Homeಮುಖಪುಟಅಭಿವ್ಯಕ್ತಿ ಸ್ವಾತಂತ್ರ್ಯ: ಆತಂಕ ಹುಟ್ಟಿಸುವ ಶರಣಾಗತಿ ಪ್ರವೃತ್ತಿ- ಎ. ನಾರಾಯಣ

ಅಭಿವ್ಯಕ್ತಿ ಸ್ವಾತಂತ್ರ್ಯ: ಆತಂಕ ಹುಟ್ಟಿಸುವ ಶರಣಾಗತಿ ಪ್ರವೃತ್ತಿ- ಎ. ನಾರಾಯಣ

- Advertisement -
- Advertisement -

 

ಎ. ನಾರಾಯಣ

ಕನ್ನಡ ಪತ್ರಿಕೆಯ ಓದುಗರು ಬಹುವಾಗಿ ಮೆಚ್ಚಿಕೊಳ್ಳುತ್ತಿರುವ ಅಂಕಣಕಾರರಲ್ಲಿ ಒಬ್ಬರಾದ ಎ.ನಾರಾಯಣ ಅವರು ಕಾಸರಗೋಡಿನವರು. ಇಂಗ್ಲೆಂಡಿನ ಸಸೆಕ್ಸ್ ವಿವಿಯಲ್ಲಿ ಪಿಎಚ್‍ಡಿ ಮಾಡುವಮುನ್ನ ಡೆಕ್ಕನ್ ಹೆರಾಲ್ಡ್‍ನಲ್ಲಿ ಪತ್ರಕರ್ತರಾಗಿ ಕೆಲಸ ಮಾಡಿದ್ದರು. ಪ್ರಸ್ತುತ ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದಲ್ಲಿ ರಾಜಕೀಯ ತತ್ವಶಾಸ್ತ್ರ ಮತ್ತು ಆಡಳಿತ ವಿಭಾಗದಲ್ಲಿ ಬೋಧಿಸುತ್ತಾರೆ. ಪ್ರಜಾವಾಣಿ ಪತ್ರಿಕೆಯ ಅಂಕಣಕಾರರಾಗಿ ರಾಜಕೀಯ, ಸಾಮಾಜಿಕ ವಿಷಯಗಳ ಕುರಿತಂತೆ ಭಿನ್ನ ರೀತಿಯ ಹರಿತ, ವಸ್ತುನಿಷ್ಠ ವಿಶ್ಲೇಷಣೆಗಳ ಬರಹಗಳನ್ನು ಬರೆಯುತ್ತಿದ್ದಾರೆ.

ಸಮಸ್ಯೆ ಇರುವುದು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಗುತ್ತಿದೆ ಎನ್ನುವುದರಿಂದ ಮಾತ್ರವಲ್ಲ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎಲ್ಲಾ ಕಾಲದಲ್ಲೂ ಎಲ್ಲಾ ಆಳುವ ಸರಕಾರಗಳೂ ಹತ್ತಿಕ್ಕುವ ಕೆಲಸವನ್ನು ಮಾಡುತ್ತಲೇ ಬಂದಿವೆ. ಈಗ ಅದು ಇನ್ನೂ ಹೆಚ್ಚಾಗಿದೆ ಅಥವಾ ತೀರಾ ಹೆಚ್ಚಾಗಿದೆ ಅಂತ ಬೇಕಾದರೆ ಹೇಳಬಹುದು. ನಮ್ಮ ಕಾಲದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಎದುರಾಗಿರುವ ಇನ್ನೂ ಮುಖ್ಯವಾದ ಆತಂಕ ಏನು ಎಂದರೆ ಈ ಸಂವಿಧಾನದತ್ತ ಹಕ್ಕನ್ನು ಬಳಸಿಕೊಳ್ಳುವಲ್ಲಿ ಇಡೀ ದೇಶವು ಒಂದು ರೀತಿಯ ಶಸ್ತ್ರಸನ್ಯಾಸವನ್ನು ಘೋಷಿಸಿಕೊಂಡಿದೆ ಎನ್ನುವುದು. ಯಾರ್ಯಾರು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸಂರಕ್ಷಿಸುವಲ್ಲಿ ಮುಂಚೂಣಿಯಲ್ಲಿರಬೇಕಿತ್ತೋ ಅವರೆಲ್ಲರೂ ಸೇರಿ ಅದನ್ನು ಅಧಿಕಾರಸ್ಥರ ಕಾಲಬುಡದಲ್ಲಿ ಒತ್ತೆಯಿಟ್ಟು ಒಂದು ರೀತಿಯ ಬಹುಪರಾಕು ಸಂಸ್ಕೃತಿಯನ್ನು ಅಳವಡಿಸಿಕೊಂಡಿದ್ದಾರೆ.

