Homeಮುಖಪುಟ‘ಆಶ್ರಮ್‌’ ವೆಬ್‌ಸೀರೀಸ್‌‌ ಸೆಟ್‌‌ ಮೇಲೆ ದಾಳಿ ಮಾಡಿದವ ಕೊಲೆ ಅಪರಾಧಿ, ಬಿಜೆಪಿ ನಾಯಕರ ಒಡನಾಡಿ!

‘ಆಶ್ರಮ್‌’ ವೆಬ್‌ಸೀರೀಸ್‌‌ ಸೆಟ್‌‌ ಮೇಲೆ ದಾಳಿ ಮಾಡಿದವ ಕೊಲೆ ಅಪರಾಧಿ, ಬಿಜೆಪಿ ನಾಯಕರ ಒಡನಾಡಿ!

ಬಜರಂಗದಳ ಕೇಂದ್ರ ಘಟಕದ ಸಂಚಾಲಕರಾಗಿರುವ ಸುಶೀಲ್ ಸುದೇಲೆ, ಮಧ್ಯಪ್ರದೇಶ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಮಾಜಿ ಭೋಪಾಲ್ ಮೇಯರ್ ಅಲೋಕ್ ಶರ್ಮಾ ಅವರ ಸಂಬಂಧಿಯೂ ಹೌದು...

- Advertisement -
- Advertisement -

ನಿರ್ದೇಶಕ, ನಿರ್ಮಾಪಕ ಪ್ರಕಾಶ್ ಝಾ ಅವರ ‘ಆಶ್ರಮ್‌-3’ ವೆಬ್‌ ಸೀರೀಸ್‌ ಚಿತ್ರೀಕರಣದ ವೇಳೆ ದಾಳಿ ಪ್ರಕರಣದಲ್ಲಿನ ಪ್ರಮುಖ ಆರೋಪಿ ಕೊಲೆ ಪ್ರಕರಣದ ಅಪರಾಧಿಯೂ ಆಗಿದ್ದು, ಆತ ಬಿಜೆಪಿ ನಾಯಕರ ಒಡನಾಡಿಯಾಗಿದ್ದಾನೆ ಎಂದು ‘ದಿ ವೈರ್‌’ ಜಾಲತಾಣ ವರದಿ ಮಾಡಿದೆ.

ಅಕ್ಟೋಬರ್ 24ರಂದು ಭೋಪಾಲ್‌ನಲ್ಲಿ ಆಶ್ರಮ್‌ ಚಿತ್ರೀಕರಣದ ವೇಳೆ ಬಜರಂಗದಳದ ಕಾರ್ಯಕರ್ತರು ದಾಳಿ ಮಾಡಿದ್ದರು. ದಾಳಿ ಕೃತ್ಯದ ಪ್ರಮುಖ ಆರೋಪಿ ಕೊಲೆ ಪ್ರಕರಣದಲ್ಲಿ ಈಗಾಗಲೇ ಭಾಗಿಯಾಗಿದ್ದು, ಬಿಜೆಪಿ ಮತ್ತು ಆರ್‌ಎಸ್‌ಎಸ್ ಉನ್ನತ ನಾಯಕರೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದಾನೆ. ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೂ ಸಂಪರ್ಕದಲ್ಲಿದ್ದಾನೆ ಎಂಬ ಸಂಗತಿ ಬಹಿರಂಗವಾಗಿದೆ.

ಬಲಪಂಥೀಯ ಸಂಘಟನೆಯಾದ ಬಜರಂಗದಳ ಕೇಂದ್ರ ಘಟಕದ ಸಂಚಾಲಕರಾಗಿರುವ ಸುಶೀಲ್ ಸುದೇಲೆ, ಮಧ್ಯಪ್ರದೇಶ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಮಾಜಿ ಭೋಪಾಲ್ ಮೇಯರ್ ಅಲೋಕ್ ಶರ್ಮಾ ಅವರ ಸಂಬಂಧಿಯೂ ಹೌದು. 2011ರ ಕೊಲೆ ಪ್ರಕರಣದಲ್ಲಿ ಸುದೇಲೆ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದು, ಸೆಪ್ಟೆಂಬರ್ 2015ರಿಂದ ಜಾಮೀನಿನ ಮೇಲೆ ಹೊರಗಿದ್ದಾನೆ.

ಇದನ್ನೂ ಓದಿರಿ: ಬಜರಂಗದಳದ ದುಷ್ಕಮಿಗಳಿಂದ ‘ಆಶ್ರಮ್‌-3’ ಸೆಟ್‌ ಮೇಲೆ ದಾಳಿ; ಇನ್ನೂ ದೂರು ನೀಡದ ನಿರ್ಮಾಪಕ!

