Homeಮುಖಪುಟತಮಿಳುನಾಡು: 30 ಹಿಂದೂ ಕುಟುಂಬಗಳಿಗೆ ಆಶ್ರಯ ನೀಡಿದ ಮಸೀದಿ

ತಮಿಳುನಾಡು: 30 ಹಿಂದೂ ಕುಟುಂಬಗಳಿಗೆ ಆಶ್ರಯ ನೀಡಿದ ಮಸೀದಿ

- Advertisement -
- Advertisement -

ತಮಿಳುನಾಡಿನಲ್ಲಿ ಮೈಚಾಂಗ್ ಚಂಡಮಾರುತದ ಪ್ರಭಾವಕ್ಕೆ ಸುರಿದ ಮಳೆ ಪ್ರವಾಹ ಸೃಷ್ಟಿಸಿತ್ತು. ರಾಜ್ಯದ ದಕ್ಷಿಣದ ಜಿಲ್ಲೆಗಳಲ್ಲಿ ಜನಸಜೀವನ ಅಸ್ತವ್ಯಸ್ತವಾಗಿತ್ತು. ಈ ವೇಳೆ ಧಾರ್ಮಿಕ ಸಾಮರಸ್ಯದ ನಿದರ್ಶನವೊಂದು ಬೆಳಕಿಗೆ ಬಂದಿದೆ. ಸೇಡುಂಗನಲ್ಲೂರ್ ಬೈತುಲ್ಮಾಲ್ ಜಮಾತ್ ಮಸೀದಿಯು ಪ್ರವಾಹದಿಂದ ಮನೆ ಕಳೆದುಕೊಂಡ 30 ಹಿಂದೂ ಕುಟುಂಬಗಳಿಗೆ ಮಸೀದಿಯಲ್ಲಿ ಆಶ್ರಯವನ್ನು ನೀಡಿದೆ.

ತಿರುನಲ್ವೇಲಿಯಿಂದ ತೂತುಕುಡಿ ರಸ್ತೆಯಲ್ಲಿರುವ ಸೇಡುಂಗನಲ್ಲೂರ್ ಬೈತುಲ್ಮಾಲ್ ಜಮಾತ್ ಮಸೀದಿಯು ಪ್ರವಾಹದಿಂದ ಮನೆ ಕಳೆದುಕೊಂಡ ಸುಮಾರು 30 ಹಿಂದೂ ಕುಟುಂಬಗಳಿಗೆ ಮಸೀದಿಯಲ್ಲಿ ಆಶ್ರಯವನ್ನು ನೀಡಿದೆ, ಜೊತೆಗೆ  ಮಸೀದಿ ಸಮಿತಿಯು ನಿರಾಶ್ರಿತರಿಗೆ ಬಟ್ಟೆ, ಔಷಧಿಗಳು ಮತ್ತು ಸೇರಿದಂತೆ ಆಹಾರ ಮತ್ತು ಅಗತ್ಯ ವಸ್ತುಗಳ ವ್ಯವಸ್ಥೆಯನ್ನು ಕೂಡ ಮಾಡಿದೆ.

ಮೈಚಾಂಗ್ ಚಂಡಮಾರುತದ ಪ್ರಭಾವದಿಂದ ಸುರಿದ ಮಳೆಗೆ ತಮಿಳುನಾಡಿನಲ್ಲಿ ಭಾರೀ ಪ್ರವಾಹ ಉದ್ಭವಿಸಿತ್ತು. ರಾಜ್ಯದ ದಕ್ಷಿಣದ ಜಿಲ್ಲೆಗಳಲ್ಲಿ ಮನೆಗಳು, ರಸ್ತೆಗಳು ಸಂಪೂರ್ಣ ಜಲಾವೃತವಾಗಿತ್ತು. ವಿದ್ಯುತ್ ಸಂಪರ್ಕ, ಮೊಬೈಲ್ ಫೋನ್ ಸಂಪರ್ಕ ಕಡಿತಗೊಂಡು ಸಾರ್ವಜನಿಕ ಸಾರಿಗೆ ಕೂಡ ಅಸ್ತವ್ಯಸ್ತಗೊಂಡಿತ್ತು. ಭಾರೀ ಮಳೆಯಿಂದ ಸಂಭವಿಸಿದ ಅವಘಡದಿಂದ ರಾಜ್ಯದ ವಿವಿಧ ಭಾಗಗಳಲ್ಲಿ 12ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು.

ಈ ಕುರಿತು ಮಾತನಾಡಿದ ಪ್ರವಾಹದಿಂದ ನಿರಾಶ್ರಿತರಾದ ಕೋವಿಲ್‌ಪತ್‌ನ ತಮಿಳರಸಿ, ಮಸೀದಿಯಲ್ಲಿ ನಮ್ಮನ್ನು ಸ್ವಾಗತಿಸಲಾಗಿದೆ. ಅವರು ಎಂದಿಗೂ ಮಹಿಳೆಯರು ಮಸೀದಿಗೆ ಪ್ರವೇಶಿಸಬಾರದು ಎಂದು  ಹೇಳಲಿಲ್ಲ. ಅವರು ನಮಗೆ ಬೇಕಾದಷ್ಟು ದಿನ ಇಲ್ಲಿಯೇ ಇರಬಹುದು ಎಂದು ಹೇಳಿದರು. ಆಹಾರದಿಂದ ಹಿಡಿದು ಔಷಧಿಗಳವರೆಗೆ ಅವರು ನಮಗೆ ಎಲ್ಲವನ್ನೂ ಒದಗಿಸಿದ್ದಾರೆ ಎಂದು ಹೇಳಿದ್ದಾರೆ.

