Homeಮುಖಪುಟಧರಣಿ ಆರಂಭಿಸಿ ತಿಂಗಳು ಕಳೆದರು ಇನ್ನೂ ಸಿಗದ ನ್ಯಾಯ!: ಕುಸ್ತಿಪಟುಗಳ ಪ್ರತಿಭಟನೆಗೆ ವ್ಯಾಪಕ ಬೆಂಬಲ

ಧರಣಿ ಆರಂಭಿಸಿ ತಿಂಗಳು ಕಳೆದರು ಇನ್ನೂ ಸಿಗದ ನ್ಯಾಯ!: ಕುಸ್ತಿಪಟುಗಳ ಪ್ರತಿಭಟನೆಗೆ ವ್ಯಾಪಕ ಬೆಂಬಲ

- Advertisement -
- Advertisement -

ಕುಸ್ತಿಪಟುಗಳು ಧರಣಿ ಆರಂಭಿಸಿ ಒಂದು ತಿಂಗಳಿಗೂ ಹೆಚ್ಚು ಕಾಲ ಕಳೆದರೂ ಇನ್ನೂ ಅವರಿಗೆ ನ್ಯಾಯ ಸಿಕ್ಕಿಲ್ಲ. ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರವು ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ರಕ್ಷಿಸುವುದನ್ನು ಮುಂದುವರೆಸಿತ್ತಿದ್ದರೆ, ಮತ್ತೊಂದೆಡೆ, ಪ್ರತಿಭಟನಾಕಾರರಿಗೆ ವಿವಿಧ ವಲಯಗಳಿಂದ ಬೆಂಬಲ ವ್ಯಕ್ತವಾಗುತ್ತಿದೆ.

ಬೆಂಗಳೂರಿನಲ್ಲೂ ಪ್ರತಿಭಟನೆ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಭಾರತ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ, ಬುಧವಾರ ಬೆಂಗಳೂರಿನಲ್ಲಿ ವಿವಿಧ ಜಿಲ್ಲೆಗಳ 200 ವಿದ್ಯಾರ್ಥಿಗಳು ಜಮಾಯಿಸಿ ಕುಸ್ತಿಪಟುಗಳಿಗೆ ಒಗ್ಗಟ್ಟು ವ್ಯಕ್ತಪಡಿಸಿದರು.

ಎಐಡಿಎಸ್‌ಒ ಆಶ್ರಯದಲ್ಲಿ ಈ ಪ್ರತಿಭಟನೆ ನಡೆಯುತು. ಕಳೆದ 15 ದಿನಗಳಿಂದ ತಮ್ಮ ಜಿಲ್ಲೆಗಳಲ್ಲಿ ಸಣ್ಣ ಗುಂಪುಗಳು ಕ್ಯಾಂಡಲ್‌ಲೈಟ್ ಜಾಗರಣೆ ನಡೆಸಿದರೆ, ವಿದ್ಯಾರ್ಥಿಗಳು ಈ ಬಾರಿ ತಮ್ಮ ತರಗತಿಗಳನ್ನು ಬಹಿಷ್ಕರಿಸಿ ಕ್ರಿಡಾಪಟುಗಳಿಗೆ ಬೆಂಬಲದ ಪ್ರದರ್ಶನದಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಹಾಜರಾಗಿದ್ದರು.

200 students from dists hold protest in support of women wrestlers

ಈ ವೇಳೆ ಮಾತನಾಡಿದ ಚಲನಚಿತ್ರ ನಿರ್ದೇಶಕ ಬಿ.ಸುರೇಶ ಅವರು, ”ಕ್ರೀಡಾ ಕ್ಷೇತ್ರದಿಂದ ಸಿನಿಮಾದವರೆಗೆ ಮಹಿಳೆಯರನ್ನು ಕೇವಲ ವಸ್ತುವಿನಂತೆ ನೋಡಲಾಗುತ್ತದೆ. ಈ ಪದ್ಧತಿ ಇಡೀ ಸಮಾಜಕ್ಕೆ ಅನಾರೋಗ್ಯಕರ” ಎಂದು ಹೇಳಿದರು.

