Homeಮುಖಪುಟತಮಿಳುನಾಡು: 30 ಹಿಂದೂ ಕುಟುಂಬಗಳಿಗೆ ಆಶ್ರಯ ನೀಡಿದ ಮಸೀದಿ

ತಮಿಳುನಾಡು: 30 ಹಿಂದೂ ಕುಟುಂಬಗಳಿಗೆ ಆಶ್ರಯ ನೀಡಿದ ಮಸೀದಿ

- Advertisement -
- Advertisement -

ತಮಿಳುನಾಡಿನಲ್ಲಿ ಮೈಚಾಂಗ್ ಚಂಡಮಾರುತದ ಪ್ರಭಾವಕ್ಕೆ ಸುರಿದ ಮಳೆ ಪ್ರವಾಹ ಸೃಷ್ಟಿಸಿತ್ತು. ರಾಜ್ಯದ ದಕ್ಷಿಣದ ಜಿಲ್ಲೆಗಳಲ್ಲಿ ಜನಸಜೀವನ ಅಸ್ತವ್ಯಸ್ತವಾಗಿತ್ತು. ಈ ವೇಳೆ ಧಾರ್ಮಿಕ ಸಾಮರಸ್ಯದ ನಿದರ್ಶನವೊಂದು ಬೆಳಕಿಗೆ ಬಂದಿದೆ. ಸೇಡುಂಗನಲ್ಲೂರ್ ಬೈತುಲ್ಮಾಲ್ ಜಮಾತ್ ಮಸೀದಿಯು ಪ್ರವಾಹದಿಂದ ಮನೆ ಕಳೆದುಕೊಂಡ 30 ಹಿಂದೂ ಕುಟುಂಬಗಳಿಗೆ ಮಸೀದಿಯಲ್ಲಿ ಆಶ್ರಯವನ್ನು ನೀಡಿದೆ.

ತಿರುನಲ್ವೇಲಿಯಿಂದ ತೂತುಕುಡಿ ರಸ್ತೆಯಲ್ಲಿರುವ ಸೇಡುಂಗನಲ್ಲೂರ್ ಬೈತುಲ್ಮಾಲ್ ಜಮಾತ್ ಮಸೀದಿಯು ಪ್ರವಾಹದಿಂದ ಮನೆ ಕಳೆದುಕೊಂಡ ಸುಮಾರು 30 ಹಿಂದೂ ಕುಟುಂಬಗಳಿಗೆ ಮಸೀದಿಯಲ್ಲಿ ಆಶ್ರಯವನ್ನು ನೀಡಿದೆ, ಜೊತೆಗೆ  ಮಸೀದಿ ಸಮಿತಿಯು ನಿರಾಶ್ರಿತರಿಗೆ ಬಟ್ಟೆ, ಔಷಧಿಗಳು ಮತ್ತು ಸೇರಿದಂತೆ ಆಹಾರ ಮತ್ತು ಅಗತ್ಯ ವಸ್ತುಗಳ ವ್ಯವಸ್ಥೆಯನ್ನು ಕೂಡ ಮಾಡಿದೆ.

ಮೈಚಾಂಗ್ ಚಂಡಮಾರುತದ ಪ್ರಭಾವದಿಂದ ಸುರಿದ ಮಳೆಗೆ ತಮಿಳುನಾಡಿನಲ್ಲಿ ಭಾರೀ ಪ್ರವಾಹ ಉದ್ಭವಿಸಿತ್ತು. ರಾಜ್ಯದ ದಕ್ಷಿಣದ ಜಿಲ್ಲೆಗಳಲ್ಲಿ ಮನೆಗಳು, ರಸ್ತೆಗಳು ಸಂಪೂರ್ಣ ಜಲಾವೃತವಾಗಿತ್ತು. ವಿದ್ಯುತ್ ಸಂಪರ್ಕ, ಮೊಬೈಲ್ ಫೋನ್ ಸಂಪರ್ಕ ಕಡಿತಗೊಂಡು ಸಾರ್ವಜನಿಕ ಸಾರಿಗೆ ಕೂಡ ಅಸ್ತವ್ಯಸ್ತಗೊಂಡಿತ್ತು. ಭಾರೀ ಮಳೆಯಿಂದ ಸಂಭವಿಸಿದ ಅವಘಡದಿಂದ ರಾಜ್ಯದ ವಿವಿಧ ಭಾಗಗಳಲ್ಲಿ 12ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು.

ಈ ಕುರಿತು ಮಾತನಾಡಿದ ಪ್ರವಾಹದಿಂದ ನಿರಾಶ್ರಿತರಾದ ಕೋವಿಲ್‌ಪತ್‌ನ ತಮಿಳರಸಿ, ಮಸೀದಿಯಲ್ಲಿ ನಮ್ಮನ್ನು ಸ್ವಾಗತಿಸಲಾಗಿದೆ. ಅವರು ಎಂದಿಗೂ ಮಹಿಳೆಯರು ಮಸೀದಿಗೆ ಪ್ರವೇಶಿಸಬಾರದು ಎಂದು  ಹೇಳಲಿಲ್ಲ. ಅವರು ನಮಗೆ ಬೇಕಾದಷ್ಟು ದಿನ ಇಲ್ಲಿಯೇ ಇರಬಹುದು ಎಂದು ಹೇಳಿದರು. ಆಹಾರದಿಂದ ಹಿಡಿದು ಔಷಧಿಗಳವರೆಗೆ ಅವರು ನಮಗೆ ಎಲ್ಲವನ್ನೂ ಒದಗಿಸಿದ್ದಾರೆ ಎಂದು ಹೇಳಿದ್ದಾರೆ.