ಮಸೀದಿಯಲ್ಲಿ ಆಶ್ರಯ ಪಡೆದಿರುವ ಮತ್ತೋರ್ವ ಪ್ರವಾಹ ಪೀಡಿತ ದೈವಕನಿ ಅವರು ಮಾತನಾಡುತ್ತಾ, ನಾವು  4 ದಿನಗಳ ಹಿಂದೆ ನಾವು ಧರಿಸಿದ್ದ ಬಟ್ಟೆಯೊಂದಿಗೆ ಇಲ್ಲಿಗೆ ಬಂದಿದ್ದೇವೆ. ನಮ್ಮಲ್ಲಿ ಬೇರೆ ಏನೂ ಇರಲಿಲ್ಲ. ಈ ಮಸೀದಿಯಲ್ಲಿ ಉಳಿದೆಲ್ಲವನ್ನೂ ಅವರು ನಮಗೆ ಒದಗಿಸಿದ್ದಾರೆ. ಇಲ್ಲಿ ಆಶ್ರಯ ಪಡೆದಿರುವವರೆಲ್ಲರೂ ಹಿಂದೂಗಳಾಗಿದ್ದಾರೆ ಎಂದು ಹೇಳಿದ್ದಾರೆ.

ಜಮಾತ್ ಸಮಿತಿಯ ಸದಸ್ಯ ಇಮ್ರಾನ್ ಖಾನ್ ಅವರು ಈ ಬಗ್ಗೆ ಮಾತನಾಡಿದ್ದು, ಪ್ರವಾಹ ಸಂತ್ರಸ್ತರ ಜೊತೆ ಒಗ್ಗಟ್ಟನ್ನು ಪ್ರದರ್ಶಿಸುವ ಸಲುವಾಗಿ ಮತ್ತು ಸ್ಥಳಾವಕಾಶ ಕಲ್ಪಿಸಲು ಮಸೀದಿಯಲ್ಲಿ ಎಲ್ಲಾ ಸಾಮೂಹಿಕ ಪ್ರಾರ್ಥನೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಪ್ರವಾಹ ಸಂತ್ರಸ್ತ ಹಿಂದೂ ಸಮುದಾಯದ ಜನರು ಮಸೀದಿಯಿಂದ ತಮ್ಮ-ತಮ್ಮ ಮನೆಗಳಿಗೆ ಹಿಂದಿರುಗುವವರೆಗೆ ನಾವು ಯಾವುದೇ ಸಾಮೂಹಿಕ ಪ್ರಾರ್ಥನೆಗಳನ್ನು ನಡೆಸದಿರಲು ನಿರ್ಧರಿಸಿದ್ದೇವೆ. ನಾವು ಏಕತೆ ಮತ್ತು ಸಮಾನತೆಯನ್ನು ನಂಬುತ್ತೇವೆ. ಪ್ರವಾಹ ಬಂದಾಗ ನಾವು ಜಮಾಅತ್ ಸಮಿತಿಯಲ್ಲಿ ಸಭೆ ನಡೆಸಿದ್ದೇವೆ ಮತ್ತು ಮಸೀದಿಯನ್ನು ಪರಿಹಾರ ಶಿಬಿರವಾಗಿ ತೆರೆಯಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

ಮೈಚಾಂಗ್ ಚಂಡಮಾರುತದ ಪ್ರಭಾವದಿಂದ ತಮಿಳುನಾಡಿನ 4 ದಕ್ಷಿಣ ಜಿಲ್ಲೆಗಳಾದ ತಿರುನಲ್ವೇಲಿ, ತೂತುಕುಡಿ, ಕನ್ಯಾಕುಮಾರಿ ಮತ್ತು ರಾಮನಾಥಪುರಂನಲ್ಲಿ ಡಿ.17 ಮತ್ತು 18ರಂದು ಭಾರೀ ಮಳೆಯಾಗಿದೆ. ಇದರಿಂದಾಗಿ ಉಂಟಾದ ಪ್ರವಾಹದಲ್ಲಿ ಅನೇಕ ಪ್ರದೇಶಗಳು ಸಂಪರ್ಕ ಕಡಿತಗೊಂಡವು ಮತ್ತು ಹಲವಾರು ಕುಟುಂಬಗಳನ್ನು ಸ್ಥಳಾಂತರಿಸಲಾಗಿತ್ತು. ಪರಿಹಾರ ಕಾರ್ಯಗಳಿಗೆ ಸಹಾಯ ಮಾಡಲು ರಾಷ್ಟ್ರೀಯ ವಿಪತ್ತು ರಕ್ಷಣಾ ಪಡೆಗಳು ಮತ್ತು ರಾಜ್ಯ ವಿಪತ್ತು ರಕ್ಷಣಾ ಪಡೆಗಳನ್ನು ನಿಯೋಜಿಸಲಾಗಿತ್ತು.

ಇದನ್ನು ಓದಿ: ಸಂಸತ್ತಿನಲ್ಲಿ ಸಾಮೂಹಿಕ ಅಮಾನತು: ಹತ್ತಿಕ್ಕಲ್ಪಟ್ಟ 33 ಕೋಟಿಗೂ ಅಧಿಕ ಜನತೆಯ ಧ್ವನಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...