ವೆಬ್ ಸರಣಿಯ ಸೆಟ್‌ ಮೇಲೆ ದಾಳಿ ನಡೆದ ಒಂದು ದಿನದ ನಂತರ (ಅಕ್ಟೋಬರ್ 25ರಂದು), ಭೋಪಾಲ್ ಪೊಲೀಸರು ಸ್ವಯಂ ಪ್ರೇರಿತ ಎಫ್‌ಐಆರ್ ದಾಖಲಿಸಿದ್ದಾರೆ. ವಿಶ್ವ ಹಿಂದೂ ಪರಿಷತ್‌ ಹಾಗೂ ಆರ್‌‌ಎಸ್‌ಎಸ್‌ನ ಯುವ ಘಟಕವಾಗಿ ಕಾರ್ಯ ನಿರ್ವಹಿಸುತ್ತಿರುವ ಬಜರಂಗದಳದ ಹಿರಿಯ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 147, 148, 149, 323, 336 ಮತ್ತು 427ರ ಅಡಿಯಲ್ಲಿ ಪೊಲೀಸರು ಸುದೇಲೆ, ಜೀವನ್ ಶರ್ಮಾ, ಅಭಿಜಿತ್, ದೀಲಿಪ್, ಕರಣ್, ಶರ್ವಾನ್ ಬೋಥಮ್ ಮತ್ತು ಸುನೀಲ್ ಸೋನಿ ಎಂಬವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಎಲ್ಲಾ ಸೆಕ್ಷನ್‌ಗಳು ಜಮೀನು ಪಡೆಯಲು ಅವಕಾಶ ನೀಡುತ್ತವೆ.

ಭೋಪಾಲ್‌ನ ಅರೇರಾ ಹಿಲ್ಸ್ ಪೊಲೀಸ್ ಠಾಣೆಯ ಪಟ್ಟಣ ನಿರೀಕ್ಷಕ ಆರ್.ಕೆ.ಸಿಂಗ್‌ ಪ್ರಕರಣ ದಾಖಲಿಸಿರುವ ಸಂಬಂಧ ತಿಳಿಸಿದ್ದು, “ಆಶ್ರಮದ ಮೂರನೇ ಸೀಸನ್ ಚಿತ್ರೀಕರಣದ ಮೇಲೆ ದಾಳಿ ನಡೆಸಿದ ಆರೋಪದಲ್ಲಿ ಸುದೇಲೆ ಸೇರಿದಂತೆ ಏಳು ಮಂದಿ ಬಜರಂಗದಳ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ. ಘಟನೆಯ ಒಂದು ದಿನದ ನಂತರ ಐಪಿಸಿಯ ಆರು ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಯಾರನ್ನಾದರೂ ಬಂಧಿಸಲಾಗಿದೆಯೇ ಎಂದು ಕೇಳಿದಾಗ, “ಯಾರನ್ನೂ ಬಂಧಿಸಲಾಗಿಲ್ಲ. ಆದರೆ, ಆರೋಪಿಗಳಿಗೆ ನೋಟಿಸ್‌ ಜಾರಿ ಮಾಡಲಾಗಿದ್ದು, ಸಮನ್ಸ್‌ ಬಂದಾಗ ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಲಾಗಿದೆ” ಎಂದು ಇನ್‌ಸ್ಪೆಕ್ಟರ್‌ ಹೇಳಿದ್ದಾರೆ.

ಇದನ್ನೂ ಓದಿರಿ: ದಕ್ಷಿಣ ಕನ್ನಡ: BJP ನಾಯಕನ ಮೇಲೆ ಬಜರಂಗ ದಳದ ಕಾರ್ಯಕರ್ತರಿಂದ ತಲವಾರು ದಾಳಿ

ಅಕ್ಟೋಬರ್ 24ರಂದು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಭೋಪಾಲ್ ಪೊಲೀಸರು ನಾಲ್ವರು ಬಜರಂಗದಳ ಕಾರ್ಯಕರ್ತರನ್ನು ಬಂಧಿಸಿ, ಸಿಆರ್‌ಪಿಸಿಯ ಸೆಕ್ಷನ್ 151ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ ಮರುದಿನ ಆರೋಪಿಗಳು ಭೋಪಾಲ್ ಜಿಲ್ಲಾ ನ್ಯಾಯಾಲಯದಿಂದ ಜಾಮೀನು ಪಡೆದರು.