ಈಗ ನಡೆಯುತ್ತಿರುವ ಮಾಧ್ಯಮ ದಮನ, ತುರ್ತುಪರಿಸ್ಥಿತಿಯ ಕಾಲದಲ್ಲಿ ಏನೇನಾಯಿತೋ ಅದಕ್ಕಿಂತ ಭಿನ್ನವಾಗಿ ಏನೂ ಇಲ್ಲ ಎನ್ನುವ ಅಭಿಪ್ರಾಯವೊಂದಿದೆ. ಅದನ್ನೇ ಇನ್ನೊಂದು ರೀತಿಯಲ್ಲಿ ಹೇಳಬಹುದು: ಮಾಧ್ಯಮಗಳು ತುರ್ತುಪರಿಸ್ಥಿತಿಯ ಕಾಲದಲ್ಲಿ ತಗ್ಗಿಬಗ್ಗಿ ನಡೆದದ್ದಕ್ಕಿಂತಲೂ ಹೆಚ್ಚಿನ ರೀತಿಯಲ್ಲಿ ಈಗ ದಾಸ್ಯವನ್ನು ಒಪ್ಪಿಕೊಂಡಿವೆ. ಅಂದಿನ ಮಾಧ್ಯಮ ರಂಗದ ಬಗ್ಗೆ ಹಿರಿಯ ಬಿಜೆಪಿ ನಾಯಕ ಎಲ್.ಕೆ.ಅದ್ವಾಣಿ ಅವರು ಹೇಳಿದ್ದಾರೆ ಎನ್ನಲಾದ ಒಂದು ಮಾತು ಬಹಳ ಚಿರಪರಿಚಿತ. “ಮಾಧ್ಯಮಗಳನ್ನು ಸರಕಾರ ಬಗ್ಗುವಂತೆ ಸೂಚಿಸಿತ್ತು. ಆದರೆ ಮಾಧ್ಯಮಗಳು ಅಕ್ಷರಶಃ ನೆಲಕ್ಕೆ ಒರಗಿ ತೆವಳಿದವು” ಅಂತ. ಈಗ ಅವರ ಮಾತು ಅವರೇ ಕಟ್ಟಿರುವ ಪಕ್ಷ ಅಧಿಕಾರದಲ್ಲಿರುವಾಗ ಇನ್ನೂ ಹೆಚ್ಚು ಅರ್ಥಪೂರ್ಣವಾಗುತ್ತಿದೆ ಎನ್ನುವುದು ಇತಿಹಾಸದ ಒಂದು ಕ್ರೂರ ವ್ಯಂಗ್ಯ.

