Homeಮುಖಪುಟಉತ್ತರಪ್ರದೇಶ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ- ಆರೋಪಿಯ ಬಂಧನ

ಉತ್ತರಪ್ರದೇಶ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ- ಆರೋಪಿಯ ಬಂಧನ

- Advertisement -
- Advertisement -

ಉತ್ತರಪ್ರದೇಶದ ಗಾಜಿಯಾಬಾದ್‌ನ ದಾಸನ ದೇವಿ ಮಂದಿರ್ ದೇವಾಲಯದಲ್ಲಿ ನೀರು ಕುಡಿದಿದ್ದಕ್ಕಾಗಿ ಮುಸ್ಲಿಂ ಬಾಲಕನೊಬ್ಬನ ಮೇಲೆ ಶೃಂಗಿ ನಂದನ್ ಯಾದವ್ ಎಂಬ ವ್ಯಕ್ತಿಯು ಕ್ರೂರವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಜರುಗಿದೆ. ಆರೋಪಿಯು ಹಲ್ಲೆ ನಡೆಸುವುದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಅದು ವೈರಲ್ ಆಗಿದೆ.

ಅಲ್ಲದೇ ಹಿಂದುಏಕ್ತಾಸಂಘ್ ಎಂಬ ಇನ್ಸ್ಟಗ್ರಾಮ್ ಖಾತೆಯಲ್ಲಿ ಮುಸ್ಲಿಂ ಬಾಲಕನಿಗೆ ಥಳಿಸುವ ವಿಡಿಯೋವನ್ನು ಅಪ್‌ಲೋಡ್ ಮಾಡಿ, ಈ ರೀತಿಯ ಧರ್ಮರಕ್ಷಣೆಯ ಕೆಲಸಗಳಿಗಾಗಿ, ಕೇಸುಗಳ ವಿರುದ್ಧ ಹೋರಾಡುವುದಕ್ಕಾಗಿ ದೇಣಿಗೆ ನೀಡುವಂತೆ ಮನವಿ ಮಾಡಿದ್ದಾನೆ ಎಂದು ಹಲವು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.

ಪತ್ರಕರ್ತ ಮೊಹಮ್ಮದ್ ಜುಬೇರ್ “ನೀರು ಕುಡಿದಿದ್ದಕ್ಕಾಗಿ ಮುಸ್ಲಿಂ ಬಾಲಕನ ಮೇಲೆ ನಿರ್ದಯವಾಗಿ ಹಲ್ಲೆ ಮಾಡಲಾಗಿದೆ. ಆತನನ್ನು ನಪುಂಸಕನಾಗಿ ಮಾಡಬೇಕೆಂದು ಇನ್ಸ್ಟಗ್ರಾಮ್ ಖಾತೆಯಲ್ಲಿ ಬರೆಯಲಾಗಿದೆ. ಈ ಹಿಂದೆಯೂ ಹಲವು ಬಾಲಕರ ಮೇಲೆ ಹಲ್ಲೆ ನಡೆಸಿರುವ ದಾಖಲೆಗಳಿವೆ. ಈ ಕುರಿತು ಗಾಜಿಯಾಬಾದ್ ಪೊಲೀಸರು ಕ್ರಮ ತೆಗೆದುಕೊಳ್ಳಬೇಕೆಂದು” ಒತ್ತಾಯಿಸಿದ್ದಾರೆ.

ವೈರಲ್ ವಿಡಿಯೋದಲ್ಲಿ ಆರೋಪಿ ಶೃಂಗಿ ನಂದನ್ ಯಾದವ್, ಆ ಮಗುವಿಗೆ ತನ್ನ ಹೆಸರನ್ನು ಕೇಳುತ್ತಿರುವುದು ಕಂಡುಬಂದಿದೆ. ಅದಕ್ಕೆ ಮಗು ತನ್ನ ಹೆಸರು ಆಸಿಫ್ ಎಂದು ಹೇಳಿದ್ದು, ನೀರು ಕುಡಿಯಲು ದೇವಾಸ್ಥಾನಕ್ಕೆ ಹೋಗಿದ್ದೆ ಎಂದು ಉತ್ತರಿಸಿದೆ. ಅದಕ್ಕೆ ಕುಪಿತಗೊಂಡ ಆರೋಪಿ ಅಮಾನು‍ಷವಾಗಿ ಥಳಿಸಿದ್ದಾನೆ, ಕಾಲಿನಲ್ಲಿ ಒದ್ದಿದ್ದಾನೆ ಮತ್ತು ಕೈಮುರಿಯಲು ಯತ್ನಿಸಿರುವುದನ್ನು ಕಾಣಬಹುದಾಗಿದೆ.

ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಗಾಜಿಯಾಬಾದ್ ಪೊಲೀಸರು ಆರೋಪಿ ಶೃಂಗಿ ಯಾದವ್‌ನನ್ನು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಶೃಂಗಿ ನಂದನ್ ಯಾದವ್ ಬಿಹಾರದ ಭಾಗಲ್ಪುರ ನಿವಾಸಿಯಾಗಿದ್ದು ಪೊಲೀಸರು ಯಾದವ್‌ನನ್ನು ವಶಕ್ಕೆ ಪಡೆದು ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದೇ ವ್ಯಕ್ತಿಯು ಕೆಲದಿನಗಳ ಹಿಂದೆ ಮತ್ತೊಬ್ಬ ಮುಸ್ಲಿಂ ಬಾಲಕನಿಗೆ ಹಲ್ಲೆ ನಡೆಸಿ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಎಂದು ನೆಟ್ಟಿಗರು ವಿಡಿಯೋ ಷೇರ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಪ್ರಪಾತಕ್ಕಿಳಿದ ಉತ್ತರ ಪ್ರದೇಶ ಪರಿಸ್ಥಿತಿ: ಮಗಳ ತಲೆ ಕಡಿದು ರಸ್ತೆಯಲ್ಲಿ ಪ್ರದರ್ಶಿಸಿದ ಕ್ರೂರ ತಂದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದರ್ಮಗಳು ಮನುಷ್ಯನಲ್ಲಿ ಇರುವ ಮೃಗತ್ವವನ್ನು ಕೊನೆಗಾಣಿಸಬೇಕು. ಆದರೆ ಇಲ್ಲಿ ದರ್ಮದ ಹೆಸರಿನಲ್ಲಿ ಮೃಗತ್ವ ವಿಜೃಂಬಿಸುತ್ತಿದೆ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...