Homeಕರ್ನಾಟಕ"ಕರ್ನಾಟಕದ ಉದ್ಯೋಗಗಳು ಕನ್ನಡಿಗರಿಗೇ ಸಿಗಲಿ": ಸ್ವಾತಂತ್ರ್ಯ ದಿನಾಚರಣೆಯಂದು ದಿಟ್ಟ ಹೋರಾಟ...

“ಕರ್ನಾಟಕದ ಉದ್ಯೋಗಗಳು ಕನ್ನಡಿಗರಿಗೇ ಸಿಗಲಿ”: ಸ್ವಾತಂತ್ರ್ಯ ದಿನಾಚರಣೆಯಂದು ದಿಟ್ಟ ಹೋರಾಟ…

- Advertisement -
- Advertisement -

“ಕರ್ನಾಟಕದ ಉದ್ಯೋಗಗಳು ಕನ್ನಡಿಗರಿಗೇ ಸಿಗಲಿ” ಎಂದು ಒತ್ತಾಯಿಸಿ  ಅಗಸ್ಟ್ 14 ಮತ್ತು 15 ರಂದು ಬೆಂಗಳೂರಿನ ಆನಂದರಾವ್ ವೃತ್ತದ ಬಳಿಯಿರುವ ಗಾಂಧಿ ಪ್ರತಿಮೆ ಬಳಿ ಉಪವಾಸ ಸತ್ಯಾಗ್ರಹ ಮತ್ತು ಅಹೋರಾತ್ರಿ ಧರಣಿಯ ಬಗ್ಗೆ ನಡೆಯಲಿದೆ.

ಕರ್ನಾಟಕದ ಯುವಜನತೆ ಎದುರಿಸುತ್ತಿರುವ ಸಮಸ್ಯೆಗಳಲ್ಲಿ ನಿರುದ್ಯೋಗ ಸಮಸ್ಯೆ ಪ್ರಮುಖವಾದುದು. ಸಾಕಷ್ಟು ಉದ್ಯೋಗ ಸೃಷ್ಟಿಯಾಗದೇ ಇರುವುದು ಒಂದೆಡೆಯಾದರೆ ಇನ್ನೊಂದೆಡೆ ಇಲ್ಲಿ ಸೃಷ್ಟಿಯಾದ ಉದ್ಯೋಗಗಳನ್ನು ಪರಭಾಷಿಕರು ಬಂದು ಕಬಳಿಸಿಕೊಳ್ಳುತ್ತಿದ್ದಾರೆ. ಹಾಗಾಗಿ ನಮ್ಮ ನೆಲದಲ್ಲಿನ ಉದ್ಯೋಗ ನಮ್ಮವರಿಗೆ ಸಿಗದಂತಾಗಿದೆ. ರಾಜ್ಯದ ಸಂಪನ್ಮೂಲಗಳನ್ನು ಬಳಸಿಕೊಂಡು ಇಲ್ಲಿಯೇ ಬೀಡುಬಿಟ್ಟಿದ್ದರೂ ಇಲ್ಲಿನ ಬಹುರಾಷ್ತ್ರೀಯ ಕಂಪನಿಗಳು, ಬ್ಯಾಂಕುಗಳು ಮತ್ತು ಇತರ ಉದ್ಯಮಗಳು ಕನ್ನಡಿಗರಿಗೆ ಕೆಲಸ ಕೊಡಲು ಮೀನಮೇಷ ಎಣಿಸುತ್ತಿವೆ. ಹಾಗಾಗಿ ನಮ್ಮ ಕನ್ನಡಿಗರ ಅನ್ನಕ್ಕೆ ಇನ್ನಷ್ಟು ಕುತ್ತು ಬರುವುದನ್ನು ಹೇಗಾದರೂ ಮಾಡಿ ತಡೆಯಲೇಬೇಕೆಂದು ನಿರ್ಧರಿಸಿ ಈ ಹೋರಾಟ ಹಮ್ಮಿಕೊಂಡಿದ್ದೇವೆ ಎನ್ನುತ್ತಾರೆ ಕರ್ನಾಟಕ ರಣಧೀರ ಪಡೆಯ ಅಧ್ಯಕ್ಷರಾದ ಬಿ.ಹರೀಶ್ ಕುಮಾರ್.