ಇದರ ನಡುವೆ ಪೊಲೀಸ್ ಭದ್ರತೆಯ ನಡುವೆ ವೆಬ್ ಸರಣಿಯ ಶೂಟಿಂಗ್ ಮುಂದುವರೆದಿದೆ ಎಂದು ಭೋಪಾಲ್‌ ಡಿಐಜಿ ಇರ್ಷಾದ್‌ ವಾಲಿ ತಿಳಿಸಿದ್ದಾರೆ. “ನಾವು ಪ್ರಕಾಶ್ ಝಾ ಮತ್ತು ಆಶ್ರಮ್‌ ವೆಬ್‌ ಸೀರೀಸ್‌ ಸಿಬ್ಬಂದಿಗೆ ರಕ್ಷಣೆಯ ಭರವಸೆ ನೀಡಿದ್ದೇವೆ. ಯಾವುದೇ ಘಟನೆಗಳು ನಡೆಯದಂತೆ ಶೂಟಿಂಗ್ ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ” ಎಂದು ವಾಲಿ ಸ್ಪಷ್ಟಪಡಿಸಿದ್ದಾರೆ.

ಅಪರಾಧಿ ಸುಶೀಲ್‌ ಸುದೇಲೆ ಹಿನ್ನೆಲೆ

2011ರ ಫೆಬ್ರವರಿ 5ರಂದು ಭೋಪಾಲ್ ಮೂಲದ ಗುರುಕಿರ್ಪಾ ಟ್ರಾವೆಲ್ಸ್‌ನ ಮಾಲೀಕ ಭಾಗ್‌ಚಂದ್ ಅಲಿಯಾಸ್ ಪಪ್ಪು ಹತ್ಯೆಗೆ ಸಂಚು ರೂಪಿಸಿದ ಆರೋಪದ ಮೇಲೆ ದಾಳಿಯ ಪ್ರಮುಖ ಆರೋಪಿ ಸುದೇಲೆ ಅವರನ್ನು ಭೋಪಾಲ್ ನ್ಯಾಯಾಲಯವು 2014ರಲ್ಲಿ ದೋಷಿ ಎಂದು ತೀರ್ಪು ನೀಡಿದೆ.

ಐಪಿಸಿಯ ಸೆಕ್ಷನ್ 120-ಬಿ (ಕ್ರಿಮಿನಲ್ ಪಿತೂರಿಯ ಶಿಕ್ಷೆ) ಅಡಿಯಲ್ಲಿ ಅವರನ್ನು ತಪ್ಪಿತಸ್ಥರೆಂದು ಘೋಷಿಸಲಾಯಿತು ಮತ್ತು 1,000 ರೂಪಾಯಿಗಳ ದಂಡದ ಜೊತೆಗೆ 14 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಯಿತು.

“ಸುದೇಲೆ ಭಾಗ್‌ಚಂದ್‌ನಿಂದ ಹಣ ವಸೂಲಿ ಮಾಡುತ್ತಿದ್ದ. ಭಾಗ್‌ಚಂದ್ ಅವರು ಸುದೇಲೆ ವಿರುದ್ಧ ಹನುಮಾನ್‌ಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸುದೇಲೆ ಹಣಕ್ಕಾಗಿ ಬೇಡಿಕೆಯಿಡುತ್ತಿರುವ ವಿಡಿಯೊ ಕ್ಲಿಪ್ಅನ್ನು ಭಾಗ್‌ಚಂದ್‌ ಸಲ್ಲಿಸಿದ್ದರು. ಈ ವಿಡಿಯೋವನ್ನು ಮಾಧ್ಯಮಗಳಿಗೂ ಬಿಡುಗಡೆ ಮಾಡಲಾಗಿದೆ” ಎಂದು ಕೋರ್ಟ್ ಹೇಳಿದೆ.

ಇದನ್ನೂ ಓದಿರಿ: ಹನುಮ ಜಯಂತಿ ದಿನ ಪೂರ್ತಿ ಪಿಕ್ಚರ್‌ ತೋರಿಸುತ್ತೇವೆ: ಪ್ರಚೋದನಕಾರಿ ಹೇಳಿಕೆ ನೀಡಿದ ಬಜರಂಗದಳ ಮುಖಂಡ

ಭಾಗ್‌ಚಂದ್ ದೂರು ನೀಡಿದ ಬಳಿಕ ಕುಪಿತರಾದ ಸುದೇಲೆಯ ಐವರು ಸಹಚರರು 2011ರ ಫೆಬ್ರವರಿ 5ರಂದು ಭಾಗ್‌ಚಂದ್ ಮೇಲೆ ದೊಣ್ಣೆ ಮತ್ತು ಕತ್ತಿಗಳಿಂದ ಹಲ್ಲೆ ನಡೆಸಿ, ದೂರನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದರು. ಭಾಗ್‌ಚಂದ್‌ ತೀವ್ರ ಗಾಯಾಳುವಾಗಿಯೇ ತಪ್ಪಿಸಿಕೊಂಡು ಬಂದು ಹನುಮಂಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ, ತಲೆಗೆ ಪೆಟ್ಟಾಗಿದ್ದರಿಂದ ನಾಲ್ಕು ದಿನಗಳ ನಂತರ ಮೃತಪಟ್ಟರು.

