Homeಮುಖಪುಟಉತ್ತರಪ್ರದೇಶ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ- ಆರೋಪಿಯ ಬಂಧನ

ಉತ್ತರಪ್ರದೇಶ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ- ಆರೋಪಿಯ ಬಂಧನ

- Advertisement -
- Advertisement -

ಉತ್ತರಪ್ರದೇಶದ ಗಾಜಿಯಾಬಾದ್‌ನ ದಾಸನ ದೇವಿ ಮಂದಿರ್ ದೇವಾಲಯದಲ್ಲಿ ನೀರು ಕುಡಿದಿದ್ದಕ್ಕಾಗಿ ಮುಸ್ಲಿಂ ಬಾಲಕನೊಬ್ಬನ ಮೇಲೆ ಶೃಂಗಿ ನಂದನ್ ಯಾದವ್ ಎಂಬ ವ್ಯಕ್ತಿಯು ಕ್ರೂರವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಜರುಗಿದೆ. ಆರೋಪಿಯು ಹಲ್ಲೆ ನಡೆಸುವುದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಅದು ವೈರಲ್ ಆಗಿದೆ.

ಅಲ್ಲದೇ ಹಿಂದುಏಕ್ತಾಸಂಘ್ ಎಂಬ ಇನ್ಸ್ಟಗ್ರಾಮ್ ಖಾತೆಯಲ್ಲಿ ಮುಸ್ಲಿಂ ಬಾಲಕನಿಗೆ ಥಳಿಸುವ ವಿಡಿಯೋವನ್ನು ಅಪ್‌ಲೋಡ್ ಮಾಡಿ, ಈ ರೀತಿಯ ಧರ್ಮರಕ್ಷಣೆಯ ಕೆಲಸಗಳಿಗಾಗಿ, ಕೇಸುಗಳ ವಿರುದ್ಧ ಹೋರಾಡುವುದಕ್ಕಾಗಿ ದೇಣಿಗೆ ನೀಡುವಂತೆ ಮನವಿ ಮಾಡಿದ್ದಾನೆ ಎಂದು ಹಲವು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.

ಪತ್ರಕರ್ತ ಮೊಹಮ್ಮದ್ ಜುಬೇರ್ “ನೀರು ಕುಡಿದಿದ್ದಕ್ಕಾಗಿ ಮುಸ್ಲಿಂ ಬಾಲಕನ ಮೇಲೆ ನಿರ್ದಯವಾಗಿ ಹಲ್ಲೆ ಮಾಡಲಾಗಿದೆ. ಆತನನ್ನು ನಪುಂಸಕನಾಗಿ ಮಾಡಬೇಕೆಂದು ಇನ್ಸ್ಟಗ್ರಾಮ್ ಖಾತೆಯಲ್ಲಿ ಬರೆಯಲಾಗಿದೆ. ಈ ಹಿಂದೆಯೂ ಹಲವು ಬಾಲಕರ ಮೇಲೆ ಹಲ್ಲೆ ನಡೆಸಿರುವ ದಾಖಲೆಗಳಿವೆ. ಈ ಕುರಿತು ಗಾಜಿಯಾಬಾದ್ ಪೊಲೀಸರು ಕ್ರಮ ತೆಗೆದುಕೊಳ್ಳಬೇಕೆಂದು” ಒತ್ತಾಯಿಸಿದ್ದಾರೆ.

ವೈರಲ್ ವಿಡಿಯೋದಲ್ಲಿ ಆರೋಪಿ ಶೃಂಗಿ ನಂದನ್ ಯಾದವ್, ಆ ಮಗುವಿಗೆ ತನ್ನ ಹೆಸರನ್ನು ಕೇಳುತ್ತಿರುವುದು ಕಂಡುಬಂದಿದೆ. ಅದಕ್ಕೆ ಮಗು ತನ್ನ ಹೆಸರು ಆಸಿಫ್ ಎಂದು ಹೇಳಿದ್ದು, ನೀರು ಕುಡಿಯಲು ದೇವಾಸ್ಥಾನಕ್ಕೆ ಹೋಗಿದ್ದೆ ಎಂದು ಉತ್ತರಿಸಿದೆ. ಅದಕ್ಕೆ ಕುಪಿತಗೊಂಡ ಆರೋಪಿ ಅಮಾನು‍ಷವಾಗಿ ಥಳಿಸಿದ್ದಾನೆ, ಕಾಲಿನಲ್ಲಿ ಒದ್ದಿದ್ದಾನೆ ಮತ್ತು ಕೈಮುರಿಯಲು ಯತ್ನಿಸಿರುವುದನ್ನು ಕಾಣಬಹುದಾಗಿದೆ.

ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಗಾಜಿಯಾಬಾದ್ ಪೊಲೀಸರು ಆರೋಪಿ ಶೃಂಗಿ ಯಾದವ್‌ನನ್ನು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಶೃಂಗಿ ನಂದನ್ ಯಾದವ್ ಬಿಹಾರದ ಭಾಗಲ್ಪುರ ನಿವಾಸಿಯಾಗಿದ್ದು ಪೊಲೀಸರು ಯಾದವ್‌ನನ್ನು ವಶಕ್ಕೆ ಪಡೆದು ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದೇ ವ್ಯಕ್ತಿಯು ಕೆಲದಿನಗಳ ಹಿಂದೆ ಮತ್ತೊಬ್ಬ ಮುಸ್ಲಿಂ ಬಾಲಕನಿಗೆ ಹಲ್ಲೆ ನಡೆಸಿ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಎಂದು ನೆಟ್ಟಿಗರು ವಿಡಿಯೋ ಷೇರ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಪ್ರಪಾತಕ್ಕಿಳಿದ ಉತ್ತರ ಪ್ರದೇಶ ಪರಿಸ್ಥಿತಿ: ಮಗಳ ತಲೆ ಕಡಿದು ರಸ್ತೆಯಲ್ಲಿ ಪ್ರದರ್ಶಿಸಿದ ಕ್ರೂರ ತಂದೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ದರ್ಮಗಳು ಮನುಷ್ಯನಲ್ಲಿ ಇರುವ ಮೃಗತ್ವವನ್ನು ಕೊನೆಗಾಣಿಸಬೇಕು. ಆದರೆ ಇಲ್ಲಿ ದರ್ಮದ ಹೆಸರಿನಲ್ಲಿ ಮೃಗತ್ವ ವಿಜೃಂಬಿಸುತ್ತಿದೆ.

LEAVE A REPLY

Please enter your comment!
Please enter your name here

- Advertisment -

Must Read

ಕೇರಳ: ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿಗೆ ಹಲ್ಲೆ ನಡೆಸಿದ ಸ್ವಪಕ್ಷದ ಮುಖಂಡ

0
ಕೇರಳದ ಕೊಲ್ಲಂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ ಕೃಷ್ಣಕುಮಾರ್ ಅವರ ಕಣ್ಣಿಗೆ ತೀವ್ರ ಸ್ವರೂಪದ ಗಾಯವಾಗಿದ್ದು, ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಪಕ್ಷದ ಸ್ಥಳೀಯ ನಾಯಕ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಕೃಷ್ಣಕುಮಾರ್ ಇತ್ತೀಚೆಗೆ...