Homeಮುಖಪುಟಅಭಿವ್ಯಕ್ತಿ ಸ್ವಾತಂತ್ರ್ಯ: ಆತಂಕ ಹುಟ್ಟಿಸುವ ಶರಣಾಗತಿ ಪ್ರವೃತ್ತಿ- ಎ. ನಾರಾಯಣ

ಅಭಿವ್ಯಕ್ತಿ ಸ್ವಾತಂತ್ರ್ಯ: ಆತಂಕ ಹುಟ್ಟಿಸುವ ಶರಣಾಗತಿ ಪ್ರವೃತ್ತಿ- ಎ. ನಾರಾಯಣ

- Advertisement -
- Advertisement -

 

ಎ. ನಾರಾಯಣ

ಕನ್ನಡ ಪತ್ರಿಕೆಯ ಓದುಗರು ಬಹುವಾಗಿ ಮೆಚ್ಚಿಕೊಳ್ಳುತ್ತಿರುವ ಅಂಕಣಕಾರರಲ್ಲಿ ಒಬ್ಬರಾದ ಎ.ನಾರಾಯಣ ಅವರು ಕಾಸರಗೋಡಿನವರು. ಇಂಗ್ಲೆಂಡಿನ ಸಸೆಕ್ಸ್ ವಿವಿಯಲ್ಲಿ ಪಿಎಚ್‍ಡಿ ಮಾಡುವಮುನ್ನ ಡೆಕ್ಕನ್ ಹೆರಾಲ್ಡ್‍ನಲ್ಲಿ ಪತ್ರಕರ್ತರಾಗಿ ಕೆಲಸ ಮಾಡಿದ್ದರು. ಪ್ರಸ್ತುತ ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದಲ್ಲಿ ರಾಜಕೀಯ ತತ್ವಶಾಸ್ತ್ರ ಮತ್ತು ಆಡಳಿತ ವಿಭಾಗದಲ್ಲಿ ಬೋಧಿಸುತ್ತಾರೆ. ಪ್ರಜಾವಾಣಿ ಪತ್ರಿಕೆಯ ಅಂಕಣಕಾರರಾಗಿ ರಾಜಕೀಯ, ಸಾಮಾಜಿಕ ವಿಷಯಗಳ ಕುರಿತಂತೆ ಭಿನ್ನ ರೀತಿಯ ಹರಿತ, ವಸ್ತುನಿಷ್ಠ ವಿಶ್ಲೇಷಣೆಗಳ ಬರಹಗಳನ್ನು ಬರೆಯುತ್ತಿದ್ದಾರೆ.

ಸಮಸ್ಯೆ ಇರುವುದು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಗುತ್ತಿದೆ ಎನ್ನುವುದರಿಂದ ಮಾತ್ರವಲ್ಲ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎಲ್ಲಾ ಕಾಲದಲ್ಲೂ ಎಲ್ಲಾ ಆಳುವ ಸರಕಾರಗಳೂ ಹತ್ತಿಕ್ಕುವ ಕೆಲಸವನ್ನು ಮಾಡುತ್ತಲೇ ಬಂದಿವೆ. ಈಗ ಅದು ಇನ್ನೂ ಹೆಚ್ಚಾಗಿದೆ ಅಥವಾ ತೀರಾ ಹೆಚ್ಚಾಗಿದೆ ಅಂತ ಬೇಕಾದರೆ ಹೇಳಬಹುದು. ನಮ್ಮ ಕಾಲದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಎದುರಾಗಿರುವ ಇನ್ನೂ ಮುಖ್ಯವಾದ ಆತಂಕ ಏನು ಎಂದರೆ ಈ ಸಂವಿಧಾನದತ್ತ ಹಕ್ಕನ್ನು ಬಳಸಿಕೊಳ್ಳುವಲ್ಲಿ ಇಡೀ ದೇಶವು ಒಂದು ರೀತಿಯ ಶಸ್ತ್ರಸನ್ಯಾಸವನ್ನು ಘೋಷಿಸಿಕೊಂಡಿದೆ ಎನ್ನುವುದು. ಯಾರ್ಯಾರು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸಂರಕ್ಷಿಸುವಲ್ಲಿ ಮುಂಚೂಣಿಯಲ್ಲಿರಬೇಕಿತ್ತೋ ಅವರೆಲ್ಲರೂ ಸೇರಿ ಅದನ್ನು ಅಧಿಕಾರಸ್ಥರ ಕಾಲಬುಡದಲ್ಲಿ ಒತ್ತೆಯಿಟ್ಟು ಒಂದು ರೀತಿಯ ಬಹುಪರಾಕು ಸಂಸ್ಕೃತಿಯನ್ನು ಅಳವಡಿಸಿಕೊಂಡಿದ್ದಾರೆ.

