Homeಮುಖಪುಟತಮಿಳುನಾಡು: 30 ಹಿಂದೂ ಕುಟುಂಬಗಳಿಗೆ ಆಶ್ರಯ ನೀಡಿದ ಮಸೀದಿ

ತಮಿಳುನಾಡು: 30 ಹಿಂದೂ ಕುಟುಂಬಗಳಿಗೆ ಆಶ್ರಯ ನೀಡಿದ ಮಸೀದಿ

- Advertisement -
- Advertisement -

ತಮಿಳುನಾಡಿನಲ್ಲಿ ಮೈಚಾಂಗ್ ಚಂಡಮಾರುತದ ಪ್ರಭಾವಕ್ಕೆ ಸುರಿದ ಮಳೆ ಪ್ರವಾಹ ಸೃಷ್ಟಿಸಿತ್ತು. ರಾಜ್ಯದ ದಕ್ಷಿಣದ ಜಿಲ್ಲೆಗಳಲ್ಲಿ ಜನಸಜೀವನ ಅಸ್ತವ್ಯಸ್ತವಾಗಿತ್ತು. ಈ ವೇಳೆ ಧಾರ್ಮಿಕ ಸಾಮರಸ್ಯದ ನಿದರ್ಶನವೊಂದು ಬೆಳಕಿಗೆ ಬಂದಿದೆ. ಸೇಡುಂಗನಲ್ಲೂರ್ ಬೈತುಲ್ಮಾಲ್ ಜಮಾತ್ ಮಸೀದಿಯು ಪ್ರವಾಹದಿಂದ ಮನೆ ಕಳೆದುಕೊಂಡ 30 ಹಿಂದೂ ಕುಟುಂಬಗಳಿಗೆ ಮಸೀದಿಯಲ್ಲಿ ಆಶ್ರಯವನ್ನು ನೀಡಿದೆ.

ತಿರುನಲ್ವೇಲಿಯಿಂದ ತೂತುಕುಡಿ ರಸ್ತೆಯಲ್ಲಿರುವ ಸೇಡುಂಗನಲ್ಲೂರ್ ಬೈತುಲ್ಮಾಲ್ ಜಮಾತ್ ಮಸೀದಿಯು ಪ್ರವಾಹದಿಂದ ಮನೆ ಕಳೆದುಕೊಂಡ ಸುಮಾರು 30 ಹಿಂದೂ ಕುಟುಂಬಗಳಿಗೆ ಮಸೀದಿಯಲ್ಲಿ ಆಶ್ರಯವನ್ನು ನೀಡಿದೆ, ಜೊತೆಗೆ  ಮಸೀದಿ ಸಮಿತಿಯು ನಿರಾಶ್ರಿತರಿಗೆ ಬಟ್ಟೆ, ಔಷಧಿಗಳು ಮತ್ತು ಸೇರಿದಂತೆ ಆಹಾರ ಮತ್ತು ಅಗತ್ಯ ವಸ್ತುಗಳ ವ್ಯವಸ್ಥೆಯನ್ನು ಕೂಡ ಮಾಡಿದೆ.

ಮೈಚಾಂಗ್ ಚಂಡಮಾರುತದ ಪ್ರಭಾವದಿಂದ ಸುರಿದ ಮಳೆಗೆ ತಮಿಳುನಾಡಿನಲ್ಲಿ ಭಾರೀ ಪ್ರವಾಹ ಉದ್ಭವಿಸಿತ್ತು. ರಾಜ್ಯದ ದಕ್ಷಿಣದ ಜಿಲ್ಲೆಗಳಲ್ಲಿ ಮನೆಗಳು, ರಸ್ತೆಗಳು ಸಂಪೂರ್ಣ ಜಲಾವೃತವಾಗಿತ್ತು. ವಿದ್ಯುತ್ ಸಂಪರ್ಕ, ಮೊಬೈಲ್ ಫೋನ್ ಸಂಪರ್ಕ ಕಡಿತಗೊಂಡು ಸಾರ್ವಜನಿಕ ಸಾರಿಗೆ ಕೂಡ ಅಸ್ತವ್ಯಸ್ತಗೊಂಡಿತ್ತು. ಭಾರೀ ಮಳೆಯಿಂದ ಸಂಭವಿಸಿದ ಅವಘಡದಿಂದ ರಾಜ್ಯದ ವಿವಿಧ ಭಾಗಗಳಲ್ಲಿ 12ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು.

ಈ ಕುರಿತು ಮಾತನಾಡಿದ ಪ್ರವಾಹದಿಂದ ನಿರಾಶ್ರಿತರಾದ ಕೋವಿಲ್‌ಪತ್‌ನ ತಮಿಳರಸಿ, ಮಸೀದಿಯಲ್ಲಿ ನಮ್ಮನ್ನು ಸ್ವಾಗತಿಸಲಾಗಿದೆ. ಅವರು ಎಂದಿಗೂ ಮಹಿಳೆಯರು ಮಸೀದಿಗೆ ಪ್ರವೇಶಿಸಬಾರದು ಎಂದು  ಹೇಳಲಿಲ್ಲ. ಅವರು ನಮಗೆ ಬೇಕಾದಷ್ಟು ದಿನ ಇಲ್ಲಿಯೇ ಇರಬಹುದು ಎಂದು ಹೇಳಿದರು. ಆಹಾರದಿಂದ ಹಿಡಿದು ಔಷಧಿಗಳವರೆಗೆ ಅವರು ನಮಗೆ ಎಲ್ಲವನ್ನೂ ಒದಗಿಸಿದ್ದಾರೆ ಎಂದು ಹೇಳಿದ್ದಾರೆ.

