ಉತ್ತರಪ್ರದೇಶದ ಗಾಜಿಯಾಬಾದ್ನ ದಾಸನ ದೇವಿ ಮಂದಿರ್ ದೇವಾಲಯದಲ್ಲಿ ನೀರು ಕುಡಿದಿದ್ದಕ್ಕಾಗಿ ಮುಸ್ಲಿಂ ಬಾಲಕನೊಬ್ಬನ ಮೇಲೆ ಶೃಂಗಿ ನಂದನ್ ಯಾದವ್ ಎಂಬ ವ್ಯಕ್ತಿಯು ಕ್ರೂರವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಜರುಗಿದೆ. ಆರೋಪಿಯು ಹಲ್ಲೆ ನಡೆಸುವುದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಅದು ವೈರಲ್ ಆಗಿದೆ.
ಅಲ್ಲದೇ ಹಿಂದುಏಕ್ತಾಸಂಘ್ ಎಂಬ ಇನ್ಸ್ಟಗ್ರಾಮ್ ಖಾತೆಯಲ್ಲಿ ಮುಸ್ಲಿಂ ಬಾಲಕನಿಗೆ ಥಳಿಸುವ ವಿಡಿಯೋವನ್ನು ಅಪ್ಲೋಡ್ ಮಾಡಿ, ಈ ರೀತಿಯ ಧರ್ಮರಕ್ಷಣೆಯ ಕೆಲಸಗಳಿಗಾಗಿ, ಕೇಸುಗಳ ವಿರುದ್ಧ ಹೋರಾಡುವುದಕ್ಕಾಗಿ ದೇಣಿಗೆ ನೀಡುವಂತೆ ಮನವಿ ಮಾಡಿದ್ದಾನೆ ಎಂದು ಹಲವು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.
ಪತ್ರಕರ್ತ ಮೊಹಮ್ಮದ್ ಜುಬೇರ್ “ನೀರು ಕುಡಿದಿದ್ದಕ್ಕಾಗಿ ಮುಸ್ಲಿಂ ಬಾಲಕನ ಮೇಲೆ ನಿರ್ದಯವಾಗಿ ಹಲ್ಲೆ ಮಾಡಲಾಗಿದೆ. ಆತನನ್ನು ನಪುಂಸಕನಾಗಿ ಮಾಡಬೇಕೆಂದು ಇನ್ಸ್ಟಗ್ರಾಮ್ ಖಾತೆಯಲ್ಲಿ ಬರೆಯಲಾಗಿದೆ. ಈ ಹಿಂದೆಯೂ ಹಲವು ಬಾಲಕರ ಮೇಲೆ ಹಲ್ಲೆ ನಡೆಸಿರುವ ದಾಖಲೆಗಳಿವೆ. ಈ ಕುರಿತು ಗಾಜಿಯಾಬಾದ್ ಪೊಲೀಸರು ಕ್ರಮ ತೆಗೆದುಕೊಳ್ಳಬೇಕೆಂದು” ಒತ್ತಾಯಿಸಿದ್ದಾರೆ.
The person who uploaded claims that the Muslim kid was beaten by Shringi Yadav in Dasna Devi Mandir.
He claims : 'Mulle ko Napunsak bana diya' pic.twitter.com/F4JGcByypA— Mohammed Zubair (@zoo_bear) March 12, 2021
ವೈರಲ್ ವಿಡಿಯೋದಲ್ಲಿ ಆರೋಪಿ ಶೃಂಗಿ ನಂದನ್ ಯಾದವ್, ಆ ಮಗುವಿಗೆ ತನ್ನ ಹೆಸರನ್ನು ಕೇಳುತ್ತಿರುವುದು ಕಂಡುಬಂದಿದೆ. ಅದಕ್ಕೆ ಮಗು ತನ್ನ ಹೆಸರು ಆಸಿಫ್ ಎಂದು ಹೇಳಿದ್ದು, ನೀರು ಕುಡಿಯಲು ದೇವಾಸ್ಥಾನಕ್ಕೆ ಹೋಗಿದ್ದೆ ಎಂದು ಉತ್ತರಿಸಿದೆ. ಅದಕ್ಕೆ ಕುಪಿತಗೊಂಡ ಆರೋಪಿ ಅಮಾನುಷವಾಗಿ ಥಳಿಸಿದ್ದಾನೆ, ಕಾಲಿನಲ್ಲಿ ಒದ್ದಿದ್ದಾನೆ ಮತ್ತು ಕೈಮುರಿಯಲು ಯತ್ನಿಸಿರುವುದನ್ನು ಕಾಣಬಹುದಾಗಿದೆ.
ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಗಾಜಿಯಾಬಾದ್ ಪೊಲೀಸರು ಆರೋಪಿ ಶೃಂಗಿ ಯಾದವ್ನನ್ನು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಶೃಂಗಿ ನಂದನ್ ಯಾದವ್ ಬಿಹಾರದ ಭಾಗಲ್ಪುರ ನಿವಾಸಿಯಾಗಿದ್ದು ಪೊಲೀಸರು ಯಾದವ್ನನ್ನು ವಶಕ್ಕೆ ಪಡೆದು ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
उपरोक्त वीडियो का तत्काल संज्ञान लेकर टीम गठित कर मार पिटाई करने वाले व्यक्ति- श्रृंगी नंदन यादव पुत्र अश्वनी कुमार यादव निवासी गोपालपुर थाना संवारा भागलपुर बिहार को हिरासत में लिया गया एवं मुकदमा पंजीकरण/वैधानिक कार्रवाई संबंधी प्रक्रिया प्रचलित की गई pic.twitter.com/jX9y21xTh9
— GHAZIABAD POLICE (@ghaziabadpolice) March 12, 2021
ಇದೇ ವ್ಯಕ್ತಿಯು ಕೆಲದಿನಗಳ ಹಿಂದೆ ಮತ್ತೊಬ್ಬ ಮುಸ್ಲಿಂ ಬಾಲಕನಿಗೆ ಹಲ್ಲೆ ನಡೆಸಿ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಎಂದು ನೆಟ್ಟಿಗರು ವಿಡಿಯೋ ಷೇರ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
One more video from the same account.. pic.twitter.com/JFd6iz0kta
— Nadeem Gaur (@Nadeem_gaur92) March 12, 2021
ಇದನ್ನೂ ಓದಿ: ಪ್ರಪಾತಕ್ಕಿಳಿದ ಉತ್ತರ ಪ್ರದೇಶ ಪರಿಸ್ಥಿತಿ: ಮಗಳ ತಲೆ ಕಡಿದು ರಸ್ತೆಯಲ್ಲಿ ಪ್ರದರ್ಶಿಸಿದ ಕ್ರೂರ ತಂದೆ
ದರ್ಮಗಳು ಮನುಷ್ಯನಲ್ಲಿ ಇರುವ ಮೃಗತ್ವವನ್ನು ಕೊನೆಗಾಣಿಸಬೇಕು. ಆದರೆ ಇಲ್ಲಿ ದರ್ಮದ ಹೆಸರಿನಲ್ಲಿ ಮೃಗತ್ವ ವಿಜೃಂಬಿಸುತ್ತಿದೆ.