ಈಗ ನಡೆಯುತ್ತಿರುವ ಮಾಧ್ಯಮ ದಮನ, ತುರ್ತುಪರಿಸ್ಥಿತಿಯ ಕಾಲದಲ್ಲಿ ಏನೇನಾಯಿತೋ ಅದಕ್ಕಿಂತ ಭಿನ್ನವಾಗಿ ಏನೂ ಇಲ್ಲ ಎನ್ನುವ ಅಭಿಪ್ರಾಯವೊಂದಿದೆ. ಅದನ್ನೇ ಇನ್ನೊಂದು ರೀತಿಯಲ್ಲಿ ಹೇಳಬಹುದು: ಮಾಧ್ಯಮಗಳು ತುರ್ತುಪರಿಸ್ಥಿತಿಯ ಕಾಲದಲ್ಲಿ ತಗ್ಗಿಬಗ್ಗಿ ನಡೆದದ್ದಕ್ಕಿಂತಲೂ ಹೆಚ್ಚಿನ ರೀತಿಯಲ್ಲಿ ಈಗ ದಾಸ್ಯವನ್ನು ಒಪ್ಪಿಕೊಂಡಿವೆ. ಅಂದಿನ ಮಾಧ್ಯಮ ರಂಗದ ಬಗ್ಗೆ ಹಿರಿಯ ಬಿಜೆಪಿ ನಾಯಕ ಎಲ್.ಕೆ.ಅದ್ವಾಣಿ ಅವರು ಹೇಳಿದ್ದಾರೆ ಎನ್ನಲಾದ ಒಂದು ಮಾತು ಬಹಳ ಚಿರಪರಿಚಿತ. “ಮಾಧ್ಯಮಗಳನ್ನು ಸರಕಾರ ಬಗ್ಗುವಂತೆ ಸೂಚಿಸಿತ್ತು. ಆದರೆ ಮಾಧ್ಯಮಗಳು ಅಕ್ಷರಶಃ ನೆಲಕ್ಕೆ ಒರಗಿ ತೆವಳಿದವು” ಅಂತ. ಈಗ ಅವರ ಮಾತು ಅವರೇ ಕಟ್ಟಿರುವ ಪಕ್ಷ ಅಧಿಕಾರದಲ್ಲಿರುವಾಗ ಇನ್ನೂ ಹೆಚ್ಚು ಅರ್ಥಪೂರ್ಣವಾಗುತ್ತಿದೆ ಎನ್ನುವುದು ಇತಿಹಾಸದ ಒಂದು ಕ್ರೂರ ವ್ಯಂಗ್ಯ.

