Homeಮುಖಪುಟಪಾಕಿಸ್ತಾನಕ್ಕೆ ಹಾರಿ ಬಿದ್ದ ಭಾರತದ ಕ್ಷಿಪಣಿ: ವಿಷಾಧ ವ್ಯಕ್ತಪಡಿಸಿದ ಕೇಂದ್ರ ಸರ್ಕಾರ

ಪಾಕಿಸ್ತಾನಕ್ಕೆ ಹಾರಿ ಬಿದ್ದ ಭಾರತದ ಕ್ಷಿಪಣಿ: ವಿಷಾಧ ವ್ಯಕ್ತಪಡಿಸಿದ ಕೇಂದ್ರ ಸರ್ಕಾರ

- Advertisement -
- Advertisement -

ಸಿರಿಸಾದಿಂದ ಆಕಸ್ಮಿಕವಾಗಿ ಹಾರಿದ ನಿರಾಯುಧ ಸೂಪರ್‌ಸಾನಿಕ್ ಕ್ಷಿಪಣಿಯೊಂದು ಬುಧವಾರ ಸಂಜೆ ಪಾಕಿಸ್ತಾನದ 124 ಕಿ.ಮೀ ದೂರದ ಭೂಪ್ರದೇಶಕ್ಕೆ ಬಿದ್ದಿದೆ ಎಂದು ಭಾರತೀಯ ರಕ್ಷಣಾ ಸಚಿವಾಲಯ ಶುಕ್ರವಾರ ತಿಳಿಸಿದೆ. ರಕ್ಷಣಾ ಸಚಿವಾಲಯವು ಆಗಿರುವ ತಪ್ಪಿಗೆ ವಿಷಾದ ವ್ಯಕ್ತಪಡಿಸಿದ್ದು, ಇದು ತಾಂತ್ರಿಕ ದೋಷ ಎಂದು ವಿವರಿಸಿದೆ.

2022ರ ಮಾರ್ಚ್ 9ರಂದು ದಿನನಿತ್ಯದ ನಿರ್ವಹಣೆಯ ವೇಳೆ ತಾಂತ್ರಿಕ ದೋಷದಿಂದಾಗಿ ಕ್ಷಿಪಣಿಯು ಆಕಸ್ಮಿಕವಾಗಿ ಉಡಾವಣೆಯಾಗಿದೆ. ಸರಕಾರವು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ ಎಂದು ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಅಪಘಾತದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂಬುದು ಸಮಾಧಾನದ ವಿಷಯವಾಗಿದೆ ಎಂದು ಅದು ತಿಳಿಸಿದೆ.

ಇದಕ್ಕೂ ಮುನ್ನ ಶುಕ್ರವಾರದಂದು, ಪಾಕಿಸ್ತಾನದ ಆಡಳಿತದಿಂದ ಭಾರತದ ಉಸ್ತುವಾರಿಗಳನ್ನು ಕರೆಸಿ, ಭಾರತದ ವಾಯುಪ್ರದೇಶದ ಅಪ್ರಚೋದಿತ ಉಲ್ಲಂಘನೆಯ ಬಗ್ಗೆ ತಮ್ಮ ಪ್ರತಿಭಟನೆಯನ್ನು ತಿಳಿಸಿದ್ದಾರೆ. ಪಾಕಿಸ್ತಾನದ ವಿದೇಶಾಂಗ ಕಚೇರಿಯು ಹೊಸದಿಲ್ಲಿಗೆ ‘ಅಹಿತಕರ ಪರಿಣಾಮಗಳ’ ಎಚ್ಚರಿಕೆಯನ್ನು ಬಿಡುಗಡೆ ಮಾಡಿದ್ದು, ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಕರೆ ನೀಡಿದೆ.

