Homeಕರ್ನಾಟಕಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ಪ್ರಾಣ ಕಳೆದುಕೊಂಡ ತಾಯಿ; ಕಲಬುರಗಿಯಲ್ಲಿ ಮತ್ತೊಂದು ಘಟನೆ

ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ಪ್ರಾಣ ಕಳೆದುಕೊಂಡ ತಾಯಿ; ಕಲಬುರಗಿಯಲ್ಲಿ ಮತ್ತೊಂದು ಘಟನೆ

- Advertisement -
- Advertisement -

ತನ್ನ ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿಡುವ ಹೃದಯವಿದ್ರಾವಕ ಘಟನೆ ಕಲಬುರಗಿಯ ಪಂಚಶೀಲ ನಗರದಲ್ಲಿ ಸೋಮವಾರ ನಡೆದಿದೆ. ಶನಿವಾರವಷ್ಟೇ ಜಿಲ್ಲೆಯ ಮಾಡಿಯಾಳ ಗ್ರಾಮದಲ್ಲಿ ತನ್ನ ಮೂವರು ಮಕ್ಕಳೊಂದಿಗೆ ಗೃಹಣಿಯೊಬ್ಬರು ಬಾವಿಗೆ ಜಿಗಿದು ಪ್ರಾಣ ಕಳೆದುಕೊಂಡಿದ್ದರು.

ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆಯನ್ನು 27 ವರ್ಷದ ದೀಕ್ಷಾ ಶರ್ಮಾ ಎಂದು ಗುರುತಿಸಲಾಗಿದೆ. ಅವರು ತನ್ನ ಇಬ್ಬರು ಮಕ್ಕಳಾದ 4 ವರ್ಷದ ದನಂಜಯ್ ಮತ್ತು 2 ವರ್ಷದ ಮಗಳು ಸಿಂಚನಾ ಅವರನ್ನು ಹಗ್ಗದಲ್ಲಿ ಕಟ್ಟಿ ಹಾಕಿ ಬೆಂಕಿ ಹಚ್ಚಿಕೊಂಡಿದ್ದಾರೆ.

ಘಟನೆಯಲ್ಲಿ ಮಗಳು ಸಿಂಚನಾ ಅವರು ತನ್ನ ತಾಯಿ ದೀಕ್ಷಾ ಶರ್ಮಾ ಜೊತೆಗೆ ಮೃತಪಟ್ಟಿದ್ದರೆ, ಮಗ ದನಂಜಯ್ ಗಂಭೀರ ಸುಟ್ಟ ಗಾಯಗೊಳೊಂದಿಗೆ ಆಸ್ಪತ್ರೆ ಸೇರಿದ್ದಾರೆ.

ಇದನ್ನೂ ಓದಿ: ಮೂವರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿದ ತಾಯಿ; ಒಂದು ಮಗುವಿನ ರಕ್ಷಣೆ

ಮೂಲತಃ ಕಾಳಗಿ ತಾಲೂಕಿನ ದೀಕ್ಷಾ ಅವರು ಪಂಚಶೀಲ ನಗರದ ವಸಂತರಾವ್ ಶರ್ಮಾ ಎಂಬವರನ್ನು ಐದು ವರ್ಷಗಳ ಹಿಂದೆ ಮದುವೆಯಾಗಿದ್ದರು. ಆದರೆ, ದೀಕ್ಷಾಗೆ ಗಂಡನ ಮನೆಯವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಮತ್ತು ತವರು‌ ಮನೆಗೆ ಕಳುಹಿಸುತ್ತಿರಲಿಲ್ಲ ಎಂದು ದೂರಲಾಗಿದೆ.

ಕೆಲವು ಮಾಧ್ಯಮಗಳು ಪತಿಗೆ ಇರುವ ಅಕ್ರಮ ಸಂಬಂಧದಿಂದ ಅವರು ಬೇಸೆತ್ತಿದ್ದರು ಎಂದು ವರದಿ ಮಾಡಿದೆ.

ವಸಂತ ಶರ್ಮಾ ಇತ್ತೀಚೆಗೆ ತವರು ಮನೆಯಿಂದ ಹಣ ತರುವ ವಿಚಾರದಲ್ಲಿ ದೀಕ್ಷಾ ಅವರಿಗೆ ಪದೇ ಪದೇ ಕಿರುಕುಳ ನೀಡುತ್ತಿದ್ದ ಎಂದು ಪ್ರಜಾವಾಣಿ ವರದಿ ಮಾಡಿದೆ. “ಈ ಸಂಬಂಧ ಮಹಿಳೆಯರ ಪೋಷಕರು ನೀಡಿದ ದೂರಿನ ಮೇರೆಗೆ ಗಂಡ ವಸಂತ, ಅತ್ತೆ ನೀಲಮ್ಮ, ವಿಠ್ಠಲ ಎಂಬುವವರು ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸ್ಟೇಶನ್‌ ಬಜಾರ್ ಠಾಣೆ ಪೊಲೀಸ್‌ ಇನ್‌ಸ್ಪೆಕ್ಟರ್ ಸಿದ್ದರಾಮೇಶ ಗಡೇದ ತಿಳಿಸಿದ್ದಾರೆ” ಎಂದು ಅದು ವರದಿಯಲ್ಲಿ ತಿಳಿಸಿದೆ.

“ಗಂಡನ ಮನೆಯವರೇ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ ಎಂದು ದೀಕ್ಷಾ ಕುಟುಂಬದವರು ಆರೋಪಿಸಿದ್ದಾರೆ‌” ಎಂದು ಈಟಿವಿ ವರದಿ ಮಾಡಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರೀಶಿಲನೆ ನಡೆಸಿದ್ದಾರೆ. ಈ ಕುರಿತು ಸ್ಪೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸತ್ತಿದ್ದಾರೆ.

ಇದನ್ನೂ ಓದಿ: ಲೋಕಾಯುಕ್ತ ವಕೀಲನಿಂದ ಅತ್ಯಾಚಾರ ಯತ್ನ; ಆರೋಪಿ ಬಂಧನ ವಿಳಂಬ ಪ್ರಶ್ನಿಸಿ ಸಂತ್ರಸ್ತೆ ವಿಡಿಯೊ

ಶನಿವಾರವಷ್ಟೇ ಜಿಲ್ಲೆಯ ಮಾಡಿಯಾಳ ಗ್ರಾಮದಲ್ಲಿ ತನ್ನ ಮೂವರು ಮಕ್ಕಳೊಂದಿಗೆ ಗೃಹಣಿಯೊಬ್ಬರು ಬಾವಿಗೆ ಜಿಗಿದು ಪ್ರಾಣ ಕಳೆದುಕೊಂಡಿದ್ದರು. ಈ ಘಟನೆ ಮಾಸುವ ಮುನ್ನವೆ ಜಿಲ್ಲೆಯಲ್ಲಿ ಮತ್ತೊಂದು ಅಂತಹದ್ದೇ ಘಟನೆ ಸಂಭವಿಸಿದೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ – 104

ಇದನ್ನೂ ಓದಿ: ಇರುವ ಮನೆಗಳ ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಹಂಚುವುದು ಯಾವ ನ್ಯಾಯ?: ಬಿಡಿಎ ವಿರುದ್ದ ಆಕ್ರೊಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...