ತೀರಾ ಇತ್ತೀಚೆಗಿನ ಉದಾಹರಣೆ ಕಾಶ್ಮೀರದ ವಿಚಾರದಲ್ಲಿ ಭಾರತೀಯ ಮಾಧ್ಯಮಗಳು ಅನುಸರಿಸುತ್ತಿರುವ ನೀತಿ. ಕೇಂದ್ರ ಸರಕಾರ ಕಾಶ್ಮೀರಕ್ಕೆ ಸಂಬಂಧಿಸಿದ ಸಂವಿಧಾನದ 370ನೆಯ ವಿಧಿಯನ್ನು ಅಸಿಂಧುಗೊಳಿಸಿದ ಬಳಿಕ ಆ ರಾಜ್ಯದ ಜನಜೀವನದ ಮೇಲೆ ಹೇರಿರುವ ಭೀಕರ ನಿರ್ಬಂಧಗಳ ಕುರಿತು ಭಾರತೀಯ ಮಾಧ್ಯಮಗಳು ಸಂಪೂರ್ಣ ಕುರುಡಾಗಿ ವರ್ತಿಸುತ್ತಿವೆ. ಅಲ್ಲಿ ಜನಜೀವನ ಸಹಜ ಸ್ಥಿತಿಯಲ್ಲಿದೆ ಎಂದೂ, ನಿರ್ಬಂಧಗಳು ಅನಿವಾರ್ಯ ಎಂದೂ ಸರಕಾರ ಹೇಳುತ್ತಿರುವುದನ್ನು ಮುಖ್ಯವಾಹಿನಿ ಮಾಧ್ಯಮಗಳು ಏನೊಂದೂ ಚಿಕಿತ್ಸಕ ದೃಷ್ಟಿಯನ್ನು ಇಟ್ಟುಕೊಳ್ಳದೆ ಗಿಳಿಪಾಠ ಒಪ್ಪಿಸುತ್ತಿವೆ. ಅಂತಾರಾಷ್ಟ್ರೀಯ ಮಾಧ್ಯಮಗಳು ಮಾತ್ರ ಮಾಧ್ಯಮಗಳಿಗೆ ವಿಧಿಸಲಾದ ಎಲ್ಲಾ ನಿರ್ಬಂಧಗಳನ್ನು ಮೀರಿ ಆ ರಾಜ್ಯದಲ್ಲಿ ಆಗುತ್ತಿರುವ ದೈನಂದಿನ ಅನಾಹುತಗಳನ್ನು ಜಗತ್ತಿನ ಮುಂದಿಡುತ್ತಿವೆ. ಭಾರತೀಯ ಮಾಧ್ಯಮಗಳು ಇದನ್ನು ಮಾಡುತ್ತಿಲ್ಲ ಎನ್ನುವುದಕ್ಕಿಂತ ಹೆಚ್ಚಾಗಿ ಈ ವಿಚಾರದಲ್ಲಿ ಅವುಗಳು ಸರ್ಕಾರದ ಮುಖವಾಣಿಗಳಾಗಿ ಹೋಗಿರುವುದು ದುರಂತದ ಸಂಗತಿ. ಆಳುವ ಪಕ್ಷಗಳ ಅಥವಾ ಅಧಿಕಾರಸ್ಥ ರಾಜಕಾರಣಿಗಳ ಸ್ವಂತ ಬಂಡವಾಳದಲ್ಲಿ ನಡೆಯುವ ಅಥವಾ ಅವರನ್ನು ಓಲೈಸಲೆಂದೇ ಹುಟ್ಟಿಕೊಂಡಿರುವ ಮಾಧ್ಯಮಗಳು ಮಾತ್ರವೇ ಹೀಗೆ ನಡೆದುಕೊಳ್ಳುತ್ತವೆ ಎಂದಾಗಿದ್ದರೆ ಅದರಲ್ಲಿ ವಿಶೇಷವೇನಿರಲಿಲ್ಲ. ಆದರೆ ಇಂದು ಈ ಪ್ರವೃತ್ತಿ ಇಂತಹ ಮಾಧ್ಯಮಗಳಿಗೆ ಮಾತ್ರ ಸೀಮಿತವಾಗಿಲ್ಲ. ಅದು