Homeಅಂತರಾಷ್ಟ್ರೀಯನಾಲ್ಕನೇ ಮಹಡಿ ಬಾಲ್ಕನಿಯಿಂದ ಬೀಳುತ್ತಿದ್ದ ಮಗುವನ್ನು ತಾಯಿ ರಕ್ಷಿಸಿದ್ದು ಹೇಗೆ ಗೊತ್ತ? ರೋಮಾಂಚನಕಾರಿ ವಿಡಿಯೋ ನೋಡಿ

ನಾಲ್ಕನೇ ಮಹಡಿ ಬಾಲ್ಕನಿಯಿಂದ ಬೀಳುತ್ತಿದ್ದ ಮಗುವನ್ನು ತಾಯಿ ರಕ್ಷಿಸಿದ್ದು ಹೇಗೆ ಗೊತ್ತ? ರೋಮಾಂಚನಕಾರಿ ವಿಡಿಯೋ ನೋಡಿ

- Advertisement -
- Advertisement -

ಒಬ್ಬ ತಾಯಿ ಮಾತ್ರ ಮಾಡಲು ಸಾಧ್ಯವಾದ ಕೆಲಸ, ಅವರಿಗೊಂದು ಸೆಲ್ಯೂಟ್ ಇರಲಿ ಎಂದು ಮೆಚ್ಚುಗೆಗೆ ಪಾತ್ರವಾದ ಸಿಸಿಟಿವಿ ವಿಡಿಯೋವೊಂದು ಯೂಟ್ಯೂಬ್ ನಲ್ಲಿ ವೈರಲ್ ಆಗಿದೆ. ನಾಲ್ಕನೇ ಮಹಡಿ ಬಾಲ್ಕನಿಯಲ್ಲಿ ಆಟವಾಡಲು ಹೋಗಿ ಆಯ ತಪ್ಪಿ ಬೀಳುತ್ತಿದ್ದ ಮಗುವಿನ ಕಾಲನ್ನು ಅರ್ಧ ಸೆಕೆಂಡ್ ನಲ್ಲಿ ಒಂದೇ ಕೈ ಹಿಡಿದು ರಕ್ಷಿಸಿದ ವಿಡಿಯೋ ನೋಡಿದರೆ ಮೈ ಝಂ ಎನ್ನುವಂತಿದೆ. ಅದೃಷ್ಟವಶಾತ್ ಮಗುವಿಗೆ ಯಾವುದೇ ಗಾಯಗಳಾಗಿಲ್ಲದೇ ಸುರಕ್ಷಿತವಾಗಿರುವ ಆಕಸ್ಮಿಕ ಘಟನೆ ಕೊಲಂಬಿಯಾದಲ್ಲಿ ನಡೆದಿದೆ.

ವಿಡಿಯೋ ನೋಡಿ

ಕಳೆದ ಬುಧವಾರ ಕೊಲಂಬಿಯಾದ ಮೆಡೆಲಿನ್ ನಲ್ಲಿ ತಾಯಿ ಮಗು ಲಿಫ್ಟ್ ನಲ್ಲಿ ನಾಲ್ಕನೇ ಮಹಡಿ ತಲುಪಿ ಲಿಫ್ಟ್ ನಿಂದ ಹೊರಬಂದಿದ್ದಾರೆ. ನಂತರ ಆ ತಾಯಿ ಮೊಬೈಲ್‍ನಲ್ಲಿ ಏನನ್ನೋ ನೋಡುತ್ತಿದ್ದಾಗ ಮಗು ಬಾಲ್ಕನಿ ಕಡೆಗೆ ಧಾವಿಸಿದೆ. ಆದರೆ ಬಾಲ್ಕನಿಯ ನಾಲ್ಕೈದು ಸರಳುಗಳು ಕಿತ್ತುಹೋಗಿದ್ದನ್ನು ಗಮನಿಸದ ಮಗು ಅದನ್ನು ಹಿಡಿದುಕೊಳ್ಳಲು ಹೋಗಿ ಏನು ಸಿಗದಿದ್ದಾಗ ಆಯ ತಪ್ಪಿದೆ ಬಿದ್ದಿದೆ. ಅದನ್ನು ಗಮನಿಸದ ತಾಯಿ ಕ್ಷಣಾರ್ಧದಲ್ಲಿ ಅತ್ತ ಧಾವಿಸಿ ಎಡಗೈನಿಂದ ಬೀಳುತ್ತಿದ್ದ ಮಗುವಿನ ಕಾಲೋಂದನ್ನು ಹಿಡಿದುಕೊಂಡಿದ್ದಾರೆ. ನಂತರ ತಮ್ಮ ಬಲಗೈನಲ್ಲಿದ್ದ ಮೊಬೈಲ್ ಕೆಳಗಿಟ್ಟು ಎರಡೂ ಕೈಯಿಂದ ಮಗುವನ್ನು ಎತ್ತಲು ಪ್ರಯತ್ನಿಸುವಾಗ ಕೆಲವರು ಸಹಾಯಕ್ಕೆ ಬಂದು ಮಗು ಮೇಲತ್ತಿದ್ದಾರೆ.

ಸಿಸಿಟಿವಿಯಲ್ಲಿ ದಾಖಲಾಗಿರುವ ಈ ವಿಡಿಯೋ ವನ್ನು ಯೂಟ್ಯೂಬ್ ಗೆ ಅಪ್‍ಲೋಡ್ ಮಾಡಿದ ಒಂದೇ ದಿನದಲ್ಲಿ ಲಕ್ಷಾಂತರ ನೋಡುಗರನ್ನು ಸೆಳೆದು ಅಬ್ಬಾ ಅನಿಸಿದೆ. ಸಾವಿರಾರು ಜನರು ಇದನ್ನು ಷೇರ್ ಮಾಡಿಕೊಂಡಿದ್ದಾರೆ. ಈ ನಡುವೆ ಆ ತಾಯಿಗೆ ಬಹಳಷ್ಟು ಜನ ಮೆಚ್ಚುಗೆಯನ್ನು ತಿಳಿಸಿದ್ದಾರೆ. ಇನ್ನು ಕೆಲವರು ಆ ಕಟ್ಟಡದ ಮಾಲೀಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಾಲ್ಕನಿಯಲ್ಲಿ ಸರಳುಗಳಿಲ್ಲದೇ ಬಿಟ್ಟಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ. ತದನಂತರ ಆ ತಪ್ಪನ್ನು ತಿದ್ದಿಕೊಂಡು ಅಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ದಿ ಡೈಲಿ ಮೇಲ್ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...