ಜೆಎನ್‌ಯುನಲ್ಲೂ ಪ್ರತಿಭಟನೆ

ಕುಸ್ತಿಪಟುಗಳ ಪ್ರತಿಭಟನೆಗೆ ಬೆಂಬಲ ಸೂಚಿಸಿ, ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಸಿಂಗ್ ಬಂಧನಕ್ಕೆ ಒತ್ತಾಯಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರು, ಕುಸ್ತಿಪಟು ಸಾಕ್ಷಿ ಮಲಿಕ್ ಅವರ ಪ್ರತಿಭಟನೆಯಲ್ಲಿ ಭಾಗಿಯಾದರು.

ಈ ಪ್ರತಿಭಟನಾ ಮೆರವಣಿಗೆಯನ್ನು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಕ್ಕೂಟ (ಜೆಎನ್‌ಯುಎಸ್‌ಯು) ಮತ್ತು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ಶಿಕ್ಷಕರ ಸಂಘ (ಜೆಎನ್‌ಯುಟಿಎ) ಜಂಟಿಯಾಗಿ ಕ್ಯಾಂಪಸ್‌ನಲ್ಲಿ ಆಯೋಜಿಸಿದ್ದವು.

ಇದನ್ನೂ ಓದಿ: ನಾರ್ಕೋ ಪರೀಕ್ಷೆಗೆ ಒಳಗಾಗುತ್ತೇನೆ, ಆದರೆ ಒಂದು ಷರತ್ತು.. : ಬ್ರಿಜ್ ಭೂಷಣ್ ಶರಣ್ ಸಿಂಗ್

ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷೆ ಐಶೆ ಘೋಷ್ ಫೇಸ್‌ಬುಕ್ ಪೋಸ್ಟ್‌ನಲ್ಲಿ, ಇಂದು, ನೂರಾರು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಜೆಎನ್‌ಯುಎಸ್‌ಯು ಮತ್ತು ಜೆಎನ್‌ಯುಟಿಎ ಕ್ಯಾಂಪಸ್‌ನೊಳಗೆ ಆಯೋಜಿಸಿದ್ದ ಐಕಮತ್ಯ ಕೂಟದಲ್ಲಿ ಸೇರಿಕೊಂಡರು. ಸಾಕ್ಷಿ ಮಲಿಕ್ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ನಾಳೆ (ಮಂಗಳವಾರ) ಇಂಡಿಯಾ ಗೇಟ್‌ನಲ್ಲಿ ಕ್ಯಾಂಡಲ್‌ಲೈಟ್ ಜಾಗರಣೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

JNU students, teachers hold march in solidarity with protesting wrestlers, seek action against WFI chief - India Today

ಅಪ್ರಾಪ್ತ ವಯಸ್ಕ ಸೇರಿದಂತೆ ಏಳು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳು ಏಪ್ರಿಲ್ 23 ರಿಂದ ಇಲ್ಲಿನ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನಾ ನಿರತ ಕುಸ್ತಿಪಟುಗಳು ಮಂಗಳವಾರ ಜಂತರ್ ಮಂತರ್ ನಿಂದ ಇಂಡಿಯಾ ಗೇಟ್ ವರೆಗೆ ಕ್ಯಾಂಡಲ್ ಮೆರವಣಿಗೆ ನಡೆಸಲಿದ್ದಾರೆ.

ಖ್ಯಾತ ಚಿತ್ರನಟ ಕಮಲ್ ಹಾಸನ್‌ನಿಂದ ಬೆಂಬಲ

ಪ್ರತಿಭಟನೆಯ ಒಂದು ತಿಂಗಳು ಕಳೆದಿರುವ ಈ ಸಂದರ್ಭದಲ್ಲಿ ಕಮಲ್ ಹಾಸನ್ ಅವರು ಟ್ವಿಟ್ ಮಾಡಿದ್ದು, ”ಇಂದು ಕುಸ್ತಿ ಭ್ರಾತೃತ್ವದ ಕ್ರೀಡಾಪಟುಗಳ ಪ್ರತಿಭಟನೆಗೆ 1 ತಿಂಗಳಾಗಿದೆ. ರಾಷ್ಟ್ರೀಯ ಕೀರ್ತಿಗಾಗಿ ಹೋರಾಡುವ ಬದಲು ವೈಯಕ್ತಿಕ ಸುರಕ್ಷತೆಗಾಗಿ ಹೋರಾಡುವಂತೆ ಒತ್ತಾಯಿಸಿದ್ದೇವೆ. ಸಹ ಭಾರತೀಯರೇ, ನಮ್ಮ ಗಮನಕ್ಕೆ ಅರ್ಹರು, ನಮ್ಮ ರಾಷ್ಟ್ರೀಯ ಕ್ರೀಡಾ ಐಕಾನ್‌ಗಳು ಅಥವಾ ವ್ಯಾಪಕ ಅಪರಾಧ ಇತಿಹಾಸ ಹೊಂದಿರುವ ರಾಜಕಾರಣಿಯಾ? ಎಂದು ಪ್ರಶ್ನೆ ಮಾಡಿದ್ದಾರೆ.

