Homeಮುಖಪುಟತಮಿಳುನಾಡು: 30 ಹಿಂದೂ ಕುಟುಂಬಗಳಿಗೆ ಆಶ್ರಯ ನೀಡಿದ ಮಸೀದಿ

ತಮಿಳುನಾಡು: 30 ಹಿಂದೂ ಕುಟುಂಬಗಳಿಗೆ ಆಶ್ರಯ ನೀಡಿದ ಮಸೀದಿ

- Advertisement -
- Advertisement -

ತಮಿಳುನಾಡಿನಲ್ಲಿ ಮೈಚಾಂಗ್ ಚಂಡಮಾರುತದ ಪ್ರಭಾವಕ್ಕೆ ಸುರಿದ ಮಳೆ ಪ್ರವಾಹ ಸೃಷ್ಟಿಸಿತ್ತು. ರಾಜ್ಯದ ದಕ್ಷಿಣದ ಜಿಲ್ಲೆಗಳಲ್ಲಿ ಜನಸಜೀವನ ಅಸ್ತವ್ಯಸ್ತವಾಗಿತ್ತು. ಈ ವೇಳೆ ಧಾರ್ಮಿಕ ಸಾಮರಸ್ಯದ ನಿದರ್ಶನವೊಂದು ಬೆಳಕಿಗೆ ಬಂದಿದೆ. ಸೇಡುಂಗನಲ್ಲೂರ್ ಬೈತುಲ್ಮಾಲ್ ಜಮಾತ್ ಮಸೀದಿಯು ಪ್ರವಾಹದಿಂದ ಮನೆ ಕಳೆದುಕೊಂಡ 30 ಹಿಂದೂ ಕುಟುಂಬಗಳಿಗೆ ಮಸೀದಿಯಲ್ಲಿ ಆಶ್ರಯವನ್ನು ನೀಡಿದೆ.

ತಿರುನಲ್ವೇಲಿಯಿಂದ ತೂತುಕುಡಿ ರಸ್ತೆಯಲ್ಲಿರುವ ಸೇಡುಂಗನಲ್ಲೂರ್ ಬೈತುಲ್ಮಾಲ್ ಜಮಾತ್ ಮಸೀದಿಯು ಪ್ರವಾಹದಿಂದ ಮನೆ ಕಳೆದುಕೊಂಡ ಸುಮಾರು 30 ಹಿಂದೂ ಕುಟುಂಬಗಳಿಗೆ ಮಸೀದಿಯಲ್ಲಿ ಆಶ್ರಯವನ್ನು ನೀಡಿದೆ, ಜೊತೆಗೆ  ಮಸೀದಿ ಸಮಿತಿಯು ನಿರಾಶ್ರಿತರಿಗೆ ಬಟ್ಟೆ, ಔಷಧಿಗಳು ಮತ್ತು ಸೇರಿದಂತೆ ಆಹಾರ ಮತ್ತು ಅಗತ್ಯ ವಸ್ತುಗಳ ವ್ಯವಸ್ಥೆಯನ್ನು ಕೂಡ ಮಾಡಿದೆ.

ಮೈಚಾಂಗ್ ಚಂಡಮಾರುತದ ಪ್ರಭಾವದಿಂದ ಸುರಿದ ಮಳೆಗೆ ತಮಿಳುನಾಡಿನಲ್ಲಿ ಭಾರೀ ಪ್ರವಾಹ ಉದ್ಭವಿಸಿತ್ತು. ರಾಜ್ಯದ ದಕ್ಷಿಣದ ಜಿಲ್ಲೆಗಳಲ್ಲಿ ಮನೆಗಳು, ರಸ್ತೆಗಳು ಸಂಪೂರ್ಣ ಜಲಾವೃತವಾಗಿತ್ತು. ವಿದ್ಯುತ್ ಸಂಪರ್ಕ, ಮೊಬೈಲ್ ಫೋನ್ ಸಂಪರ್ಕ ಕಡಿತಗೊಂಡು ಸಾರ್ವಜನಿಕ ಸಾರಿಗೆ ಕೂಡ ಅಸ್ತವ್ಯಸ್ತಗೊಂಡಿತ್ತು. ಭಾರೀ ಮಳೆಯಿಂದ ಸಂಭವಿಸಿದ ಅವಘಡದಿಂದ ರಾಜ್ಯದ ವಿವಿಧ ಭಾಗಗಳಲ್ಲಿ 12ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು.

ಈ ಕುರಿತು ಮಾತನಾಡಿದ ಪ್ರವಾಹದಿಂದ ನಿರಾಶ್ರಿತರಾದ ಕೋವಿಲ್‌ಪತ್‌ನ ತಮಿಳರಸಿ, ಮಸೀದಿಯಲ್ಲಿ ನಮ್ಮನ್ನು ಸ್ವಾಗತಿಸಲಾಗಿದೆ. ಅವರು ಎಂದಿಗೂ ಮಹಿಳೆಯರು ಮಸೀದಿಗೆ ಪ್ರವೇಶಿಸಬಾರದು ಎಂದು  ಹೇಳಲಿಲ್ಲ. ಅವರು ನಮಗೆ ಬೇಕಾದಷ್ಟು ದಿನ ಇಲ್ಲಿಯೇ ಇರಬಹುದು ಎಂದು ಹೇಳಿದರು. ಆಹಾರದಿಂದ ಹಿಡಿದು ಔಷಧಿಗಳವರೆಗೆ ಅವರು ನಮಗೆ ಎಲ್ಲವನ್ನೂ ಒದಗಿಸಿದ್ದಾರೆ ಎಂದು ಹೇಳಿದ್ದಾರೆ.

