Homeಅಂತರಾಷ್ಟ್ರೀಯನಾಲ್ಕನೇ ಮಹಡಿ ಬಾಲ್ಕನಿಯಿಂದ ಬೀಳುತ್ತಿದ್ದ ಮಗುವನ್ನು ತಾಯಿ ರಕ್ಷಿಸಿದ್ದು ಹೇಗೆ ಗೊತ್ತ? ರೋಮಾಂಚನಕಾರಿ ವಿಡಿಯೋ ನೋಡಿ

ನಾಲ್ಕನೇ ಮಹಡಿ ಬಾಲ್ಕನಿಯಿಂದ ಬೀಳುತ್ತಿದ್ದ ಮಗುವನ್ನು ತಾಯಿ ರಕ್ಷಿಸಿದ್ದು ಹೇಗೆ ಗೊತ್ತ? ರೋಮಾಂಚನಕಾರಿ ವಿಡಿಯೋ ನೋಡಿ

- Advertisement -
- Advertisement -

ಒಬ್ಬ ತಾಯಿ ಮಾತ್ರ ಮಾಡಲು ಸಾಧ್ಯವಾದ ಕೆಲಸ, ಅವರಿಗೊಂದು ಸೆಲ್ಯೂಟ್ ಇರಲಿ ಎಂದು ಮೆಚ್ಚುಗೆಗೆ ಪಾತ್ರವಾದ ಸಿಸಿಟಿವಿ ವಿಡಿಯೋವೊಂದು ಯೂಟ್ಯೂಬ್ ನಲ್ಲಿ ವೈರಲ್ ಆಗಿದೆ. ನಾಲ್ಕನೇ ಮಹಡಿ ಬಾಲ್ಕನಿಯಲ್ಲಿ ಆಟವಾಡಲು ಹೋಗಿ ಆಯ ತಪ್ಪಿ ಬೀಳುತ್ತಿದ್ದ ಮಗುವಿನ ಕಾಲನ್ನು ಅರ್ಧ ಸೆಕೆಂಡ್ ನಲ್ಲಿ ಒಂದೇ ಕೈ ಹಿಡಿದು ರಕ್ಷಿಸಿದ ವಿಡಿಯೋ ನೋಡಿದರೆ ಮೈ ಝಂ ಎನ್ನುವಂತಿದೆ. ಅದೃಷ್ಟವಶಾತ್ ಮಗುವಿಗೆ ಯಾವುದೇ ಗಾಯಗಳಾಗಿಲ್ಲದೇ ಸುರಕ್ಷಿತವಾಗಿರುವ ಆಕಸ್ಮಿಕ ಘಟನೆ ಕೊಲಂಬಿಯಾದಲ್ಲಿ ನಡೆದಿದೆ.

ವಿಡಿಯೋ ನೋಡಿ

ಕಳೆದ ಬುಧವಾರ ಕೊಲಂಬಿಯಾದ ಮೆಡೆಲಿನ್ ನಲ್ಲಿ ತಾಯಿ ಮಗು ಲಿಫ್ಟ್ ನಲ್ಲಿ ನಾಲ್ಕನೇ ಮಹಡಿ ತಲುಪಿ ಲಿಫ್ಟ್ ನಿಂದ ಹೊರಬಂದಿದ್ದಾರೆ. ನಂತರ ಆ ತಾಯಿ ಮೊಬೈಲ್‍ನಲ್ಲಿ ಏನನ್ನೋ ನೋಡುತ್ತಿದ್ದಾಗ ಮಗು ಬಾಲ್ಕನಿ ಕಡೆಗೆ ಧಾವಿಸಿದೆ. ಆದರೆ ಬಾಲ್ಕನಿಯ ನಾಲ್ಕೈದು ಸರಳುಗಳು ಕಿತ್ತುಹೋಗಿದ್ದನ್ನು ಗಮನಿಸದ ಮಗು ಅದನ್ನು ಹಿಡಿದುಕೊಳ್ಳಲು ಹೋಗಿ ಏನು ಸಿಗದಿದ್ದಾಗ ಆಯ ತಪ್ಪಿದೆ ಬಿದ್ದಿದೆ. ಅದನ್ನು ಗಮನಿಸದ ತಾಯಿ ಕ್ಷಣಾರ್ಧದಲ್ಲಿ ಅತ್ತ ಧಾವಿಸಿ ಎಡಗೈನಿಂದ ಬೀಳುತ್ತಿದ್ದ ಮಗುವಿನ ಕಾಲೋಂದನ್ನು ಹಿಡಿದುಕೊಂಡಿದ್ದಾರೆ. ನಂತರ ತಮ್ಮ ಬಲಗೈನಲ್ಲಿದ್ದ ಮೊಬೈಲ್ ಕೆಳಗಿಟ್ಟು ಎರಡೂ ಕೈಯಿಂದ ಮಗುವನ್ನು ಎತ್ತಲು ಪ್ರಯತ್ನಿಸುವಾಗ ಕೆಲವರು ಸಹಾಯಕ್ಕೆ ಬಂದು ಮಗು ಮೇಲತ್ತಿದ್ದಾರೆ.

ಸಿಸಿಟಿವಿಯಲ್ಲಿ ದಾಖಲಾಗಿರುವ ಈ ವಿಡಿಯೋ ವನ್ನು ಯೂಟ್ಯೂಬ್ ಗೆ ಅಪ್‍ಲೋಡ್ ಮಾಡಿದ ಒಂದೇ ದಿನದಲ್ಲಿ ಲಕ್ಷಾಂತರ ನೋಡುಗರನ್ನು ಸೆಳೆದು ಅಬ್ಬಾ ಅನಿಸಿದೆ. ಸಾವಿರಾರು ಜನರು ಇದನ್ನು ಷೇರ್ ಮಾಡಿಕೊಂಡಿದ್ದಾರೆ. ಈ ನಡುವೆ ಆ ತಾಯಿಗೆ ಬಹಳಷ್ಟು ಜನ ಮೆಚ್ಚುಗೆಯನ್ನು ತಿಳಿಸಿದ್ದಾರೆ. ಇನ್ನು ಕೆಲವರು ಆ ಕಟ್ಟಡದ ಮಾಲೀಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಾಲ್ಕನಿಯಲ್ಲಿ ಸರಳುಗಳಿಲ್ಲದೇ ಬಿಟ್ಟಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ. ತದನಂತರ ಆ ತಪ್ಪನ್ನು ತಿದ್ದಿಕೊಂಡು ಅಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ದಿ ಡೈಲಿ ಮೇಲ್ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...