Homeಮುಖಪುಟ‘ಆಶ್ರಮ್‌’ ವೆಬ್‌ಸೀರೀಸ್‌‌ ಸೆಟ್‌‌ ಮೇಲೆ ದಾಳಿ ಮಾಡಿದವ ಕೊಲೆ ಅಪರಾಧಿ, ಬಿಜೆಪಿ ನಾಯಕರ ಒಡನಾಡಿ!

‘ಆಶ್ರಮ್‌’ ವೆಬ್‌ಸೀರೀಸ್‌‌ ಸೆಟ್‌‌ ಮೇಲೆ ದಾಳಿ ಮಾಡಿದವ ಕೊಲೆ ಅಪರಾಧಿ, ಬಿಜೆಪಿ ನಾಯಕರ ಒಡನಾಡಿ!

ಬಜರಂಗದಳ ಕೇಂದ್ರ ಘಟಕದ ಸಂಚಾಲಕರಾಗಿರುವ ಸುಶೀಲ್ ಸುದೇಲೆ, ಮಧ್ಯಪ್ರದೇಶ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಮಾಜಿ ಭೋಪಾಲ್ ಮೇಯರ್ ಅಲೋಕ್ ಶರ್ಮಾ ಅವರ ಸಂಬಂಧಿಯೂ ಹೌದು...

- Advertisement -
- Advertisement -

ನಿರ್ದೇಶಕ, ನಿರ್ಮಾಪಕ ಪ್ರಕಾಶ್ ಝಾ ಅವರ ‘ಆಶ್ರಮ್‌-3’ ವೆಬ್‌ ಸೀರೀಸ್‌ ಚಿತ್ರೀಕರಣದ ವೇಳೆ ದಾಳಿ ಪ್ರಕರಣದಲ್ಲಿನ ಪ್ರಮುಖ ಆರೋಪಿ ಕೊಲೆ ಪ್ರಕರಣದ ಅಪರಾಧಿಯೂ ಆಗಿದ್ದು, ಆತ ಬಿಜೆಪಿ ನಾಯಕರ ಒಡನಾಡಿಯಾಗಿದ್ದಾನೆ ಎಂದು ‘ದಿ ವೈರ್‌’ ಜಾಲತಾಣ ವರದಿ ಮಾಡಿದೆ.

ಅಕ್ಟೋಬರ್ 24ರಂದು ಭೋಪಾಲ್‌ನಲ್ಲಿ ಆಶ್ರಮ್‌ ಚಿತ್ರೀಕರಣದ ವೇಳೆ ಬಜರಂಗದಳದ ಕಾರ್ಯಕರ್ತರು ದಾಳಿ ಮಾಡಿದ್ದರು. ದಾಳಿ ಕೃತ್ಯದ ಪ್ರಮುಖ ಆರೋಪಿ ಕೊಲೆ ಪ್ರಕರಣದಲ್ಲಿ ಈಗಾಗಲೇ ಭಾಗಿಯಾಗಿದ್ದು, ಬಿಜೆಪಿ ಮತ್ತು ಆರ್‌ಎಸ್‌ಎಸ್ ಉನ್ನತ ನಾಯಕರೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದಾನೆ. ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೂ ಸಂಪರ್ಕದಲ್ಲಿದ್ದಾನೆ ಎಂಬ ಸಂಗತಿ ಬಹಿರಂಗವಾಗಿದೆ.

ಬಲಪಂಥೀಯ ಸಂಘಟನೆಯಾದ ಬಜರಂಗದಳ ಕೇಂದ್ರ ಘಟಕದ ಸಂಚಾಲಕರಾಗಿರುವ ಸುಶೀಲ್ ಸುದೇಲೆ, ಮಧ್ಯಪ್ರದೇಶ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಮಾಜಿ ಭೋಪಾಲ್ ಮೇಯರ್ ಅಲೋಕ್ ಶರ್ಮಾ ಅವರ ಸಂಬಂಧಿಯೂ ಹೌದು. 2011ರ ಕೊಲೆ ಪ್ರಕರಣದಲ್ಲಿ ಸುದೇಲೆ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದು, ಸೆಪ್ಟೆಂಬರ್ 2015ರಿಂದ ಜಾಮೀನಿನ ಮೇಲೆ ಹೊರಗಿದ್ದಾನೆ.

ಇದನ್ನೂ ಓದಿರಿ: ಬಜರಂಗದಳದ ದುಷ್ಕಮಿಗಳಿಂದ ‘ಆಶ್ರಮ್‌-3’ ಸೆಟ್‌ ಮೇಲೆ ದಾಳಿ; ಇನ್ನೂ ದೂರು ನೀಡದ ನಿರ್ಮಾಪಕ!

