Homeಮುಖಪುಟಪಾಕಿಸ್ತಾನಕ್ಕೆ ಹಾರಿ ಬಿದ್ದ ಭಾರತದ ಕ್ಷಿಪಣಿ: ವಿಷಾಧ ವ್ಯಕ್ತಪಡಿಸಿದ ಕೇಂದ್ರ ಸರ್ಕಾರ

ಪಾಕಿಸ್ತಾನಕ್ಕೆ ಹಾರಿ ಬಿದ್ದ ಭಾರತದ ಕ್ಷಿಪಣಿ: ವಿಷಾಧ ವ್ಯಕ್ತಪಡಿಸಿದ ಕೇಂದ್ರ ಸರ್ಕಾರ

- Advertisement -
- Advertisement -

ಸಿರಿಸಾದಿಂದ ಆಕಸ್ಮಿಕವಾಗಿ ಹಾರಿದ ನಿರಾಯುಧ ಸೂಪರ್‌ಸಾನಿಕ್ ಕ್ಷಿಪಣಿಯೊಂದು ಬುಧವಾರ ಸಂಜೆ ಪಾಕಿಸ್ತಾನದ 124 ಕಿ.ಮೀ ದೂರದ ಭೂಪ್ರದೇಶಕ್ಕೆ ಬಿದ್ದಿದೆ ಎಂದು ಭಾರತೀಯ ರಕ್ಷಣಾ ಸಚಿವಾಲಯ ಶುಕ್ರವಾರ ತಿಳಿಸಿದೆ. ರಕ್ಷಣಾ ಸಚಿವಾಲಯವು ಆಗಿರುವ ತಪ್ಪಿಗೆ ವಿಷಾದ ವ್ಯಕ್ತಪಡಿಸಿದ್ದು, ಇದು ತಾಂತ್ರಿಕ ದೋಷ ಎಂದು ವಿವರಿಸಿದೆ.

2022ರ ಮಾರ್ಚ್ 9ರಂದು ದಿನನಿತ್ಯದ ನಿರ್ವಹಣೆಯ ವೇಳೆ ತಾಂತ್ರಿಕ ದೋಷದಿಂದಾಗಿ ಕ್ಷಿಪಣಿಯು ಆಕಸ್ಮಿಕವಾಗಿ ಉಡಾವಣೆಯಾಗಿದೆ. ಸರಕಾರವು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ ಎಂದು ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಅಪಘಾತದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂಬುದು ಸಮಾಧಾನದ ವಿಷಯವಾಗಿದೆ ಎಂದು ಅದು ತಿಳಿಸಿದೆ.

ಇದಕ್ಕೂ ಮುನ್ನ ಶುಕ್ರವಾರದಂದು, ಪಾಕಿಸ್ತಾನದ ಆಡಳಿತದಿಂದ ಭಾರತದ ಉಸ್ತುವಾರಿಗಳನ್ನು ಕರೆಸಿ, ಭಾರತದ ವಾಯುಪ್ರದೇಶದ ಅಪ್ರಚೋದಿತ ಉಲ್ಲಂಘನೆಯ ಬಗ್ಗೆ ತಮ್ಮ ಪ್ರತಿಭಟನೆಯನ್ನು ತಿಳಿಸಿದ್ದಾರೆ. ಪಾಕಿಸ್ತಾನದ ವಿದೇಶಾಂಗ ಕಚೇರಿಯು ಹೊಸದಿಲ್ಲಿಗೆ ‘ಅಹಿತಕರ ಪರಿಣಾಮಗಳ’ ಎಚ್ಚರಿಕೆಯನ್ನು ಬಿಡುಗಡೆ ಮಾಡಿದ್ದು, ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಕರೆ ನೀಡಿದೆ.