ಭಾಗ್‌ಚಂದ್‌ನ ಸಾವಿನ ನಂತರ ಪೊಲೀಸರು, ಸುದೇಲೆ, ನೀಲೇಶ್ ಖಟಿಕೆ, ರಾಜ್‌ಕುಮಾರ್ ಚೌರಾಸಿಯಾ, ಅರವಿಂದ್ ನರ್ವಾರಿಯಾ, ವೀರೇಂದ್ರ ಯಾದವ್, ಗೋಪಾಲ್ ಯಾದವ್ ವಿರುದ್ಧ ಸೆಕ್ಷನ್ 294, 147, 148, 148, 506-ಬಿ, 427, 302, 120-ಬಿ ಪ್ರಕರಣ ದಾಖಲಿಸಿದರು.

ನ್ಯಾಯಾಲಯವು ಅವರನ್ನು ತಪ್ಪಿತಸ್ಥರೆಂದು ತೀರ್ಪು ನೀಡಿದೆ. ಭೋಪಾಲ್ ಜಿಲ್ಲಾ ನ್ಯಾಯಾಲಯದ ನ್ಯಾಯಮೂರ್ತಿ ಅಮಿತಾಭ್ ಮಿಶ್ರಾ ಅವರ ಏಕಸದಸ್ಯ ಪೀಠವು ಫೆಬ್ರವರಿ 5, 2014ರಂದು ನಡೆದ ಘಟನೆಯ ಸುಮಾರು ಮೂರು ವರ್ಷಗಳ ನಂತರ ಸುದೇಲೆ ಸೇರಿದಂತೆ ಎಲ್ಲಾ ಆರೋಪಿಗಳಿಗೆ 14 ವರ್ಷಗಳ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಿತು. ಆದರೆ ಇಬ್ಬರು ಆರೋಪಿಗಳು (ಸುದೇಲೆ ಮತ್ತು ಬಜರಂಗದಳದ ರಾಜಕುಮಾರ ಚೌರಾಸಿಯಾ) ಸೆಪ್ಟೆಂಬರ್ 28, 2015ರಂದು ಜಾಮೀನು ಪಡೆದರು.

ರಾಜಕುಮಾರ್ ಅವರು ಪ್ರಸ್ತುತ ಭೋಪಾಲ್ ಮುನ್ಸಿಪಲ್ ಕಾರ್ಪೊರೇಶನ್‌ಗೆ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದರೆ, ಬಜರಂಗದಳದ ಕಾರ್ಯಕರ್ತನಾಗಿದ್ದ ಸುದೇಲೆಯನ್ನು ಬಜರಂಗದಳ ಕೇಂದ್ರ ಘಟಕದ ಸಂಚಾಲಕ ಸ್ಥಾನದಲ್ಲಿ ಕೂರಿಸಲಾಗಿದೆ.

‘ದಿ ವೈರ್‌’ ಜಾಲತಾಣವು ಸುದೇಲೆ ಅವರ ಹಲವಾರು ಫೋಟೋಗಳನ್ನು ಕಲೆ ಹಾಕಿದೆ. ಸುದೇಲೆ ಅವರು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಅಧಿಕೃತ ನಿವಾಸದಲ್ಲಿ ಗೃಹ ಸಚಿವ ನರೋತ್ತಮ್ ಮಿಶ್ರಾ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಇತರ ಬಿಜೆಪಿ, ಆರ್‌ಎಸ್‌ಎಸ್ ನಾಯಕರೊಂದಿಗೆ ಇರುವುದನ್ನು ಫೋಟೋಗಳಲ್ಲಿ ಕಾಣಬಹುದು.

ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ (ಬಲ ತುದಿ) ಅವರೊಂದಿಗೆ ಸುಶೀಲ್ ಸುದೇಲೆ (ಎಡ ತುದಿ)  ಇದ್ದಾರೆ. (ಚಿತ್ರ ಕೃಪೆ: The Wire)

ಇದನ್ನೂ ಓದಿರಿ: ಆಶ್ರಮ್‌-3 ಚಿತ್ರೀಕರಣದ ವೇಳೆ ಬಜರಂಗದಳ ದಾಳಿ: ಮಧ್ಯಪ್ರದೇಶ ಗೃಹಸಚಿವ ಸಮರ್ಥನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...