ವೆಬ್ ಸರಣಿಯ ಸೆಟ್‌ ಮೇಲೆ ದಾಳಿ ನಡೆದ ಒಂದು ದಿನದ ನಂತರ (ಅಕ್ಟೋಬರ್ 25ರಂದು), ಭೋಪಾಲ್ ಪೊಲೀಸರು ಸ್ವಯಂ ಪ್ರೇರಿತ ಎಫ್‌ಐಆರ್ ದಾಖಲಿಸಿದ್ದಾರೆ. ವಿಶ್ವ ಹಿಂದೂ ಪರಿಷತ್‌ ಹಾಗೂ ಆರ್‌‌ಎಸ್‌ಎಸ್‌ನ ಯುವ ಘಟಕವಾಗಿ ಕಾರ್ಯ ನಿರ್ವಹಿಸುತ್ತಿರುವ ಬಜರಂಗದಳದ ಹಿರಿಯ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 147, 148, 149, 323, 336 ಮತ್ತು 427ರ ಅಡಿಯಲ್ಲಿ ಪೊಲೀಸರು ಸುದೇಲೆ, ಜೀವನ್ ಶರ್ಮಾ, ಅಭಿಜಿತ್, ದೀಲಿಪ್, ಕರಣ್, ಶರ್ವಾನ್ ಬೋಥಮ್ ಮತ್ತು ಸುನೀಲ್ ಸೋನಿ ಎಂಬವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಎಲ್ಲಾ ಸೆಕ್ಷನ್‌ಗಳು ಜಮೀನು ಪಡೆಯಲು ಅವಕಾಶ ನೀಡುತ್ತವೆ.

ಭೋಪಾಲ್‌ನ ಅರೇರಾ ಹಿಲ್ಸ್ ಪೊಲೀಸ್ ಠಾಣೆಯ ಪಟ್ಟಣ ನಿರೀಕ್ಷಕ ಆರ್.ಕೆ.ಸಿಂಗ್‌ ಪ್ರಕರಣ ದಾಖಲಿಸಿರುವ ಸಂಬಂಧ ತಿಳಿಸಿದ್ದು, “ಆಶ್ರಮದ ಮೂರನೇ ಸೀಸನ್ ಚಿತ್ರೀಕರಣದ ಮೇಲೆ ದಾಳಿ ನಡೆಸಿದ ಆರೋಪದಲ್ಲಿ ಸುದೇಲೆ ಸೇರಿದಂತೆ ಏಳು ಮಂದಿ ಬಜರಂಗದಳ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ. ಘಟನೆಯ ಒಂದು ದಿನದ ನಂತರ ಐಪಿಸಿಯ ಆರು ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಯಾರನ್ನಾದರೂ ಬಂಧಿಸಲಾಗಿದೆಯೇ ಎಂದು ಕೇಳಿದಾಗ, “ಯಾರನ್ನೂ ಬಂಧಿಸಲಾಗಿಲ್ಲ. ಆದರೆ, ಆರೋಪಿಗಳಿಗೆ ನೋಟಿಸ್‌ ಜಾರಿ ಮಾಡಲಾಗಿದ್ದು, ಸಮನ್ಸ್‌ ಬಂದಾಗ ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಲಾಗಿದೆ” ಎಂದು ಇನ್‌ಸ್ಪೆಕ್ಟರ್‌ ಹೇಳಿದ್ದಾರೆ.

ಇದನ್ನೂ ಓದಿರಿ: ದಕ್ಷಿಣ ಕನ್ನಡ: BJP ನಾಯಕನ ಮೇಲೆ ಬಜರಂಗ ದಳದ ಕಾರ್ಯಕರ್ತರಿಂದ ತಲವಾರು ದಾಳಿ

ಅಕ್ಟೋಬರ್ 24ರಂದು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಭೋಪಾಲ್ ಪೊಲೀಸರು ನಾಲ್ವರು ಬಜರಂಗದಳ ಕಾರ್ಯಕರ್ತರನ್ನು ಬಂಧಿಸಿ, ಸಿಆರ್‌ಪಿಸಿಯ ಸೆಕ್ಷನ್ 151ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ ಮರುದಿನ ಆರೋಪಿಗಳು ಭೋಪಾಲ್ ಜಿಲ್ಲಾ ನ್ಯಾಯಾಲಯದಿಂದ ಜಾಮೀನು ಪಡೆದರು.