ಇದನ್ನೂ ಓದಿ:  ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ಗುರುವಾರದಂದು ಪಾಕಿಸ್ತಾನವು ಕ್ಷಿಪಣಿಯನ್ನು ಉಲ್ಲೇಖಿಸಿ, “ಅದು 40,000 ಅಡಿ ಎತ್ತರದಲ್ಲಿ ಹಾರುತ್ತಿತ್ತು” ಎಂದು ಹೇಳಿಕೊಂಡಿದೆ. ಕ್ಷಿಪಣಿಯು ಭಾರತ ಮತ್ತು ಪಾಕಿಸ್ತಾನಿ ವಾಯುಪ್ರದೇಶದ ಪ್ರಯಾಣಿಕರ ವಿಮಾನಗಳಿಗೆ ಮತ್ತು ಭೂಪ್ರದೇಶದ ನಾಗರಿಕ ಆಸ್ತಿಗಳಿಗೆ ಅಪಾಯವನ್ನುಂಟುಮಾಡುತ್ತದೆ ಎಂದು ಅದು ತಿಳಿಸಿದೆ.

ಪಾಕಿಸ್ತಾನಿ ಸಶಸ್ತ್ರ ಪಡೆಗಳ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ (ಐಎಸ್‌ಪಿಆರ್) ಮಹಾನಿರ್ದೇಶಕ ಮೇಜರ್ ಜನರಲ್ ಬಾಬರ್ ಇಫ್ತಿಕರ್ ಅವರು, “ಭಾರತೀಯ ವಾಯು ಪ್ರದೇಶದೊಳಗಿನಿಂದ ಅತಿ ವೇಗದ ಹಾರುವ ವಸ್ತುವನ್ನು ಪಾಕಿಸ್ತಾನಿ ವಾಯುಪಡೆಯ ವಾಯು ರಕ್ಷಣಾ ಕಾರ್ಯಾಚರಣೆ ಕೇಂದ್ರವು ಗುರುತಿಸಿದೆ. ಇದು ಹಠಾತ್ತನೆ ಪಾಕಿಸ್ತಾನಿ ಪ್ರದೇಶದ ಕಡೆಗೆ ಚಲಿಸಿ, ಪಾಕಿಸ್ತಾನದ ವಾಯುಪ್ರದೇಶವನ್ನು ಉಲ್ಲಂಘಿಸಿದೆ. ಕೊನೆಗೆ ಮಿಯಾ ಚನ್ನು ಬಳಿ ಬಿದ್ದಿದೆ” ಎಂದು ಎಂದು ಹೇಳಿದ್ದಾರೆ.

ಯಾವುದೇ ಮಾನವ ಸಾವುನೋವುಗಳು ಅಥವಾ ಗಾಯಗಳು ಸಂಭವಿಸಿಲ್ಲ ಆದರೆ ಕೆಲವು ನಾಗರಿಕರ ಆಸ್ತಿ ಹಾನಿಯಾಗಿದೆ ಎಂದು ಅವರು ಹೇಳಿದ್ದಾರೆ. ಘಟನೆಯ ಕುರಿತು ಪಾಕಿಸ್ತಾನದ ರಕ್ಷಣಾ ಇಲಾಖೆಯು ಅಗತ್ಯವಾದ ಯುದ್ಧತಂತ್ರದ ಕಾರ್ಯವಿಧಾನಗಳನ್ನು ಪ್ರಾರಂಭಿಸಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದಲ್ಲಿ ಮೂಲಭೂತವಾದಿ ಮುಸ್ಲಿಮರಿಂದ ಧ್ವಂಸಗೊಂಡಿದ್ದ ಹಿಂದೂ ದೇವಾಲಯ ಪುನರ್‌ನಿರ್ಮಾಣ: ಮುಖ್ಯ ನ್ಯಾಯಮೂರ್ತಿಗಳಿಂದ ಉದ್ಘಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪಾಕಿಸ್ತಾನ ಸಹ ಇಂತಹ ತಪ್ಪನ್ನು ಎಸಗಿದ್ದಿದ್ದರೆ, ಆಗ ನಮ್ಮ ಪ್ರತಿಕ್ರಿಯೆ ಹೇಗಿರುತ್ತಿತ್ತು. ಇಂತಹ ಅಚಾತುರ್ಯ ಎರಡು ದೇಶಗಳ ನಡುವಿನ ಯುದ್ದಕ್ಕೆ ನಾಂದಿ ಹಾಡುತ್ತದೆ. ಆದ್ದರಿಂದ ಇಂತಹದ್ದು ಮರುಕಳಿಸಬಾರದು.

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...