ಮಸೀದಿಯಲ್ಲಿ ಆಶ್ರಯ ಪಡೆದಿರುವ ಮತ್ತೋರ್ವ ಪ್ರವಾಹ ಪೀಡಿತ ದೈವಕನಿ ಅವರು ಮಾತನಾಡುತ್ತಾ, ನಾವು  4 ದಿನಗಳ ಹಿಂದೆ ನಾವು ಧರಿಸಿದ್ದ ಬಟ್ಟೆಯೊಂದಿಗೆ ಇಲ್ಲಿಗೆ ಬಂದಿದ್ದೇವೆ. ನಮ್ಮಲ್ಲಿ ಬೇರೆ ಏನೂ ಇರಲಿಲ್ಲ. ಈ ಮಸೀದಿಯಲ್ಲಿ ಉಳಿದೆಲ್ಲವನ್ನೂ ಅವರು ನಮಗೆ ಒದಗಿಸಿದ್ದಾರೆ. ಇಲ್ಲಿ ಆಶ್ರಯ ಪಡೆದಿರುವವರೆಲ್ಲರೂ ಹಿಂದೂಗಳಾಗಿದ್ದಾರೆ ಎಂದು ಹೇಳಿದ್ದಾರೆ.

ಜಮಾತ್ ಸಮಿತಿಯ ಸದಸ್ಯ ಇಮ್ರಾನ್ ಖಾನ್ ಅವರು ಈ ಬಗ್ಗೆ ಮಾತನಾಡಿದ್ದು, ಪ್ರವಾಹ ಸಂತ್ರಸ್ತರ ಜೊತೆ ಒಗ್ಗಟ್ಟನ್ನು ಪ್ರದರ್ಶಿಸುವ ಸಲುವಾಗಿ ಮತ್ತು ಸ್ಥಳಾವಕಾಶ ಕಲ್ಪಿಸಲು ಮಸೀದಿಯಲ್ಲಿ ಎಲ್ಲಾ ಸಾಮೂಹಿಕ ಪ್ರಾರ್ಥನೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಪ್ರವಾಹ ಸಂತ್ರಸ್ತ ಹಿಂದೂ ಸಮುದಾಯದ ಜನರು ಮಸೀದಿಯಿಂದ ತಮ್ಮ-ತಮ್ಮ ಮನೆಗಳಿಗೆ ಹಿಂದಿರುಗುವವರೆಗೆ ನಾವು ಯಾವುದೇ ಸಾಮೂಹಿಕ ಪ್ರಾರ್ಥನೆಗಳನ್ನು ನಡೆಸದಿರಲು ನಿರ್ಧರಿಸಿದ್ದೇವೆ. ನಾವು ಏಕತೆ ಮತ್ತು ಸಮಾನತೆಯನ್ನು ನಂಬುತ್ತೇವೆ. ಪ್ರವಾಹ ಬಂದಾಗ ನಾವು ಜಮಾಅತ್ ಸಮಿತಿಯಲ್ಲಿ ಸಭೆ ನಡೆಸಿದ್ದೇವೆ ಮತ್ತು ಮಸೀದಿಯನ್ನು ಪರಿಹಾರ ಶಿಬಿರವಾಗಿ ತೆರೆಯಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

ಮೈಚಾಂಗ್ ಚಂಡಮಾರುತದ ಪ್ರಭಾವದಿಂದ ತಮಿಳುನಾಡಿನ 4 ದಕ್ಷಿಣ ಜಿಲ್ಲೆಗಳಾದ ತಿರುನಲ್ವೇಲಿ, ತೂತುಕುಡಿ, ಕನ್ಯಾಕುಮಾರಿ ಮತ್ತು ರಾಮನಾಥಪುರಂನಲ್ಲಿ ಡಿ.17 ಮತ್ತು 18ರಂದು ಭಾರೀ ಮಳೆಯಾಗಿದೆ. ಇದರಿಂದಾಗಿ ಉಂಟಾದ ಪ್ರವಾಹದಲ್ಲಿ ಅನೇಕ ಪ್ರದೇಶಗಳು ಸಂಪರ್ಕ ಕಡಿತಗೊಂಡವು ಮತ್ತು ಹಲವಾರು ಕುಟುಂಬಗಳನ್ನು ಸ್ಥಳಾಂತರಿಸಲಾಗಿತ್ತು. ಪರಿಹಾರ ಕಾರ್ಯಗಳಿಗೆ ಸಹಾಯ ಮಾಡಲು ರಾಷ್ಟ್ರೀಯ ವಿಪತ್ತು ರಕ್ಷಣಾ ಪಡೆಗಳು ಮತ್ತು ರಾಜ್ಯ ವಿಪತ್ತು ರಕ್ಷಣಾ ಪಡೆಗಳನ್ನು ನಿಯೋಜಿಸಲಾಗಿತ್ತು.

ಇದನ್ನು ಓದಿ: ಸಂಸತ್ತಿನಲ್ಲಿ ಸಾಮೂಹಿಕ ಅಮಾನತು: ಹತ್ತಿಕ್ಕಲ್ಪಟ್ಟ 33 ಕೋಟಿಗೂ ಅಧಿಕ ಜನತೆಯ ಧ್ವನಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...