ಕಮಲ್ ಹಾಸನ್ ಟ್ವೀಟ್ ಬೆನ್ನಲ್ಲೇ ಎಲ್ಲಾ ಕಡೆಯಿಂದ ಕಾಮೆಂಟ್‌ಗಳು ಬರತೊಡಗಿದವು. ಅವರಲ್ಲಿ ಒಬ್ಬ, ”ಬಹುತೇಕ ಬಾಲಿವುಡ್ ಕಲಾವಿದರು ಮತ್ತು ಸೆಲೆಬ್ರಿಟಿಗಳು ಈ ವಿಷಯದ ಬಗ್ಗೆ ಮೌನವಾಗಿದ್ದಾಗ, ನಮ್ಮ ರಾಷ್ಟ್ರೀಯ ಐಕಾನ್‌ಗಳನ್ನು ಅವರ ನ್ಯಾಯಕ್ಕಾಗಿ ಮುಂದೆ ಬಂದು ಬೆಂಬಲಿಸುವ ಏಕೈಕ ದೊಡ್ಡ ತಾರೆ #KH. #ಕಮಲ್ ಹಾಸನ್’, ಮತ್ತೊಬ್ಬರು, ‘ಧನ್ಯವಾದ ನಾಯಕರೇ. ನಮ್ಮ ರಾಷ್ಟ್ರೀಯ ಕ್ರೀಡಾ ಐಕಾನ್‌ಗಳು ಗಮನ ಮತ್ತು ನ್ಯಾಯಕ್ಕೆ ಅರ್ಹರಾಗಿದ್ದಾರೆ #IStandWithMyChampions #Wrestlers Protest.” ಎಂದು ಕಾಮೆಂಟ್ ಮಾಡಿದ್ದಾರೆ.

ಈ ಹಿಂದೆ ಪೂಜಾ ಭಟ್, ಸೋನು ಮುಂತಾದ ಸೆಲೆಬ್ರಿಟಿಗಳು ಬೆಂಬಲ ಸೂಚಿಸಿದ್ದರು. ಸೂದ್, ಗೌಹರ್ ಖಾನ್, ವಿದ್ಯುತ್ ಜಮ್ವಾಲ್ ಮತ್ತು ಸ್ವರಾ ಭಾಸ್ಕರ್ ಕುಸ್ತಿಪಟುಗಳನ್ನು ಬೆಂಬಲಿಸಿದರು.

NRC/CAA ಹಾಗೂ ರೈತರ ಬೃಹತ್ ಪ್ರತಿಭಟನೆಯಂತೆ ಈ ಪ್ರತಿಭಟನೆ ಸಾಗಬೇಕಿದೆ

ಈ ಹಿಂದೆ ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್ ಅವರು ಕುಸ್ತಿಪಟುಗಳ ಪ್ರತಿಭಟನೆಯಲ್ಲಿ ಮಾತನಾಡಲು ನಿರಾಕರಿಸಲಾಗಿತ್ತು. ಏಕೆಂದರೆ ಈ ಪ್ರತಿಭಟನೆಯು ‘ರಾಜಕೀಯಗೊಳಿಸಲಾದರೆ’ ತಮಗೆ ನ್ಯಾಯ ಸಿಗುವುದಿಲ್ಲ ಎಂಬ ಭಯದಿಂದ ರಾಜಕೀಯ ನಾಯಕರನ್ನು ದೂರವಿಡಲಾಗಿತ್ತು. ಆದರೆ, ಈಗ ಕ್ರೀಡಾಪಟುಗಳು ತಮ್ಮ ಕಾರ್ಯತಂತ್ರವನ್ನು ಬದಲಾಯಿಸಿದ್ದಾರೆ. ನಮ್ಮ ಪ್ರತಿಭಟನೆಯನ್ನು ಬೆಂಬಲಿಸುವವ ಎಲ್ಲ ಪಕ್ಷಗಳಿಗೆ ಅfವಾಗತ ಎಂದು ಹೇಳಿದ್ದಾರೆ.