ಇದರ ನಡುವೆ ಪೊಲೀಸ್ ಭದ್ರತೆಯ ನಡುವೆ ವೆಬ್ ಸರಣಿಯ ಶೂಟಿಂಗ್ ಮುಂದುವರೆದಿದೆ ಎಂದು ಭೋಪಾಲ್‌ ಡಿಐಜಿ ಇರ್ಷಾದ್‌ ವಾಲಿ ತಿಳಿಸಿದ್ದಾರೆ. “ನಾವು ಪ್ರಕಾಶ್ ಝಾ ಮತ್ತು ಆಶ್ರಮ್‌ ವೆಬ್‌ ಸೀರೀಸ್‌ ಸಿಬ್ಬಂದಿಗೆ ರಕ್ಷಣೆಯ ಭರವಸೆ ನೀಡಿದ್ದೇವೆ. ಯಾವುದೇ ಘಟನೆಗಳು ನಡೆಯದಂತೆ ಶೂಟಿಂಗ್ ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ” ಎಂದು ವಾಲಿ ಸ್ಪಷ್ಟಪಡಿಸಿದ್ದಾರೆ.

ಅಪರಾಧಿ ಸುಶೀಲ್‌ ಸುದೇಲೆ ಹಿನ್ನೆಲೆ

2011ರ ಫೆಬ್ರವರಿ 5ರಂದು ಭೋಪಾಲ್ ಮೂಲದ ಗುರುಕಿರ್ಪಾ ಟ್ರಾವೆಲ್ಸ್‌ನ ಮಾಲೀಕ ಭಾಗ್‌ಚಂದ್ ಅಲಿಯಾಸ್ ಪಪ್ಪು ಹತ್ಯೆಗೆ ಸಂಚು ರೂಪಿಸಿದ ಆರೋಪದ ಮೇಲೆ ದಾಳಿಯ ಪ್ರಮುಖ ಆರೋಪಿ ಸುದೇಲೆ ಅವರನ್ನು ಭೋಪಾಲ್ ನ್ಯಾಯಾಲಯವು 2014ರಲ್ಲಿ ದೋಷಿ ಎಂದು ತೀರ್ಪು ನೀಡಿದೆ.

ಐಪಿಸಿಯ ಸೆಕ್ಷನ್ 120-ಬಿ (ಕ್ರಿಮಿನಲ್ ಪಿತೂರಿಯ ಶಿಕ್ಷೆ) ಅಡಿಯಲ್ಲಿ ಅವರನ್ನು ತಪ್ಪಿತಸ್ಥರೆಂದು ಘೋಷಿಸಲಾಯಿತು ಮತ್ತು 1,000 ರೂಪಾಯಿಗಳ ದಂಡದ ಜೊತೆಗೆ 14 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಯಿತು.

“ಸುದೇಲೆ ಭಾಗ್‌ಚಂದ್‌ನಿಂದ ಹಣ ವಸೂಲಿ ಮಾಡುತ್ತಿದ್ದ. ಭಾಗ್‌ಚಂದ್ ಅವರು ಸುದೇಲೆ ವಿರುದ್ಧ ಹನುಮಾನ್‌ಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸುದೇಲೆ ಹಣಕ್ಕಾಗಿ ಬೇಡಿಕೆಯಿಡುತ್ತಿರುವ ವಿಡಿಯೊ ಕ್ಲಿಪ್ಅನ್ನು ಭಾಗ್‌ಚಂದ್‌ ಸಲ್ಲಿಸಿದ್ದರು. ಈ ವಿಡಿಯೋವನ್ನು ಮಾಧ್ಯಮಗಳಿಗೂ ಬಿಡುಗಡೆ ಮಾಡಲಾಗಿದೆ” ಎಂದು ಕೋರ್ಟ್ ಹೇಳಿದೆ.

ಇದನ್ನೂ ಓದಿರಿ: ಹನುಮ ಜಯಂತಿ ದಿನ ಪೂರ್ತಿ ಪಿಕ್ಚರ್‌ ತೋರಿಸುತ್ತೇವೆ: ಪ್ರಚೋದನಕಾರಿ ಹೇಳಿಕೆ ನೀಡಿದ ಬಜರಂಗದಳ ಮುಖಂಡ

ಭಾಗ್‌ಚಂದ್ ದೂರು ನೀಡಿದ ಬಳಿಕ ಕುಪಿತರಾದ ಸುದೇಲೆಯ ಐವರು ಸಹಚರರು 2011ರ ಫೆಬ್ರವರಿ 5ರಂದು ಭಾಗ್‌ಚಂದ್ ಮೇಲೆ ದೊಣ್ಣೆ ಮತ್ತು ಕತ್ತಿಗಳಿಂದ ಹಲ್ಲೆ ನಡೆಸಿ, ದೂರನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದರು. ಭಾಗ್‌ಚಂದ್‌ ತೀವ್ರ ಗಾಯಾಳುವಾಗಿಯೇ ತಪ್ಪಿಸಿಕೊಂಡು ಬಂದು ಹನುಮಂಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ, ತಲೆಗೆ ಪೆಟ್ಟಾಗಿದ್ದರಿಂದ ನಾಲ್ಕು ದಿನಗಳ ನಂತರ ಮೃತಪಟ್ಟರು.