ಇದನ್ನೂ ಓದಿ:  ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ಗುರುವಾರದಂದು ಪಾಕಿಸ್ತಾನವು ಕ್ಷಿಪಣಿಯನ್ನು ಉಲ್ಲೇಖಿಸಿ, “ಅದು 40,000 ಅಡಿ ಎತ್ತರದಲ್ಲಿ ಹಾರುತ್ತಿತ್ತು” ಎಂದು ಹೇಳಿಕೊಂಡಿದೆ. ಕ್ಷಿಪಣಿಯು ಭಾರತ ಮತ್ತು ಪಾಕಿಸ್ತಾನಿ ವಾಯುಪ್ರದೇಶದ ಪ್ರಯಾಣಿಕರ ವಿಮಾನಗಳಿಗೆ ಮತ್ತು ಭೂಪ್ರದೇಶದ ನಾಗರಿಕ ಆಸ್ತಿಗಳಿಗೆ ಅಪಾಯವನ್ನುಂಟುಮಾಡುತ್ತದೆ ಎಂದು ಅದು ತಿಳಿಸಿದೆ.

ಪಾಕಿಸ್ತಾನಿ ಸಶಸ್ತ್ರ ಪಡೆಗಳ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ (ಐಎಸ್‌ಪಿಆರ್) ಮಹಾನಿರ್ದೇಶಕ ಮೇಜರ್ ಜನರಲ್ ಬಾಬರ್ ಇಫ್ತಿಕರ್ ಅವರು, “ಭಾರತೀಯ ವಾಯು ಪ್ರದೇಶದೊಳಗಿನಿಂದ ಅತಿ ವೇಗದ ಹಾರುವ ವಸ್ತುವನ್ನು ಪಾಕಿಸ್ತಾನಿ ವಾಯುಪಡೆಯ ವಾಯು ರಕ್ಷಣಾ ಕಾರ್ಯಾಚರಣೆ ಕೇಂದ್ರವು ಗುರುತಿಸಿದೆ. ಇದು ಹಠಾತ್ತನೆ ಪಾಕಿಸ್ತಾನಿ ಪ್ರದೇಶದ ಕಡೆಗೆ ಚಲಿಸಿ, ಪಾಕಿಸ್ತಾನದ ವಾಯುಪ್ರದೇಶವನ್ನು ಉಲ್ಲಂಘಿಸಿದೆ. ಕೊನೆಗೆ ಮಿಯಾ ಚನ್ನು ಬಳಿ ಬಿದ್ದಿದೆ” ಎಂದು ಎಂದು ಹೇಳಿದ್ದಾರೆ.

ಯಾವುದೇ ಮಾನವ ಸಾವುನೋವುಗಳು ಅಥವಾ ಗಾಯಗಳು ಸಂಭವಿಸಿಲ್ಲ ಆದರೆ ಕೆಲವು ನಾಗರಿಕರ ಆಸ್ತಿ ಹಾನಿಯಾಗಿದೆ ಎಂದು ಅವರು ಹೇಳಿದ್ದಾರೆ. ಘಟನೆಯ ಕುರಿತು ಪಾಕಿಸ್ತಾನದ ರಕ್ಷಣಾ ಇಲಾಖೆಯು ಅಗತ್ಯವಾದ ಯುದ್ಧತಂತ್ರದ ಕಾರ್ಯವಿಧಾನಗಳನ್ನು ಪ್ರಾರಂಭಿಸಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದಲ್ಲಿ ಮೂಲಭೂತವಾದಿ ಮುಸ್ಲಿಮರಿಂದ ಧ್ವಂಸಗೊಂಡಿದ್ದ ಹಿಂದೂ ದೇವಾಲಯ ಪುನರ್‌ನಿರ್ಮಾಣ: ಮುಖ್ಯ ನ್ಯಾಯಮೂರ್ತಿಗಳಿಂದ ಉದ್ಘಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪಾಕಿಸ್ತಾನ ಸಹ ಇಂತಹ ತಪ್ಪನ್ನು ಎಸಗಿದ್ದಿದ್ದರೆ, ಆಗ ನಮ್ಮ ಪ್ರತಿಕ್ರಿಯೆ ಹೇಗಿರುತ್ತಿತ್ತು. ಇಂತಹ ಅಚಾತುರ್ಯ ಎರಡು ದೇಶಗಳ ನಡುವಿನ ಯುದ್ದಕ್ಕೆ ನಾಂದಿ ಹಾಡುತ್ತದೆ. ಆದ್ದರಿಂದ ಇಂತಹದ್ದು ಮರುಕಳಿಸಬಾರದು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...