ಈ ಹೋರಾಟದ ಮತ್ತೊಬ್ಬ ಪ್ರಮುಖರಾದ ರಮಾನಂದ ಅಂಕೋಲಾರವರು ಮಾತನಾಡಿ, ರಾಜ್ಯದಲ್ಲಿ ಜನಜಾಗೃತಿ ಮೂಡಿಸುವ ಜೊತೆಗೆ ನಮ್ಮನ್ನಾಳುವ ಸರ್ಕಾರಗಳ ಗಮನ ಸೆಳೆಯಲು ಮೇ ತಿಂಗಳ ೩ನೇ ತಾರೀಖಿನಂದು ನಾವು #KarnatakaJobsForKannadigas ಎಂಬ ಅಡಿಬರಹದ ಟ್ವಿಟರ್ ಅಭಿಯಾನವನ್ನು ಹಮ್ಮಿಕೊಂಡಿದ್ದೆವು. ಇಡಿ ದೇಶವೇ ನಮ್ಮತ್ತ ತಿರುಗಿ ನೋಡುವಂತೆ ನಾಡಾಭಿಮಾನಿಗಳ ಸಹಕಾರದಿಂದ ನಡೆದ ಈ ಅಭಿಯಾನಕ್ಕೆ ಬೆಂಬಲ‌ಸೂಚಿಸುತ್ತಾ ಆಗಿನ ಮುಖ್ಯಮಂತ್ರಿಗಳಾದ  ಶ್ರೀಯುತ ಕುಮಾರ ಸ್ವಾಮಿಯವರು “ಕನ್ನಡಿಗರ ಹಕ್ಕೊತ್ತಾಯ ಪರಿಗಣಿಸಿ ಕಾನೂನಿನ ಚೌಕಟ್ಟಿನಲ್ಲಿ ಹೇಗೆ ಕಾರ್ಯರೂಪಕ್ಕೆ ತರಬಹುದು ಎಂದು ಸಲಹೆ ಪಡೆಯಲಾಗುವುದು” ಎಂದು ಹೇಳಿದ್ದರು. ನಂತರ ಮೇ 18ರಂದು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೃಹತ್ ಮಾನವ ಸರಪಳಿ ರಚಿಸಿ ಮತ್ತೊಮ್ಮೆ ನಮ್ಮ ಹಕ್ಕೊತ್ತಾಯವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದೇವೆ. ನಂತರ ಕರ್ನಾಟಕದ ೧೫ಕ್ಕೂ ಹೆಚ್ಚು ಜಿಲ್ಲೆಗಳ ೫೦೦ಕ್ಕೂ ಹೆಚ್ಚು ಬ್ಯಾಂಕ್ ಶಾಖೆಗಳಿಗೆ ನಮ್ಮ ಕಾರ್ಯಕರ್ತರು ಖುದ್ದಾಗಿ ತೆರಳಿ ಕನ್ನಡಿಗರಿಗೇ ಉದ್ಯೋಗ ಕೊಡುವಂತೆ ಮನವಿ ಮಾಡಿದ್ದೇವೆ ಎನ್ನುತ್ತಾರೆ.

