Homeಮುಖಪುಟಮಗನ ಶಿಕ್ಷಣಕ್ಕೆ ಹಣ ಹೊಂದಿಸಲು ತಾಯಿಯ ಪ್ರಾಣ ತ್ಯಾಗ: ಬಸ್‌ನ ಮುಂದೆ ಹಾರಿ ಆತ್ಮಹತ್ಯೆ!

ಮಗನ ಶಿಕ್ಷಣಕ್ಕೆ ಹಣ ಹೊಂದಿಸಲು ತಾಯಿಯ ಪ್ರಾಣ ತ್ಯಾಗ: ಬಸ್‌ನ ಮುಂದೆ ಹಾರಿ ಆತ್ಮಹತ್ಯೆ!

- Advertisement -
- Advertisement -

ಮಗನ ಶಿಕ್ಷಣಕ್ಕೆ ಹಣ ಹೊಂದಿಸಲು ಸಾಧ್ಯವಾಗದೆ ‘ಸಫಾಯಿ ಕರ್ಮಚಾರಿ’ (ಸ್ವಚ್ಛತಾ ಸಿಬ್ಬಂದಿ) ಮಹಿಳೆಯೊಬ್ಬರು ಬಸ್ಸಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ವರದಿಗಳ ಪ್ರಕಾರ, ಸೇಲಂ ಜಿಲ್ಲೆಯ ಕಲೆಕ್ಟರ್ ಕಚೇರಿಯಲ್ಲಿ ‘ಸಫಾಯಿ ಕರ್ಮಚಾರಿ’ (ಸ್ವಚ್ಛತಾ ಸಿಬ್ಬಂದಿ) ಆಗಿ ಕೆಲಸ ಮಾಡುವ ಮಹಿಳೆಯೊಬ್ಬರು ಉದ್ದೇಶಪೂರ್ವಕವಾಗಿ ಬಸ್‌ನ ಮುಂದೆ ಜಿಗಿದಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಈ ಘಟನೆಯ ಹಿಂದೆ ಒಂದು ಕಥೆ ಇದೆ. ಅಪಘಾತದಲ್ಲಿ ಮೃತಪಟ್ಟರೆ ಕುಟುಂಬಕ್ಕೆ ಸರ್ಕಾರ 45,000 ರೂ.ಗಳನ್ನು ನೀಡುತ್ತದೆ ಆ ಮಹಿಳೆಗೆ ಯಾರೋ ಒಬ್ಬರು ಎಂದು ದಾರಿ ತಪ್ಪಿಸಿದ್ದಾರೆ. ಅದನ್ನೇ ನಂಬಿದ ಆ ಮುಗ್ಧ ಮಹಿಳೆ, ಮಗನ ಕಾಲೇಜು ಶುಲ್ಕ ಪಾವತಿಸಲು ಹಣದ ಅಗತ್ಯವಿದೆ ಎಂದು ತನ್ನ ಜೀವನವನ್ನು ಕೊನೆಗೊಳಿಸಲು ನಿರ್ಧರಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಇದೀಗ ಈ ಹೃದಯ ವಿದ್ರಾವಕ ಘಟನೆಯ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಅಗಿದೆ. ಈ ವೀಡಿಯೊವನ್ನು ಟ್ವೀಟ್ ಮಾಡಿದ ಜನರು ಮತ್ತು ಟ್ವಿಟರ್ ಬಳಕೆದಾರರು ಘಟನೆಯ ಬಗ್ಗೆ ತಮ್ಮ ದುಃಖ ಮತ್ತು ಕೋಪವನ್ನು ವ್ಯಕ್ತಪಡಿಸಿದ್ದಾರೆ. ಮಗನ ಫೀಸ್ ಕಟ್ಟಿದ್ದಕ್ಕೆ ತಾಯಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಸನ್ನಿವೇಶವನ್ನು ಹಲವರು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಮಗನ ಶಿಕ್ಷಣದ ವೆಚ್ಚ ಭರಿಸಲು ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೇಲಂನ ಕಲೆಕ್ಟರ್ ಕಛೇರಿಯಲ್ಲಿ ‘ಸಫಾಯಿ ಕರ್ಮಚಾರಿ’ಯಾಗಿ ಕೆಲಸ ಮಾಡುತ್ತಿರುವ ತಾಯಿ ಯಾರೋ ತಪ್ಪುದಾರಿಗೆಳೆದಿದ್ದರಿಂದ, ಮಗನ ಕಾಲೇಜು ಶುಲ್ಕ 45,000 ಪಾವತಿಸಲು ಸರ್ಕಾರದಿಂದ ಹಣಕಾಸಿನ ನೆರವು ಪಡೆಯಲು ಬಸ್‌ಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗನ ಕಾಲೇಜ್ ಫೀಸ್ ಕಟ್ಟಲು ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳಬೇಕಾಯಿತು, ಆದರೂ ನಾವು ‘ಅಭಿವೃದ್ಧಿ’ಯ ಬಗ್ಗೆ ಬಡಾಯಿ ಕೊಚ್ಚಿಕೊಳ್ಳುತ್ತಿದ್ದೇವೆಯೇ?!” ಎಂದು ಟ್ವೀಟ್ ಮಾಡಿದ್ದಾರೆ.