ಮಸೀದಿಯಲ್ಲಿ ಆಶ್ರಯ ಪಡೆದಿರುವ ಮತ್ತೋರ್ವ ಪ್ರವಾಹ ಪೀಡಿತ ದೈವಕನಿ ಅವರು ಮಾತನಾಡುತ್ತಾ, ನಾವು  4 ದಿನಗಳ ಹಿಂದೆ ನಾವು ಧರಿಸಿದ್ದ ಬಟ್ಟೆಯೊಂದಿಗೆ ಇಲ್ಲಿಗೆ ಬಂದಿದ್ದೇವೆ. ನಮ್ಮಲ್ಲಿ ಬೇರೆ ಏನೂ ಇರಲಿಲ್ಲ. ಈ ಮಸೀದಿಯಲ್ಲಿ ಉಳಿದೆಲ್ಲವನ್ನೂ ಅವರು ನಮಗೆ ಒದಗಿಸಿದ್ದಾರೆ. ಇಲ್ಲಿ ಆಶ್ರಯ ಪಡೆದಿರುವವರೆಲ್ಲರೂ ಹಿಂದೂಗಳಾಗಿದ್ದಾರೆ ಎಂದು ಹೇಳಿದ್ದಾರೆ.

ಜಮಾತ್ ಸಮಿತಿಯ ಸದಸ್ಯ ಇಮ್ರಾನ್ ಖಾನ್ ಅವರು ಈ ಬಗ್ಗೆ ಮಾತನಾಡಿದ್ದು, ಪ್ರವಾಹ ಸಂತ್ರಸ್ತರ ಜೊತೆ ಒಗ್ಗಟ್ಟನ್ನು ಪ್ರದರ್ಶಿಸುವ ಸಲುವಾಗಿ ಮತ್ತು ಸ್ಥಳಾವಕಾಶ ಕಲ್ಪಿಸಲು ಮಸೀದಿಯಲ್ಲಿ ಎಲ್ಲಾ ಸಾಮೂಹಿಕ ಪ್ರಾರ್ಥನೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಪ್ರವಾಹ ಸಂತ್ರಸ್ತ ಹಿಂದೂ ಸಮುದಾಯದ ಜನರು ಮಸೀದಿಯಿಂದ ತಮ್ಮ-ತಮ್ಮ ಮನೆಗಳಿಗೆ ಹಿಂದಿರುಗುವವರೆಗೆ ನಾವು ಯಾವುದೇ ಸಾಮೂಹಿಕ ಪ್ರಾರ್ಥನೆಗಳನ್ನು ನಡೆಸದಿರಲು ನಿರ್ಧರಿಸಿದ್ದೇವೆ. ನಾವು ಏಕತೆ ಮತ್ತು ಸಮಾನತೆಯನ್ನು ನಂಬುತ್ತೇವೆ. ಪ್ರವಾಹ ಬಂದಾಗ ನಾವು ಜಮಾಅತ್ ಸಮಿತಿಯಲ್ಲಿ ಸಭೆ ನಡೆಸಿದ್ದೇವೆ ಮತ್ತು ಮಸೀದಿಯನ್ನು ಪರಿಹಾರ ಶಿಬಿರವಾಗಿ ತೆರೆಯಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

ಮೈಚಾಂಗ್ ಚಂಡಮಾರುತದ ಪ್ರಭಾವದಿಂದ ತಮಿಳುನಾಡಿನ 4 ದಕ್ಷಿಣ ಜಿಲ್ಲೆಗಳಾದ ತಿರುನಲ್ವೇಲಿ, ತೂತುಕುಡಿ, ಕನ್ಯಾಕುಮಾರಿ ಮತ್ತು ರಾಮನಾಥಪುರಂನಲ್ಲಿ ಡಿ.17 ಮತ್ತು 18ರಂದು ಭಾರೀ ಮಳೆಯಾಗಿದೆ. ಇದರಿಂದಾಗಿ ಉಂಟಾದ ಪ್ರವಾಹದಲ್ಲಿ ಅನೇಕ ಪ್ರದೇಶಗಳು ಸಂಪರ್ಕ ಕಡಿತಗೊಂಡವು ಮತ್ತು ಹಲವಾರು ಕುಟುಂಬಗಳನ್ನು ಸ್ಥಳಾಂತರಿಸಲಾಗಿತ್ತು. ಪರಿಹಾರ ಕಾರ್ಯಗಳಿಗೆ ಸಹಾಯ ಮಾಡಲು ರಾಷ್ಟ್ರೀಯ ವಿಪತ್ತು ರಕ್ಷಣಾ ಪಡೆಗಳು ಮತ್ತು ರಾಜ್ಯ ವಿಪತ್ತು ರಕ್ಷಣಾ ಪಡೆಗಳನ್ನು ನಿಯೋಜಿಸಲಾಗಿತ್ತು.

ಇದನ್ನು ಓದಿ: ಸಂಸತ್ತಿನಲ್ಲಿ ಸಾಮೂಹಿಕ ಅಮಾನತು: ಹತ್ತಿಕ್ಕಲ್ಪಟ್ಟ 33 ಕೋಟಿಗೂ ಅಧಿಕ ಜನತೆಯ ಧ್ವನಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...