ಮುಂದುವರೆದು, ದೇಶದ ಎಲ್ಲ ನಾಗರಿಕರಿಗೆ ಹಾಗೂ ರೈತ ಸಂಘಟನೆಗಳ ಬೆಂಬಲವನ್ನೂ ಕೋರಿದ್ದರು. ಆ ನಂತರ ದೇಶದಲ್ಲಿನ ಕಾರ್ಮಿಕರು, ರೈತರು, ಮಹಿಳೆಯರು, ವಿದ್ಯಾರ್ಥಿಗಳು ಮತ್ತು ಯುವಕರನ್ನು ಪ್ರತಿನಿಧಿಸುವ ಹಲವಾರು ಸಂಸ್ಥೆಗಳು ಕುಸ್ತಿಪಟುಗಳಿಗೆ ನೀಡಿದ ಬೆಂಬಲವು ಅತ್ಯಂತ ಆಸಕ್ತಿದಾಯಕವಾಗಿದೆ. ಕುಸ್ತಿಪಟುಗಳೊಂದಿಗೆ ಹಲವು ಅಸಮಾಧನಗಳಿದ್ದರೂ ಕೂಡ ಈ ಪ್ರತಿಭಟನೆಯಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದಾರೆ.

ಬಿಜೆಪಿ ಸರ್ಕಾರದ ಸಂವಿಧಾನ ಮೇಲಿನ ದಾಳಿ ಮತ್ತು ರೈತರ ಮೇಲೆ ಹೇರಿದ ಕೃಷಿ ಕಾನೂನುಗಳ ವಿರುದ್ಧ ನಿರಂತರವಾಗಿ ನಡೆದ ಪಕ್ಷಾತೀತ ಚಳುವಳಿಗಳು ತುಲನಾತ್ಮಕವಾಗಿ ಯಶಸ್ವಿಯಾಗಿದೆ. NRC/CAA ವಿರುದ್ಧದ ಚಳುವಳಿ, ಮತ್ತು ಒಂದು ಕೃಷಿ ಕಾನೂನುಗಳು. ಈ ಎರಡೂ ಸಂದರ್ಭಗಳಲ್ಲಿ ರಾಜಕೀಯ/ಸೈದ್ಧಾಂತಿಕ ಸಂಘಟನೆಗಳ ಹೊರತಾಗಿ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ದೊಡ್ಡ ಪ್ರಮಾಣದ ಪ್ರತಿಭಟನೆಗಳು ನಡೆದವು.

ಶಾಹೀನ್ ಬಾಗ್‌ನ ಮುಸ್ಲಿಂ ಮಹಿಳೆಯರ ಹೋರಾಟ ಮತ್ತು ವಿವಿಧ ಪ್ರತಿಭಟನಾ ಸ್ಥಳಗಳಲ್ಲಿ ಸಿಖ್ ಮಹಿಳಾ ರೈತರ ಪ್ರತಿಭಟನೆಯ ರೀತಿ ಅಂತರ್ಗತವಾಗಿ ಉಳಿದಿವೆ. ಅವರ ಆ ಕಾರ್ಯಕ್ಷಮತೆಯಿಂದ ಪ್ರತಿಭಟನೆ ಯಶಸ್ವಿಯಾಗಲು ಕಾರಣವಾದವು. ಈಗ ನಡೆಯುತ್ತಿರುವ ಕುಸ್ತಿಪಟುಗಳ ಪ್ರತಿಭಟನೆ ಮತ್ತು ಅದರ ಸಜ್ಜುಗೊಳಿಸುವ ತಂತ್ರವನ್ನು ಅದೇ ಮಾದರಿಯಲ್ಲಿ ನಡೆಯಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...