Homeಅಂತರಾಷ್ಟ್ರೀಯನಾಲ್ಕನೇ ಮಹಡಿ ಬಾಲ್ಕನಿಯಿಂದ ಬೀಳುತ್ತಿದ್ದ ಮಗುವನ್ನು ತಾಯಿ ರಕ್ಷಿಸಿದ್ದು ಹೇಗೆ ಗೊತ್ತ? ರೋಮಾಂಚನಕಾರಿ ವಿಡಿಯೋ ನೋಡಿ

ನಾಲ್ಕನೇ ಮಹಡಿ ಬಾಲ್ಕನಿಯಿಂದ ಬೀಳುತ್ತಿದ್ದ ಮಗುವನ್ನು ತಾಯಿ ರಕ್ಷಿಸಿದ್ದು ಹೇಗೆ ಗೊತ್ತ? ರೋಮಾಂಚನಕಾರಿ ವಿಡಿಯೋ ನೋಡಿ

- Advertisement -
- Advertisement -

ಒಬ್ಬ ತಾಯಿ ಮಾತ್ರ ಮಾಡಲು ಸಾಧ್ಯವಾದ ಕೆಲಸ, ಅವರಿಗೊಂದು ಸೆಲ್ಯೂಟ್ ಇರಲಿ ಎಂದು ಮೆಚ್ಚುಗೆಗೆ ಪಾತ್ರವಾದ ಸಿಸಿಟಿವಿ ವಿಡಿಯೋವೊಂದು ಯೂಟ್ಯೂಬ್ ನಲ್ಲಿ ವೈರಲ್ ಆಗಿದೆ. ನಾಲ್ಕನೇ ಮಹಡಿ ಬಾಲ್ಕನಿಯಲ್ಲಿ ಆಟವಾಡಲು ಹೋಗಿ ಆಯ ತಪ್ಪಿ ಬೀಳುತ್ತಿದ್ದ ಮಗುವಿನ ಕಾಲನ್ನು ಅರ್ಧ ಸೆಕೆಂಡ್ ನಲ್ಲಿ ಒಂದೇ ಕೈ ಹಿಡಿದು ರಕ್ಷಿಸಿದ ವಿಡಿಯೋ ನೋಡಿದರೆ ಮೈ ಝಂ ಎನ್ನುವಂತಿದೆ. ಅದೃಷ್ಟವಶಾತ್ ಮಗುವಿಗೆ ಯಾವುದೇ ಗಾಯಗಳಾಗಿಲ್ಲದೇ ಸುರಕ್ಷಿತವಾಗಿರುವ ಆಕಸ್ಮಿಕ ಘಟನೆ ಕೊಲಂಬಿಯಾದಲ್ಲಿ ನಡೆದಿದೆ.

ವಿಡಿಯೋ ನೋಡಿ

ಕಳೆದ ಬುಧವಾರ ಕೊಲಂಬಿಯಾದ ಮೆಡೆಲಿನ್ ನಲ್ಲಿ ತಾಯಿ ಮಗು ಲಿಫ್ಟ್ ನಲ್ಲಿ ನಾಲ್ಕನೇ ಮಹಡಿ ತಲುಪಿ ಲಿಫ್ಟ್ ನಿಂದ ಹೊರಬಂದಿದ್ದಾರೆ. ನಂತರ ಆ ತಾಯಿ ಮೊಬೈಲ್‍ನಲ್ಲಿ ಏನನ್ನೋ ನೋಡುತ್ತಿದ್ದಾಗ ಮಗು ಬಾಲ್ಕನಿ ಕಡೆಗೆ ಧಾವಿಸಿದೆ. ಆದರೆ ಬಾಲ್ಕನಿಯ ನಾಲ್ಕೈದು ಸರಳುಗಳು ಕಿತ್ತುಹೋಗಿದ್ದನ್ನು ಗಮನಿಸದ ಮಗು ಅದನ್ನು ಹಿಡಿದುಕೊಳ್ಳಲು ಹೋಗಿ ಏನು ಸಿಗದಿದ್ದಾಗ ಆಯ ತಪ್ಪಿದೆ ಬಿದ್ದಿದೆ. ಅದನ್ನು ಗಮನಿಸದ ತಾಯಿ ಕ್ಷಣಾರ್ಧದಲ್ಲಿ ಅತ್ತ ಧಾವಿಸಿ ಎಡಗೈನಿಂದ ಬೀಳುತ್ತಿದ್ದ ಮಗುವಿನ ಕಾಲೋಂದನ್ನು ಹಿಡಿದುಕೊಂಡಿದ್ದಾರೆ. ನಂತರ ತಮ್ಮ ಬಲಗೈನಲ್ಲಿದ್ದ ಮೊಬೈಲ್ ಕೆಳಗಿಟ್ಟು ಎರಡೂ ಕೈಯಿಂದ ಮಗುವನ್ನು ಎತ್ತಲು ಪ್ರಯತ್ನಿಸುವಾಗ ಕೆಲವರು ಸಹಾಯಕ್ಕೆ ಬಂದು ಮಗು ಮೇಲತ್ತಿದ್ದಾರೆ.

ಸಿಸಿಟಿವಿಯಲ್ಲಿ ದಾಖಲಾಗಿರುವ ಈ ವಿಡಿಯೋ ವನ್ನು ಯೂಟ್ಯೂಬ್ ಗೆ ಅಪ್‍ಲೋಡ್ ಮಾಡಿದ ಒಂದೇ ದಿನದಲ್ಲಿ ಲಕ್ಷಾಂತರ ನೋಡುಗರನ್ನು ಸೆಳೆದು ಅಬ್ಬಾ ಅನಿಸಿದೆ. ಸಾವಿರಾರು ಜನರು ಇದನ್ನು ಷೇರ್ ಮಾಡಿಕೊಂಡಿದ್ದಾರೆ. ಈ ನಡುವೆ ಆ ತಾಯಿಗೆ ಬಹಳಷ್ಟು ಜನ ಮೆಚ್ಚುಗೆಯನ್ನು ತಿಳಿಸಿದ್ದಾರೆ. ಇನ್ನು ಕೆಲವರು ಆ ಕಟ್ಟಡದ ಮಾಲೀಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಾಲ್ಕನಿಯಲ್ಲಿ ಸರಳುಗಳಿಲ್ಲದೇ ಬಿಟ್ಟಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ. ತದನಂತರ ಆ ತಪ್ಪನ್ನು ತಿದ್ದಿಕೊಂಡು ಅಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ದಿ ಡೈಲಿ ಮೇಲ್ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...