ಭಾಗ್‌ಚಂದ್‌ನ ಸಾವಿನ ನಂತರ ಪೊಲೀಸರು, ಸುದೇಲೆ, ನೀಲೇಶ್ ಖಟಿಕೆ, ರಾಜ್‌ಕುಮಾರ್ ಚೌರಾಸಿಯಾ, ಅರವಿಂದ್ ನರ್ವಾರಿಯಾ, ವೀರೇಂದ್ರ ಯಾದವ್, ಗೋಪಾಲ್ ಯಾದವ್ ವಿರುದ್ಧ ಸೆಕ್ಷನ್ 294, 147, 148, 148, 506-ಬಿ, 427, 302, 120-ಬಿ ಪ್ರಕರಣ ದಾಖಲಿಸಿದರು.

ನ್ಯಾಯಾಲಯವು ಅವರನ್ನು ತಪ್ಪಿತಸ್ಥರೆಂದು ತೀರ್ಪು ನೀಡಿದೆ. ಭೋಪಾಲ್ ಜಿಲ್ಲಾ ನ್ಯಾಯಾಲಯದ ನ್ಯಾಯಮೂರ್ತಿ ಅಮಿತಾಭ್ ಮಿಶ್ರಾ ಅವರ ಏಕಸದಸ್ಯ ಪೀಠವು ಫೆಬ್ರವರಿ 5, 2014ರಂದು ನಡೆದ ಘಟನೆಯ ಸುಮಾರು ಮೂರು ವರ್ಷಗಳ ನಂತರ ಸುದೇಲೆ ಸೇರಿದಂತೆ ಎಲ್ಲಾ ಆರೋಪಿಗಳಿಗೆ 14 ವರ್ಷಗಳ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಿತು. ಆದರೆ ಇಬ್ಬರು ಆರೋಪಿಗಳು (ಸುದೇಲೆ ಮತ್ತು ಬಜರಂಗದಳದ ರಾಜಕುಮಾರ ಚೌರಾಸಿಯಾ) ಸೆಪ್ಟೆಂಬರ್ 28, 2015ರಂದು ಜಾಮೀನು ಪಡೆದರು.

ರಾಜಕುಮಾರ್ ಅವರು ಪ್ರಸ್ತುತ ಭೋಪಾಲ್ ಮುನ್ಸಿಪಲ್ ಕಾರ್ಪೊರೇಶನ್‌ಗೆ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದರೆ, ಬಜರಂಗದಳದ ಕಾರ್ಯಕರ್ತನಾಗಿದ್ದ ಸುದೇಲೆಯನ್ನು ಬಜರಂಗದಳ ಕೇಂದ್ರ ಘಟಕದ ಸಂಚಾಲಕ ಸ್ಥಾನದಲ್ಲಿ ಕೂರಿಸಲಾಗಿದೆ.

‘ದಿ ವೈರ್‌’ ಜಾಲತಾಣವು ಸುದೇಲೆ ಅವರ ಹಲವಾರು ಫೋಟೋಗಳನ್ನು ಕಲೆ ಹಾಕಿದೆ. ಸುದೇಲೆ ಅವರು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಅಧಿಕೃತ ನಿವಾಸದಲ್ಲಿ ಗೃಹ ಸಚಿವ ನರೋತ್ತಮ್ ಮಿಶ್ರಾ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಇತರ ಬಿಜೆಪಿ, ಆರ್‌ಎಸ್‌ಎಸ್ ನಾಯಕರೊಂದಿಗೆ ಇರುವುದನ್ನು ಫೋಟೋಗಳಲ್ಲಿ ಕಾಣಬಹುದು.

ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ (ಬಲ ತುದಿ) ಅವರೊಂದಿಗೆ ಸುಶೀಲ್ ಸುದೇಲೆ (ಎಡ ತುದಿ)  ಇದ್ದಾರೆ. (ಚಿತ್ರ ಕೃಪೆ: The Wire)

ಇದನ್ನೂ ಓದಿರಿ: ಆಶ್ರಮ್‌-3 ಚಿತ್ರೀಕರಣದ ವೇಳೆ ಬಜರಂಗದಳ ದಾಳಿ: ಮಧ್ಯಪ್ರದೇಶ ಗೃಹಸಚಿವ ಸಮರ್ಥನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...