Homeಅಂತರಾಷ್ಟ್ರೀಯನಾಲ್ಕನೇ ಮಹಡಿ ಬಾಲ್ಕನಿಯಿಂದ ಬೀಳುತ್ತಿದ್ದ ಮಗುವನ್ನು ತಾಯಿ ರಕ್ಷಿಸಿದ್ದು ಹೇಗೆ ಗೊತ್ತ? ರೋಮಾಂಚನಕಾರಿ ವಿಡಿಯೋ ನೋಡಿ

ನಾಲ್ಕನೇ ಮಹಡಿ ಬಾಲ್ಕನಿಯಿಂದ ಬೀಳುತ್ತಿದ್ದ ಮಗುವನ್ನು ತಾಯಿ ರಕ್ಷಿಸಿದ್ದು ಹೇಗೆ ಗೊತ್ತ? ರೋಮಾಂಚನಕಾರಿ ವಿಡಿಯೋ ನೋಡಿ

- Advertisement -
- Advertisement -

ಒಬ್ಬ ತಾಯಿ ಮಾತ್ರ ಮಾಡಲು ಸಾಧ್ಯವಾದ ಕೆಲಸ, ಅವರಿಗೊಂದು ಸೆಲ್ಯೂಟ್ ಇರಲಿ ಎಂದು ಮೆಚ್ಚುಗೆಗೆ ಪಾತ್ರವಾದ ಸಿಸಿಟಿವಿ ವಿಡಿಯೋವೊಂದು ಯೂಟ್ಯೂಬ್ ನಲ್ಲಿ ವೈರಲ್ ಆಗಿದೆ. ನಾಲ್ಕನೇ ಮಹಡಿ ಬಾಲ್ಕನಿಯಲ್ಲಿ ಆಟವಾಡಲು ಹೋಗಿ ಆಯ ತಪ್ಪಿ ಬೀಳುತ್ತಿದ್ದ ಮಗುವಿನ ಕಾಲನ್ನು ಅರ್ಧ ಸೆಕೆಂಡ್ ನಲ್ಲಿ ಒಂದೇ ಕೈ ಹಿಡಿದು ರಕ್ಷಿಸಿದ ವಿಡಿಯೋ ನೋಡಿದರೆ ಮೈ ಝಂ ಎನ್ನುವಂತಿದೆ. ಅದೃಷ್ಟವಶಾತ್ ಮಗುವಿಗೆ ಯಾವುದೇ ಗಾಯಗಳಾಗಿಲ್ಲದೇ ಸುರಕ್ಷಿತವಾಗಿರುವ ಆಕಸ್ಮಿಕ ಘಟನೆ ಕೊಲಂಬಿಯಾದಲ್ಲಿ ನಡೆದಿದೆ.

ವಿಡಿಯೋ ನೋಡಿ

ಕಳೆದ ಬುಧವಾರ ಕೊಲಂಬಿಯಾದ ಮೆಡೆಲಿನ್ ನಲ್ಲಿ ತಾಯಿ ಮಗು ಲಿಫ್ಟ್ ನಲ್ಲಿ ನಾಲ್ಕನೇ ಮಹಡಿ ತಲುಪಿ ಲಿಫ್ಟ್ ನಿಂದ ಹೊರಬಂದಿದ್ದಾರೆ. ನಂತರ ಆ ತಾಯಿ ಮೊಬೈಲ್‍ನಲ್ಲಿ ಏನನ್ನೋ ನೋಡುತ್ತಿದ್ದಾಗ ಮಗು ಬಾಲ್ಕನಿ ಕಡೆಗೆ ಧಾವಿಸಿದೆ. ಆದರೆ ಬಾಲ್ಕನಿಯ ನಾಲ್ಕೈದು ಸರಳುಗಳು ಕಿತ್ತುಹೋಗಿದ್ದನ್ನು ಗಮನಿಸದ ಮಗು ಅದನ್ನು ಹಿಡಿದುಕೊಳ್ಳಲು ಹೋಗಿ ಏನು ಸಿಗದಿದ್ದಾಗ ಆಯ ತಪ್ಪಿದೆ ಬಿದ್ದಿದೆ. ಅದನ್ನು ಗಮನಿಸದ ತಾಯಿ ಕ್ಷಣಾರ್ಧದಲ್ಲಿ ಅತ್ತ ಧಾವಿಸಿ ಎಡಗೈನಿಂದ ಬೀಳುತ್ತಿದ್ದ ಮಗುವಿನ ಕಾಲೋಂದನ್ನು ಹಿಡಿದುಕೊಂಡಿದ್ದಾರೆ. ನಂತರ ತಮ್ಮ ಬಲಗೈನಲ್ಲಿದ್ದ ಮೊಬೈಲ್ ಕೆಳಗಿಟ್ಟು ಎರಡೂ ಕೈಯಿಂದ ಮಗುವನ್ನು ಎತ್ತಲು ಪ್ರಯತ್ನಿಸುವಾಗ ಕೆಲವರು ಸಹಾಯಕ್ಕೆ ಬಂದು ಮಗು ಮೇಲತ್ತಿದ್ದಾರೆ.

ಸಿಸಿಟಿವಿಯಲ್ಲಿ ದಾಖಲಾಗಿರುವ ಈ ವಿಡಿಯೋ ವನ್ನು ಯೂಟ್ಯೂಬ್ ಗೆ ಅಪ್‍ಲೋಡ್ ಮಾಡಿದ ಒಂದೇ ದಿನದಲ್ಲಿ ಲಕ್ಷಾಂತರ ನೋಡುಗರನ್ನು ಸೆಳೆದು ಅಬ್ಬಾ ಅನಿಸಿದೆ. ಸಾವಿರಾರು ಜನರು ಇದನ್ನು ಷೇರ್ ಮಾಡಿಕೊಂಡಿದ್ದಾರೆ. ಈ ನಡುವೆ ಆ ತಾಯಿಗೆ ಬಹಳಷ್ಟು ಜನ ಮೆಚ್ಚುಗೆಯನ್ನು ತಿಳಿಸಿದ್ದಾರೆ. ಇನ್ನು ಕೆಲವರು ಆ ಕಟ್ಟಡದ ಮಾಲೀಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಾಲ್ಕನಿಯಲ್ಲಿ ಸರಳುಗಳಿಲ್ಲದೇ ಬಿಟ್ಟಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ. ತದನಂತರ ಆ ತಪ್ಪನ್ನು ತಿದ್ದಿಕೊಂಡು ಅಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ದಿ ಡೈಲಿ ಮೇಲ್ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...