ಇಡೀ ಮುಖ್ಯವಾಹಿನಿ ಮಾಧ್ಯಮ ರಂಗವನ್ನು ಬಹುತೇಕ ಆವರಿಸಿಬಿಟ್ಟಿದೆ. ಕಾಶ್ಮೀರದ ವಿಚಾರದಲ್ಲೇನೋ ‘ದೇಶಭಕ್ತಿ’ ಮಾಧ್ಯಮಗಳ ಕೈಕಟ್ಟಿಹಾಕಿತು ಎನ್ನೋಣ. ಆದರೆ ಗುಂಪು ಹತ್ಯೆಗಳ ವಿಚಾರದಲ್ಲಿ ಮಾಧ್ಯಮಗಳು ಎತ್ತಬೇಕಾದ ಪ್ರಶ್ನೆಗಳನ್ನು ಎತ್ತದಿರುವುದನ್ನು ಏನೆಂದು ಕರೆಯೋಣ? ಬರಬರುತ್ತಾ ಗುಂಪು ಹತ್ಯೆಗಳ ಕುರಿತಾದ ಸುದ್ದಿಗಳು ಏನೋ ಮಾಮೂಲಿ ಘಟನೆಗಳ ವರದಿ ಎನ್ನುವಂತೆ ಒಳಪುಟಗಳಲ್ಲಿ ಕಾಣಿಸಿಕೊಳ್ಳಲಾರಂಭಿಸಿವೆ. ಸುಪ್ರೀಂಕೋರ್ಟ್ ಆದೇಶದ ಬಳಿಕವೂ ಸರಕಾರ ಈ ವಿಚಾರದಲ್ಲಿ ತೋರುತ್ತಿರುವ ಉದಾಸೀನ ಪ್ರವೃತ್ತಿಯನ್ನು ದೊಡ್ಡ ಧ್ವನಿಯಲ್ಲಿ ಪ್ರಶ್ನಿಸದೆ ಇರುವ ಮಾಧ್ಯಮಗಳು ಅಭಿವ್ಯಕ್ತಿ ಸ್ವಾತಂತ್ರವನ್ನು ಎಷ್ಟರಮಟ್ಟಿಗೆ ಬಳಸಿಕೊಳ್ಳುತ್ತಿವೆ ಎನ್ನುವ ಪ್ರಶ್ನೆ ಮೂಡುವುದಿಲ್ಲವೇ? ಇಂತಹ ಸಾವಿರ ಉದಾಹರಣೆಗಳಿವೆ. “ಇದರಲ್ಲಿ ಹೊಸದೇನಿಲ್ಲ, ಇಂತಹ ಪರಿಸ್ಥಿತಿ ಬಂದಾಗಲೆಲ್ಲಾ ಭಾರತೀಯ ಮಾಧ್ಯಮಗಳು ಹೀಗೆಯೇ ನಡೆದುಕೊಂಡಿರುವುದು – ಮತ್ತೊಂದು ಸಂದಿಗ್ಧತೆ ಎದುರಾಗಿದೆ, ಮಾಧ್ಯಮಗಳು ಮತ್ತದೇ ಪ್ರವೃತ್ತಿಯನ್ನು ತೋರುತ್ತಿವೆ. ಇದು ಒಂಥರಾ ಪಾವಲೋವನ ಪ್ರಯೋಗದ ನಾಯಿಯ ಕತೆ” ಅಂತ ಹಿರಿಯ ಪತ್ರಕರ್ತ ಕೃಷ್ಣಪ್ರಸಾದ್ ಇತ್ತೀಚಿಗೆ ಬರೆದರು (ಮನಶಾಸ್ತ್ರದ ವಿದ್ಯಾರ್ಥಿಗಳು ಕಲಿಯುವ ಪಾವಲೋವನ ಪ್ರಯೋಗದಲ್ಲಿ ಒಂದು ನಿರ್ದಿಷ್ಟ ಸಂಜ್ಞೆಗೆ ಒಂದೇ ರೀತಿ ಪ್ರತಿಕ್ರಿಯಿಸುವ ಪ್ರವೃತ್ತಿ ತೋರಿಸುತ್ತದೆ).