ಅಭಿಯಾನದ ಯಶಸ್ಸು ಎನ್ನುವಂತೆ ಈ  ಅಭಿಯಾನ ಶುರುವಾದ ಮೇಲೆಯೇ ಕರ್ನಾಟಕದ ಕೆಲವು ಲೋಕಸಭಾ ಸದಸ್ಯರು ನಮ್ಮ ಬೇಡಿಕೆಗಳಲ್ಲೊಂದಾಗಿದ್ದ ಐಬಿಪಿಎಸ್ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶಕೊಡುವ ಕುರಿತು ಸಂಸತ್ತಿನಲ್ಲಿ ಧ್ವನಿ ಎತ್ತಿದ್ದರಿಂದ ನಮ್ಮ ತಾಯ್ನೆಲದ ಭಾಷೆಯಾದ ಕನ್ನಡದಲ್ಲೇ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿದೆ. ಕಳೆದ ವಾರವಷ್ಟೇ ಕರ್ನಾಟಕದ ಉದ್ಯೋಗಗಳು ಕನ್ನಡಿಗರಿಗೇ ಮೀಸಲಾಗಬೇಕು ಎಂದು ಒತ್ತಾಯಿಸಿ ರಾಜ್ಯದ ನಾಲ್ಕು ಸಂಸದರು ರಾಜ್ಯಸಭೆಯಲ್ಲಿ ಧ್ವನಿ ಎತ್ತಿದ್ದಾರೆ. ನಂತರ ಮೊನ್ನೆ  ಅಂದರೆ ಅಗಷ್ಟ್ ೧೦ ರಂದು ಮತ್ತೊಮ್ಮೆ ಟ್ವಿಟರ್ ಅಭಿಯಾನ ನಡೆಸಿ ನಮ್ಮ ಹಕ್ಕೊತ್ತಾಯವನ್ನು ಮಂಡಿಸಿದಾಗ ಬೇಡಿಕೆಯನ್ನು ಈಡೇರಿಸುವ ಭರವಸೆಯನ್ನು  ಈಗಿನ ಮುಖ್ಯಮಂತ್ರಿಗಳಾದ ಶ್ರೀಯುತ ಯಡಿಯೂರಪ್ಪನವರು ನೀಡಿದ್ದಾರೆ. ಹಿಂದಿನ ಮುಖ್ಯಮಂತ್ರಿಗಳು ನೀಡಿದ ಭರವಸೆಯಂತೆ ಇದೂ ಸಹ ಕೇವಲ ಟ್ವಿಟರಿನಲ್ಲಿ ನೀಡಿದ ಭರವಸೆಯಾಗಿ ಉಳಿದುಕೊಳ್ಳುವ ಸಾಧ್ಯತೆ ಇದೆ. ಕಳೆದ ತಿಂಗಳಷ್ಟೇ ನಮ್ಮ ಪಕ್ಕದ ರಾಜ್ಯವಾದ ಆಂಧ್ರಪ್ರದೇಶ ಸರ್ಕಾರ ಸ್ಥಳಿಯರಿಗೆ ತನ್ನ ಉದ್ಯೋಗದಲ್ಲಿ ೭೫% ಮೀಸಲಾತಿ ನೀಡಲು ಶಾಸನ ಜಾರಿ ಮಾಡುವತ್ತ ಹೆಜ್ಜೆ ಇಟ್ಟಿದೆ.ನಮ್ಮ ರಾಜ್ಯದಲ್ಲೂ ಸಹ ಇಂತಹ ಒಂದು ಕಾಯ್ದೆಯನ್ನು ಮಾಡಿ ಎಂದು ನಾವು ನಮ್ಮ ಮುಖ್ಯಮಂತ್ರಿಯನ್ನು ಈ ಸಂದರ್ಭದಲ್ಲಿ ಬಲವಾಗಿ ಒತ್ತಾಯಿಸುತ್ತೇವೆ ಎಂದಿದ್ದಾರೆ.

ಅಗಸ್ಟ್ 14 ಮತ್ತು 15 ರಂದು ನಡೆಯುವ ಉಪವಾಸ ಸತ್ಯಾಗ್ರಹ ಮತ್ತು ಅಹೋರಾತ್ರಿ ಧರಣಿಯಲ್ಲಿ ಹೋರಾಟಗಾರರಾದ ವಾಟಾಳ್ ನಾಗರಾಜ್, ಕರವೇ ನಾರಾಯಣ ಗೌಡ, ಕರವೇ ಪ್ರವೀಣ್ ಕುಮಾರ್ ಶೆಟ್ಟಿ,  ಚಿತ್ರನಟ ಉಪೇಂದ್ರ, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ಕನ್ನಡ ಅಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಎಸ್ ಜಿ ಸಿದ್ದರಾಮಯ್ಯ ಸೇರಿದಂತೆ ನಾಡಿನ ಹಿರಿಯ ಸಾಹಿತಿಗಳು, ಬರಹಗಾರರು, ನಟರು, ಹೋರಾಟಗಾರರು, ರಾಜಕಾರಣಿಗಳು ಮತ್ತು ದೊಡ್ಡ ಪ್ರಮಾಣದ ಯುವಜನತೆ ಭಾಗವಹಿಸಲಿದ್ದಾರೆ. ಈ ಧರಣಿ ಅಗಸ್ಟ್ 14 ರಂದು ಬೆಳಿಗ್ಗೆ 10 ಗಂಟೆಗೆ ಶುರುವಾಗಿ ಅಗಸ್ಟ್ 15 ರ ಬೆಳಿಗ್ಗೆ 10 ಗಂಟೆಗೆ ಮುಕ್ತಾಯವಾಗಲಿದೆ ಎಂದು ಫೇಸ್ ಬುಕ್ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.