ತೀರಾ ಇತ್ತೀಚೆಗಿನ ಉದಾಹರಣೆ ಕಾಶ್ಮೀರದ ವಿಚಾರದಲ್ಲಿ ಭಾರತೀಯ ಮಾಧ್ಯಮಗಳು ಅನುಸರಿಸುತ್ತಿರುವ ನೀತಿ. ಕೇಂದ್ರ ಸರಕಾರ ಕಾಶ್ಮೀರಕ್ಕೆ ಸಂಬಂಧಿಸಿದ ಸಂವಿಧಾನದ 370ನೆಯ ವಿಧಿಯನ್ನು ಅಸಿಂಧುಗೊಳಿಸಿದ ಬಳಿಕ ಆ ರಾಜ್ಯದ ಜನಜೀವನದ ಮೇಲೆ ಹೇರಿರುವ ಭೀಕರ ನಿರ್ಬಂಧಗಳ ಕುರಿತು ಭಾರತೀಯ ಮಾಧ್ಯಮಗಳು ಸಂಪೂರ್ಣ ಕುರುಡಾಗಿ ವರ್ತಿಸುತ್ತಿವೆ. ಅಲ್ಲಿ ಜನಜೀವನ ಸಹಜ ಸ್ಥಿತಿಯಲ್ಲಿದೆ ಎಂದೂ, ನಿರ್ಬಂಧಗಳು ಅನಿವಾರ್ಯ ಎಂದೂ ಸರಕಾರ ಹೇಳುತ್ತಿರುವುದನ್ನು ಮುಖ್ಯವಾಹಿನಿ ಮಾಧ್ಯಮಗಳು ಏನೊಂದೂ ಚಿಕಿತ್ಸಕ ದೃಷ್ಟಿಯನ್ನು ಇಟ್ಟುಕೊಳ್ಳದೆ ಗಿಳಿಪಾಠ ಒಪ್ಪಿಸುತ್ತಿವೆ. ಅಂತಾರಾಷ್ಟ್ರೀಯ ಮಾಧ್ಯಮಗಳು ಮಾತ್ರ ಮಾಧ್ಯಮಗಳಿಗೆ ವಿಧಿಸಲಾದ ಎಲ್ಲಾ ನಿರ್ಬಂಧಗಳನ್ನು ಮೀರಿ ಆ ರಾಜ್ಯದಲ್ಲಿ ಆಗುತ್ತಿರುವ ದೈನಂದಿನ ಅನಾಹುತಗಳನ್ನು ಜಗತ್ತಿನ ಮುಂದಿಡುತ್ತಿವೆ. ಭಾರತೀಯ ಮಾಧ್ಯಮಗಳು ಇದನ್ನು ಮಾಡುತ್ತಿಲ್ಲ ಎನ್ನುವುದಕ್ಕಿಂತ ಹೆಚ್ಚಾಗಿ ಈ ವಿಚಾರದಲ್ಲಿ ಅವುಗಳು ಸರ್ಕಾರದ ಮುಖವಾಣಿಗಳಾಗಿ ಹೋಗಿರುವುದು ದುರಂತದ ಸಂಗತಿ. ಆಳುವ ಪಕ್ಷಗಳ ಅಥವಾ ಅಧಿಕಾರಸ್ಥ ರಾಜಕಾರಣಿಗಳ ಸ್ವಂತ ಬಂಡವಾಳದಲ್ಲಿ ನಡೆಯುವ ಅಥವಾ ಅವರನ್ನು ಓಲೈಸಲೆಂದೇ ಹುಟ್ಟಿಕೊಂಡಿರುವ ಮಾಧ್ಯಮಗಳು ಮಾತ್ರವೇ ಹೀಗೆ ನಡೆದುಕೊಳ್ಳುತ್ತವೆ ಎಂದಾಗಿದ್ದರೆ ಅದರಲ್ಲಿ ವಿಶೇಷವೇನಿರಲಿಲ್ಲ. ಆದರೆ ಇಂದು ಈ ಪ್ರವೃತ್ತಿ ಇಂತಹ ಮಾಧ್ಯಮಗಳಿಗೆ ಮಾತ್ರ ಸೀಮಿತವಾಗಿಲ್ಲ. ಅದು