ಮಸೀದಿಯಲ್ಲಿ ಆಶ್ರಯ ಪಡೆದಿರುವ ಮತ್ತೋರ್ವ ಪ್ರವಾಹ ಪೀಡಿತ ದೈವಕನಿ ಅವರು ಮಾತನಾಡುತ್ತಾ, ನಾವು  4 ದಿನಗಳ ಹಿಂದೆ ನಾವು ಧರಿಸಿದ್ದ ಬಟ್ಟೆಯೊಂದಿಗೆ ಇಲ್ಲಿಗೆ ಬಂದಿದ್ದೇವೆ. ನಮ್ಮಲ್ಲಿ ಬೇರೆ ಏನೂ ಇರಲಿಲ್ಲ. ಈ ಮಸೀದಿಯಲ್ಲಿ ಉಳಿದೆಲ್ಲವನ್ನೂ ಅವರು ನಮಗೆ ಒದಗಿಸಿದ್ದಾರೆ. ಇಲ್ಲಿ ಆಶ್ರಯ ಪಡೆದಿರುವವರೆಲ್ಲರೂ ಹಿಂದೂಗಳಾಗಿದ್ದಾರೆ ಎಂದು ಹೇಳಿದ್ದಾರೆ.

ಜಮಾತ್ ಸಮಿತಿಯ ಸದಸ್ಯ ಇಮ್ರಾನ್ ಖಾನ್ ಅವರು ಈ ಬಗ್ಗೆ ಮಾತನಾಡಿದ್ದು, ಪ್ರವಾಹ ಸಂತ್ರಸ್ತರ ಜೊತೆ ಒಗ್ಗಟ್ಟನ್ನು ಪ್ರದರ್ಶಿಸುವ ಸಲುವಾಗಿ ಮತ್ತು ಸ್ಥಳಾವಕಾಶ ಕಲ್ಪಿಸಲು ಮಸೀದಿಯಲ್ಲಿ ಎಲ್ಲಾ ಸಾಮೂಹಿಕ ಪ್ರಾರ್ಥನೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಪ್ರವಾಹ ಸಂತ್ರಸ್ತ ಹಿಂದೂ ಸಮುದಾಯದ ಜನರು ಮಸೀದಿಯಿಂದ ತಮ್ಮ-ತಮ್ಮ ಮನೆಗಳಿಗೆ ಹಿಂದಿರುಗುವವರೆಗೆ ನಾವು ಯಾವುದೇ ಸಾಮೂಹಿಕ ಪ್ರಾರ್ಥನೆಗಳನ್ನು ನಡೆಸದಿರಲು ನಿರ್ಧರಿಸಿದ್ದೇವೆ. ನಾವು ಏಕತೆ ಮತ್ತು ಸಮಾನತೆಯನ್ನು ನಂಬುತ್ತೇವೆ. ಪ್ರವಾಹ ಬಂದಾಗ ನಾವು ಜಮಾಅತ್ ಸಮಿತಿಯಲ್ಲಿ ಸಭೆ ನಡೆಸಿದ್ದೇವೆ ಮತ್ತು ಮಸೀದಿಯನ್ನು ಪರಿಹಾರ ಶಿಬಿರವಾಗಿ ತೆರೆಯಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

ಮೈಚಾಂಗ್ ಚಂಡಮಾರುತದ ಪ್ರಭಾವದಿಂದ ತಮಿಳುನಾಡಿನ 4 ದಕ್ಷಿಣ ಜಿಲ್ಲೆಗಳಾದ ತಿರುನಲ್ವೇಲಿ, ತೂತುಕುಡಿ, ಕನ್ಯಾಕುಮಾರಿ ಮತ್ತು ರಾಮನಾಥಪುರಂನಲ್ಲಿ ಡಿ.17 ಮತ್ತು 18ರಂದು ಭಾರೀ ಮಳೆಯಾಗಿದೆ. ಇದರಿಂದಾಗಿ ಉಂಟಾದ ಪ್ರವಾಹದಲ್ಲಿ ಅನೇಕ ಪ್ರದೇಶಗಳು ಸಂಪರ್ಕ ಕಡಿತಗೊಂಡವು ಮತ್ತು ಹಲವಾರು ಕುಟುಂಬಗಳನ್ನು ಸ್ಥಳಾಂತರಿಸಲಾಗಿತ್ತು. ಪರಿಹಾರ ಕಾರ್ಯಗಳಿಗೆ ಸಹಾಯ ಮಾಡಲು ರಾಷ್ಟ್ರೀಯ ವಿಪತ್ತು ರಕ್ಷಣಾ ಪಡೆಗಳು ಮತ್ತು ರಾಜ್ಯ ವಿಪತ್ತು ರಕ್ಷಣಾ ಪಡೆಗಳನ್ನು ನಿಯೋಜಿಸಲಾಗಿತ್ತು.

ಇದನ್ನು ಓದಿ: ಸಂಸತ್ತಿನಲ್ಲಿ ಸಾಮೂಹಿಕ ಅಮಾನತು: ಹತ್ತಿಕ್ಕಲ್ಪಟ್ಟ 33 ಕೋಟಿಗೂ ಅಧಿಕ ಜನತೆಯ ಧ್ವನಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...