ಹಕ್ಕೊತ್ತಾಯಗಳು
1. ಎಲ್ಲಾ ಖಾಸಗಿ ವಲಯದ ಉದ್ಯಮಗಳಿಗೆ ರಾಜ್ಯ ಸರ್ಕಾರ ಹಲವು ಮೂಲಭೂತ(ನೆಲ,ಜಲ,ವಿದ್ಯುತ್, ರಸ್ತೆ ಮುಂತಾದ) ಸವಲತ್ತುಗಳನ್ನು ನೀಡುತ್ತಿರುವುದರಿಂದ ಕಟ್ಟುನಿಟ್ಟಾಗಿ ಉದ್ಯೋಗಗಳು ಸ್ಥಳಿಯರಿಗೆ(ಕನ್ನಡಿಗರಿಗೆ) ಮೀಸಲಿಡಲು ಕರಾರು ಪತ್ರದಲ್ಲೇ ಪೂರ್ವಷರತ್ತು ಹಾಕಬೇಕು. ರಾಜ್ಯದ ಸರ್ಕಾರಿ ವಲಯದ ಉದ್ಯಮಗಳಲ್ಲಿ ಎಲ್ಲ ಹುದ್ದೆಗಳಿಗೂ ಕನ್ನಡಿಗರನ್ನೇ ಆಯ್ಕೆ ಮಾಡಬೇಕು. ಅನಿವಾರ್ಯ ಸಂದರ್ಭದಲ್ಲಿ ಹೊರ ರಾಜ್ಯದವರನ್ನು ಆಯ್ಕೆ ಮಾಡಿಕೊಳ್ಳಬೇಕಾದರೆ ರಾಜ್ಯ ಸರ್ಕಾರದ ಪೂರ್ವಾನುಮತಿ ಪಡೆದು ನೇಮಕ ಮಾಡಿಕೊಳ್ಳಬೇಕು. ಇಲ್ಲಿನ ಐಟಿ ಉದ್ಯಮಗಳಿಗೆ ರಾಜ್ಯದ ಇಂಜಿನಿಯರಿಂಗ್/ಮ್ಯಾನೇಜ್ಮೆಂಟ್ ಕಾಲೇಜುಗಳಿಂದಲೇ ಕ್ಯಾಂಪಸ್ ನೇಮಕಾತಿ ಮಾಡಿಕೊಳ್ಳಲು ಸೂಚಿಸಬೇಕು.

2. ಮಹಾರಾಷ್ಟ್ರದಲ್ಲಿ ಇರುವಂತೆ ರಾಜ್ಯ ಸರ್ಕಾರ ಸ್ಥಳೀಯರಿಗೆ ನಿಗದಿಪಡಿಸಿದ ಪ್ರಮಾಣದಲ್ಲಿ ಉದ್ಯೋಗಾವಕಾಶಗಳನ್ನು ಒದಗಿಸುವ ಬಗ್ಗೆ ರಾಜ್ಯದ ಖಾಸಗಿ ಉದ್ದಿಮೆಗಳಿಂದ ಪ್ರತಿವರ್ಷ ಘೋಷಣೆ ಪತ್ರ ಪಡೆಯಬೇಕು. ಅಭ್ಯರ್ಥಿಗಳನ್ನು ಸ್ಥಳೀಯರು ಎಂದು ಪರಿಗಣಿಸಲು ೧೫ ವರ್ಷಗಳ ಕಾಲ ಅವರು ರಾಜ್ಯದಲ್ಲಿ ವಾಸವಾಗಿದ್ದಲ್ಲದೇ ರಾಜ್ಯಭಾಷೆಯಾದ ಕನ್ನಡದಲ್ಲಿ ಮಾತನಾಡಲು,ಓದಲು ಮತ್ತು ಬರೆಯಲು ಬರಬೇಕು.