ಇಡೀ ಮುಖ್ಯವಾಹಿನಿ ಮಾಧ್ಯಮ ರಂಗವನ್ನು ಬಹುತೇಕ ಆವರಿಸಿಬಿಟ್ಟಿದೆ. ಕಾಶ್ಮೀರದ ವಿಚಾರದಲ್ಲೇನೋ ‘ದೇಶಭಕ್ತಿ’ ಮಾಧ್ಯಮಗಳ ಕೈಕಟ್ಟಿಹಾಕಿತು ಎನ್ನೋಣ. ಆದರೆ ಗುಂಪು ಹತ್ಯೆಗಳ ವಿಚಾರದಲ್ಲಿ ಮಾಧ್ಯಮಗಳು ಎತ್ತಬೇಕಾದ ಪ್ರಶ್ನೆಗಳನ್ನು ಎತ್ತದಿರುವುದನ್ನು ಏನೆಂದು ಕರೆಯೋಣ? ಬರಬರುತ್ತಾ ಗುಂಪು ಹತ್ಯೆಗಳ ಕುರಿತಾದ ಸುದ್ದಿಗಳು ಏನೋ ಮಾಮೂಲಿ ಘಟನೆಗಳ ವರದಿ ಎನ್ನುವಂತೆ ಒಳಪುಟಗಳಲ್ಲಿ ಕಾಣಿಸಿಕೊಳ್ಳಲಾರಂಭಿಸಿವೆ. ಸುಪ್ರೀಂಕೋರ್ಟ್ ಆದೇಶದ ಬಳಿಕವೂ ಸರಕಾರ ಈ ವಿಚಾರದಲ್ಲಿ ತೋರುತ್ತಿರುವ ಉದಾಸೀನ ಪ್ರವೃತ್ತಿಯನ್ನು ದೊಡ್ಡ ಧ್ವನಿಯಲ್ಲಿ ಪ್ರಶ್ನಿಸದೆ ಇರುವ ಮಾಧ್ಯಮಗಳು ಅಭಿವ್ಯಕ್ತಿ ಸ್ವಾತಂತ್ರವನ್ನು ಎಷ್ಟರಮಟ್ಟಿಗೆ ಬಳಸಿಕೊಳ್ಳುತ್ತಿವೆ ಎನ್ನುವ ಪ್ರಶ್ನೆ ಮೂಡುವುದಿಲ್ಲವೇ? ಇಂತಹ ಸಾವಿರ ಉದಾಹರಣೆಗಳಿವೆ. “ಇದರಲ್ಲಿ ಹೊಸದೇನಿಲ್ಲ, ಇಂತಹ ಪರಿಸ್ಥಿತಿ ಬಂದಾಗಲೆಲ್ಲಾ ಭಾರತೀಯ ಮಾಧ್ಯಮಗಳು ಹೀಗೆಯೇ ನಡೆದುಕೊಂಡಿರುವುದು – ಮತ್ತೊಂದು ಸಂದಿಗ್ಧತೆ ಎದುರಾಗಿದೆ, ಮಾಧ್ಯಮಗಳು ಮತ್ತದೇ ಪ್ರವೃತ್ತಿಯನ್ನು ತೋರುತ್ತಿವೆ. ಇದು ಒಂಥರಾ ಪಾವಲೋವನ ಪ್ರಯೋಗದ ನಾಯಿಯ ಕತೆ” ಅಂತ ಹಿರಿಯ ಪತ್ರಕರ್ತ ಕೃಷ್ಣಪ್ರಸಾದ್ ಇತ್ತೀಚಿಗೆ ಬರೆದರು (ಮನಶಾಸ್ತ್ರದ ವಿದ್ಯಾರ್ಥಿಗಳು ಕಲಿಯುವ ಪಾವಲೋವನ ಪ್ರಯೋಗದಲ್ಲಿ ಒಂದು ನಿರ್ದಿಷ್ಟ ಸಂಜ್ಞೆಗೆ ಒಂದೇ ರೀತಿ ಪ್ರತಿಕ್ರಿಯಿಸುವ ಪ್ರವೃತ್ತಿ ತೋರಿಸುತ್ತದೆ).

