವಿಸಿಲ್ಲ ಆದರೆ ಕೆಲವು ನಾಗರಿಕರ ಆಸ್ತಿ ಹಾನಿಯಾಗಿದೆ ಎಂದು ಅವರು ಹೇಳಿದ್ದಾರೆ. ಘಟನೆಯ ಕುರಿತು ಪಾಕಿಸ್ತಾನದ ರಕ್ಷಣಾ ಇಲಾಖೆಯು ಅಗತ್ಯವಾದ ಯುದ್ಧತಂತ್ರದ ಕಾರ್ಯವಿಧಾನಗಳನ್ನು ಪ್ರಾರಂಭಿಸಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದಲ್ಲಿ ಮೂಲಭೂತವಾದಿ ಮುಸ್ಲಿಮರಿಂದ ಧ್ವಂಸಗೊಂಡಿದ್ದ ಹಿಂದೂ ದೇವಾಲಯ ಪುನರ್‌ನಿರ್ಮಾಣ: ಮುಖ್ಯ ನ್ಯಾಯಮೂರ್ತಿಗಳಿಂದ ಉದ್ಘಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪಾಕಿಸ್ತಾನ ಸಹ ಇಂತಹ ತಪ್ಪನ್ನು ಎಸಗಿದ್ದಿದ್ದರೆ, ಆಗ ನಮ್ಮ ಪ್ರತಿಕ್ರಿಯೆ ಹೇಗಿರುತ್ತಿತ್ತು. ಇಂತಹ ಅಚಾತುರ್ಯ ಎರಡು ದೇಶಗಳ ನಡುವಿನ ಯುದ್ದಕ್ಕೆ ನಾಂದಿ ಹಾಡುತ್ತದೆ. ಆದ್ದರಿಂದ ಇಂತಹದ್ದು ಮರುಕಳಿಸಬಾರದು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...