3. ರಾಜ್ಯದಲ್ಲಿ ವ್ಯವಹರಿಸುವ ಎಲ್ಲಾ ಬ್ಯಾಂಕುಗಳು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವಾಗ ರಾಜ್ಯದ ಅಧಿಕೃತ ಭಾಷೆಯಾದ ಕನ್ನಡ ಭಾಷಾಜ್ಞಾನವನ್ನು ಕಡ್ಡಾಯಗೊಳಿಸಬೇಕು.ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಸಂಸ್ಥೆಯು ಬ್ಯಾಂಕಿಂಗ್ ನೇಮಕಾತಿಗೆ ನಡೆಸುವ  ಪೂರ್ವಭಾವಿ ಮತ್ತು ಮುಖ್ಯಪರೀಕ್ಷೆಯನ್ನು  ಕನ್ನಡದಲ್ಲೂ ಬರೆಯುವ ಅವಕಾಶವಿರಬೇಕು.

4. ರಾಜ್ಯ/ಕೇಂದ್ರ ಸರ್ಕಾರಿ ಉದ್ಯಮಗಳು ಹಾಗೂ ಇಲಾಖೆಗಳಲ್ಲಿ ದಿನಗೂಲಿ ಕೆಲಸಗಳಿಗೆ ಕಾರ್ಮಿಕರನ್ನು/ನೌಕರರನ್ನು ಗುತ್ತಿಗೆ ಆಧಾರದ ಮೇಲೆ ತೆಗೆದುಕೊಳ್ಳುವ ಸಂದರ್ಭದಲ್ಲಿ ಕನ್ನಡಿಗರನ್ನೇ ನೇಮಿಸಿಕೊಳ್ಳಬೇಕು. ಹೊರಗುತ್ತಿಗೆ ಸಂಸ್ಥೆಗಳಿಗೂ ಈ ಷರತ್ತು ವಿಧಿಸಬೇಕು.

5. ಕೇಂದ್ರ/ರಾಜ್ಯ ಸರ್ಕಾರದ ಹುದ್ದೆಗಳ ನೇಮಕಾತಿಗಾಗಿ ನಡೆಯುವ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಕಡ್ಡಾಯವಾಗಿ ಕನ್ನಡದಲ್ಲಿಯೂ ಇರಬೇಕು.

ಈ ಹೋರಾಟವು ಯಾವುದೇ ಬ್ಯಾನರಿನಡಿಯಲ್ಲಿ ನಡೆಯುತ್ತಿಲ್ಲ. ಹೋರಾಟದ ನೇತೃತ್ವವನ್ನು ಯಾವುದೇ ಸಂಘಟನೆ ಅಥವಾ ವ್ಯಕ್ತಿ ವಹಿಸಿಲ್ಲ. ಇದು ಸಮಗ್ರ ಕನ್ನಡಿಗರೆಲ್ಲರ ಹೋರಾಟ. ಎಲ್ಲರ ಭಾಗವಹಿಸುವಿಕೆ ಇರಲಿ ಎಂದು Karnataka Jobs For Kannadigas (ಕರ್ನಾಟಕದ ಉದ್ಯೋಗಗಳು ಕನ್ನಡಿಗರಿಗೇ ಸಿಗಲಿ) ತಂಡದ ಸಂಘಟಕರು ಕೋರಿದ್ದಾರೆ. ಭಾಗವಹಿಸುವವರು ಸಂಪರ್ಕಿಸಬೇಕಾದ ನಂಬರ್:  990000727, 8123363995, 9663000183

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...