ಭಾರತೀಯ ಮಾಧ್ಯಮಗಳು ಹೀಗೆ ಆಳುವ ಸರಕಾರಗಳ ತಾಳಕ್ಕೆ ಸರಿಯಾಗಿ ಕುಣಿಯುವುದು ಅವುಗಳಿಗೆ ಒಪ್ಪಿಗೆಯಾಗಿ ಅಲ್ಲ, ಅವುಗಳು ಹಾಗೆ ಮಾಡುವುದು ಸರಕಾರ ಅನುಸರಿಸುತ್ತಿರುವ ಅಭಿವ್ಯಕ್ತಿ ಸ್ವಾತಂತ್ರ್ಯದ ದಮನ ನೀತಿಯ ಪರಿಣಾಮವಾಗಿ ಅಂತ ವಾದಿಸಬಹುದು. ಯಾಕೆಂದರೆ ಭಾರತದ ಮಾಧ್ಯಮ ಒಂದು ಉದ್ಯಮವಾಗಿ ಸದಾ ಸರಕಾರದ ಮರ್ಜಿಯಲ್ಲೇ ಇರಬೇಕಾದ ಅನಿವಾರ್ಯತೆ ಇದೆ. ಸರಕಾರದ ಜತೆ ನಿಷ್ಠುರವಾಗಿ ನಡೆದುಕೊಂಡರೆ ಮಾಧ್ಯಮಗಳನ್ನು ಸರಕಾರ ವಿವಿಧ ರೀತಿಯಲ್ಲಿ ಬಗ್ಗುಬಡಿಯಬಹುದು. ಸರಕಾರೀ ಜಾಹೀರಾತುಗಳನ್ನು ನಿಲ್ಲಿಸಬಹುದು, ಖಾಸಗಿ ಜಾಹೀರಾತುಗಳೂ ಸಿಗದೇ ಹೋಗುವಂತೆ ತಂತ್ರ ಹೂಡಬಹುದು. ಪತ್ರಿಕೆಯ ಮಾಲೀಕರ, ಅದರ ಹಿರಿಯ ಪತ್ರಕರ್ತರ ಮೇಲೆ ತನಿಖಾ ಸಂಸ್ಥೆಗಳನ್ನು ಛೂ ಬಿಡಬಹುದು. ಇದೆಲ್ಲಾ ಈ ದೇಶದಲ್ಲಿ ಹಿಂದೆ ಆಗಿಹೋಗಿದೆ. ಆದುದರಿಂದ ಮಾಧ್ಯಮೋದ್ಯಮ ಆರ್ಥಿಕವಾಗಿ ಅತ್ಯಂತ ಸೊರಗಿಹೋಗಿರುವ ಈ ಕಾಲದಲ್ಲಿ ಯಾರು ತಾನೇ ಸರಕಾರದ ದ್ವೇಷ ಕಟ್ಟಿಕೊಳ್ಳಲು ತಯಾರಿದ್ದಾರೆ? ಸಹಜವಾಗಿಯೇ ಮಾಧ್ಯಮಗಳು ಸರಕಾರವನ್ನು ಪ್ರಶ್ನಿಸುವುದನ್ನು ಬಿಟ್ಟು ಅದರ ಹೊಗಳುಭಟ್ಟರಾಗಿಬಿಟ್ಟಿವೆ. ಅಂದಮೇಲೆ ಅವುಗಳಿಗೇನು ಅಭಿವ್ಯಕ್ತಿ ಸ್ವಾತಂತ್ರ್ಯದ ಹಂಗು ಎನ್ನುವ ವಾದ ಒಪ್ಪತಕ್ಕದ್ದೇ. ಇಲ್ಲೇ ಇರುವುದು ಮಹತ್ವದ ವಿಚಾರ. ಒಂದು ವೇಳೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಪ್ರಬಲವಾಗಿ ಉಳಿಸಿಕೊಳ್ಳಬೇಕು ಎನ್ನುವ ತುಡಿತವೊಂದು ಭಾರತದ ಸಮಾಜದಲ್ಲಿ ಆಳವಾಗಿ ನೆಲೆಸಿದ್ದರೆ ಇಷ್ಟೊತ್ತಿಗೆ ಸರಕಾರೀ ಮತ್ತು ಖಾಸಗೀ ಜಾಹೀರಾತುಗಳ ಹಂಗಿಲ್ಲದೆ ನಡೆಯಬಹುದಾದ ಮಾಧ್ಯಮೋದ್ಯಮದ ಮಾದರಿಯೊಂದು ಈ ದೇಶದಲ್ಲಿ ಸೃಷ್ಟಿಯಾಗುತಿತ್ತು. ಒಂದೋ ಸಹಕಾರೀ ತತ್ವದ ಆಧಾರದ ಮೇಲೆ ಅಥವಾ ದೊಡ್ಡ ಮಟ್ಟದ ದತ್ತಿಯೊಂದನ್ನು ಸ್ಥಾಪಿಸಿ ಅದರಿಂದ ಹುಟ್ಟುವ ಆದಾಯದ ಮೇಲೆ ಅವಲಂಬಿಸಿ ಸ್ವತಂತ್ರವಾಗಿ ನಡೆಯುವ ಮಾಧ್ಯಮ ಸಂಸ್ಥೆಯೊಂದು ಹುಟ್ಟಬಹುದಾಗಿತ್ತು. ಅಂತಹದ್ದೊಂದು ಪ್ರಯೋಗ ಸರಿಯಾಗಿ ಆಗಿಲ್ಲ ಅಥವಾ ಆದರೂ ಬಹುಕಾಲ ಉಳಿಯಲಿಲ್ಲ (ಉದಾಹರಣೆಗೆ ತೆಹೆಲ್ಕಾ) ಎಂಬುದು ಏನನ್ನು ಸೂಚಿಸುತ್ತದೆ? ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆಗೆ ನಾಗರಿಕ ಸಮಾಜ ಯಾಕೆ ಹೋರಾಟ ನಡೆಸುತಿಲ್ಲ. ವಾಸ್ತವದಲ್ಲಿ, ಈಗ್ಗೆ ನಾಲ್ಕು ವರ್ಷಗಳ ಹಿಂದೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರವೃತ್ತಿಯನ್ನು ಖಂಡಿಸಿ ನಡೆದ ‘ಪ್ರಶಸ್ತಿ ವಾಪಸಾತಿ ಚಳವಳಿ’ ಬಹಳ ಅರ್ಥಪೂರ್ಣವಾಗಿತ್ತು. ಆದರೆ ಅದು ಅಷ್ಟೇ ಬೇಗ ನಿಂತುಹೋಯಿತು. ಅದರ ವಿಚಾರದಲ್ಲಿ ಹುಟ್ಟಿಕೊಂಡ ಅಪಪ್ರಚಾರವನ್ನು ಮೆಟ್ಟಿ ನಿಲ್ಲಲು ಅದಕ್ಕೆ ಸಾಧ್ಯವಾಗಿಲ್ಲ. ಅಭಿವ್ಯಕ್ತಿ ಸ್ವಾತಂತ್ರ್ಯ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಚಿಂತೆ ಮತ್ತು ಅದನ್ನು ಬಳಸಿಕೊಳ್ಳುವ ಧಾವಂತ ಏನಿದ್ದರೂ ಕೆಲವೇ ಕೆಲ ವ್ಯಕ್ತಿಗಳದ್ದು ಮತ್ತು ಕೆಲ ಪರ್ಯಾಯ ಮಾಧ್ಯಮಗಳದ್ದು ಎಂಬಂತ ಸ್ಥಿತಿಯೇ ಎಲ್ಲಾ ಕಾಲದಲ್ಲೂ ಇದ್ದದ್ದು.

ಇಡೀ ಭಾರತೀಯ ಸಮಾಜಕ್ಕೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬಳಸಿ ಅಧಿಕಾರಸ್ಥರನ್ನು ಹದ್ದುಬಸ್ತಿನಲ್ಲಿಡಬೇಕು ಎನ್ನುವುದರ ಬಗ್ಗೆ ವಿಶೇಷವಾದ ಕಾಳಜಿ ಇನ್ನೂ ಮೂಡಿಲ್ಲ ಅನ್ನಿಸುತ್ತದೆ. ಅರ್ಥಾತ್ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ವಿಚಾರದಲ್ಲಿ ಇರುವ ಉದಾಸೀನ ಎರಡೂ ಕೂಡಾ ಭಾರತದ ಪ್ರಜಾತಂತ್ರದ ಇನ್ನೊಂದು ದೊಡ್ಡ ಸವಾಲಿನ ಭಾಗಗಳು. ಆ ಸವಾಲು ಏನು ಅಂತ ಅಂದರೆ ಭಾರತೀಯ ಮನಸ್ಸುಗಳು ಪ್ರಜಾತಂತ್ರದ ಸಂಸ್ಕೃತಿಗೆ ತಯಾರಾಗುವ ಮುನ್ನವೇ ಈ ದೇಶಕ್ಕೆ ಪ್ರಜಾತಂತ್ರ ಬಂದದ್ದು. ಇದನ್ನೇ ಅಲ್ಲವೇ ಬಿ.ಆರ್.ಅಂಬೇಡ್ಕರ್ ಅಂದೇ ಎಚ್ಚರಿಸಿದ್ದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...