ಭಾರತೀಯ ಮಾಧ್ಯಮಗಳು ಹೀಗೆ ಆಳುವ ಸರಕಾರಗಳ ತಾಳಕ್ಕೆ ಸರಿಯಾಗಿ ಕುಣಿಯುವುದು ಅವುಗಳಿಗೆ ಒಪ್ಪಿಗೆಯಾಗಿ ಅಲ್ಲ, ಅವುಗಳು ಹಾಗೆ ಮಾಡುವುದು ಸರಕಾರ ಅನುಸರಿಸುತ್ತಿರುವ ಅಭಿವ್ಯಕ್ತಿ ಸ್ವಾತಂತ್ರ್ಯದ ದಮನ ನೀತಿಯ ಪರಿಣಾಮವಾಗಿ ಅಂತ ವಾದಿಸಬಹುದು. ಯಾಕೆಂದರೆ ಭಾರತದ ಮಾಧ್ಯಮ ಒಂದು ಉದ್ಯಮವಾಗಿ ಸದಾ ಸರಕಾರದ ಮರ್ಜಿಯಲ್ಲೇ ಇರಬೇಕಾದ ಅನಿವಾರ್ಯತೆ ಇದೆ. ಸರಕಾರದ ಜತೆ ನಿಷ್ಠುರವಾಗಿ ನಡೆದುಕೊಂಡರೆ ಮಾಧ್ಯಮಗಳನ್ನು ಸರಕಾರ ವಿವಿಧ ರೀತಿಯಲ್ಲಿ ಬಗ್ಗುಬಡಿಯಬಹುದು. ಸರಕಾರೀ ಜಾಹೀರಾತುಗಳನ್ನು ನಿಲ್ಲಿಸಬಹುದು, ಖಾಸಗಿ ಜಾಹೀರಾತುಗಳೂ ಸಿಗದೇ ಹೋಗುವಂತೆ ತಂತ್ರ ಹೂಡಬಹುದು. ಪತ್ರಿಕೆಯ ಮಾಲೀಕರ, ಅದರ ಹಿರಿಯ ಪತ್ರಕರ್ತರ ಮೇಲೆ ತನಿಖಾ ಸಂಸ್ಥೆಗಳನ್ನು ಛೂ ಬಿಡಬಹುದು. ಇದೆಲ್ಲಾ ಈ ದೇಶದಲ್ಲಿ ಹಿಂದೆ ಆಗಿಹೋಗಿದೆ. ಆದುದರಿಂದ ಮಾಧ್ಯಮೋದ್ಯಮ ಆರ್ಥಿಕವಾಗಿ ಅತ್ಯಂತ ಸೊರಗಿಹೋಗಿರುವ ಈ ಕಾಲದಲ್ಲಿ ಯಾರು ತಾನೇ ಸರಕಾರದ ದ್ವೇಷ ಕಟ್ಟಿಕೊಳ್ಳಲು ತಯಾರಿದ್ದಾರೆ? ಸಹಜವಾಗಿಯೇ ಮಾಧ್ಯಮಗಳು ಸರಕಾರವನ್ನು ಪ್ರಶ್ನಿಸುವುದನ್ನು ಬಿಟ್ಟು ಅದರ ಹೊಗಳುಭಟ್ಟರಾಗಿಬಿಟ್ಟಿವೆ. ಅಂದಮೇಲೆ ಅವುಗಳಿಗೇನು ಅಭಿವ್ಯಕ್ತಿ ಸ್ವಾತಂತ್ರ್ಯದ ಹಂಗು ಎನ್ನುವ ವಾದ ಒಪ್ಪತಕ್ಕದ್ದೇ. ಇಲ್ಲೇ ಇರುವುದು ಮಹತ್ವದ ವಿಚಾರ. ಒಂದು ವೇಳೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಪ್ರಬಲವಾಗಿ ಉಳಿಸಿಕೊಳ್ಳಬೇಕು ಎನ್ನುವ ತುಡಿತವೊಂದು ಭಾರತದ ಸಮಾಜದಲ್ಲಿ ಆಳವಾಗಿ ನೆಲೆಸಿದ್ದರೆ ಇಷ್ಟೊತ್ತಿಗೆ ಸರಕಾರೀ ಮತ್ತು ಖಾಸಗೀ ಜಾಹೀರಾತುಗಳ ಹಂಗಿಲ್ಲದೆ ನಡೆಯಬಹುದಾದ ಮಾಧ್ಯಮೋದ್ಯಮದ ಮಾದರಿಯೊಂದು ಈ ದೇಶದಲ್ಲಿ ಸೃಷ್ಟಿಯಾಗುತಿತ್ತು. ಒಂದೋ ಸಹಕಾರೀ ತತ್ವದ ಆಧಾರದ ಮೇಲೆ ಅಥವಾ ದೊಡ್ಡ ಮಟ್ಟದ ದತ್ತಿಯೊಂದನ್ನು ಸ್ಥಾಪಿಸಿ ಅದರಿಂದ ಹುಟ್ಟುವ ಆದಾಯದ ಮೇಲೆ ಅವಲಂಬಿಸಿ ಸ್ವತಂತ್ರವಾಗಿ ನಡೆಯುವ ಮಾಧ್ಯಮ ಸಂಸ್ಥೆಯೊಂದು ಹುಟ್ಟಬಹುದಾಗಿತ್ತು. ಅಂತಹದ್ದೊಂದು ಪ್ರಯೋಗ ಸರಿಯಾಗಿ ಆಗಿಲ್ಲ ಅಥವಾ ಆದರೂ ಬಹುಕಾಲ ಉಳಿಯಲಿಲ್ಲ (ಉದಾಹರಣೆಗೆ ತೆಹೆಲ್ಕಾ) ಎಂಬುದು ಏನನ್ನು ಸೂಚಿಸುತ್ತದೆ? ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆಗೆ ನಾಗರಿಕ ಸಮಾಜ ಯಾಕೆ ಹೋರಾಟ ನಡೆಸುತಿಲ್ಲ. ವಾಸ್ತವದಲ್ಲಿ, ಈಗ್ಗೆ ನಾಲ್ಕು ವರ್ಷಗಳ ಹಿಂದೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರವೃತ್ತಿಯನ್ನು ಖಂಡಿಸಿ ನಡೆದ ‘ಪ್ರಶಸ್ತಿ ವಾಪಸಾತಿ ಚಳವಳಿ’ ಬಹಳ ಅರ್ಥಪೂರ್ಣವಾಗಿತ್ತು. ಆದರೆ ಅದು ಅಷ್ಟೇ ಬೇಗ ನಿಂತುಹೋಯಿತು. ಅದರ ವಿಚಾರದಲ್ಲಿ ಹುಟ್ಟಿಕೊಂಡ ಅಪಪ್ರಚಾರವನ್ನು ಮೆಟ್ಟಿ ನಿಲ್ಲಲು ಅದಕ್ಕೆ ಸಾಧ್ಯವಾಗಿಲ್ಲ. ಅಭಿವ್ಯಕ್ತಿ ಸ್ವಾತಂತ್ರ್ಯ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಚಿಂತೆ ಮತ್ತು ಅದನ್ನು ಬಳಸಿಕೊಳ್ಳುವ ಧಾವಂತ ಏನಿದ್ದರೂ ಕೆಲವೇ ಕೆಲ ವ್ಯಕ್ತಿಗಳದ್ದು ಮತ್ತು ಕೆಲ ಪರ್ಯಾಯ ಮಾಧ್ಯಮಗಳದ್ದು ಎಂಬಂತ ಸ್ಥಿತಿಯೇ ಎಲ್ಲಾ ಕಾಲದಲ್ಲೂ ಇದ್ದದ್ದು.

ಇಡೀ ಭಾರತೀಯ ಸಮಾಜಕ್ಕೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬಳಸಿ ಅಧಿಕಾರಸ್ಥರನ್ನು ಹದ್ದುಬಸ್ತಿನಲ್ಲಿಡಬೇಕು ಎನ್ನುವುದರ ಬಗ್ಗೆ ವಿಶೇಷವಾದ ಕಾಳಜಿ ಇನ್ನೂ ಮೂಡಿಲ್ಲ ಅನ್ನಿಸುತ್ತದೆ. ಅರ್ಥಾತ್ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ವಿಚಾರದಲ್ಲಿ ಇರುವ ಉದಾಸೀನ ಎರಡೂ ಕೂಡಾ ಭಾರತದ ಪ್ರಜಾತಂತ್ರದ ಇನ್ನೊಂದು ದೊಡ್ಡ ಸವಾಲಿನ ಭಾಗಗಳು. ಆ ಸವಾಲು ಏನು ಅಂತ ಅಂದರೆ ಭಾರತೀಯ ಮನಸ್ಸುಗಳು ಪ್ರಜಾತಂತ್ರದ ಸಂಸ್ಕೃತಿಗೆ ತಯಾರಾಗುವ ಮುನ್ನವೇ ಈ ದೇಶಕ್ಕೆ ಪ್ರಜಾತಂತ್ರ ಬಂದದ್ದು. ಇದನ್ನೇ ಅಲ್ಲವೇ ಬಿ.ಆರ್.ಅಂಬೇಡ್ಕರ್ ಅಂದೇ ಎಚ್ಚರಿಸಿದ್ದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...