”ಭಾರತೀಯ #ಶಿಕ್ಷಣದ ಕಳಪೆ ಸ್ಥಿತಿಯನ್ನು ಎತ್ತಿ ತೋರಿಸುವ ಘಟನೆ ಸೇಲಂನಲ್ಲಿ ನಡೆದಿದೆ. ಸಫಾಯಿ ಕರ್ಮಚಾರಿ ಮಹಿಳೆ ಸರ್ಕಾರದ ನೆರವು ಪಡೆಯಲು ಬಸ್ಸಿನ ಮುಂದೆ ಜಿಗಿದಿದ್ದಾಳೆ. ಆ ಹಣವನ್ನು ಮಗನ ಕಾಲೇಜು ಶುಲ್ಕ 45,000ರೂ. ಪಾವತಿಸಲು ಅವಳು ಬಯಸಿದ್ದಳು….” ಎಂದು ಟ್ವೀಟ್ ಮಾಡಿದ್ದಾರೆ.

”ಇದೇ ರೀತಿಯ ಘಟನೆ ಕಳೆದ ತಿಂಗಳು ಒಡಿಶಾದಲ್ಲಿ ನಡೆದಿತ್ತು. ವಿಶ್ವಗುರುವಿನ ಯುಗದಲ್ಲಿ ಶಿಕ್ಷಣಕ್ಕಾಗಿ ಎಂಥ ದುರಂತಕ್ಕೆ ನಾವೆಲ್ಲ ಸಾಕ್ಷಿಯಾಗಬೇಕಿದೆ, ಬಹಳ ದುಃಖವಾಗುತ್ತಿದೆ” ಎಂದು ಒಬ್ಬರು ಟ್ವೀಟ್ ಮಾಡಿದ್ದಾರೆ.

”ನಮ್ಮ ದೇಶದಲ್ಲಿ ಇನ್ನೂ ಬಡತನವಿದೆ ಎಂದರೆ ಇದು ನಾಚಿಕೆಯಿಂದ ತಲೆತಗ್ಗಿಸುವಂಥ ವಿಷಯ. ರಾಜಕಾರಣಿಗಳು ಶ್ರೀಮಂತ ಕೈಗಾರಿಕೋದ್ಯಮಿಗಳ ಸಾಲವನ್ನು ಮನ್ನಾ ಮಾಡುವಲ್ಲಿ ಮುಳುಗಿದ್ದಾರೆ. ಹಾಗಾಗಿ ಬಡವರು ಬಡವರಾಗಿಯೇ ಉಳಿದು ಅದರ ಭಾರ ತಾಳಲಾರದೆ ಇಂಥ ನಿರ್ಧಾರಕ್ಕೆ ಬರಬೇಕಾಗುತ್ತಿರುವುದು ವಿಷಾದನೀಯ” ಎಂದು ಮತ್ತೊಬ್ಬರು ಹೇಳಿದ್ದಾರೆ.

ಪ್ರಕರಣದಲ್ಲಿ ಪೊಲೀಸ್ ತನಿಖೆ ನಡೆಯುತ್ತಿದ್ದು, ಪೊಲೀಸರು ಎಲ್ಲಾ ಕೋನಗಳಿಂದ ಪ್ರಕರಣವನ್ನು ತನಿಖೆ ನಡೆಸುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ. ಪೊಲೀಸರ ತನಿಖೆಯಲ್ಲಿ ಈ ಅಂಶ ಬೆಳಕಿಗೆ ಬಂದಿದೆ ಎಂದು ವರದಿಗಳು ತಿಳಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...